caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus يونس

109 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 51

بِسْمِ ٱللَّهِ ٱلرَّحْمَٰنِ ٱلرَّحِيمِ الٓر تِلْكَ ءَايَٰتُ ٱلْكِتَٰبِ ٱلْحَكِيمِ

Kannada Translation - Hamza Buturಅಲಿಫ್ ಲಾಮ್ ರಾ. ಇವು ವಿವೇಕಪೂರ್ಣ ಗ್ರಂಥದ ವಚನಗಳಾಗಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَكَانَ لِلنَّاسِ عَجَبًا أَنْ أَوْحَيْنَآ إِلَىٰ رَجُلٍ مِّنْهُمْ أَنْ أَنذِرِ ٱلنَّاسَ وَبَشِّرِ ٱلَّذِينَ ءَامَنُوٓا۟ أَنَّ لَهُمْ قَدَمَ صِدْقٍ عِندَ رَبِّهِمْ قَالَ ٱلْكَٰفِرُونَ إِنَّ هَٰذَا لَسَٰحِرٌ مُّبِينٌ

Kannada Translation - Hamza Buturಜನರಿಗೆ ಮುನ್ನೆಚ್ಚರಿಕೆಯನ್ನು ನೀಡಿರಿ ಮತ್ತು ಸತ್ಯವಿಶ್ವಾಸಿಗಳಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಸತ್ಕರ್ಮಗಳ ಪೂರ್ಣ ಪ್ರತಿಫಲ ದೊರೆಯುವುದೆಯೆಂಬ ಶುಭವಾರ್ತೆಯನ್ನು ನೀಡಿರಿ ಎಂದು ನಾವು ಅವರಿಂದಲೇ ಇರುವ ಒಬ್ಬ ವ್ಯಕ್ತಿಗೆ ದಿವ್ಯವಾಣಿ ನೀಡಿರುವುದು ಜನರಿಗೆ ಅಚ್ಚರಿಯಾಗಿ ಕಾಣುತ್ತಿದೆಯೇ? ಸತ್ಯನಿಷೇಧಿಗಳು ಹೇಳಿದರು: “ನಿಶ್ಚಯವಾಗಿಯೂ ಇವನೊಬ್ಬ ಸ್ವತಃಸಿದ್ಧ ಮಾಟಗಾರನೇ ಸರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ رَبَّكُمُ ٱللَّهُ ٱلَّذِى خَلَقَ ٱلسَّمَٰوَٰتِ وَٱلْأَرْضَ فِى سِتَّةِ أَيَّامٍ ثُمَّ ٱسْتَوَىٰ عَلَى ٱلْعَرْشِ يُدَبِّرُ ٱلْأَمْرَ مَا مِن شَفِيعٍ إِلَّا مِنۢ بَعْدِ إِذْنِهِۦ ذَٰلِكُمُ ٱللَّهُ رَبُّكُمْ فَٱعْبُدُوهُ أَفَلَا تَذَكَّرُونَ

Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನೇ ನಿಮ್ಮ ಪರಿಪಾಲಕ. ನಂತರ (ಅವನ ಮಹಾತ್ಮೆಗೆ ಹೊಂದಿಕೆಯಾಗುವ ರೀತಿಯಲ್ಲಿ) ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಎಲ್ಲಾ ವಿಷಯಗಳನ್ನೂ ನಿಯಂತ್ರಿಸುತ್ತಾನೆ. ಅವನ ಅಪ್ಪಣೆಯ ನಂತರವೇ ಹೊರತು ಯಾರಿಗೂ ಶಿಫಾರಸು ಮಾಡಲು ಸಾಧ್ಯವಿಲ್ಲ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ. ನೀವು ಉಪದೇಶ ಸ್ವೀಕರಿಸುವುದಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَيْهِ مَرْجِعُكُمْ جَمِيعًا وَعْدَ ٱللَّهِ حَقًّا إِنَّهُۥ يَبْدَؤُا۟ ٱلْخَلْقَ ثُمَّ يُعِيدُهُۥ لِيَجْزِىَ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ بِٱلْقِسْطِ وَٱلَّذِينَ كَفَرُوا۟ لَهُمْ شَرَابٌ مِّنْ حَمِيمٍ وَعَذَابٌ أَلِيمٌۢ بِمَا كَانُوا۟ يَكْفُرُونَ

Kannada Translation - Hamza Buturನಿಮ್ಮೆಲ್ಲರನ್ನು ಅವನ ಬಳಿಗೇ ಮರಳಿಸಲಾಗುವುದು. ಇದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ನಿಶ್ಚಯವಾಗಿಯೂ ಅವನು ಪ್ರಥಮ ಬಾರಿ ಸೃಷ್ಟಿಸುತ್ತಾನೆ. ನಂತರ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ ನ್ಯಾಯಯುತವಾದ ಪ್ರತಿಫಲವನ್ನು ನೀಡಲು ಆ ಸೃಷ್ಟಿಯನ್ನು ಪುನರಾವರ್ತಿಸುತ್ತಾನೆ. ಸತ್ಯವನ್ನು ನಿಷೇಧಿಸಿದವರು ಯಾರೋ—ಅವರು ಸತ್ಯವನ್ನು ನಿಷೇಧಿಸಿದ್ದಕ್ಕಾಗಿ ಅವರಿಗೆ ಕುದಿಯುವ ಪಾನೀಯ ಮತ್ತು ಯಾತನಾಮಯ ಶಿಕ್ಷೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُوَ ٱلَّذِى جَعَلَ ٱلشَّمْسَ ضِيَآءً وَٱلْقَمَرَ نُورًا وَقَدَّرَهُۥ مَنَازِلَ لِتَعْلَمُوا۟ عَدَدَ ٱلسِّنِينَ وَٱلْحِسَابَ مَا خَلَقَ ٱللَّهُ ذَٰلِكَ إِلَّا بِٱلْحَقِّ يُفَصِّلُ ٱلْـَٔايَٰتِ لِقَوْمٍ يَعْلَمُونَ

Kannada Translation - Hamza Buturಸೂರ್ಯನನ್ನು ಹೊಳೆಯುವ ಪ್ರಕಾಶ ಮತ್ತು ಚಂದ್ರನನ್ನು ಬೆಳಕನ್ನಾಗಿ ಮಾಡಿದವನು ಅವನೇ. ನೀವು ವರ್ಷಗಳ ಸಂಖ್ಯೆ ಮತ್ತು ಲೆಕ್ಕವನ್ನು ತಿಳಿಯಲು ಅವನು ಅದಕ್ಕೆ (ಚಂದ್ರನಿಗೆ) ಕೆಲವು ಹಂತಗಳನ್ನು ನಿರ್ಣಯಿಸಿದನು. ಅಲ್ಲಾಹು ಅವುಗಳನ್ನು ಉದ್ದೇಶರಹಿತವಾಗಿ ಸೃಷ್ಟಿಸಿಲ್ಲ. ತಿಳುವಳಿಕೆಯಿರುವ ಜನರಿಗಾಗಿ ಅವನು ದೃಷ್ಟಾಂತಗಳನ್ನು ವಿವರಿಸಿಕೊಡುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ فِى ٱخْتِلَٰفِ ٱلَّيْلِ وَٱلنَّهَارِ وَمَا خَلَقَ ٱللَّهُ فِى ٱلسَّمَٰوَٰتِ وَٱلْأَرْضِ لَـَٔايَٰتٍ لِّقَوْمٍ يَتَّقُونَ

Kannada Translation - Hamza Buturನಿಶ್ಚಯವಾಗಿಯೂ ರಾತ್ರಿ-ಹಗಲುಗಳ ಬದಲಾವಣೆಯಲ್ಲಿ ಮತ್ತು ಭೂಮ್ಯಾಕಾಶಗಳಲ್ಲಿ ಅಲ್ಲಾಹು ಸೃಷ್ಟಿಸಿದ ವಸ್ತುಗಳಲ್ಲಿ ದೇವಭಯವುಳ್ಳ ಜನರಿಗೆ ಅನೇಕ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ لَا يَرْجُونَ لِقَآءَنَا وَرَضُوا۟ بِٱلْحَيَوٰةِ ٱلدُّنْيَا وَٱطْمَأَنُّوا۟ بِهَا وَٱلَّذِينَ هُمْ عَنْ ءَايَٰتِنَا غَٰفِلُونَ

Kannada Translation - Hamza Buturನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರು, ಇಹಲೋಕ ಜೀವನವನ್ನೇ ನೆಚ್ಚಿ, ಅದರಲ್ಲೇ ನೆಮ್ಮದಿಯನ್ನು ಬಯಸುವವರು ಮತ್ತು ನಮ್ಮ ದೃಷ್ಟಾಂತಗಳ ಬಗ್ಗೆ ಅಜ್ಞರಾಗಿರುವವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ مَأْوَىٰهُمُ ٱلنَّارُ بِمَا كَانُوا۟ يَكْسِبُونَ

Kannada Translation - Hamza Buturಅವರು ಮಾಡಿದ ದುಷ್ಕರ್ಮಗಳ ಫಲವಾಗಿ ಅವರ ವಾಸಸ್ಥಳವು ನರಕವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ يَهْدِيهِمْ رَبُّهُم بِإِيمَٰنِهِمْ تَجْرِى مِن تَحْتِهِمُ ٱلْأَنْهَٰرُ فِى جَنَّٰتِ ٱلنَّعِيمِ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರ ವಿಶ್ವಾಸದ ಕಾರಣದಿಂದಾಗಿ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಸನ್ಮಾರ್ಗವನ್ನು ತೋರಿಸುವನು. ಅವರು ತಮ್ಮ ತಳಭಾಗದಿಂದ ನದಿಗಳು ಹರಿಯುವ ಸುಖ-ಸಮೃದ್ಧವಾದ ಸ್ವರ್ಗೋದ್ಯಾನಗಳಲ್ಲಿ ವಾಸಿಸುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

دَعْوَىٰهُمْ فِيهَا سُبْحَٰنَكَ ٱللَّهُمَّ وَتَحِيَّتُهُمْ فِيهَا سَلَٰمٌ وَءَاخِرُ دَعْوَىٰهُمْ أَنِ ٱلْحَمْدُ لِلَّهِ رَبِّ ٱلْعَٰلَمِينَ

Kannada Translation - Hamza Buturಅಲ್ಲಿ ಅವರ ಪ್ರಾರ್ಥನೆಯು, “ಓ ಅಲ್ಲಾಹ್! ನಿನ್ನ ಪರಿಶುದ್ಧತೆಯನ್ನು ನಾವು ಕೊಂಡಾಡುತ್ತೇವೆ” ಎಂದಾಗಿರುವುದು; ಅಲ್ಲಿ ಅವರ ಅಭಿವಂದನೆಯು, “ಅಸ್ಸಲಾಂ ಅಲೈಕುಂ” (ನಿಮ್ಮ ಮೇಲೆ ಶಾಂತಿಯಿರಲಿ) ಎಂದಾಗಿರುವುದು ಮತ್ತು ಅವರ ಕೊನೆಯ ಪ್ರಾರ್ಥನೆಯು, “ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ” ಎಂದಾಗಿರುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ يُعَجِّلُ ٱللَّهُ لِلنَّاسِ ٱلشَّرَّ ٱسْتِعْجَالَهُم بِٱلْخَيْرِ لَقُضِىَ إِلَيْهِمْ أَجَلُهُمْ فَنَذَرُ ٱلَّذِينَ لَا يَرْجُونَ لِقَآءَنَا فِى طُغْيَٰنِهِمْ يَعْمَهُونَ

Kannada Translation - Hamza Buturಜನರು ಬೇಡುವ ಪ್ರಯೋಜನಗಳನ್ನು ನೀಡಲು ಅಲ್ಲಾಹು ತ್ವರೆ ಮಾಡುವಂತೆ, ಅವರು ಬೇಡುವ ಶಿಕ್ಷೆಗಳನ್ನು ನೀಡಲು ಕೂಡ ತ್ವರೆ ಮಾಡುತ್ತಿದ್ದರೆ ಅವರ ಜೀವಿತಾವಧಿಯು ಎಂದೋ ಮುಗಿದುಹೋಗುತ್ತಿತ್ತು. ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರನ್ನು ನಾವು ಅವರ ಅತಿರೇಕಗಳೊಂದಿಗೆ ಅಂಧವಾಗಿ ವಿಹರಿಸಲು ಬಿಟ್ಟುಬಿಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا مَسَّ ٱلْإِنسَٰنَ ٱلضُّرُّ دَعَانَا لِجَنۢبِهِۦٓ أَوْ قَاعِدًا أَوْ قَآئِمًا فَلَمَّا كَشَفْنَا عَنْهُ ضُرَّهُۥ مَرَّ كَأَن لَّمْ يَدْعُنَآ إِلَىٰ ضُرٍّ مَّسَّهُۥ كَذَٰلِكَ زُيِّنَ لِلْمُسْرِفِينَ مَا كَانُوا۟ يَعْمَلُونَ

Kannada Translation - Hamza Buturಮನುಷ್ಯನಿಗೆ ಕಷ್ಟ ಬಂದಾಗ ಅವನು ಪಾರ್ಶ್ವಕ್ಕೆ ಸರಿದು ಮಲಗಿಕೊಂಡು, ಕುಳಿತುಕೊಂಡು ಅಥವಾ ನಿಂತುಕೊಂಡು ನಮ್ಮನ್ನು (ಪದೇ ಪದೇ) ಕರೆದು ಪ್ರಾರ್ಥಿಸುತ್ತಾನೆ. ಆದರೆ ನಾವು ಅವನ ಕಷ್ಟವನ್ನು ನಿವಾರಿಸಿದಾಗ, ತನಗೆ ಬಂದ ಕಷ್ಟವನ್ನು ನಿವಾರಿಸಲು ಅವನು ನಮ್ಮನ್ನು ಕರೆಯಲೇ ಇಲ್ಲ ಎಂಬಂತೆ ಸಾಗಿಬಿಡುತ್ತಾನೆ. ಈ ರೀತಿ ಅತಿರೇಕಿಗಳಿಗೆ ಅವರು ಮಾಡುವ ಕರ್ಮಗಳನ್ನು ಅಲಂಕರಿಸಿಕೊಡಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ أَهْلَكْنَا ٱلْقُرُونَ مِن قَبْلِكُمْ لَمَّا ظَلَمُوا۟ وَجَآءَتْهُمْ رُسُلُهُم بِٱلْبَيِّنَٰتِ وَمَا كَانُوا۟ لِيُؤْمِنُوا۟ كَذَٰلِكَ نَجْزِى ٱلْقَوْمَ ٱلْمُجْرِمِينَ

Kannada Translation - Hamza Buturನಿಶ್ಚಯವಾಗಿಯೂ ನಿಮಗಿಂತ ಮೊದಲಿನ ಅನೇಕ ತಲೆಮಾರುಗಳು ಅಕ್ರಮವೆಸಗಿದಾಗ ನಾವು ಅವರನ್ನು ನಾಶ ಮಾಡಿದೆವು. ನಮ್ಮ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಿದ್ದರು. ಆದರೂ ಅವರು ವಿಶ್ವಾಸವಿಡಲಿಲ್ಲ. ಅಪರಾಧಿಗಳಾದ ಜನರಿಗೆ ಈ ರೀತಿ ನಾವು ಪ್ರತಿಫಲವನ್ನು ನೀಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ جَعَلْنَٰكُمْ خَلَٰٓئِفَ فِى ٱلْأَرْضِ مِنۢ بَعْدِهِمْ لِنَنظُرَ كَيْفَ تَعْمَلُونَ

Kannada Translation - Hamza Buturನಂತರ ಅವರ ಬಳಿಕ ನಾವು ನಿಮ್ಮನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನೀವು ಹೇಗೆ ಕರ್ಮವೆಸಗುತ್ತೀರಿ ಎಂದು ನೋಡಲು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا تُتْلَىٰ عَلَيْهِمْ ءَايَاتُنَا بَيِّنَٰتٍ قَالَ ٱلَّذِينَ لَا يَرْجُونَ لِقَآءَنَا ٱئْتِ بِقُرْءَانٍ غَيْرِ هَٰذَآ أَوْ بَدِّلْهُ قُلْ مَا يَكُونُ لِىٓ أَنْ أُبَدِّلَهُۥ مِن تِلْقَآئِ نَفْسِىٓ إِنْ أَتَّبِعُ إِلَّا مَا يُوحَىٰٓ إِلَىَّ إِنِّىٓ أَخَافُ إِنْ عَصَيْتُ رَبِّى عَذَابَ يَوْمٍ عَظِيمٍ

Kannada Translation - Hamza Buturಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ, ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರು ಹೇಳುತ್ತಾರೆ: “ಇದು ಬೇಡ, ನಮಗೆ ಇದಲ್ಲದ ಬೇರೊಂದು ಕುರ್‌ಆನನ್ನು ತಂದು ಕೊಡಿ, ಅಥವಾ ಇದರಲ್ಲಿ ಕೆಲವು ಬದಲಾವಣೆಗಳನ್ನು ಮಾಡಿರಿ.” ಹೇಳಿರಿ: “ಇದರಲ್ಲಿ ನನ್ನ ಕಡೆಯಿಂದ ಯಾವುದೇ ಬದಲಾವಣೆ ಮಾಡುವ ಹಕ್ಕು ನನಗಿಲ್ಲ. ನನಗೆ ನೀಡಲಾಗುವ ದೇವವಾಣಿಗಳನ್ನು ಮಾತ್ರ ನಾನು ಅನುಸರಿಸುತ್ತೇನೆ. ನಾನೇನಾದರೂ ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಗಳನ್ನು ಉಲ್ಲಂಘಿಸಿದರೆ, ನಿಶ್ಚಯವಾಗಿಯೂ ಒಂದು ಭಯಾನಕ ದಿನದ ಶಿಕ್ಷೆಯನ್ನು ನಾನು ಭಯಪಡುತ್ತೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّوْ شَآءَ ٱللَّهُ مَا تَلَوْتُهُۥ عَلَيْكُمْ وَلَآ أَدْرَىٰكُم بِهِۦ فَقَدْ لَبِثْتُ فِيكُمْ عُمُرًا مِّن قَبْلِهِۦٓ أَفَلَا تَعْقِلُونَ

Kannada Translation - Hamza Buturಹೇಳಿರಿ: “ಅಲ್ಲಾಹು ಇಚ್ಛಿಸಿದ್ದರೆ ನಾನು ಇದನ್ನು ನಿಮಗೆ ಓದಿಕೊಡುತ್ತಿರಲಿಲ್ಲ ಮತ್ತು ಇದು ನಿಮಗೆ ತಿಳಿಯುವಂತೆ ಅವನು ಮಾಡುತ್ತಲೂ ಇರಲಿಲ್ಲ. ನಾನು ಇದಕ್ಕೆ ಮೊದಲು ಅನೇಕ ವರ್ಷಗಳ ಕಾಲ ನಿಮ್ಮೊಂದಿಗೆ ಬದುಕಿದ್ದೆ. ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا أَوْ كَذَّبَ بِـَٔايَٰتِهِۦٓ إِنَّهُۥ لَا يُفْلِحُ ٱلْمُجْرِمُونَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತ ಅಥವಾ ಅವನ ವಚನಗಳನ್ನು ನಿಷೇಧಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ನಿಶ್ಚಯವಾಗಿಯೂ ಅಪರಾಧಿಗಳು ಯಶಸ್ವಿಯಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَعْبُدُونَ مِن دُونِ ٱللَّهِ مَا لَا يَضُرُّهُمْ وَلَا يَنفَعُهُمْ وَيَقُولُونَ هَٰٓؤُلَآءِ شُفَعَٰٓؤُنَا عِندَ ٱللَّهِ قُلْ أَتُنَبِّـُٔونَ ٱللَّهَ بِمَا لَا يَعْلَمُ فِى ٱلسَّمَٰوَٰتِ وَلَا فِى ٱلْأَرْضِ سُبْحَٰنَهُۥ وَتَعَٰلَىٰ عَمَّا يُشْرِكُونَ

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಯಾವುದೇ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಾರೆ. ಅವರು ಹೇಳುತ್ತಾರೆ: “ಇವರು ಅಲ್ಲಾಹನ ಬಳಿ ನಮಗೆ ಶಿಫಾರಸು ಮಾಡುತ್ತಾರೆ.” ಕೇಳಿರಿ: “ಭೂಮ್ಯಾಕಾಶಗಳಲ್ಲಿ ಅಲ್ಲಾಹನಿಗೆ ತಿಳಿಯದೇ ಇರುವ ಒಂದು ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ?”[1] ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಿಶುದ್ಧನು ಮತ್ತು ಉನ್ನತನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا كَانَ ٱلنَّاسُ إِلَّآ أُمَّةً وَٰحِدَةً فَٱخْتَلَفُوا۟ وَلَوْلَا كَلِمَةٌ سَبَقَتْ مِن رَّبِّكَ لَقُضِىَ بَيْنَهُمْ فِيمَا فِيهِ يَخْتَلِفُونَ

Kannada Translation - Hamza Buturಮನುಷ್ಯರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅವರಲ್ಲಿ ಭಿನ್ನಮತ ಉಂಟಾಯಿತು. ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಮೊದಲೇ ನಿಶ್ಚಯಿಸಲಾದ ಒಂದು ಮಾತು ಇಲ್ಲದಿರುತ್ತಿದ್ದರೆ, ಯಾವ ವಿಷಯದಲ್ಲಿ ಅವರು ಭಿನ್ನರಾದರೋ ಅದರ ಬಗ್ಗೆ ಈಗಾಗಲೇ ತೀರ್ಪು ನೀಡಲಾಗುತ್ತಿತ್ತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَقُولُونَ لَوْلَآ أُنزِلَ عَلَيْهِ ءَايَةٌ مِّن رَّبِّهِۦ فَقُلْ إِنَّمَا ٱلْغَيْبُ لِلَّهِ فَٱنتَظِرُوٓا۟ إِنِّى مَعَكُم مِّنَ ٱلْمُنتَظِرِينَ

Kannada Translation - Hamza Buturಅವರು ಕೇಳುತ್ತಾರೆ: “ಅವರಿಗೆ (ಪ್ರವಾದಿಗೆ) ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಿಕೊಡಲಾಗಿಲ್ಲ?” ಹೇಳಿರಿ: “ಅದೃಶ್ಯಗಳ ಬಗ್ಗೆ ತಿಳಿದವನು ಅಲ್ಲಾಹು ಮಾತ್ರ. ನೀವು ಕಾಯಿರಿ. ನಿಶ್ಚಯವಾಗಿಯೂ ನಾನು ಕೂಡ ನಿಮ್ಮೊಂದಿಗೆ ಕಾಯುವೆನು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَآ أَذَقْنَا ٱلنَّاسَ رَحْمَةً مِّنۢ بَعْدِ ضَرَّآءَ مَسَّتْهُمْ إِذَا لَهُم مَّكْرٌ فِىٓ ءَايَاتِنَا قُلِ ٱللَّهُ أَسْرَعُ مَكْرًا إِنَّ رُسُلَنَا يَكْتُبُونَ مَا تَمْكُرُونَ

Kannada Translation - Hamza Buturಜನರಿಗೆ ಕಷ್ಟ ಬಂದ ಬಳಿಕ ನಾವು ಅವರಿಗೆ ನಮ್ಮ ದಯೆಯ ರುಚಿಯನ್ನು ತೋರಿಸಿದರೆ, ಅಗೋ ಅವರು ನಮ್ಮ ವಚನಗಳ ವಿರುದ್ಧ ಪಿತೂರಿ ಮಾಡುತ್ತಾರೆ. ಹೇಳಿರಿ: “ಅಲ್ಲಾಹು ನಿಮಗಿಂತಲೂ ವೇಗವಾಗಿ ತಂತ್ರಗಾರಿಕೆ ಮಾಡುತ್ತಾನೆ. ನಿಶ್ಚಯವಾಗಿಯೂ ನೀವು ಮಾಡುವ ಪಿತೂರಿಗಳನ್ನು ನಮ್ಮ ದೇವದೂತರು ದಾಖಲಿಸುತ್ತಿದ್ದಾರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُوَ ٱلَّذِى يُسَيِّرُكُمْ فِى ٱلْبَرِّ وَٱلْبَحْرِ حَتَّىٰٓ إِذَا كُنتُمْ فِى ٱلْفُلْكِ وَجَرَيْنَ بِهِم بِرِيحٍ طَيِّبَةٍ وَفَرِحُوا۟ بِهَا جَآءَتْهَا رِيحٌ عَاصِفٌ وَجَآءَهُمُ ٱلْمَوْجُ مِن كُلِّ مَكَانٍ وَظَنُّوٓا۟ أَنَّهُمْ أُحِيطَ بِهِمْ دَعَوُا۟ ٱللَّهَ مُخْلِصِينَ لَهُ ٱلدِّينَ لَئِنْ أَنجَيْتَنَا مِنْ هَٰذِهِۦ لَنَكُونَنَّ مِنَ ٱلشَّٰكِرِينَ

Kannada Translation - Hamza Buturನಿಮ್ಮನ್ನು ನೆಲದಲ್ಲಿ ಮತ್ತು ಕಡಲಲ್ಲಿ ಸಂಚರಿಸುವಂತೆ ಮಾಡುವವನು ಅವನೇ. ಎಲ್ಲಿಯವರೆಗೆಂದರೆ, ನೀವೊಂದು ನಾವೆಯಲ್ಲಿದ್ದು, ಉತ್ತಮ ಹವೆಯಿಂದಾಗಿ ಅವು ಯಾತ್ರಿಕರನ್ನು ಹೊತ್ತು ಚಲಿಸುತ್ತಿರುವಾಗ ಮತ್ತು ನೀವು ತುಂಬಾ ಸಂಭ್ರಮದಲ್ಲಿರುವಾಗ, ಇದ್ದಕ್ಕಿದ್ದಂತೆ ಒಂದು ಭೀಕರ ಬಿರುಗಾಳಿಯು ಬೀಸಿ, ಎಲ್ಲಾ ದಿಕ್ಕುಗಳಿಂದಲೂ ಹೆದ್ದೆರೆಗಳು ಎದ್ದು, ಸಾವು ತಮ್ಮನ್ನು ಆವರಿಸಿಕೊಂಡಿದೆಯೆಂದು ಅವರಿಗೆ ಖಾತ್ರಿಯಾದಾಗ, ಅವರು ಸಂಪೂರ್ಣ ನಿಷ್ಕಳಂಕತೆಯಿಂದ ಅಲ್ಲಾಹನನ್ನು ಕರೆದು ಪ್ರಾರ್ಥಿಸುತ್ತಾರೆ: “ನೀನು ನಮ್ಮನ್ನು ಇದರಿಂದ ಪಾರು ಮಾಡಿದರೆ ನಿಶ್ಚಯವಾಗಿಯೂ ನಾವು ನಿನಗೆ ಆಭಾರಿಯಾಗಿರುತ್ತೇವೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَمَّآ أَنجَىٰهُمْ إِذَا هُمْ يَبْغُونَ فِى ٱلْأَرْضِ بِغَيْرِ ٱلْحَقِّ يَٰٓأَيُّهَا ٱلنَّاسُ إِنَّمَا بَغْيُكُمْ عَلَىٰٓ أَنفُسِكُم مَّتَٰعَ ٱلْحَيَوٰةِ ٱلدُّنْيَا ثُمَّ إِلَيْنَا مَرْجِعُكُمْ فَنُنَبِّئُكُم بِمَا كُنتُمْ تَعْمَلُونَ

Kannada Translation - Hamza Buturಆದರೆ ಅವನು ಅವರನ್ನು ಪಾರು ಮಾಡಿದಾಗ, ಅಗೋ ಅವರು ಅನ್ಯಾಯವಾಗಿ ಭೂಮಿಯಲ್ಲಿ ಅತಿರೇಕವೆಸಗುತ್ತಾರೆ. ಓ ಮನುಷ್ಯರೇ! ನೀವು ಮಾಡುವ ಅತಿರೇಕಗಳ ದುಷ್ಫಲವನ್ನು ನೀವೇ ಉಣ್ಣುತ್ತೀರಿ. ಅವು ಇಹಲೋಕದ ಕೆಲವು ಆನಂದಗಳು ಮಾತ್ರ. ನಂತರ ನಿಮ್ಮನ್ನು ನಮ್ಮ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡಿದ ಕರ್ಮಗಳನ್ನು ನಾವು ನಿಮಗೆ ತಿಳಿಸಿಕೊಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّمَا مَثَلُ ٱلْحَيَوٰةِ ٱلدُّنْيَا كَمَآءٍ أَنزَلْنَٰهُ مِنَ ٱلسَّمَآءِ فَٱخْتَلَطَ بِهِۦ نَبَاتُ ٱلْأَرْضِ مِمَّا يَأْكُلُ ٱلنَّاسُ وَٱلْأَنْعَٰمُ حَتَّىٰٓ إِذَآ أَخَذَتِ ٱلْأَرْضُ زُخْرُفَهَا وَٱزَّيَّنَتْ وَظَنَّ أَهْلُهَآ أَنَّهُمْ قَٰدِرُونَ عَلَيْهَآ أَتَىٰهَآ أَمْرُنَا لَيْلًا أَوْ نَهَارًا فَجَعَلْنَٰهَا حَصِيدًا كَأَن لَّمْ تَغْنَ بِٱلْأَمْسِ كَذَٰلِكَ نُفَصِّلُ ٱلْـَٔايَٰتِ لِقَوْمٍ يَتَفَكَّرُونَ

Kannada Translation - Hamza Buturಇಹಲೋಕದ ಉದಾಹರಣೆಯು ಒಂದು ಮಳೆಯಂತೆ. ನಾವು ಅದನ್ನು ಆಕಾಶದಿಂದ ಇಳಿಸಿದೆವು. ಆಗ ಅದರೊಂದಿಗೆ ಭೂಮಿಯಲ್ಲಿ ಮನುಷ್ಯರು ಮತ್ತು ಜಾನುವಾರುಗಳು ತಿನ್ನುವ ಸಸ್ಯಲತಾದಿಗಳು ಬೆರೆತು ಬೆಳೆದವು. ಎಲ್ಲಿಯವರೆಗೆಂದರೆ, ಭೂಮಿ ತನ್ನ ಶೃಂಗಾರವನ್ನು ಧರಿಸಿ ಅಲಂಕಾರದಿಂದ ಕಂಗೊಳಿಸಿದಾಗ ಮತ್ತು ಭೂಮಿಯನ್ನು ನಿಯಂತ್ರಿಸುವ ಸಾಮರ್ಥ್ಯ ನಮಗಿದೆಯೆಂದು ಭೂನಿವಾಸಿಗಳು ಭಾವಿಸಿದಾಗ, ಒಂದು ರಾತ್ರಿಯಲ್ಲಿ ಅಥವಾ ಹಗಲಲ್ಲಿ ನಮ್ಮ ಆಜ್ಞೆಯು ಅದಕ್ಕೆ ಬಂದುಬಿಟ್ಟಿತು. ಆಗ ನಿನ್ನೆ ಅಲ್ಲಿ ಏನೂ ಇರಲಿಲ್ಲವೋ ಎಂಬಂತೆ ನಾವು ಅವುಗಳನ್ನು ಸಂಪೂರ್ಣ ನಾಶ ಮಾಡಿದೆವು. ಆಲೋಚಿಸುವ ಜನರಿಗೆ ನಾವು ಈ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸಿಕೊಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱللَّهُ يَدْعُوٓا۟ إِلَىٰ دَارِ ٱلسَّلَٰمِ وَيَهْدِى مَن يَشَآءُ إِلَىٰ صِرَٰطٍ مُّسْتَقِيمٍ

Kannada Translation - Hamza Buturಅಲ್ಲಾಹು ಶಾಂತಿಯ ಭವನಕ್ಕೆ ಕರೆಯುತ್ತಿದ್ದಾನೆ. ಅವನು ಇಚ್ಛಿಸುವವರಿಗೆ ಅವನು ನೇರ ಮಾರ್ಗವನ್ನು ತೋರಿಸುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لِّلَّذِينَ أَحْسَنُوا۟ ٱلْحُسْنَىٰ وَزِيَادَةٌ وَلَا يَرْهَقُ وُجُوهَهُمْ قَتَرٌ وَلَا ذِلَّةٌ أُو۟لَٰٓئِكَ أَصْحَٰبُ ٱلْجَنَّةِ هُمْ فِيهَا خَٰلِدُونَ

Kannada Translation - Hamza Buturಒಳಿತು ಮಾಡಿದವರಿಗೆ ಅತ್ಯುತ್ತಮ ಪ್ರತಿಫಲವಿದೆ ಮತ್ತು ಹೆಚ್ಚಳವೂ[1] ಇದೆ. ಅವರ ಮುಖಗಳನ್ನು ಅಂಧಕಾರ ಮತ್ತು ಅಪಮಾನವು ಆವರಿಸುವುದಿಲ್ಲ. ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ كَسَبُوا۟ ٱلسَّيِّـَٔاتِ جَزَآءُ سَيِّئَةٍۭ بِمِثْلِهَا وَتَرْهَقُهُمْ ذِلَّةٌ مَّا لَهُم مِّنَ ٱللَّهِ مِنْ عَاصِمٍ كَأَنَّمَآ أُغْشِيَتْ وُجُوهُهُمْ قِطَعًا مِّنَ ٱلَّيْلِ مُظْلِمًا أُو۟لَٰٓئِكَ أَصْحَٰبُ ٱلنَّارِ هُمْ فِيهَا خَٰلِدُونَ

Kannada Translation - Hamza Buturಕೆಡುಕುಗಳನ್ನು ಮಾಡಿದವರು ಯಾರೋ—ಅವರ ಕೆಡುಕಿಗೆ ಸಮಾನವಾದ ಶಿಕ್ಷೆಯು ಅವರಿಗೆ ದೊರೆಯಲಿದೆ ಮತ್ತು ಅಪಮಾನವು ಅವರನ್ನು ಆವರಿಸಲಿದೆ. ಅಲ್ಲಾಹನ ಶಿಕ್ಷೆಯಿಂದ ಅವರನ್ನು ರಕ್ಷಿಸುವವರು ಯಾರೂ ಇಲ್ಲ. ಕಾರ್ಗತ್ತಲ ರಾತ್ರಿಯ ತುಣುಕುಗಳು ಅವರ ಮುಖಗಳನ್ನು ಆವರಿಸಿಕೊಂಡಿದೆಯೋ ಎಂಬಂತೆ (ಅವರು ಕಪ್ಪಾಗಿರುವರು). ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا۟ مَكَانَكُمْ أَنتُمْ وَشُرَكَآؤُكُمْ فَزَيَّلْنَا بَيْنَهُمْ وَقَالَ شُرَكَآؤُهُم مَّا كُنتُمْ إِيَّانَا تَعْبُدُونَ

Kannada Translation - Hamza Buturನಾವು ಅವರೆಲ್ಲರನ್ನೂ ಒಟ್ಟುಗೂಡಿಸುವ ದಿನ. ನಂತರ ನಾವು ಬಹುದೇವಾರಾಧಕರೊಡನೆ ಹೇಳುವೆವು: “ನೀವು ಮತ್ತು ನಿಮ್ಮ ಸಹಭಾಗಿಗಳು (ದೇವರುಗಳು) ಅಲ್ಲೇ ನಿಲ್ಲಿರಿ.” ನಂತರ ನಾವು ಅವರನ್ನು ಬೇರ್ಪಡಿಸುವೆವು. ಆಗ ಅವರ ಸಹಭಾಗಿಗಳು (ದೇವರುಗಳು) ಅವರೊಡನೆ ಹೇಳುವರು: “ನೀವು ನಮ್ಮನ್ನು ಆರಾಧಿಸುತ್ತಿರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَفَىٰ بِٱللَّهِ شَهِيدًۢا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَٰفِلِينَ

Kannada Translation - Hamza Buturನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ನೀವು ಮಾಡುತ್ತಿದ್ದ ಆರಾಧನೆಯ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُنَالِكَ تَبْلُوا۟ كُلُّ نَفْسٍ مَّآ أَسْلَفَتْ وَرُدُّوٓا۟ إِلَى ٱللَّهِ مَوْلَىٰهُمُ ٱلْحَقِّ وَضَلَّ عَنْهُم مَّا كَانُوا۟ يَفْتَرُونَ

Kannada Translation - Hamza Buturಅಲ್ಲಿ ಪ್ರತಿಯೊಬ್ಬನೂ ತಾನು ಈಗಾಗಲೇ ಮಾಡಿಟ್ಟ ಕರ್ಮಗಳನ್ನು ತನಿಖೆ ಮಾಡುವನು. ಅವರನ್ನು ಅವರ ನೈಜ ರಕ್ಷಕನಾದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಅವರು ಆರೋಪಿಸುತ್ತಿದ್ದ ಸುಳ್ಳುಗಳೆಲ್ಲವೂ ಅವರಿಂದ ಮಾಯವಾಗಿ ಬಿಡುವುವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ مَن يَرْزُقُكُم مِّنَ ٱلسَّمَآءِ وَٱلْأَرْضِ أَمَّن يَمْلِكُ ٱلسَّمْعَ وَٱلْأَبْصَٰرَ وَمَن يُخْرِجُ ٱلْحَىَّ مِنَ ٱلْمَيِّتِ وَيُخْرِجُ ٱلْمَيِّتَ مِنَ ٱلْحَىِّ وَمَن يُدَبِّرُ ٱلْأَمْرَ فَسَيَقُولُونَ ٱللَّهُ فَقُلْ أَفَلَا تَتَّقُونَ

Kannada Translation - Hamza Buturಕೇಳಿರಿ: “ಆಕಾಶದಿಂದ ಮತ್ತು ಭೂಮಿಯಿಂದ ನಿಮಗೆ ಆಹಾರವನ್ನು ಒದಗಿಸುವುದು ಯಾರು? ನಿಮ್ಮ ಶ್ರವಣ ಮತ್ತು ದೃಷ್ಟಿ ಯಾರ ನಿಯಂತ್ರಣದಲ್ಲಿದೆ? ನಿರ್ಜೀವಿಯಿಂದ ಜೀವಿಯನ್ನು ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವುದು ಯಾರು? ಜಗತ್ತಿನ ಎಲ್ಲಾ ವಿಷಯಗಳನ್ನು ನಿಯಂತ್ರಿಸುವುದು ಯಾರು?” ಆಗ ಅವರು ಹೇಳುವರು: “ಅಲ್ಲಾಹು.” ಕೇಳಿರಿ: “ಆದರೂ ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَذَٰلِكُمُ ٱللَّهُ رَبُّكُمُ ٱلْحَقُّ فَمَاذَا بَعْدَ ٱلْحَقِّ إِلَّا ٱلضَّلَٰلُ فَأَنَّىٰ تُصْرَفُونَ

Kannada Translation - Hamza Buturಅವನೇ ನಿಮ್ಮ ನೈಜ ಪರಿಪಾಲಕನಾದ ಅಲ್ಲಾಹು. ಸತ್ಯದ ನಂತರ ದುರ್ಮಾರ್ಗವಲ್ಲದೆ ಇನ್ನೇನಿದೆ? ಹಾಗಿದ್ದೂ ನೀವು (ಸತ್ಯದಿಂದ) ತಿರುಗಿಸಲ್ಪಡುತ್ತಿರುವುದು ಹೇಗೆ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَٰلِكَ حَقَّتْ كَلِمَتُ رَبِّكَ عَلَى ٱلَّذِينَ فَسَقُوٓا۟ أَنَّهُمْ لَا يُؤْمِنُونَ

Kannada Translation - Hamza Buturಈ ರೀತಿ ಆ ದುಷ್ಕರ್ಮಿಗಳಿಗೆ ಸಂಬಂಧಿಸಿದಂತೆ “ಅವರು ವಿಶ್ವಾಸವಿಡುವುದಿಲ್ಲ” ಎಂಬ ನಿಮ್ಮ ಪರಿಪಾಲಕನ (ಅಲ್ಲಾಹನ) ವಚನವು ಸತ್ಯವಾಗಿ ಪರಿಣಮಿಸಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ هَلْ مِن شُرَكَآئِكُم مَّن يَبْدَؤُا۟ ٱلْخَلْقَ ثُمَّ يُعِيدُهُۥ قُلِ ٱللَّهُ يَبْدَؤُا۟ ٱلْخَلْقَ ثُمَّ يُعِيدُهُۥ فَأَنَّىٰ تُؤْفَكُونَ

Kannada Translation - Hamza Buturಕೇಳಿರಿ: “ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ನಿಮ್ಮ ದೇವರುಗಳಲ್ಲಿ) ಸೃಷ್ಟಿಯನ್ನು ಆರಂಭಿಸುವವರು ಮತ್ತು ನಂತರ ಅದನ್ನು ಪುನರಾವರ್ತಿಸುವವರು ಯಾರಾದರೂ ಇದ್ದಾರೆಯೇ?” ಹೇಳಿರಿ: “ಅಲ್ಲಾಹು ಸೃಷ್ಟಿಯನ್ನು ಆರಂಭಿಸುತ್ತಾನೆ ಮತ್ತು ನಂತರ ಅದನ್ನು ಪುನರಾವರ್ತಿಸುತ್ತಾನೆ. ಹಾಗಿದ್ದೂ ನೀವು (ಸತ್ಯದಿಂದ) ತಪ್ಪಿಸಲ್ಪಡುತ್ತಿರುವುದು ಹೇಗೆ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ هَلْ مِن شُرَكَآئِكُم مَّن يَهْدِىٓ إِلَى ٱلْحَقِّ قُلِ ٱللَّهُ يَهْدِى لِلْحَقِّ أَفَمَن يَهْدِىٓ إِلَى ٱلْحَقِّ أَحَقُّ أَن يُتَّبَعَ أَمَّن لَّا يَهِدِّىٓ إِلَّآ أَن يُهْدَىٰ فَمَا لَكُمْ كَيْفَ تَحْكُمُونَ

Kannada Translation - Hamza Buturಕೇಳಿರಿ: “ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ನಿಮ್ಮ ದೇವರುಗಳಲ್ಲಿ) ಸತ್ಯಮಾರ್ಗವನ್ನು ತೋರಿಸುವವರು ಯಾರಾದರೂ ಇದ್ದಾರೆಯೇ?” ಹೇಳಿರಿ: “ಅಲ್ಲಾಹು ಸತ್ಯಮಾರ್ಗವನ್ನು ತೋರಿಸುತ್ತಾನೆ. ಹಾಗಾದರೆ, ಅನುಸರಿಸಲು ಹೆಚ್ಚು ಹಕ್ಕಿರುವವನು ಸತ್ಯಮಾರ್ಗವನ್ನು ತೋರಿಸುವವನೋ ಅಥವಾ ಬೇರೆ ಯಾರಾದರೂ ಸತ್ಯಮಾರ್ಗವನ್ನು ತೋರಿಸಿದ ವಿನಾ ಸ್ವಯಂ ಸತ್ಯಮಾರ್ಗವನ್ನು ಕಾಣಲು ಸಾಧ್ಯವಾಗದವನೋ? ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತೀರಿ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا يَتَّبِعُ أَكْثَرُهُمْ إِلَّا ظَنًّا إِنَّ ٱلظَّنَّ لَا يُغْنِى مِنَ ٱلْحَقِّ شَيْـًٔا إِنَّ ٱللَّهَ عَلِيمٌۢ بِمَا يَفْعَلُونَ

Kannada Translation - Hamza Buturಅವರಲ್ಲಿ ಹೆಚ್ಚಿನವರು ಊಹಾಪೋಹಗಳನ್ನು ಮಾತ್ರ ಹಿಂಬಾಲಿಸುತ್ತಾರೆ. ಸತ್ಯವನ್ನು ತಿಳಿಯುವ ವಿಷಯದಲ್ಲಿ ಊಹಾಪೋಹಗಳು ಖಂಡಿತ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅವರು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا كَانَ هَٰذَا ٱلْقُرْءَانُ أَن يُفْتَرَىٰ مِن دُونِ ٱللَّهِ وَلَٰكِن تَصْدِيقَ ٱلَّذِى بَيْنَ يَدَيْهِ وَتَفْصِيلَ ٱلْكِتَٰبِ لَا رَيْبَ فِيهِ مِن رَّبِّ ٱلْعَٰلَمِينَ

Kannada Translation - Hamza Buturಈ ಕುರ್‌ಆನ್ ಅಲ್ಲಾಹನಿಂದಲ್ಲದೆ ಇನ್ನಾರಿಂದಲೂ ರಚಿಸಲು ಸಾಧ್ಯವಿಲ್ಲ. ವಾಸ್ತವವಾಗಿ, ಇದು ಇದಕ್ಕಿಂತ ಮೊದಲು ಅವತೀರ್ಣವಾದ ಗ್ರಂಥಗಳ ದೃಢೀಕರಣ ಮತ್ತು ಗ್ರಂಥದ (ನಿಯಮಗಳ) ವಿವರಣೆಯಾಗಿದೆ. ಇದು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಂದ ಅವತೀರ್ಣವಾಗಿದೆ ಎಂಬ ವಿಷಯದಲ್ಲಿ ಸಂದೇಹವೇ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ يَقُولُونَ ٱفْتَرَىٰهُ قُلْ فَأْتُوا۟ بِسُورَةٍ مِّثْلِهِۦ وَٱدْعُوا۟ مَنِ ٱسْتَطَعْتُم مِّن دُونِ ٱللَّهِ إِن كُنتُمْ صَٰدِقِينَ

Kannada Translation - Hamza Buturಇದನ್ನು ಪ್ರವಾದಿಯವರು ಸ್ವಯಂ ರಚಿಸಿದರೆಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಸರಿ, ಹಾಗಾದರೆ ನೀವು ಕೂಡ ಇದರಂತಿರುವ ಒಂದು ಅಧ್ಯಾಯವನ್ನು ರಚಿಸಿ ತನ್ನಿ. ಅಲ್ಲಾಹನ ಹೊರತು ನಿಮಗೆ ಸಾಧ್ಯವಿರುವ ಎಲ್ಲರನ್ನೂ ಕರೆಯಿರಿ. ನೀವು ಸತ್ಯವನ್ನೇ ಹೇಳುತ್ತಿದ್ದರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلْ كَذَّبُوا۟ بِمَا لَمْ يُحِيطُوا۟ بِعِلْمِهِۦ وَلَمَّا يَأْتِهِمْ تَأْوِيلُهُۥ كَذَٰلِكَ كَذَّبَ ٱلَّذِينَ مِن قَبْلِهِمْ فَٱنظُرْ كَيْفَ كَانَ عَٰقِبَةُ ٱلظَّٰلِمِينَ

Kannada Translation - Hamza Buturಬದಲಿಗೆ, ಯಾವುದನ್ನು ಅವರು ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಲಿಲ್ಲವೋ ಮತ್ತು ಯಾವುದರ ಫಲಿತಾಂಶವು ಅವರನ್ನು ತಲುಪಲಿಲ್ಲವೋ ಅದನ್ನು ಅವರು ನಿಷೇಧಿಸಿದರು. ಅವರಿಗಿಂತ ಮೊದಲಿನವರೂ ಹೀಗೆಯೇ ನಿಷೇಧಿಸಿದ್ದರು. ಆದ್ದರಿಂದ, ಅಕ್ರಮಿಗಳ ಅಂತ್ಯವು ಹೇಗಿತ್ತೆಂದು ನೋಡಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِنْهُم مَّن يُؤْمِنُ بِهِۦ وَمِنْهُم مَّن لَّا يُؤْمِنُ بِهِۦ وَرَبُّكَ أَعْلَمُ بِٱلْمُفْسِدِينَ

Kannada Translation - Hamza Buturಅವರಲ್ಲಿ ಕೆಲವರು ಅದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡುತ್ತಾರೆ ಮತ್ತು ಕೆಲವರು ವಿಶ್ವಾಸವಿಡುವುದಿಲ್ಲ. ಅಲ್ಲಾಹು ಕಿಡಿಗೇಡಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِن كَذَّبُوكَ فَقُل لِّى عَمَلِى وَلَكُمْ عَمَلُكُمْ أَنتُم بَرِيٓـُٔونَ مِمَّآ أَعْمَلُ وَأَنَا۠ بَرِىٓءٌ مِّمَّا تَعْمَلُونَ

Kannada Translation - Hamza Buturಅವರು ನಿಮ್ಮನ್ನು ನಿಷೇಧಿಸಿದರೆ ಹೇಳಿರಿ: “ನನಗೆ ನನ್ನ ಕರ್ಮ ಮತ್ತು ನಿಮಗೆ ನಿಮ್ಮ ಕರ್ಮ. ನಾನು ಮಾಡುವ ಕರ್ಮಗಳಿಂದ ನೀವು ಹೊಣೆಮುಕ್ತರಾಗಿದ್ದೀರಿ ಮತ್ತು ನೀವು ಮಾಡುವ ಕರ್ಮಗಳಿಂದ ನಾನು ಹೊಣೆಮುಕ್ತನಾಗಿದ್ದೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِنْهُم مَّن يَسْتَمِعُونَ إِلَيْكَ أَفَأَنتَ تُسْمِعُ ٱلصُّمَّ وَلَوْ كَانُوا۟ لَا يَعْقِلُونَ

Kannada Translation - Hamza Buturಅವರಲ್ಲಿ ಕೆಲವರು ನೀವು ಹೇಳುವುದನ್ನು ಕಿವಿಗೊಟ್ಟು ಕೇಳುತ್ತಾರೆ. ಆದರೆ ಆ ಕಿವುಡರಿಗೆ (ನಿಮ್ಮ ಸಂದೇಶವು) ಕೇಳುವಂತೆ ಮಾಡಲು ನಿಮಗೆ ಸಾಧ್ಯವೇ? ಅವರು ಅದನ್ನು ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡದಿದ್ದರೂ ಸಹ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِنْهُم مَّن يَنظُرُ إِلَيْكَ أَفَأَنتَ تَهْدِى ٱلْعُمْىَ وَلَوْ كَانُوا۟ لَا يُبْصِرُونَ

Kannada Translation - Hamza Buturಅವರಲ್ಲಿ ಕೆಲವರು ನಿಮ್ಮನ್ನು ನೋಡುತ್ತಾರೆ. ಆದರೆ ಆ ಕುರುಡರಿಗೆ ದಾರಿ ತೋರಿಸಲು ನಿಮಗೆ ಸಾಧ್ಯವೇ? ಅವರು ನೋಡುವ ಪ್ರಯತ್ನ ಮಾಡದಿದ್ದರೂ ಸಹ?[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱللَّهَ لَا يَظْلِمُ ٱلنَّاسَ شَيْـًٔا وَلَٰكِنَّ ٱلنَّاسَ أَنفُسَهُمْ يَظْلِمُونَ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಮನುಷ್ಯರಿಗೆ ಸ್ವಲ್ಪವೂ ಅನ್ಯಾಯ ಮಾಡುವುದಿಲ್ಲ. ಆದರೆ ಮನುಷ್ಯರು ಸ್ವಯಂ ಅವರಿಗೇ ಅನ್ಯಾಯ ಮಾಡುತ್ತಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ يَحْشُرُهُمْ كَأَن لَّمْ يَلْبَثُوٓا۟ إِلَّا سَاعَةً مِّنَ ٱلنَّهَارِ يَتَعَارَفُونَ بَيْنَهُمْ قَدْ خَسِرَ ٱلَّذِينَ كَذَّبُوا۟ بِلِقَآءِ ٱللَّهِ وَمَا كَانُوا۟ مُهْتَدِينَ

Kannada Translation - Hamza Buturಅವನು ಅವರನ್ನು ಒಟ್ಟುಗೂಡಿಸುವ ದಿನ ಹಗಲಿನ ಕೆಲವು ತಾಸುಗಳು ಮಾತ್ರ (ಭೂಲೋಕದಲ್ಲಿ) ವಾಸವಾಗಿದ್ದೆವೋ ಎಂಬಂತೆ ಅವರಿಗೆ ಭಾಸವಾಗುವುದು. ಅವರು ಪರಸ್ಪರ ಗುರುತಿಸುವರು. ಅಲ್ಲಾಹನ ಭೇಟಿಯನ್ನು ನಿಷೇಧಿಸಿದವರು ನಷ್ಟಹೊಂದಿದರು. ಅವರು ಸನ್ಮಾರ್ಗ ಪಡೆದವರಾಗಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِمَّا نُرِيَنَّكَ بَعْضَ ٱلَّذِى نَعِدُهُمْ أَوْ نَتَوَفَّيَنَّكَ فَإِلَيْنَا مَرْجِعُهُمْ ثُمَّ ٱللَّهُ شَهِيدٌ عَلَىٰ مَا يَفْعَلُونَ

Kannada Translation - Hamza Buturನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮನ್ನು ಮೃತಪಡಿಸಿದರೂ ಅವರು ಮರಳುವುದು ನಮ್ಮ ಬಳಿಗೇ ಆಗಿದೆ. ನಂತರ, ಅವರು ಮಾಡುವ ಎಲ್ಲಾ ಕರ್ಮಗಳಿಗೂ ಅಲ್ಲಾಹು ಸಾಕ್ಷಿಯಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلِكُلِّ أُمَّةٍ رَّسُولٌ فَإِذَا جَآءَ رَسُولُهُمْ قُضِىَ بَيْنَهُم بِٱلْقِسْطِ وَهُمْ لَا يُظْلَمُونَ

Kannada Translation - Hamza Buturಎಲ್ಲಾ ಸಮುದಾಯಗಳಿಗೂ ಒಬ್ಬ ಸಂದೇಶವಾಹಕರಿದ್ದಾರೆ. ಅವರ ಸಂದೇಶವಾಹಕರ ಆಗಮನವಾದರೆ, ಅವರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَقُولُونَ مَتَىٰ هَٰذَا ٱلْوَعْدُ إِن كُنتُمْ صَٰدِقِينَ

Kannada Translation - Hamza Buturಅವರು ಕೇಳುತ್ತಾರೆ: “ಈ ವಾಗ್ದಾನವು ಸತ್ಯವಾಗುವುದು ಯಾವಾಗ? ನೀವು ಸತ್ಯವಂತರಾಗಿದ್ದರೆ ಹೇಳಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّآ أَمْلِكُ لِنَفْسِى ضَرًّا وَلَا نَفْعًا إِلَّا مَا شَآءَ ٱللَّهُ لِكُلِّ أُمَّةٍ أَجَلٌ إِذَا جَآءَ أَجَلُهُمْ فَلَا يَسْتَـْٔخِرُونَ سَاعَةً وَلَا يَسْتَقْدِمُونَ

Kannada Translation - Hamza Buturಹೇಳಿರಿ: “ನಾನು ಸ್ವಯಂ ನನಗೆ ಯಾವುದೇ ಪ್ರಯೋಜನ ಅಥವಾ ತೊಂದರೆ ಮಾಡುವ ಸಾಮರ್ಥ್ಯವನ್ನು ಹೊಂದಿಲ್ಲ. ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ಎಲ್ಲಾ ಸಮುದಾಯಗಳಿಗೂ ಒಂದು ಅವಧಿಯಿದೆ. ಅವರ ಅವಧಿಯು ಬಂದರೆ, ಒಂದು ಕ್ಷಣ ಹಿಂದೂಡಲು ಅಥವಾ ಮುಂದೂಡಲು ಅವರಿಂದ ಸಾಧ್ಯವಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ أَرَءَيْتُمْ إِنْ أَتَىٰكُمْ عَذَابُهُۥ بَيَٰتًا أَوْ نَهَارًا مَّاذَا يَسْتَعْجِلُ مِنْهُ ٱلْمُجْرِمُونَ

Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹನ ಶಿಕ್ಷೆಯು ನಿಮ್ಮ ಬಳಿಗೆ ರಾತ್ರಿಯಲ್ಲಿ ಅಥವಾ ಹಗಲಿನಲ್ಲಿ ಬಂದರೆ, ಅದರಲ್ಲಿ ಯಾವುದಕ್ಕಾಗಿ ಅಪರಾಧಿಗಳು ತ್ವರೆ ಮಾಡುತ್ತಿದ್ದಾರೆ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَثُمَّ إِذَا مَا وَقَعَ ءَامَنتُم بِهِۦٓ ءَآلْـَٰٔنَ وَقَدْ كُنتُم بِهِۦ تَسْتَعْجِلُونَ

Kannada Translation - Hamza Buturನಂತರ ಅದು ಬಂದ ಬಳಿಕ ನೀವು ಅದನ್ನು ನಂಬುವಿರಾ? (ಆಗ ನಿಮ್ಮೊಡನೆ ಹೇಳಲಾಗುವುದು): “ಈಗ ನೀವು ನಂಬುತ್ತೀರಾ? ನೀವು ಇದಕ್ಕಾಗಿ ತ್ವರೆ ಮಾಡುತ್ತಿದ್ದಿರಲ್ಲವೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ قِيلَ لِلَّذِينَ ظَلَمُوا۟ ذُوقُوا۟ عَذَابَ ٱلْخُلْدِ هَلْ تُجْزَوْنَ إِلَّا بِمَا كُنتُمْ تَكْسِبُونَ

Kannada Translation - Hamza Buturನಂತರ ಅಕ್ರಮಿಗಳೊಡನೆ ಹೇಳಲಾಗುವುದು: “ಶಾಶ್ವತ ಶಿಕ್ಷೆಯ ರುಚಿಯನ್ನು ನೋಡಿರಿ. ನೀವು ಮಾಡಿದ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَسْتَنۢبِـُٔونَكَ أَحَقٌّ هُوَ قُلْ إِى وَرَبِّىٓ إِنَّهُۥ لَحَقٌّ وَمَآ أَنتُم بِمُعْجِزِينَ

Kannada Translation - Hamza Butur“ಅದು ನಿಜವೇ?” ಎಂದು ಅವರು ನಿಮ್ಮೊಡನೆ ವಿಚಾರಿಸುತ್ತಾರೆ. ಹೇಳಿರಿ: “ಹೌದು! ನನ್ನ ಪರಿಪಾಲಕನ (ಅಲ್ಲಾಹನ) ಆಣೆ! ನಿಶ್ಚಯವಾಗಿಯೂ ಅದು ಸತ್ಯವಾಗಿದೆ. ನಿಮಗೆ ಅಲ್ಲಾಹನನ್ನು ಸೋಲಿಸಲು ಸಾಧ್ಯವಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ أَنَّ لِكُلِّ نَفْسٍ ظَلَمَتْ مَا فِى ٱلْأَرْضِ لَٱفْتَدَتْ بِهِۦ وَأَسَرُّوا۟ ٱلنَّدَامَةَ لَمَّا رَأَوُا۟ ٱلْعَذَابَ وَقُضِىَ بَيْنَهُم بِٱلْقِسْطِ وَهُمْ لَا يُظْلَمُونَ

Kannada Translation - Hamza Buturಅಕ್ರಮವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಭೂಮಿಯಲ್ಲಿರುವುದೆಲ್ಲವೂ ಇದ್ದರೂ ಅವನು ಅವೆಲ್ಲವನ್ನೂ ಪರಿಹಾರವಾಗಿ ನೀಡಿಯಾದರೂ ಶಿಕ್ಷೆಯಿಂದ ಪಾರಾಗಲು ಬಯಸುತ್ತಿದ್ದನು. ಶಿಕ್ಷೆಯನ್ನು ಕಾಣುವಾಗ ಅವರು ತಮ್ಮ ವಿಷಾದವನ್ನು ಅಡಗಿಸುವರು. ಅವರ ನಡುವೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَآ إِنَّ لِلَّهِ مَا فِى ٱلسَّمَٰوَٰتِ وَٱلْأَرْضِ أَلَآ إِنَّ وَعْدَ ٱللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ

Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُوَ يُحْىِۦ وَيُمِيتُ وَإِلَيْهِ تُرْجَعُونَ

Kannada Translation - Hamza Buturಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَٰٓأَيُّهَا ٱلنَّاسُ قَدْ جَآءَتْكُم مَّوْعِظَةٌ مِّن رَّبِّكُمْ وَشِفَآءٌ لِّمَا فِى ٱلصُّدُورِ وَهُدًى وَرَحْمَةٌ لِّلْمُؤْمِنِينَ

Kannada Translation - Hamza Buturಓ ಮನುಷ್ಯರೇ! ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ಉಪದೇಶವು ಬಂದಿದೆ. ಅದು ಹೃದಯಗಳಲ್ಲಿರುವ ರೋಗಕ್ಕೆ ಉಪಶಮನವಾಗಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ಹಾಗೂ ದಯೆಯಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ بِفَضْلِ ٱللَّهِ وَبِرَحْمَتِهِۦ فَبِذَٰلِكَ فَلْيَفْرَحُوا۟ هُوَ خَيْرٌ مِّمَّا يَجْمَعُونَ

Kannada Translation - Hamza Buturಹೇಳಿರಿ: “ಅಲ್ಲಾಹನ ಈ ಔದಾರ್ಯ ಮತ್ತು ದಯೆಯಿಂದ ಅವರು (ಸತ್ಯವಿಶ್ವಾಸಿಗಳು) ಸಂತೋಷಪಡಲಿ. ಅವರು ಶೇಖರಿಸುವ ಎಲ್ಲಾ ವಸ್ತುಗಳಿಗಿಂತಲೂ ಇದು ಶ್ರೇಷ್ಠವಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ أَرَءَيْتُم مَّآ أَنزَلَ ٱللَّهُ لَكُم مِّن رِّزْقٍ فَجَعَلْتُم مِّنْهُ حَرَامًا وَحَلَٰلًا قُلْ ءَآللَّهُ أَذِنَ لَكُمْ أَمْ عَلَى ٱللَّهِ تَفْتَرُونَ

Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನಿಮಗೆ ಏನೆಲ್ಲಾ ಆಹಾರಗಳನ್ನು ಒದಗಿಸಿದ್ದಾನೋ ಅವುಗಳಲ್ಲಿ ಕೆಲವನ್ನು ನೀವು ನಿಷೇಧಿಸಿದ್ದೀರಿ ಮತ್ತು ಕೆಲವನ್ನು ಅನುಮತಿಸಿದ್ದೀರಿ.” ಕೇಳಿರಿ: “ಹೀಗೆ ಮಾಡಲು ಅಲ್ಲಾಹು ನಿಮಗೆ ಆಜ್ಞಾಪಿಸಿದನೇ? ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುತ್ತಿದ್ದೀರಾ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا ظَنُّ ٱلَّذِينَ يَفْتَرُونَ عَلَى ٱللَّهِ ٱلْكَذِبَ يَوْمَ ٱلْقِيَٰمَةِ إِنَّ ٱللَّهَ لَذُو فَضْلٍ عَلَى ٱلنَّاسِ وَلَٰكِنَّ أَكْثَرَهُمْ لَا يَشْكُرُونَ

Kannada Translation - Hamza Buturಪುನರುತ್ಥಾನದ ದಿನದಂದು ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರ ಭಾವನೆ ಏನಿರಬಹುದು? ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರ ಮೇಲೆ ಮಹಾ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರೂ ಕೃತಜ್ಞರಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا تَكُونُ فِى شَأْنٍ وَمَا تَتْلُوا۟ مِنْهُ مِن قُرْءَانٍ وَلَا تَعْمَلُونَ مِنْ عَمَلٍ إِلَّا كُنَّا عَلَيْكُمْ شُهُودًا إِذْ تُفِيضُونَ فِيهِ وَمَا يَعْزُبُ عَن رَّبِّكَ مِن مِّثْقَالِ ذَرَّةٍ فِى ٱلْأَرْضِ وَلَا فِى ٱلسَّمَآءِ وَلَآ أَصْغَرَ مِن ذَٰلِكَ وَلَآ أَكْبَرَ إِلَّا فِى كِتَٰبٍ مُّبِينٍ

Kannada Translation - Hamza Buturನೀವು ಯಾವುದೇ ಕೆಲಸದಲ್ಲಿ ನಿರತರಾಗಿದ್ದರೂ, ನೀವು ಕುರ್‌ಆನಿನ ಯಾವುದೇ ಭಾಗವನ್ನು ಪಠಿಸುತ್ತಿದ್ದರೂ, ಮತ್ತು ನೀವು (ಜನರು) ಯಾವುದೇ ಕೆಲಸವನ್ನು ಮಾಡುತ್ತಿದ್ದರೂ, ನೀವು ಅದರಲ್ಲಿ ಮುಳುಗಿರುವಾಗ ನಾವು ನಿಮ್ಮ ಮೇಲೆ ಸಂಪೂರ್ಣ ಸಾಕ್ಷಿಯಾಗಿರುತ್ತೇವೆ. ಭೂಮಿಯಲ್ಲಿ ಅಥವಾ ಆಕಾಶದಲ್ಲಿರುವ ಒಂದು ಅಣುವಿನ ತೂಕದಷ್ಟಿರುವ—ಅಥವಾ ಅದಕ್ಕಿಂತ ಚಿಕ್ಕ ಅಥವಾ ಅದಕ್ಕಿಂತ ದೊಡ್ಡ—ಯಾವುದೇ ಒಂದು ವಸ್ತುವೂ ನಿಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಿಂದ ಮರೆಯಾಗಿಲ್ಲ. ಎಲ್ಲವನ್ನೂ ಒಂದು ಸ್ಪಷ್ಟ ದಾಖಲೆಯಲ್ಲಿ ನಮೂದಿಸಿಡಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَآ إِنَّ أَوْلِيَآءَ ٱللَّهِ لَا خَوْفٌ عَلَيْهِمْ وَلَا هُمْ يَحْزَنُونَ

Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ಇಷ್ಟದಾಸರಿಗೆ ಯಾವುದೇ ಭಯವಿಲ್ಲ. ಅವರು ದುಃಖಿಸುವುದೂ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِينَ ءَامَنُوا۟ وَكَانُوا۟ يَتَّقُونَ

Kannada Translation - Hamza Buturಅವರು ವಿಶ್ವಾಸವಿಟ್ಟವರು ಮತ್ತು ದೇವಭಯವುಳ್ಳವರಾಗಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَهُمُ ٱلْبُشْرَىٰ فِى ٱلْحَيَوٰةِ ٱلدُّنْيَا وَفِى ٱلْـَٔاخِرَةِ لَا تَبْدِيلَ لِكَلِمَٰتِ ٱللَّهِ ذَٰلِكَ هُوَ ٱلْفَوْزُ ٱلْعَظِيمُ

Kannada Translation - Hamza Buturಅವರಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸುವಾರ್ತೆಗಳಿವೆ. ಅಲ್ಲಾಹನ ವಚನಗಳಿಗೆ ಯಾವುದೇ ಬದಲಾವಣೆಯಿಲ್ಲ. ಅದೇ ಅತಿದೊಡ್ಡ ಯಶಸ್ಸು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا يَحْزُنكَ قَوْلُهُمْ إِنَّ ٱلْعِزَّةَ لِلَّهِ جَمِيعًا هُوَ ٱلسَّمِيعُ ٱلْعَلِيمُ

Kannada Translation - Hamza Buturಅವರ ಮಾತುಗಳು ನಿಮ್ಮನ್ನು ಬೇಸರಗೊಳಿಸದಿರಲಿ. ನಿಶ್ಚಯವಾಗಿಯೂ ಪ್ರಾಬಲ್ಯವು ಸಂಪೂರ್ಣವಾಗಿ ಅಲ್ಲಾಹನಿಗೆ ಮಾತ್ರವಿದೆ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَآ إِنَّ لِلَّهِ مَن فِى ٱلسَّمَٰوَٰتِ وَمَن فِى ٱلْأَرْضِ وَمَا يَتَّبِعُ ٱلَّذِينَ يَدْعُونَ مِن دُونِ ٱللَّهِ شُرَكَآءَ إِن يَتَّبِعُونَ إِلَّا ٱلظَّنَّ وَإِنْ هُمْ إِلَّا يَخْرُصُونَ

Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಅಲ್ಲಾಹನಿಗೆ ಸೇರಿದವರು. ಅಲ್ಲಾಹನ ಬಿಟ್ಟು ಅವನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದ ದೇವರುಗಳನ್ನು ಕರೆದು ಪ್ರಾರ್ಥಿಸುವವರು ಏನನ್ನು ಹಿಂಬಾಲಿಸುತ್ತಾರೆ? ಅವರು ಕೇವಲ ಊಹಾ-ಪೋಹಗಳನ್ನು ಮಾತ್ರ ಹಿಂಬಾಲಿಸುತ್ತಾರೆ. ಅವರು ಸುಳ್ಳನ್ನು ಮಾತ್ರ ಆರೋಪಿಸುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُوَ ٱلَّذِى جَعَلَ لَكُمُ ٱلَّيْلَ لِتَسْكُنُوا۟ فِيهِ وَٱلنَّهَارَ مُبْصِرًا إِنَّ فِى ذَٰلِكَ لَـَٔايَٰتٍ لِّقَوْمٍ يَسْمَعُونَ

Kannada Translation - Hamza Buturನಿಮಗೆ ವಿಶ್ರಾಂತಿ ಪಡೆಯಲು ರಾತ್ರಿಯನ್ನು ಮಾಡಿದವನು ಮತ್ತು (ನಿಮ್ಮ ಉಪಜೀವನಕ್ಕಾಗಿ) ಹಗಲನ್ನು ಪ್ರಕಾಶಮಯವಾಗಿ ಮಾಡಿದವನು ಅವನೇ. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ಅನೇಕ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالُوا۟ ٱتَّخَذَ ٱللَّهُ وَلَدًا سُبْحَٰنَهُۥ هُوَ ٱلْغَنِىُّ لَهُۥ مَا فِى ٱلسَّمَٰوَٰتِ وَمَا فِى ٱلْأَرْضِ إِنْ عِندَكُم مِّن سُلْطَٰنٍۭ بِهَٰذَآ أَتَقُولُونَ عَلَى ٱللَّهِ مَا لَا تَعْلَمُونَ

Kannada Translation - Hamza Buturಅವರು ಹೇಳಿದರು: “ಅಲ್ಲಾಹನಿಗೆ ಮಕ್ಕಳಿದ್ದಾರೆ.” ಅವನು ಪರಮ ಪರಿಶುದ್ಧನು. ಅವನಿಗೆ ಯಾರ ಅಗತ್ಯವೂ ಇಲ್ಲ. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಹೀಗೆ ಹೇಳಲು ನಿಮ್ಮ ಬಳಿ ಏನಾದರೂ ಸಾಕ್ಷ್ಯಾಧಾರವಿದೆಯೇ? ನಿಮಗೆ ಗೊತ್ತಿಲ್ಲದ ವಿಷಯಗಳನ್ನು ನೀವು ಅಲ್ಲಾಹನ ಮೇಲೆ ಆರೋಪಿಸುತ್ತೀರಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنَّ ٱلَّذِينَ يَفْتَرُونَ عَلَى ٱللَّهِ ٱلْكَذِبَ لَا يُفْلِحُونَ

Kannada Translation - Hamza Buturಹೇಳಿರಿ: “ನಿಶ್ಚಯವಾಗಿಯೂ ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರು ಯಶಸ್ವಿಯಾಗುವುದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَتَٰعٌ فِى ٱلدُّنْيَا ثُمَّ إِلَيْنَا مَرْجِعُهُمْ ثُمَّ نُذِيقُهُمُ ٱلْعَذَابَ ٱلشَّدِيدَ بِمَا كَانُوا۟ يَكْفُرُونَ

Kannada Translation - Hamza Buturಅವರಿಗಿರುವುದು ಇಹಲೋಕದ ಆನಂದ ಮಾತ್ರ. ನಂತರ ಅವರನ್ನು ನಮ್ಮ ಬಳಿಗೆ ಮರಳಿಸಲಾಗುತ್ತದೆ. ನಂತರ, ಅವರು ಸತ್ಯವನ್ನು ನಿಷೇಧಿಸಿದ್ದಕ್ಕಾಗಿ ನಾವು ಅವರಿಗೆ ಕಠೋರ ಶಿಕ್ಷೆಯ ರುಚಿಯನ್ನು ತೋರಿಸುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱتْلُ عَلَيْهِمْ نَبَأَ نُوحٍ إِذْ قَالَ لِقَوْمِهِۦ يَٰقَوْمِ إِن كَانَ كَبُرَ عَلَيْكُم مَّقَامِى وَتَذْكِيرِى بِـَٔايَٰتِ ٱللَّهِ فَعَلَى ٱللَّهِ تَوَكَّلْتُ فَأَجْمِعُوٓا۟ أَمْرَكُمْ وَشُرَكَآءَكُمْ ثُمَّ لَا يَكُنْ أَمْرُكُمْ عَلَيْكُمْ غُمَّةً ثُمَّ ٱقْضُوٓا۟ إِلَىَّ وَلَا تُنظِرُونِ

Kannada Translation - Hamza Buturಅವರಿಗೆ ನೂಹರ ಸಮಾಚಾರವನ್ನು ಓದಿಕೊಡಿ. ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ಓ ನನ್ನ ಜನರೇ! ನಾನು ನಿಮ್ಮ ನಡುವೆಯಿರುವುದು ಮತ್ತು ನಾನು ಅಲ್ಲಾಹನ ವಚನಗಳನ್ನು ಪಠಿಸಿ ಉಪದೇಶ ನೀಡುವುದು ನಿಮಗೆ ದೊಡ್ಡ ಹೊರೆಯಂತೆ ಕಾಣುತ್ತಿದ್ದರೆ, ನಾನಂತೂ ಅಲ್ಲಾಹನಲ್ಲಿ ಭರವಸೆಯಿದ್ದೇನೆ; ನೀವು ನಿಮ್ಮೆಲ್ಲಾ ಷಡ್ಯಂತ್ರಗಳನ್ನು ಒಟ್ಟುಗೂಡಿಸಿ ನಿಮ್ಮ ಸಹಭಾಗಿಗಳನ್ನು (ದೇವರುಗಳನ್ನು) ಕರೆಯಿರಿ. ನಂತರ ನಿಮ್ಮ ಷಡ್ಯಂತ್ರವು (ಫಲಿಸುತ್ತದೋ ಇಲ್ಲವೋ ಎಂಬ) ವಿಷಯದಲ್ಲಿ ನಿಮಗೆ ಯಾವುದೇ ಅಸ್ಪಷ್ಟತೆ ಇರದಂತೆ ನೋಡಿಕೊಳ್ಳಿ. ನಂತರ ನೀವು ಅದನ್ನು ನನ್ನ ಮೇಲೆ ಪ್ರಯೋಗಿಸಿರಿ. ನನಗೆ ಸ್ವಲ್ಪವೂ ಕಾಲಾವಕಾಶ ನೀಡಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَإِن تَوَلَّيْتُمْ فَمَا سَأَلْتُكُم مِّنْ أَجْرٍ إِنْ أَجْرِىَ إِلَّا عَلَى ٱللَّهِ وَأُمِرْتُ أَنْ أَكُونَ مِنَ ٱلْمُسْلِمِينَ

Kannada Translation - Hamza Buturಇದರ ನಂತರವೂ ನೀವು (ನನ್ನ ಸಂದೇಶಕ್ಕೆ ಕಿವಿಗೊಡದೆ) ವಿಮುಖರಾಗಿ ಹೋಗುವುದಾದರೆ, ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಅಲ್ಲಾಹು ಮಾತ್ರ. ನಾನು ಮುಸಲ್ಮಾನರಲ್ಲಿ (ಅಲ್ಲಾಹನಿಗೆ ಶರಣಾದವರಲ್ಲಿ) ಸೇರಬೇಕೆಂದು ನನಗೆ ಆಜ್ಞಾಪಿಸಲಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَذَّبُوهُ فَنَجَّيْنَٰهُ وَمَن مَّعَهُۥ فِى ٱلْفُلْكِ وَجَعَلْنَٰهُمْ خَلَٰٓئِفَ وَأَغْرَقْنَا ٱلَّذِينَ كَذَّبُوا۟ بِـَٔايَٰتِنَا فَٱنظُرْ كَيْفَ كَانَ عَٰقِبَةُ ٱلْمُنذَرِينَ

Kannada Translation - Hamza Buturಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ನೂಹರನ್ನು ಮತ್ತು ನಾವೆಯಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿ, ಅವರನ್ನು (ಭೂಮಿಯಲ್ಲಿ) ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನಮ್ಮ ವಚನಗಳನ್ನು ನಿಷೇಧಿಸಿದ ಜನರನ್ನು ನಾವು ಮುಳುಗಿಸಿ ಕೊಂದೆವು. ಎಚ್ಚರಿಕೆ ನೀಡಲಾದ ಆ ಜನರ ಅಂತ್ಯವು ಹೇಗಿತ್ತು ಎಂದು ನೋಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ بَعَثْنَا مِنۢ بَعْدِهِۦ رُسُلًا إِلَىٰ قَوْمِهِمْ فَجَآءُوهُم بِٱلْبَيِّنَٰتِ فَمَا كَانُوا۟ لِيُؤْمِنُوا۟ بِمَا كَذَّبُوا۟ بِهِۦ مِن قَبْلُ كَذَٰلِكَ نَطْبَعُ عَلَىٰ قُلُوبِ ٱلْمُعْتَدِينَ

Kannada Translation - Hamza Buturನಂತರ, ಅವರ ಬಳಿಕ ನಾವು ಆಯಾ ಸಮುದಾಯಗಳಿಗೆ ಅನೇಕ ಸಂದೇಶವಾಹಕರುಗಳನ್ನು ಕಳುಹಿಸಿದೆವು. ಆ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದರು. ಆದರೂ, ಇದಕ್ಕೆ ಮೊದಲು ಅವರು ನಿಷೇಧಿಸಿದ ಆ ಸಂಗತಿಯಲ್ಲಿ ವಿಶ್ವಾಸವಿಡಲು ಅವರು ಸಿದ್ಧರಾಗಲಿಲ್ಲ. ಈ ರೀತಿ ನಾವು ಅತಿರೇಕಿಗಳ ಹೃದಯಗಳಿಗೆ ಮೊಹರು ಹಾಕುತ್ತೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ بَعَثْنَا مِنۢ بَعْدِهِم مُّوسَىٰ وَهَٰرُونَ إِلَىٰ فِرْعَوْنَ وَمَلَإِي۟هِۦ بِـَٔايَٰتِنَا فَٱسْتَكْبَرُوا۟ وَكَانُوا۟ قَوْمًا مُّجْرِمِينَ

Kannada Translation - Hamza Buturನಂತರ, ಅವರ ಬಳಿಕ ನಾವು ಮೂಸಾ ಮತ್ತು ಹಾರೂನರನ್ನು ನಮ್ಮ ದೃಷ್ಟಾಂತಗಳೊಂದಿಗೆ ಫರೋಹ ಹಾಗೂ ಅವನ ಜನರ ಮುಖಂಡರ ಬಳಿಗೆ ಕಳುಹಿಸಿದೆವು. ಆದರೆ ಅವರು ಅಹಂಕಾರದಿಂದ ವರ್ತಿಸಿದರು. ಅವರು ಅಪರಾಧಿಗಳಾದ ಜನರಾಗಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَمَّا جَآءَهُمُ ٱلْحَقُّ مِنْ عِندِنَا قَالُوٓا۟ إِنَّ هَٰذَا لَسِحْرٌ مُّبِينٌ

Kannada Translation - Hamza Buturನಮ್ಮ ಕಡೆಯ ಸತ್ಯವು ಅವರ ಬಳಿಗೆ ಬಂದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ مُوسَىٰٓ أَتَقُولُونَ لِلْحَقِّ لَمَّا جَآءَكُمْ أَسِحْرٌ هَٰذَا وَلَا يُفْلِحُ ٱلسَّٰحِرُونَ

Kannada Translation - Hamza Buturಮೂಸಾ ಹೇಳಿದರು: “ನೀವು ಈ ಸತ್ಯದ ಬಗ್ಗೆ ಅದು ನಿಮ್ಮ ಬಳಿಗೆ ಬಂದಾಗ ಹೀಗೆ ಹೇಳುವುದೇ? ಇದು ಮಾಟಗಾರಿಕೆಯೇ? ವಾಸ್ತವವಾಗಿ ಮಾಟಗಾರರು ಯಶಸ್ವಿಯಾಗುವುದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالُوٓا۟ أَجِئْتَنَا لِتَلْفِتَنَا عَمَّا وَجَدْنَا عَلَيْهِ ءَابَآءَنَا وَتَكُونَ لَكُمَا ٱلْكِبْرِيَآءُ فِى ٱلْأَرْضِ وَمَا نَحْنُ لَكُمَا بِمُؤْمِنِينَ

Kannada Translation - Hamza Buturಅವರು ಹೇಳಿದರು: “ನಮ್ಮ ಪೂರ್ವಜರು ಯಾವ ಮಾರ್ಗದಲ್ಲಿರುವುದನ್ನು ನಾವು ಕಂಡಿದ್ದೇವೆಯೋ ಆ ಮಾರ್ಗದಿಂದ ನಮ್ಮನ್ನು ತಿರುಗಿಸಲು ಮತ್ತು ಭೂಮಿಯಲ್ಲಿ ನಿಮಗಿಬ್ಬರಿಗೆ ಶ್ರೇಷ್ಠತೆ ದೊರೆಯುವಂತಾಗಲು ನೀವು ನಮ್ಮ ಬಳಿಗೆ ಬಂದಿದ್ದೀರಾ? ನಾವು ನಿಮ್ಮಿಬ್ಬರಲ್ಲಿ ಎಂದಿಗೂ ವಿಶ್ವಾಸವಿಡುವುದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ فِرْعَوْنُ ٱئْتُونِى بِكُلِّ سَٰحِرٍ عَلِيمٍ

Kannada Translation - Hamza Buturಫರೋಹ ಹೇಳಿದನು: “ಅಗಾಧ ಜ್ಞಾನವಿರುವ ಎಲ್ಲಾ ಮಾಟಗಾರರನ್ನು ನನ್ನ ಬಳಿಗೆ ಕರೆತನ್ನಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَمَّا جَآءَ ٱلسَّحَرَةُ قَالَ لَهُم مُّوسَىٰٓ أَلْقُوا۟ مَآ أَنتُم مُّلْقُونَ

Kannada Translation - Hamza Buturಮಾಟಗಾರರು ಬಂದಾಗ ಮೂಸಾ ಅವರೊಡನೆ ಹೇಳಿದರು: “ನೀವು ಎಸೆಯುವುದನ್ನೆಲ್ಲಾ ಎಸೆಯಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَمَّآ أَلْقَوْا۟ قَالَ مُوسَىٰ مَا جِئْتُم بِهِ ٱلسِّحْرُ إِنَّ ٱللَّهَ سَيُبْطِلُهُۥٓ إِنَّ ٱللَّهَ لَا يُصْلِحُ عَمَلَ ٱلْمُفْسِدِينَ

Kannada Translation - Hamza Buturಅವರು ಎಸೆದಾಗ ಮೂಸಾ ಹೇಳಿದರು: “ನೀವು ತಂದಿರುವುದೆಲ್ಲವೂ ಮಾಟಗಳಾಗಿವೆ. ನಿಶ್ಚಯವಾಗಿಯೂ ಅಲ್ಲಾಹು ಅವೆಲ್ಲವನ್ನೂ ವಿಫಲಗೊಳಿಸುವನು. ನಿಶ್ಚಯವಾಗಿಯೂ ಕಿಡಿಗೇಡಿಗಳ ಕೃತ್ಯವನ್ನು ಅಲ್ಲಾಹು ಯಶಸ್ವಿಗೊಳಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيُحِقُّ ٱللَّهُ ٱلْحَقَّ بِكَلِمَٰتِهِۦ وَلَوْ كَرِهَ ٱلْمُجْرِمُونَ

Kannada Translation - Hamza Buturಅಲ್ಲಾಹು ತನ್ನ ವಚನಗಳ ಮೂಲಕ ಸತ್ಯವನ್ನು ಸಾಬೀತುಪಡಿಸುವನು. ಅಪರಾಧಿಗಳು ಎಷ್ಟು ಅಸಹ್ಯಪಟ್ಟರೂ ಸಹ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَآ ءَامَنَ لِمُوسَىٰٓ إِلَّا ذُرِّيَّةٌ مِّن قَوْمِهِۦ عَلَىٰ خَوْفٍ مِّن فِرْعَوْنَ وَمَلَإِي۟هِمْ أَن يَفْتِنَهُمْ وَإِنَّ فِرْعَوْنَ لَعَالٍ فِى ٱلْأَرْضِ وَإِنَّهُۥ لَمِنَ ٱلْمُسْرِفِينَ

Kannada Translation - Hamza Buturಮೂಸಾರ ಜನರಲ್ಲಿ ಸೇರಿದ ಕೆಲವು ಯುವಕರ ಹೊರತು ಬೇರೆ ಯಾರೂ ಅವರಲ್ಲಿ ವಿಶ್ವಾಸವಿಡಲಿಲ್ಲ. ಅದೂ ಸಹ ಫರೋಹ ಮತ್ತು ಅವರ ಮುಖಂಡರು ಅವರನ್ನು ಹಿಂಸೆಗೆ ಗುರಿಯಾಗಿಸುವರೋ ಎಂಬ ಭಯದಿಂದ. ನಿಶ್ಚಯವಾಗಿಯೂ ಫರೋಹ‍ ಭೂಮಿಯಲ್ಲಿ ದರ್ಪ ತೋರುತ್ತಿದ್ದನು. ನಿಶ್ಚಯವಾಗಿಯೂ ಅವನು ಹದ್ದು ಮೀರಿದವನಾಗಿದ್ದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ مُوسَىٰ يَٰقَوْمِ إِن كُنتُمْ ءَامَنتُم بِٱللَّهِ فَعَلَيْهِ تَوَكَّلُوٓا۟ إِن كُنتُم مُّسْلِمِينَ

Kannada Translation - Hamza Buturಮೂಸಾ ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದರೆ ಅವನಲ್ಲಿ ಭರವಸೆಯಿಡಿ. ನೀವು ಮುಸಲ್ಮಾನರಾಗಿದ್ದರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَقَالُوا۟ عَلَى ٱللَّهِ تَوَكَّلْنَا رَبَّنَا لَا تَجْعَلْنَا فِتْنَةً لِّلْقَوْمِ ٱلظَّٰلِمِينَ

Kannada Translation - Hamza Buturಆಗ ಅವರು ಹೇಳಿದರು: “ನಾವು ಅಲ್ಲಾಹನಲ್ಲಿ ಭರವಸೆಯಿಟ್ಟಿದ್ದೇವೆ. ಓ ನಮ್ಮ ಪರಿಪಾಲಕನೇ! ಈ ಅಕ್ರಮಿಗಳಾದ ಜನರಿಗೆ ನಮ್ಮನ್ನು ಪರೀಕ್ಷೆಯ ವಸ್ತುವಾಗಿ ಮಾಡಬೇಡ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَنَجِّنَا بِرَحْمَتِكَ مِنَ ٱلْقَوْمِ ٱلْكَٰفِرِينَ

Kannada Translation - Hamza Buturನಿನ್ನ ದಯೆಯಿಂದ ನಮ್ಮನ್ನು ಸತ್ಯನಿಷೇಧಿಗಳಾದ ಜನರಿಂದ ರಕ್ಷಿಸು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَوْحَيْنَآ إِلَىٰ مُوسَىٰ وَأَخِيهِ أَن تَبَوَّءَا لِقَوْمِكُمَا بِمِصْرَ بُيُوتًا وَٱجْعَلُوا۟ بُيُوتَكُمْ قِبْلَةً وَأَقِيمُوا۟ ٱلصَّلَوٰةَ وَبَشِّرِ ٱلْمُؤْمِنِينَ

Kannada Translation - Hamza Buturಮೂಸಾ ಮತ್ತು ಅವರ ಸಹೋದರನಿಗೆ ನಾವು ದೇವವಾಣಿಯನ್ನು ನೀಡಿದೆವು: “ನೀವು ನಿಮ್ಮ ಜನರಿಗೆ ಈಜಿಪ್ಟಿನಲ್ಲಿ ವಾಸ್ತವ್ಯಗಳನ್ನು ಮಾಡಿಕೊಡಿ, ಮತ್ತು ನಿಮ್ಮ ಮನೆಗಳನ್ನು ಆರಾಧನಾಲಯಗಳಾಗಿ ಮಾಡಿ ನಮಾಝನ್ನು ಸಂಸ್ಥಾಪಿಸಿರಿ. ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ತಿಳಿಸಿ.”[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ مُوسَىٰ رَبَّنَآ إِنَّكَ ءَاتَيْتَ فِرْعَوْنَ وَمَلَأَهُۥ زِينَةً وَأَمْوَٰلًا فِى ٱلْحَيَوٰةِ ٱلدُّنْيَا رَبَّنَا لِيُضِلُّوا۟ عَن سَبِيلِكَ رَبَّنَا ٱطْمِسْ عَلَىٰٓ أَمْوَٰلِهِمْ وَٱشْدُدْ عَلَىٰ قُلُوبِهِمْ فَلَا يُؤْمِنُوا۟ حَتَّىٰ يَرَوُا۟ ٱلْعَذَابَ ٱلْأَلِيمَ

Kannada Translation - Hamza Buturಮೂಸಾ ಹೇಳಿದರು: “ಓ ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಫರೋಹ ಮತ್ತು ಅವನ ಜನರ ಮುಖಂಡರಿಗೆ ಇಹಲೋಕದಲ್ಲಿ ವೈಭವ ಮತ್ತು ಐಶ್ವರ್ಯವನ್ನು ನೀಡಿರುವೆ. ಓ ನಮ್ಮ ಪರಿಪಾಲಕನೇ! ಜನರನ್ನು ನಿನ್ನ ಮಾರ್ಗದಿಂದ ತಪ್ಪಿಸುವುದಕ್ಕಾಗಿ (ಅವರು ಅದನ್ನು ಬಳಸುತ್ತಾರೆ). ಓ ನಮ್ಮ ಪರಿಪಾಲಕನೇ! ಅವರ ಐಶ್ವರ್ಯವನ್ನು ನಾಶ ಮಾಡು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸು. ಯಾತನಾಮಯ ಶಿಕ್ಷೆಯನ್ನು ನೋಡುವ ತನಕ ಅವರು ವಿಶ್ವಾಸವಿಡದಿರಲಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ قَدْ أُجِيبَت دَّعْوَتُكُمَا فَٱسْتَقِيمَا وَلَا تَتَّبِعَآنِّ سَبِيلَ ٱلَّذِينَ لَا يَعْلَمُونَ

Kannada Translation - Hamza Buturಅಲ್ಲಾಹು ಹೇಳಿದನು: “ನಿಮ್ಮಿಬ್ಬರ ಪ್ರಾರ್ಥನೆಗೆ ಉತ್ತರ ನೀಡಲಾಗಿದೆ. ಆದ್ದರಿಂದ ನೀವಿಬ್ಬರೂ ದೃಢವಾಗಿ ನಿಲ್ಲಿರಿ ಮತ್ತು ತಿಳುವಳಿಕೆಯಿಲ್ಲದ ಜನರ ಮಾರ್ಗವನ್ನು ಹಿಂಬಾಲಿಸಬೇಡಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَجَٰوَزْنَا بِبَنِىٓ إِسْرَٰٓءِيلَ ٱلْبَحْرَ فَأَتْبَعَهُمْ فِرْعَوْنُ وَجُنُودُهُۥ بَغْيًا وَعَدْوًا حَتَّىٰٓ إِذَآ أَدْرَكَهُ ٱلْغَرَقُ قَالَ ءَامَنتُ أَنَّهُۥ لَآ إِلَٰهَ إِلَّا ٱلَّذِىٓ ءَامَنَتْ بِهِۦ بَنُوٓا۟ إِسْرَٰٓءِيلَ وَأَنَا۠ مِنَ ٱلْمُسْلِمِينَ

Kannada Translation - Hamza Buturನಾವು ಇಸ್ರಾಯೇಲ್ ಮಕ್ಕಳನ್ನು ಸಮುದ್ರ ದಾಟಿಸಿದೆವು. ಆಗ ಫರೋಹ ಮತ್ತು ಅವನ ಸೈನ್ಯವು ದಬ್ಬಾಳಿಕೆ ಮತ್ತು ದ್ವೇಷದೊಂದಿಗೆ ಅವರನ್ನು ಹಿಂಬಾಲಿಸಿದರು. ಎಲ್ಲಿಯವರೆಗೆಂದರೆ, ಅವನು ಮುಳುಗಿ ಸಾಯುವಂತಾದಾಗ ಹೇಳಿದನು: “ಇಸ್ರಾಯೇಲ್ ಮಕ್ಕಳು ನಂಬಿದ ದೇವನ (ಅಲ್ಲಾಹನ) ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ ಎಂದು ನಾನು ವಿಶ್ವಾಸವಿಟ್ಟಿದ್ದೇನೆ. ನಾನು ಮುಸಲ್ಮಾನರಲ್ಲಿ ಸೇರಿದ್ದೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ءَآلْـَٰٔنَ وَقَدْ عَصَيْتَ قَبْلُ وَكُنتَ مِنَ ٱلْمُفْسِدِينَ

Kannada Translation - Hamza Butur(ಅವನೊಡನೆ ಹೇಳಲಾಯಿತು): “ಈಗ ನೀನು ವಿಶ್ವಾಸವಿಡುವುದೇ? ಇದಕ್ಕೆ ಮೊದಲು ನೀನು ಆಜ್ಞೋಲ್ಲಂಘನೆ ಮಾಡಿದ್ದೆ ಮತ್ತು ಕಿಡಿಗೇಡಿಗಳಲ್ಲಿ ಸೇರಿದ್ದೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱلْيَوْمَ نُنَجِّيكَ بِبَدَنِكَ لِتَكُونَ لِمَنْ خَلْفَكَ ءَايَةً وَإِنَّ كَثِيرًا مِّنَ ٱلنَّاسِ عَنْ ءَايَٰتِنَا لَغَٰفِلُونَ

Kannada Translation - Hamza Buturಇಂದು ನಾವು ನಿನ್ನ ದೇಹವನ್ನು ಉಳಿಸುವೆವು.[1] ನಿನ್ನ ನಂತರ ಬರುವವರಿಗೆ ನೀನೊಂದು ನಿದರ್ಶನವಾಗುವುದಕ್ಕಾಗಿ. ನಿಶ್ಚಯವಾಗಿಯೂ ಜನರಲ್ಲಿ ಹೆಚ್ಚಿನವರು ನಮ್ಮ ನಿದರ್ಶನಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದಾರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ بَوَّأْنَا بَنِىٓ إِسْرَٰٓءِيلَ مُبَوَّأَ صِدْقٍ وَرَزَقْنَٰهُم مِّنَ ٱلطَّيِّبَٰتِ فَمَا ٱخْتَلَفُوا۟ حَتَّىٰ جَآءَهُمُ ٱلْعِلْمُ إِنَّ رَبَّكَ يَقْضِى بَيْنَهُمْ يَوْمَ ٱلْقِيَٰمَةِ فِيمَا كَانُوا۟ فِيهِ يَخْتَلِفُونَ

Kannada Translation - Hamza Buturನಿಶ್ಚಯವಾಗಿಯೂ ನಾವು ಇಸ್ರಾಯೇಲ್ ಮಕ್ಕಳಿಗೆ ಅತ್ಯುತ್ತಮವಾದ ವಾಸ್ತವ್ಯವನ್ನು ಮಾಡಿಕೊಟ್ಟೆವು ಮತ್ತು ಅವರಿಗೆ ಶುದ್ಧ ವಸ್ತುಗಳನ್ನು ಆಹಾರವಾಗಿ ನೀಡಿದೆವು. ಜ್ಞಾನವು ಅವರ ಬಳಿಗೆ ಬರುವ ತನಕ ಅವರು ಭಿನ್ನರಾಗಲಿಲ್ಲ. ನಿಶ್ಚಯವಾಗಿಯೂ ತಮ್ಮ ಪರಿಪಾಲಕನು (ಅಲ್ಲಾಹು) ಅವರು ಭಿನ್ನರಾದ ವಿಷಯದ ಬಗ್ಗೆ ಪುನರುತ್ಥಾನ ದಿನದಂದು ತೀರ್ಪು ನೀಡುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَإِن كُنتَ فِى شَكٍّ مِّمَّآ أَنزَلْنَآ إِلَيْكَ فَسْـَٔلِ ٱلَّذِينَ يَقْرَءُونَ ٱلْكِتَٰبَ مِن قَبْلِكَ لَقَدْ جَآءَكَ ٱلْحَقُّ مِن رَّبِّكَ فَلَا تَكُونَنَّ مِنَ ٱلْمُمْتَرِينَ

Kannada Translation - Hamza Buturನಾವು ನಿಮಗೆ ಅವತೀರ್ಣಗೊಳಿಸಿದ ಸಂದೇಶದಲ್ಲಿ ನಿಮಗೇನಾದರೂ ಸಂಶಯವಿದ್ದರೆ, ನಿಮಗಿಂತ ಮೊದಲು ಗ್ರಂಥವನ್ನು ಪಠಿಸುತ್ತಿದ್ದವರೊಡನೆ ಕೇಳಿ ನೋಡಿ. ನಿಮ್ಮ ಬಳಿಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸತ್ಯವು ಬಂದಿದೆ. ಆದ್ದರಿಂದ ನೀವೆಂದೂ ಸಂಶಯಗ್ರಸ್ತರಲ್ಲಿ ಸೇರಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَكُونَنَّ مِنَ ٱلَّذِينَ كَذَّبُوا۟ بِـَٔايَٰتِ ٱللَّهِ فَتَكُونَ مِنَ ٱلْخَٰسِرِينَ

Kannada Translation - Hamza Buturಅಲ್ಲಾಹನ ವಚನಗಳನ್ನು ನಿಷೇಧಿಸಿದವರಲ್ಲೂ ಸೇರಬೇಡಿ. ಹಾಗೇನಾದರೂ ಆದರೆ ನೀವು ನಷ್ಟ ಹೊಂದಿದವರಾಗುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ حَقَّتْ عَلَيْهِمْ كَلِمَتُ رَبِّكَ لَا يُؤْمِنُونَ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಮಾತು ಯಾರ ವಿಷಯದಲ್ಲಿ ಖಾತ್ರಿಯಾಗಿದೆಯೋ ಅವರು ವಿಶ್ವಾಸವಿಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ جَآءَتْهُمْ كُلُّ ءَايَةٍ حَتَّىٰ يَرَوُا۟ ٱلْعَذَابَ ٱلْأَلِيمَ

Kannada Translation - Hamza Buturಎಲ್ಲಾ ರೀತಿಯ ದೃಷ್ಟಾಂತಗಳು ಅವರ ಬಳಿಗೆ ಬಂದರೂ ಸಹ (ಅವರು ವಿಶ್ವಾಸವಿಡುವುದಿಲ್ಲ). ಎಲ್ಲಿಯವರೆಗೆಂದರೆ, ಯಾತನಾಮಯ ಶಿಕ್ಷೆಯನ್ನು ಅವರು ನೇರವಾಗಿ ನೋಡುವ ತನಕ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَوْلَا كَانَتْ قَرْيَةٌ ءَامَنَتْ فَنَفَعَهَآ إِيمَٰنُهَآ إِلَّا قَوْمَ يُونُسَ لَمَّآ ءَامَنُوا۟ كَشَفْنَا عَنْهُمْ عَذَابَ ٱلْخِزْىِ فِى ٱلْحَيَوٰةِ ٱلدُّنْيَا وَمَتَّعْنَٰهُمْ إِلَىٰ حِينٍ

Kannada Translation - Hamza Buturಯಾವುದೇ ಒಂದು ಊರು ಕೂಡ—ಅದರ ಜನರು ವಿಶ್ವಾಸವಿಟ್ಟು ಆ ವಿಶ್ವಾಸವು ಅವರಿಗೆ ಪ್ರಯೋಜನ ನೀಡಿದ ಇತಿಹಾಸವಿಲ್ಲ; ಯೂನುಸರ ಊರಿನ ಜನರ ಹೊರತು. ಅವರು ವಿಶ್ವಾಸವಿಟ್ಟಾಗ, ಇಹಲೋಕದ ನಾವು ಅವರಿಂದ ಅಪಮಾನಕರ ಶಿಕ್ಷೆಯನ್ನು ನಿವಾರಿಸಿದೆವು ಮತ್ತು ಒಂದು ಅವಧಿಯ ತನಕ ಅವರಿಗೆ (ಇಹಲೋಕದಲ್ಲಿ) ಸವಲತ್ತುಗಳನ್ನು ನೀಡಿದೆವು.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ شَآءَ رَبُّكَ لَـَٔامَنَ مَن فِى ٱلْأَرْضِ كُلُّهُمْ جَمِيعًا أَفَأَنتَ تُكْرِهُ ٱلنَّاسَ حَتَّىٰ يَكُونُوا۟ مُؤْمِنِينَ

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದ್ದರೆ ಭೂಮಿಯಲ್ಲಿರುವವರೆಲ್ಲರೂ ಸಂಪೂರ್ಣವಾಗಿ ವಿಶ್ವಾಸವಿಡುತ್ತಿದ್ದರು. ಹಾಗಿರುವಾಗ, ಜನರು ಸತ್ಯವಿಶ್ವಾಸಿಗಳಾಗಲು ನೀವು ಅವರನ್ನು ಬಲವಂತಪಡಿಸುವಿರಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا كَانَ لِنَفْسٍ أَن تُؤْمِنَ إِلَّا بِإِذْنِ ٱللَّهِ وَيَجْعَلُ ٱلرِّجْسَ عَلَى ٱلَّذِينَ لَا يَعْقِلُونَ

Kannada Translation - Hamza Buturಅಲ್ಲಾಹನ ಅಪ್ಪಣೆಯಿಲ್ಲದೆ ಯಾರಿಗೂ ಸತ್ಯವಿಶ್ವಾಸಿಯಾಗಲು ಸಾಧ್ಯವಿಲ್ಲ. ಅರ್ಥಮಾಡಿಕೊಳ್ಳದ ಜನರ ಮೇಲೆ ಅವನು ನಿಕೃಷ್ಟತೆಯನ್ನು ಹೇರಿ ಬಿಡುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱنظُرُوا۟ مَاذَا فِى ٱلسَّمَٰوَٰتِ وَٱلْأَرْضِ وَمَا تُغْنِى ٱلْـَٔايَٰتُ وَٱلنُّذُرُ عَن قَوْمٍ لَّا يُؤْمِنُونَ

Kannada Translation - Hamza Buturಹೇಳಿರಿ: “ಭೂಮ್ಯಾಕಾಶಗಳಲ್ಲಿ ಏನೆಲ್ಲಾ ಇವೆಯೆಂದು ನೋಡಿರಿ.” ವಿಶ್ವಾಸವಿಡದ ಜನರಿಗೆ ದೃಷ್ಟಾಂತಗಳು ಮತ್ತು ಎಚ್ಚರಿಕೆಗಳು ಯಾವುದೇ ಪ್ರಯೋಜನ ನೀಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَهَلْ يَنتَظِرُونَ إِلَّا مِثْلَ أَيَّامِ ٱلَّذِينَ خَلَوْا۟ مِن قَبْلِهِمْ قُلْ فَٱنتَظِرُوٓا۟ إِنِّى مَعَكُم مِّنَ ٱلْمُنتَظِرِينَ

Kannada Translation - Hamza Buturಅವರಿಗಿಂತ ಮೊದಲು ಜೀವಿಸಿದ್ದ ಜನರಿಗೆ ಎದುರಾದಂತಹ ದಿನಗಳನ್ನೇ ಹೊರತು ಬೇರೇನಾದರೂ ಇವರು ಕಾಯುತ್ತಿದ್ದಾರೆಯೇ? ಹೇಳಿರಿ: “ನೀವು ಕಾಯಿರಿ. ನಿಶ್ಚಯವಾಗಿಯೂ ನಿಮ್ಮ ಜೊತೆಗೆ ಕಾಯುವವರಲ್ಲಿ ನಾನು ಕೂಡ ಇದ್ದೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ نُنَجِّى رُسُلَنَا وَٱلَّذِينَ ءَامَنُوا۟ كَذَٰلِكَ حَقًّا عَلَيْنَا نُنجِ ٱلْمُؤْمِنِينَ

Kannada Translation - Hamza Buturನಂತರ ನಾವು ನಮ್ಮ ಸಂದೇಶವಾಹಕರುಗಳನ್ನು ಮತ್ತು ಸತ್ಯವಿಶ್ವಾಸಿಗಳನ್ನು ರಕ್ಷಿಸುವೆವು. ಈ ರೀತಿ ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ يَٰٓأَيُّهَا ٱلنَّاسُ إِن كُنتُمْ فِى شَكٍّ مِّن دِينِى فَلَآ أَعْبُدُ ٱلَّذِينَ تَعْبُدُونَ مِن دُونِ ٱللَّهِ وَلَٰكِنْ أَعْبُدُ ٱللَّهَ ٱلَّذِى يَتَوَفَّىٰكُمْ وَأُمِرْتُ أَنْ أَكُونَ مِنَ ٱلْمُؤْمِنِينَ

Kannada Translation - Hamza Buturಹೇಳಿರಿ: “ಓ ಜನರೇ! ನನ್ನ ಧರ್ಮದ ಬಗ್ಗೆ ನೀವೇನಾದರೂ ಸಂಶಯದಲ್ಲಿದ್ದರೆ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುವ ನಿಮ್ಮ ದೇವರುಗಳನ್ನು ನಾನಂತೂ ಆರಾಧಿಸುವುದಿಲ್ಲ. ಆದರೆ ನಿಮ್ಮ ಆತ್ಮವನ್ನು ವಶಪಡಿಸುವ ಅಲ್ಲಾಹನನ್ನು ಮಾತ್ರ ನಾನು ಆರಾಧಿಸುತ್ತೇನೆ. ಸತ್ಯವಿಶ್ವಾಸಿಗಳೊಡನೆ ಸೇರಲು ನನಗೆ ಆಜ್ಞಾಪಿಸಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنْ أَقِمْ وَجْهَكَ لِلدِّينِ حَنِيفًا وَلَا تَكُونَنَّ مِنَ ٱلْمُشْرِكِينَ

Kannada Translation - Hamza Buturಏಕನಿಷ್ಠನಾಗಿ ನಿನ್ನ ಮುಖವನ್ನು ಧರ್ಮದ ಕಡೆಗೆ ತಿರುಗಿಸು ಮತ್ತು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬೇಡ ಎಂದು (ನನಗೆ ಆಜ್ಞಾಪಿಸಲಾಗಿದೆ).”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَدْعُ مِن دُونِ ٱللَّهِ مَا لَا يَنفَعُكَ وَلَا يَضُرُّكَ فَإِن فَعَلْتَ فَإِنَّكَ إِذًا مِّنَ ٱلظَّٰلِمِينَ

Kannada Translation - Hamza Buturನೀವು ಅಲ್ಲಾಹನನ್ನು ಬಿಟ್ಟು ನಿಮಗೆ ಉಪಕಾರ ಅಥವಾ ತೊಂದರೆ ಮಾಡದ ಯಾರನ್ನೂ ಕರೆದು ಪ್ರಾರ್ಥಿಸಬೇಡಿ. ನೀವೇನಾದರೂ ಹಾಗೆ ಮಾಡಿದರೆ ನಿಶ್ಚಯವಾಗಿಯೂ ನೀವು ಅಕ್ರಮಿಗಳಲ್ಲಿ ಸೇರುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِن يَمْسَسْكَ ٱللَّهُ بِضُرٍّ فَلَا كَاشِفَ لَهُۥٓ إِلَّا هُوَ وَإِن يُرِدْكَ بِخَيْرٍ فَلَا رَآدَّ لِفَضْلِهِۦ يُصِيبُ بِهِۦ مَن يَشَآءُ مِنْ عِبَادِهِۦ وَهُوَ ٱلْغَفُورُ ٱلرَّحِيمُ

Kannada Translation - Hamza Buturಅಲ್ಲಾಹು ನಿಮಗೇನಾದರೂ ತೊಂದರೆ ನೀಡಿದರೆ, ಅದನ್ನು ಅವನ ಹೊರತು ನಿವಾರಿಸಲು ಯಾರಿಗೂ ಸಾಧ್ಯವಿಲ್ಲ. ಅವನು ನಿಮಗೇನಾದರೂ ಒಳಿತನ್ನು ಉದ್ದೇಶಿಸಿದರೆ, ಅವನ ಔದಾರ್ಯವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ತನ್ನ ದಾಸರಲ್ಲಿ ಅವನು ಇಚ್ಛಿಸಿದವರಿಗೆ ಅದನ್ನು (ಔದಾರ್ಯವನ್ನು) ತಲುಪಿಸುತ್ತಾನೆ. ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ يَٰٓأَيُّهَا ٱلنَّاسُ قَدْ جَآءَكُمُ ٱلْحَقُّ مِن رَّبِّكُمْ فَمَنِ ٱهْتَدَىٰ فَإِنَّمَا يَهْتَدِى لِنَفْسِهِۦ وَمَن ضَلَّ فَإِنَّمَا يَضِلُّ عَلَيْهَا وَمَآ أَنَا۠ عَلَيْكُم بِوَكِيلٍ

Kannada Translation - Hamza Buturಹೇಳಿರಿ: “ಓ ಜನರೇ! ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನಿಮ್ಮ ಬಳಿಗೆ ಸತ್ಯವು ಬಂದಿದೆ. ಆದ್ದರಿಂದ ಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ನನಗೆ ನಿಮ್ಮ ಮೇಲೆ ಯಾವುದೇ ಅಧಿಕಾರವಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱتَّبِعْ مَا يُوحَىٰٓ إِلَيْكَ وَٱصْبِرْ حَتَّىٰ يَحْكُمَ ٱللَّهُ وَهُوَ خَيْرُ ٱلْحَٰكِمِينَ

Kannada Translation - Hamza Buturನಿಮಗೆ ದೇವವಾಣಿಯಾಗಿ ನೀಡಲಾಗುವುದನ್ನು ಅನುಸರಿಸಿರಿ ಮತ್ತು ಅಲ್ಲಾಹು ತೀರ್ಪು ನೀಡುವ ತನಕ ತಾಳ್ಮೆಯಿಂದಿರಿ. ತೀರ್ಪು ನೀಡುವವರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70