Kannada Translation - Hamza Buturಅಲಿಫ್, ಲಾಮ್, ರಾ. ಇದೊಂದು ಗ್ರಂಥವಾಗಿದ್ದು, ಇದರ ವಚನಗಳನ್ನು (ಕುಂದು-ಕೊರತೆಗಳು ಮತ್ತು ಪ್ರಮಾದಗಳಿಲ್ಲದ ರೀತಿಯಲ್ಲಿ) ಭದ್ರಗೊಳಿಸಲಾಗಿದೆ. ನಂತರ ಅವುಗಳನ್ನು ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ವಿವೇಕಪೂರ್ಣನು ಮತ್ತು ಸೂಕ್ಷ್ಮಜ್ಞಾನಿಯಾದ ಅಲ್ಲಾಹನ ಕಡೆಯಿಂದ (ಅವತೀರ್ಣವಾಗಿದೆ).
Kannada Translation - Hamza Buturನೀವು ಅಲ್ಲಾಹನ ಹೊರತು ಬೇರೆ ಯಾರನ್ನೂ ಆರಾಧಿಸಬಾರದು. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯಿಂದ ಎಚ್ಚರಿಕೆ ನೀಡುವವನು ಮತ್ತು ಸುವಾರ್ತೆ ತಿಳಿಸುವವನಾಗಿದ್ದೇನೆ.
Kannada Translation - Hamza Buturನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಿರಿ. ನಂತರ ಪಶ್ಚಾತ್ತಾಪದಿಂದ ಅವರ ಕಡೆಗೆ ತಿರುಗಿರಿ. ಅವನು ನಿಮಗೆ ಒಂದು ನಿರ್ದಿಷ್ಟ ಅವಧಿಯ ತನಕ ಉತ್ತಮ ಸವಲತ್ತುಗಳನ್ನು ನೀಡುವನು. ಹೆಚ್ಚು ಸತ್ಕರ್ಮ ಮಾಡುವವರಿಗೆ ಅವನು ಹೆಚ್ಚು ಪ್ರತಿಫಲವನ್ನು ನೀಡುವನು. ನೀವೇನಾದರೂ ಮುಖ ತಿರುಗಿಸಿ ನಡೆಯುವುದಾದರೆ, ನಿಶ್ಚಯವಾಗಿಯೂ ಒಂದು ಮಹಾ ದಿನದ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನನಗೆ ಭಯವಾಗುತ್ತಿದೆ.
Kannada Translation - Hamza Buturತಿಳಿಯಿರಿ! ಅವರು ತಮ್ಮ ಮಾತುಗಳನ್ನು (ಅಲ್ಲಾಹನಿಂದ) ಮುಚ್ಚಿಡುವುದಕ್ಕಾಗಿ ತಮ್ಮ ಎದೆಗಳನ್ನು ಮಡಚುತ್ತಾರೆ. ತಿಳಿಯಿರಿ! ಅವರು ತಮ್ಮ ಬಟ್ಟೆಗಳನ್ನು ಹೊದ್ದುಕೊಳ್ಳುವಾಗ ಅವರು ರಹಸ್ಯವಾಗಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ತಿಳಿಯುತ್ತಾನೆ. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
Kannada Translation - Hamza Buturಭೂಮಿಯಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಆಹಾರ ನೀಡುವ ಹೊಣೆ ಅಲ್ಲಾಹನದ್ದು. ಅವನು ಅವುಗಳ ವಾಸ್ತವ್ಯ ಸ್ಥಳವನ್ನು ಮತ್ತು ಅವುಗಳ ನಿಕ್ಷೇಪ ಸ್ಥಳವನ್ನು[1] ತಿಳಿಯುತ್ತಾನೆ. ಎಲ್ಲವೂ ಒಂದು ಸ್ಪಷ್ಟ ದಾಖಲೆಯಲ್ಲಿದೆ.
Kannada Translation - Hamza Buturಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ಅವನೇ. ಅವನ ಸಿಂಹಾಸನವು ನೀರಿನ ಮೇಲಿತ್ತು. ನಿಮ್ಮಲ್ಲಿ ಯಾರು ಅತ್ಯುತ್ತಮವಾಗಿ ಕರ್ಮವೆಸಗುತ್ತಾರೆಂದು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ. ನಿಶ್ಚಯವಾಗಿಯೂ ಮರಣಾನಂತರ ನಿಮ್ಮನ್ನು ಜೀವ ನೀಡಿ ಎಬ್ಬಿಸಲಾಗುವುದು ಎಂದು ನೀವು ಹೇಳಿದರೆ ಆ ಸತ್ಯನಿಷೇಧಿಗಳು ಹೇಳುತ್ತಾರೆ: “ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.”
Kannada Translation - Hamza Buturನಾವು ಅವರ ಶಿಕ್ಷೆಯನ್ನು ಒಂದು ನಿಶ್ಚಿತ ಅವಧಿಯ ತನಕ ಮುಂದೂಡಿದರೆ, ಅವರು ಕೇಳುವರು: “ಅದಕ್ಕೆ ತಡೆಯಾದದ್ದು ಏನು?” ತಿಳಿಯಿರಿ! ಆ ಶಿಕ್ಷೆಯು ಅವರ ಬಳಿಗೆ ಬರುವ ದಿನ ಅದು ಅವರಿಗೆ ತಟ್ಟದಂತೆ ಅವರಿಂದ ತಿರುಗಿಸಿ ಬಿಡಲಾಗುವುದಿಲ್ಲ. ಯಾವುದನ್ನು ಅವರು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿ ಬಿಡುವುದು.
Kannada Translation - Hamza Buturನಾವು ಮನುಷ್ಯನಿಗೆ ನಮ್ಮ ದಯೆಯ ರುಚಿಯನ್ನು ತೋರಿಸಿ, ನಂತರ ಅದನ್ನು ಅವನಿಂದ ಹಿಂದಕ್ಕೆ ಪಡೆದರೆ, ನಿಶ್ಚಯವಾಗಿಯೂ ಅವನು ಹತಾಶನು ಮತ್ತು ಕೃತಘ್ನನಾಗುತ್ತಾನೆ.
Kannada Translation - Hamza Buturಅವನಿಗೆ ಕಷ್ಟ ಬಂದ ನಂತರ ನಾವು ಅವನಿಗೆ ಸುಖದ ರುಚಿಯನ್ನು ತೋರಿಸಿದರೆ, ನಿಶ್ಚಯವಾಗಿಯೂ ಅವನು ಹೇಳುತ್ತಾನೆ: “ನನ್ನ ಕಷ್ಟಗಳೆಲ್ಲವೂ ಮುಗಿದವು.” ಅವನು ಹರ್ಷೋನ್ಮಾದಿತನು ಮತ್ತು ಬಡಾಯಿಕೋರನಾಗುವನು.
Kannada Translation - Hamza Butur“ಇವನ ಮೇಲೆ ಒಂದು ನಿಧಿಯನ್ನೇಕೆ ಇಳಿಸಲಾಗಿಲ್ಲ? ಅಥವಾ ಇವನೊಡನೆ ಒಬ್ಬ ದೇವದೂತರೇಕೆ ಬರಲಿಲ್ಲ” ಎಂಬ ಅವರ ಮಾತುಗಳನ್ನು ಕೇಳಿ ನೀವು ನಿಮಗೆ ನೀಡಲಾದ ದೇವವಾಣಿಗಳಲ್ಲಿ ಕೆಲವನ್ನು ತ್ಯಜಿಸಲೂಬಹುದು ಮತ್ತು ಅದರಿಂದ ನಿಮ್ಮ ಹೃದಯದಲ್ಲಿ ಇಕ್ಕಟ್ಟು ಅನುಭವವಾಗಲೂಬಹುದು. ಆದರೆ ನೆನಪಿಡಿ! ನೀವು ಒಬ್ಬ ಮುನ್ನೆಚ್ಚರಿಕೆಗಾರ ಮಾತ್ರ. ಅಲ್ಲಾಹು ಎಲ್ಲಾ ವಿಷಯಗಳಿಗೂ ಹೊಣೆಗಾರನಾಗಿದ್ದಾನೆ.
Kannada Translation - Hamza Butur“ಇದನ್ನು ಅವರು (ಪ್ರವಾದಿ) ಸ್ವಯಂ ರಚಿಸಿ ತಂದಿದ್ದಾರೆ” ಎಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಸರಿ, ಹಾಗಾದರೆ ಇದರಂತೆ ರಚಿಸಲಾದ ಹತ್ತು ಅಧ್ಯಾಯಗಳನ್ನು ತನ್ನಿರಿ. ಅಲ್ಲಾಹನನ್ನು ಬಿಟ್ಟು ನಿಮಗೆ ಸಾಧ್ಯವಾಗುವವರನ್ನೆಲ್ಲಾ ಸಹಾಯಕ್ಕಾಗಿ ಕರೆಯಿರಿ. ನೀವು ಸತ್ಯವಂತರಾಗಿದ್ದರೆ!”
Kannada Translation - Hamza Buturಅವರೇನಾದರೂ ನಿಮ್ಮ ಕರೆಗೆ ಉತ್ತರಿಸದಿದ್ದರೆ, ತಿಳಿಯಿರಿ! ಇದು ಅಲ್ಲಾಹನ ಜ್ಞಾನದಿಂದಲೇ ಅವತೀರ್ಣವಾಗಿದೆ ಮತ್ತು ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಈಗಲಾದರೂ ನೀವು ಮುಸಲ್ಮಾನರಾಗಲು ಸಿದ್ಧರಿದ್ದೀರಾ?
Kannada Translation - Hamza Buturಯಾರು ಇಹಲೋಕ ಜೀವನವನ್ನು ಮತ್ತು ಅದರ ಸೌಂದರ್ಯವನ್ನು ಬಯಸುತ್ತಾರೋ ಅವರಿಗೆ ನಾವು ಅವರ ಕರ್ಮಗಳ ಪ್ರತಿಫಲವನ್ನು ಇಹಲೋಕದಲ್ಲೇ ಪೂರ್ಣವಾಗಿ ನೀಡುವೆವು. ಇಲ್ಲಿ ಅವರಿಗೆ ಏನೂ ಕಡಿಮೆಯಾಗುವುದಿಲ್ಲ.
Kannada Translation - Hamza Buturಅವರಿಗೆ ಪರಲೋಕದಲ್ಲಿ ನರಕಾಗ್ನಿಯಲ್ಲದೆ ಬೇರೇನೂ ಇಲ್ಲ. ಇಹಲೋಕದಲ್ಲಿ ಅವರು ಮಾಡಿದ ಕರ್ಮಗಳೆಲ್ಲವೂ ವ್ಯರ್ಥವಾಗುವುವು. ಅವರು ಮಾಡುತ್ತಿದ್ದ ಕರ್ಮಗಳೆಲ್ಲವೂ ನಿಷ್ಪ್ರಯೋಜಕವಾಗುವುವು.
Kannada Translation - Hamza Buturಒಬ್ಬ ವ್ಯಕ್ತಿ ತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಪುರಾವೆಯ ಆಧಾರದಲ್ಲಿದ್ದಾನೆ.[1] ಅದರ ಹಿಂದೆ ಇನ್ನೊಂದು ಸಾಕ್ಷಿಯಿದೆ.[2] ಇದಕ್ಕೆ ಮೊದಲು ಮಾರ್ಗದರ್ಶಿ ಮತ್ತು ದಯೆಯಾಗಿದ್ದ ಮೂಸಾರ ಗ್ರಂಥವು ಕೂಡ ಆ ಸಾಕ್ಷಿಯನ್ನು ಬೆಂಬಲಿಸುತ್ತದೆ.[3] ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ. ವಿವಿಧ ಪಂಗಡಗಳಲ್ಲಿ ಯಾರು ಅದನ್ನು ನಿಷೇಧಿಸುತ್ತಾರೋ ಅವರಿಗೆ ವಾಗ್ದಾನ ಮಾಡಲಾದ ಸ್ಥಳವು ನರಕಾಗ್ನಿಯಾಗಿದೆ. ಆದ್ದರಿಂದ ನೀವು ಅದರ (ಕುರ್ಆನ್ನ) ಬಗ್ಗೆ ಯಾವುದೇ ಸಂಶಯವನ್ನಿಟ್ಟುಕೊಳ್ಳಬೇಡಿ. ನಿಶ್ಚಯವಾಗಿಯೂ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.
Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರನ್ನು ಅವರ ಪರಿಪಾಲಕನ (ಅಲ್ಲಾಹನ) ಮುಂದೆ ಹಾಜರುಪಡಿಸಲಾಗುವುದು. ಆಗ ಸಾಕ್ಷಿಗಳು ಹೇಳುವರು: “ಇವರೇ ತಮ್ಮ ಪರಿಪಾಲಕನ (ಅಲ್ಲಾಹನ) ಹೆಸರಲ್ಲಿ ಸುಳ್ಳು ಹೇಳಿದವರು.” ತಿಳಿಯಿರಿ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ.
Kannada Translation - Hamza Buturಅವರು ಯಾರೆಂದರೆ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಪರಲೋಕವನ್ನು ನಿಷೇಧಿಸಿದವರಾಗಿದ್ದಾರೆ.
Kannada Translation - Hamza Buturಇವರಿಗೆ ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲು ಸಾಧ್ಯವಿಲ್ಲ. ಅಲ್ಲಾಹನ ಹೊರತು ಅವರಿಗೆ ಬೇರೆ ರಕ್ಷಕರೂ ಇಲ್ಲ. ಅವರಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಇವರಿಗೆ ಕೇಳುವ ಶಕ್ತಿಯಿರಲಿಲ್ಲ ಮತ್ತು ಇವರು ನೋಡುತ್ತಲೂ ಇರಲಿಲ್ಲ.
Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು ಮತ್ತು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ವಿನಮ್ರರಾಗಿರುವವರು ಯಾರೋ—ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Kannada Translation - Hamza Buturಈ ಎರಡು ಪಂಗಡಗಳ (ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳ) ಉದಾಹರಣೆಯು ಕಣ್ಣು ಕಾಣದವನು ಮತ್ತು ಕಿವಿ ಕೇಳದವನು ಹಾಗೂ ಕಣ್ಣು ಕಾಣುವವನು ಮತ್ತು ಕಿವಿ ಕೇಳುವವನಂತೆ. ಇವರಿಬ್ಬರೂ ಸಮಾನರಾಗುವರೇ? ಆದರೂ ನೀವು ಉಪದೇಶವನ್ನು ಸ್ವೀಕರಿಸುವುದಿಲ್ಲವೇ?
Kannada Translation - Hamza Buturನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. (ಅವರು ಹೇಳಿದರು:) “ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
Kannada Translation - Hamza Buturನೀವು ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬಾರದು. ನಿಶ್ಚಯವಾಗಿಯೂ ಯಾತನಾಮಯ ದಿನದ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನನಗೆ ಭಯವಾಗುತ್ತಿದೆ.”
Kannada Translation - Hamza Buturಆಗ ಅವರ ಜನರಲ್ಲಿದ್ದ ಸತ್ಯನಿಷೇಧಿಗಳ ಮುಖಂಡರು ಹೇಳಿದರು: “ನೀನು ನಮಗೆ ನಮ್ಮಂತಿರುವ ಒಬ್ಬ ಮನುಷ್ಯನಂತೆ ಕಾಣುತ್ತಿರುವೆ. ನಮ್ಮಲ್ಲಿನ ಅತ್ಯಂತ ಕೆಳವರ್ಗದ ಜನರು ಮಾತ್ರ ನಿನ್ನನ್ನು ಹಿಂಬಾಲಿಸಿದ್ದಾರೆಂದು ನಮಗೆ ಕಾಣುತ್ತಿದೆ—ಅದೂ ಕೂಡ ಯಾವುದೇ ವಿವೇಚನೆಯಿಲ್ಲದೆ. ನಿನಗೆ ನಮ್ಮ ಮೇಲೆ ಯಾವುದೇ ಶ್ರೇಷ್ಠತೆಯಿರುವುದು ನಮಗೆ ಕಾಣಿಸುತ್ತಿಲ್ಲ. ಬದಲಿಗೆ, ನೀನೊಬ್ಬ ಸುಳ್ಳುಗಾರನೆಂದೇ ನಾವು ಭಾವಿಸುತ್ತಿದ್ದೇವೆ.”
Kannada Translation - Hamza Buturನೂಹ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಸ್ಪಷ್ಟ ಆಧಾರದ ಮೇಲೆ ನಿಂತಿದ್ದೇನೆ ಮತ್ತು ಅವನು ತನ್ನ ದಯೆಯನ್ನು (ಪ್ರವಾದಿತ್ವವನ್ನು) ನನಗೆ ದಯಪಾಲಿಸಿದ್ದಾನೆ. ಆದರೂ ಅದನ್ನು ನೋಡಲು ನಿಮಗೆ ಸಾಧ್ಯವಾಗದಿದ್ದರೆ ನಾವು ಅದನ್ನು ಬಲವಂತವಾಗಿ ನಿಮ್ಮ ಮೇಲೆ ಹೇರಬೇಕೇ? ನೀವು ಅದನ್ನು ಇಷ್ಟಪಡದವರಾಗಿದ್ದೂ ಸಹ.
Kannada Translation - Hamza Buturಓ ನನ್ನ ಜನರೇ! ಇದಕ್ಕೆ ಪ್ರತಿಫಲವಾಗಿ ನಾನು ನಿಮ್ಮಲ್ಲಿ ಹಣವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದ ಹೊಣೆಯಿರುವುದು ಅಲ್ಲಾಹನಿಗೆ ಮಾತ್ರ. ನಾನು ಸತ್ಯವಿಶ್ವಾಸಿಗಳನ್ನು ದೂರ ಮಾಡುವುದಿಲ್ಲ.[1] ನಿಶ್ಚಯವಾಗಿಯೂ ಅವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವರು. ಆದರೆ ನಾನು ನಿಮ್ಮನ್ನು ತಿಳುವಳಿಕೆಯಿಲ್ಲದ ಜನರಂತೆ ಕಾಣುತ್ತಿದ್ದೇನೆ.
Kannada Translation - Hamza Buturಓ ನನ್ನ ಜನರೇ! ನಾನು ಅವರನ್ನು ದೂರ ಮಾಡಿದರೆ ಅಲ್ಲಾಹನ ಶಿಕ್ಷೆಯಿಂದ ನನ್ನನ್ನು ರಕ್ಷಿಸುವವರು ಯಾರು? ನೀವು ಉಪದೇಶವನ್ನು ಸ್ವೀಕರಿಸುವುದಿಲ್ಲವೇ?
Kannada Translation - Hamza Buturಅಲ್ಲಾಹನ ಖಜಾನೆಗಳು ನನ್ನ ಬಳಿಯಿವೆ ಎಂದು ನಾನು ನಿಮಗೆ ಹೇಳುವುದಿಲ್ಲ. ನನಗೆ ಅದೃಶ್ಯ ಜ್ಞಾನವಿಲ್ಲ. ನಾನೊಬ್ಬ ದೇವದೂತನೆಂದು ನಾನು ಹೇಳುವುದಿಲ್ಲ. ನಿಮ್ಮ ಕಣ್ಣುಗಳು ಕೀಳಾಗಿ ಕಾಣುವ ಈ ಜನರಿಗೆ ಅಲ್ಲಾಹು ಒಳ್ಳೆಯದು ಮಾಡಲಾರನೆಂದು ನಾನು ಹೇಳುವುದಿಲ್ಲ. ಅವರ ಮನಸ್ಸಿನಲ್ಲಿ ಏನಿದೆಯೆಂದು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. ನಾನು ಇಂತಹ ಮಾತುಗಳನ್ನು ಹೇಳಿದರೆ ನಿಶ್ಚಯವಾಗಿಯೂ ನಾನು ಅಕ್ರಮಿಗಳಲ್ಲಿ ಸೇರಿಬಿಡುವೆನು.”
Kannada Translation - Hamza Buturಜನರು ಹೇಳಿದರು: “ಓ ನೂಹ್! ನೀನು ನಮ್ಮೊಂದಿಗೆ ತರ್ಕಿಸಿರುವೆ. ಬಹಳ ಚೆನ್ನಾಗಿ ತರ್ಕಿಸಿರುವೆ. ನೀನು ಸತ್ಯವನ್ನೇ ಹೇಳುವವನಾಗಿದ್ದರೆ ನಮ್ಮನ್ನು ಹೆದರಿಸುವ ಆ ಶಿಕ್ಷೆಯನ್ನು ಈಗಲೇ ತಂದು ತೋರಿಸು.”
Kannada Translation - Hamza Buturಅಲ್ಲಾಹು ನಿಮ್ಮನ್ನು ದಾರಿತಪ್ಪಿಸಲು ಉದ್ದೇಶಿಸಿದರೆ, ನಾನು ನಿಮಗೆ ಉಪದೇಶ ಮಾಡಲು ಬಯಸಿದರೂ ನನ್ನ ಉಪದೇಶವು ನಿಮಗೆ ಉಪಕಾರ ಮಾಡುವುದಿಲ್ಲ. ಅವನೇ ನಿಮ್ಮ ಪರಿಪಾಲಕನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.”
Kannada Translation - Hamza Butur“ಇದನ್ನು ಅವರು (ಪ್ರವಾದಿ) ಸ್ವಯಂ ರಚಿಸಿ ತಂದಿದ್ದಾರೆ” ಎಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ನಾನು ಇದನ್ನು ಸ್ವಯಂ ರಚಿಸಿ ತಂದಿದ್ದರೆ ನಾನು ಮಾಡಿದ ಅಪರಾಧವನ್ನು ನಾನೇ ಅನುಭವಿಸಬೇಕಾಗಿದೆ. ಅದರೆ, ನೀವು ಮಾಡುವ ಅಪರಾಧಗಳಿಂದ ನಾನು ಹೊಣೆಮುಕ್ತನಾಗಿದ್ದೇನೆ.”
Kannada Translation - Hamza Buturನೂಹರಿಗೆ ದೇವವಾಣಿ ನೀಡಲಾಯಿತು: “ಈಗಾಗಲೇ ವಿಶ್ವಾಸವಿಟ್ಟವರ ಹೊರತು ನಿಮ್ಮ ಜನರಲ್ಲಿ ಬೇರೆ ಯಾರೂ ವಿಶ್ವಾಸವಿಡುವುದಿಲ್ಲ; ಆದ್ದರಿಂದ ಅವರು ಮಾಡುತ್ತಿರುವ ದುಷ್ಕರ್ಮಗಳ ಬಗ್ಗೆ ನೀವು ಬೇಸರಗೊಳ್ಳಬೇಡಿ.
Kannada Translation - Hamza Buturನಮ್ಮ ಕಣ್ಣುಗಳ ಮುಂದೆ ನಮ್ಮ ದೇವವಾಣಿಯಂತೆ ಒಂದು ನಾವೆಯನ್ನು ನಿರ್ಮಿಸಿರಿ. ಅಕ್ರಮಿಗಳ ಬಗ್ಗೆ ನನ್ನೊಂದಿಗೆ ಮಾತನಾಡಬೇಡಿ. ನಿಶ್ಚಯವಾಗಿಯೂ ಅವರು (ಜಲಪ್ರಳಯದಲ್ಲಿ) ಮುಳುಗಿ ನಾಶವಾಗುವರು.”
Kannada Translation - Hamza Buturನೂಹ್ ನಾವೆಯನ್ನು ನಿರ್ಮಿಸುತ್ತಿದ್ದರು. ಅವರ ಜನರ ಮುಖಂಡರು ಅವರ ಬಳಿಯಿಂದ ಹಾದು ಹೋಗುವಾಗಲೆಲ್ಲಾ ಅವರನ್ನು ತಮಾಷೆ ಮಾಡುತ್ತಿದ್ದರು. ನೂಹ್ ಹೇಳಿದರು: “ನೀವು ನಮ್ಮನ್ನು ತಮಾಷೆ ಮಾಡುತ್ತೀರಲ್ಲವೇ? ನಿಶ್ಚಯವಾಗಿಯೂ ನೀವು ತಮಾಷೆ ಮಾಡಿದಂತೆಯೇ ನಾವು ಕೂಡ ನಿಮ್ಮನ್ನು ತಮಾಷೆ ಮಾಡುವೆವು.
Kannada Translation - Hamza Buturಎಲ್ಲಿಯವರೆಗೆಂದರೆ, ನಮ್ಮ ಆಜ್ಞೆಯು ಬಂದು ಒಲೆ ಉಕ್ಕಿ ಹರಿದಾಗ, ನಾವು ಹೇಳಿದೆವು: “ಎಲ್ಲಾ ಜೀವಿಗಳ ಒಂದೊಂದು ಜೋಡಿಯನ್ನು (ಗಂಡು ಮತ್ತು ಹೆಣ್ಣು) ನಾವೆಯಲ್ಲಿ ಹತ್ತಿಸಿರಿ. ನಿಮ್ಮ ಕುಟುಂಬದವರಲ್ಲಿ ಯಾರ ಮೇಲೆ ಅಲ್ಲಾಹನ ಮಾತು ಖಾತ್ರಿಯಾಗಿದೆಯೋ ಅವರನ್ನು ಬಿಟ್ಟು ಉಳಿದವರನ್ನು ಹಾಗೂ ಸತ್ಯವಿಶ್ವಾಸಿಗಳನ್ನು ಕೂಡ ಹತ್ತಿಸಿರಿ.” ಕೆಲವು ಬೆರಳೆಣಿಕೆಯ ಜನರು ಮಾತ್ರ ಅವರ ಜೊತೆಗೆ ವಿಶ್ವಾಸವಿಟ್ಟಿದ್ದರು.
Kannada Translation - Hamza Buturನೂಹ್ ಹೇಳಿದರು: “ಈ ನಾವೆಯನ್ನು ಹತ್ತಿಕೊಳ್ಳಿ. ಇದು ಚಲಿಸುವುದು ಮತ್ತು ನಿಲ್ಲುವುದೆಲ್ಲವೂ ಅಲ್ಲಾಹನ ಹೆಸರಲ್ಲಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
Kannada Translation - Hamza Buturನಾವೆ ಅವರನ್ನು ಹೊತ್ತು ಬೆಟ್ಟಗಳಂತಿರುವ ಹೆದ್ದೆರೆಗಳ ಮಧ್ಯೆ ಚಲಿಸುತ್ತಿತ್ತು. ದೂರದ ಸ್ಥಳದಲ್ಲಿ ನಿಂತಿದ್ದ ಮಗನನ್ನು ಕರೆದು ನೂಹ್ ಹೇಳಿದರು: “ಓ ನನ್ನ ಮುದ್ದು ಕಂದಾ! ನಮ್ಮೊಂದಿಗೆ ಹತ್ತಿಕೋ. ನೀನು ಸತ್ಯನಿಷೇಧಿಗಳಲ್ಲಿ ಸೇರಬೇಡ.”
Kannada Translation - Hamza Buturಅವನು ಹೇಳಿದನು: “ನಾನೊಂದು ಬೆಟ್ಟದಲ್ಲಿ ಆಶ್ರಯ ಪಡೆಯುವೆನು. ಅದು ನನ್ನನ್ನು ಪ್ರವಾಹದಿಂದ ರಕ್ಷಿಸುತ್ತದೆ.” ನೂಹ್ ಹೇಳಿದರು: “ಇಂದು ಅಲ್ಲಾಹನ ಆಜ್ಞೆಯಿಂದ ಪಾರು ಮಾಡುವವರು ಯಾರೂ ಇಲ್ಲ. ಯಾರಿಗೆ ಅಲ್ಲಾಹು ದಯೆ ತೋರುತ್ತಾನೋ ಅವರು ಮಾತ್ರ ಪಾರಾಗುತ್ತಾರೆ.” ಆಗ ಅವರಿಬ್ಬರ ಮಧ್ಯೆ ಹೆದ್ದೆರೆಯು ಅಡ್ಡವಾಗಿ ಎದ್ದು, ಅವನು ಮುಳುಗಿ ನಾಶವಾದವರಲ್ಲಿ ಸೇರಿದನು.
Kannada Translation - Hamza Butur“ಓ ಭೂಮಿ! ನಿನ್ನ ನೀರನ್ನು ನುಂಗಿಬಿಡು! ಓ ಆಕಾಶ! ಮಳೆ ಸುರಿಸುವುದನ್ನು ನಿಲ್ಲಿಸು!” ಎಂದು ಆಜ್ಞಾಪಿಸಲಾಯಿತು. ಪ್ರವಾಹವು ತಗ್ಗಿತು ಮತ್ತು ಆಜ್ಞೆಯು ನೆರವೇರಿತು. ನಾವೆ ಜೂದಿ ಪರ್ವತದ ಮೇಲೆ ನಿಂತಿತು. “ಅಕ್ರಮವೆಸಗಿದ ಜನರು ನಾಶವಾಗಲಿ” ಎಂದು ಹೇಳಲಾಯಿತು.
Kannada Translation - Hamza Buturನೂಹ್ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಹೇಳಿದರು: “ಓ ನನ್ನ ಪರಿಪಾಲಕನೇ! ನನ್ನ ಮಗ ನನ್ನ ಕುಟುಂಬದವನು. ನಿಶ್ಚಯವಾಗಿಯೂ ನಿನ್ನ ವಾಗ್ದಾನವು ಸತ್ಯವಾಗಿದೆ. ನೀನು ತೀರ್ಪು ನೀಡುವವರಲ್ಲೇ ಅತಿಶ್ರೇಷ್ಠ ತೀರ್ಪುಗಾರನಾಗಿರುವೆ.”
Kannada Translation - Hamza Buturಅಲ್ಲಾಹು ಹೇಳಿದನು: “ಓ ನೂಹ್! ನಿಶ್ಚಯವಾಗಿಯೂ ಅವನು ನಿಮ್ಮ ಕುಟುಂಬದವನಲ್ಲ. ಅವನ ಕೆಲಸಗಳಲ್ಲಿ ಯಾವುದೇ ಸತ್ಕರ್ಮಗಳಿಲ್ಲ. ನಿಮಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ನನ್ನಲ್ಲಿ ಪ್ರಶ್ನಿಸಬೇಡಿ. ನೀವು ಅವಿವೇಕಿಗಳಲ್ಲಿ ಸೇರಬಾರದೆಂದು ನಾನು ನಿಮಗೆ ಉಪದೇಶ ನೀಡುತ್ತಿದ್ದೇನೆ.”
Kannada Translation - Hamza Buturನೂಹ್ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ನಿನ್ನಲ್ಲಿ ಪ್ರಶ್ನಿಸುವುದರಿಂದ (ನನ್ನನ್ನು ರಕ್ಷಿಸಬೇಕೆಂದು) ನಾನು ನಿನ್ನಲ್ಲಿ ಅಭಯ ಕೋರುತ್ತೇನೆ. ನೀನು ನನ್ನನ್ನು ಕ್ಷಮಿಸದಿದ್ದರೆ ಮತ್ತು ನನಗೆ ದಯೆ ತೋರದಿದ್ದರೆ ನಾನು ನಷ್ಟಹೊಂದಿದವರಲ್ಲಿ ಸೇರುವುದು ನಿಶ್ಚಿತ.”
Kannada Translation - Hamza Buturಅವರೊಡನೆ ಹೇಳಲಾಯಿತು: “ಓ ನೂಹ್! ನಮ್ಮ ಕಡೆಯ ಸುರಕ್ಷೆ ಮತ್ತು ಸಮೃದ್ಧಿಗಳೊಂದಿಗೆ ಇಳಿಯಿರಿ. (ಆ ಸಮೃದ್ಧಿಗಳು) ನಿಮಗೆ ಹಾಗೂ ನಿಮ್ಮ ಜೊತೆಯಲ್ಲಿರುವವರ ಅನೇಕ ಸಮುದಾಯಗಳಿಗೆ ಇದೆ. ಬೇರೆ ಕೆಲವು ಸಮುದಾಯಗಳಿವೆ. ಅವರಿಗೆ ನಾವು (ಇಹಲೋಕದಲ್ಲಿ ) ಸವಲತ್ತುಗಳನ್ನು ನೀಡುವೆವು. ನಂತರ ನಮ್ಮ ಕಡೆಯ ಯಾತನಾಮಯ ಶಿಕ್ಷೆಯು ಅವರನ್ನು ಸ್ಪರ್ಶಿಸುತ್ತದೆ.”
Kannada Translation - Hamza Butur(ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಾಗಿವೆ. ನಾವು ಇವುಗಳನ್ನು ದೇವವಾಣಿಯ ಮೂಲಕ ನಿಮಗೆ ತಿಳಿಸುತ್ತಿದ್ದೇವೆ. ಇದಕ್ಕೆ ಮೊದಲು ನೀವು ಅಥವಾ ನಿಮ್ಮ ಜನರು ಇದನ್ನು ತಿಳಿದಿರಲಿಲ್ಲ. ಆದ್ದರಿಂದ ನೀವು ತಾಳ್ಮೆ ವಹಿಸಿರಿ. ನಿಶ್ಚಯವಾಗಿಯೂ ಅತ್ಯುತ್ತಮ ಅಂತ್ಯವಿರುವುದು ದೇವಭಯವುಳ್ಳವರಿಗೆ ಮಾತ್ರ.
Kannada Translation - Hamza Buturನಾವು ಆದ್ ಗೋತ್ರದವರ ಬಳಿಗೆ ಅವರ ಸಹೋದರ ಹೂದರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ನೀವು ಕೇವಲ ಸುಳ್ಳು ಆರೋಪಿಸುವವರಾಗಿದ್ದೀರಿ.”
Kannada Translation - Hamza Buturಓ ನನ್ನ ಜನರೇ! ಇದಕ್ಕಾಗಿ ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದ ಹೊಣೆಯಿರುವುದು ನನ್ನ ಸೃಷ್ಟಿಕರ್ತನಿಗೆ ಮಾತ್ರ. ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?
Kannada Translation - Hamza Buturಓ ನನ್ನ ಜನರೇ! ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ಅವನು ನಿಮಗೆ ಧಾರಾಕಾರವಾಗಿ ಮಳೆಯನ್ನು ಸುರಿಸುವನು. ನಿಮ್ಮ ಶಕ್ತಿಗೆ ಅವನು ಇನ್ನಷ್ಟು ಶಕ್ತಿಯನ್ನು ಹೆಚ್ಚಿಸುವನು. ನೀವು ಅಪರಾಧಿಗಳಾಗಿ ವಿಮುಖರಾಗಬೇಡಿ.”
Kannada Translation - Hamza Buturಜನರು ಹೇಳಿದರು: “ಓ ಹೂದ್! ನೀನು ಯಾವುದೇ ಸ್ಪಷ್ಟ ಸಾಕ್ಷ್ಯವನ್ನು ತಂದು ತೋರಿಸಿಲ್ಲ. ನಿನ್ನ ಮಾತನ್ನು ಕೇಳಿ ನಾವು ನಮ್ಮ ದೇವರುಗಳನ್ನು ತೊರೆಯುವುದಿಲ್ಲ. ನಾವು ನಿನ್ನಲ್ಲಿ ವಿಶ್ವಾಸವಿಡುವುದೂ ಇಲ್ಲ.
Kannada Translation - Hamza Buturನೀನು ನಮ್ಮ ಕೆಲವು ದೇವರುಗಳ ಕೆಟ್ಟ ವಶೀಕರಣಕ್ಕೆ ಒಳಗಾಗಿದ್ದೀಯಾ ಎಂದು ಮಾತ್ರ ನಮಗೆ ಹೇಳಲಿಕ್ಕಿರುವುದು.” ಹೂದ್ ಹೇಳಿದರು: “ನೀವು (ಅಲ್ಲಾಹನೊಂದಿಗೆ) ಸಹಭಾಗಿಯಾಗಿ ಮಾಡುತ್ತಿರುವ ಎಲ್ಲಾ ದೇವರುಗಳಿಂದಲೂ ನಾನು ಸಂಪೂರ್ಣ ದೂರವಾಗಿದ್ದೇನೆಂದು ಅಲ್ಲಾಹನನ್ನು ಸಾಕ್ಷಿಯಾಗಿಟ್ಟು ಹೇಳುತ್ತೇನೆ. ನೀವೂ ಅದಕ್ಕೆ ಸಾಕ್ಷಿಗಳಾಗಿರಿ.
Kannada Translation - Hamza Buturನಾನು ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನಲ್ಲಿ ಭರವಸೆಯಿಟ್ಟಿದ್ದೇನೆ. ಎಲ್ಲಾ ಜೀವರಾಶಿಗಳ ಮಂದಲೆಯು ಅವನ ಹಿಡಿತದಲ್ಲಿದೆ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಸರಿಯಾದ ಮಾರ್ಗದಲ್ಲಿದ್ದಾನೆ.
Kannada Translation - Hamza Buturನೀವು ವಿಮುಖರಾಗುವುದಾದರೆ, ನಾನಂತೂ ನಿಮಗೆ ತಲುಪಿಸಬೇಕೆಂದು ಕಳುಹಿಸಲಾದ ಸಂದೇಶಗಳನ್ನು ನಿಮಗೆ ತಲುಪಿಸಿದ್ದೇನೆ. ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮ ಹೊರತಾದ ಬೇರೆ ಜನರನ್ನು ಉತ್ತರಾಧಿಕಾರಿಗಳಾಗಿ ತರುವನು. ಅವನಿಗೆ ಯಾವುದೇ ತೊಂದರೆ ಮಾಡಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಎಲ್ಲಾ ವಸ್ತುಗಳ ಸಂರಕ್ಷಕನಾಗಿದ್ದಾನೆ.”
Kannada Translation - Hamza Buturನಮ್ಮ ಆಜ್ಞೆಯು ಬಂದಾಗ ನಾವು ಹೂದರನ್ನು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ನಮ್ಮ ದಯೆಯಿಂದ ರಕ್ಷಿಸಿದೆವು. ನಾವು ಅವರನ್ನು ಕಠೋರ ಶಿಕ್ಷೆಯಿಂದ ಪಾರು ಮಾಡಿದೆವು.
Kannada Translation - Hamza Buturಅವರೇ ಆದ್ ಗೋತ್ರದವರು. ಅವರು ಅವರ ಪರಿಪಾಲಕನ (ಅಲ್ಲಾಹನ) ವಚನಗಳನ್ನು ತಿರಸ್ಕರಿಸಿದರು, ಅವನ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಎಲ್ಲಾ ದುಷ್ಟ ಸ್ವೇಚ್ಛಾಚಾರಿಗಳನ್ನು ಹಿಂಬಾಲಿಸಿದರು.
Kannada Translation - Hamza Buturನಾವು ಸಮೂದ್ ಗೋತ್ರದವರ ಬಳಿಗೆ ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದನು ಮತ್ತು ಅಲ್ಲೇ ನಿಮಗೆ ವಾಸ್ತವ್ಯವನ್ನು ಮಾಡಿಕೊಟ್ಟನು. ಆದ್ದರಿಂದ ಅವನಲ್ಲಿ ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಬಹಳ ಸಮೀಪದಲ್ಲಿರುವವನು ಮತ್ತು (ಪ್ರಾರ್ಥನೆಗೆ) ಉತ್ತರ ನೀಡುವವನಾಗಿದ್ದಾನೆ.”
Kannada Translation - Hamza Buturಅವರು ಹೇಳಿದರು: “ಓ ಸ್ವಾಲಿಹ್! ಇದಕ್ಕೆ ಮುಂಚೆ ನಾವು ನಿನ್ನಲ್ಲಿ ಬಹಳಷ್ಟು ನಿರೀಕ್ಷೆಗಳನ್ನಿಟ್ಟಿದ್ದೆವು. ನಮ್ಮ ಪೂರ್ವಜರು ಆರಾಧಿಸಿದ್ದನ್ನು ಆರಾಧಿಸಬಾರದೆಂದು ನೀನು ನಮಗೆ ಹೇಳುತ್ತಿರುವೆಯಾ? ನೀನು ನಮ್ಮನ್ನು ಯಾವ ಧರ್ಮದ ಕಡೆಗೆ ಕರೆಯುತ್ತಿರುವೆಯೋ ಅದರ ಬಗ್ಗೆ ನಮಗೆ ಗೊಂದಲಪೂರ್ಣ ಸಂಶಯಗಳಿವೆ.”
Kannada Translation - Hamza Buturಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ತನ್ನ ದಯೆಯನ್ನು ನನಗೆ ದಯಪಾಲಿಸಿರುವಾಗ, ನಾನು ಅವನು ಹೇಳಿದಂತೆ ಕೇಳದಿದ್ದರೆ ಅವನಿಂದ ನನ್ನನ್ನು ರಕ್ಷಿಸುವವರು ಯಾರು? ನೀವು ನನಗೆ ನಷ್ಟವನ್ನೇ ಹೆಚ್ಚಿಸುತ್ತಿದ್ದೀರಿ.
Kannada Translation - Hamza Buturಓ ನನ್ನ ಜನರೇ! ಇದು ಅಲ್ಲಾಹನ ಒಂಟೆ. ಇದು ನಿಮಗೊಂದು ದೃಷ್ಟಾಂತವಾಗಿದೆ. ಆದ್ದರಿಂದ ಅದನ್ನು ಅಲ್ಲಾಹನ ಭೂಮಿಯಲ್ಲಿ ಮೇಯಲು ಬಿಟ್ಟುಬಿಡಿ. ಅದಕ್ಕೆ ಯಾವುದೇ ತೊಂದರೆ ಕೊಡಲು ಹೋಗಬೇಡಿ. ಕೊಟ್ಟರೆ ಸಮೀಪದಲ್ಲೇ ಇರುವ ಶಿಕ್ಷೆಯು ನಿಮ್ಮ ಮೇಲೆರಗುವುದು.”
Kannada Translation - Hamza Buturಆದರೆ ಅವರು ಅದರ ಕಾಲುಗಳನ್ನು ಕಡಿದರು. ಆಗ ಸ್ವಾಲಿಹ್ ಹೇಳಿದರು: “ಮೂರು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಆನಂದವಾಗಿರಿ. ಇದು ಹುಸಿ ವಾಗ್ದಾನವಲ್ಲ.”
Kannada Translation - Hamza Buturನಂತರ ನಮ್ಮ ಆಜ್ಞೆಯು ಬಂದಾಗ, ನಾವು ನಮ್ಮ ದಯೆಯಿಂದ ಸ್ವಾಲಿಹ್ ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ರಕ್ಷಿಸಿದೆವು. ಆ ದಿನದ ಅವಮಾನದಿಂದಲೂ ಅವರನ್ನು ರಕ್ಷಿಸಿದೆವು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
Kannada Translation - Hamza Buturಅವರು ಅಲ್ಲಿ ವಾಸಿಸಲೇ ಇಲ್ಲ ಎಂಬಂತೆ ನಾಶವಾದರು. ತಿಳಿಯಿರಿ! ನಿಶ್ಚಯವಾಗಿಯೂ ಸಮೂದ್ ಗೋತ್ರದವರು ಅವರ ಪರಿಪಾಲಕನ್ನು (ಅಲ್ಲಾಹನನ್ನು) ನಿಷೇಧಿಸಿದರು. ತಿಳಿಯಿರಿ! ಸಮೂದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾದರು.
Kannada Translation - Hamza Buturನಮ್ಮ ದೂತರು ಇಬ್ರಾಹೀಮರ ಬಳಿಗೆ ಸುವಾರ್ತೆಯೊಂದಿಗೆ ಬಂದರು. ಅವರು (ದೂತರು) ಸಲಾಂ ಹೇಳಿದರು. ಇಬ್ರಾಹೀಮ್ ಸಲಾಂಗೆ ಉತ್ತರಿಸಿದರು. ನಂತರ ತಡಮಾಡದೆ ಒಂದು ಕರುವನ್ನು ಹುರಿದು ತಂದರು.
Kannada Translation - Hamza Buturಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು.[1] ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.”
Kannada Translation - Hamza Buturಅವರ ಹೆಂಡತಿ ಅಲ್ಲಿ ನಿಂತಿದ್ದರು. ಅವರು ಮುಗುಳ್ನಕ್ಕರು. ಆಗ ನಾವು ಅವರಿಗೆ ಇಸ್ಹಾಕರ (ಜನನದ) ಬಗ್ಗೆ ಮತ್ತು ಇಸ್ಹಾಕರ ಹಿಂದೆ ಯಾಕೂಬರ (ಜನನದ) ಬಗ್ಗೆ ಸುವಾರ್ತೆ ನೀಡಿದೆವು.[1]
Kannada Translation - Hamza Buturಅವರು (ಹೆಂಡತಿ) ಹೇಳಿದರು: “ಓ ನನ್ನ ದುರದೃಷ್ಟವೇ! ನಾನು ಮಗುವಿಗೆ ಜನ್ಮ ನೀಡುವುದು ಸಾಧ್ಯವೇ? ನಾನೊಬ್ಬ ವೃದ್ಧೆ. ಈ ನನ್ನ ಗಂಡ ಕೂಡ ಒಬ್ಬ ಮುದುಕ! ನಿಶ್ಚಯವಾಗಿಯೂ ಇದೊಂದು ವಿಚಿತ್ರ ಸಂಗತಿಯಾಗಿದೆ!”
Kannada Translation - Hamza Buturಅವರು (ದೂತರು) ಹೇಳಿದರು: “ಅಲ್ಲಾಹನ ಆಜ್ಞೆಯ ಬಗ್ಗೆ ನಿಮಗೆ ಅಚ್ಚರಿಯೇ? ಓ ಮನೆಯವರೇ! ನಿಮ್ಮ ಮೇಲೆ ಅಲ್ಲಾಹನ ದಯೆ ಮತ್ತು ಸಮೃದ್ಧಿಯಿರಲಿ. ನಿಶ್ಚಯವಾಗಿಯೂ ಅವನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿದ್ದಾನೆ.”
Kannada Translation - Hamza Buturಇಬ್ರಾಹೀಮರಿಂದ ಭಯವು ನಿವಾರಣೆಯಾದಾಗ ಮತ್ತು ಅವರಿಗೆ ಸುವಾರ್ತೆಯು ತಲುಪಿದಾಗ, ಅವರು ನಮ್ಮೊಡನೆ (ದೂತರೊಡನೆ) ಲೂತರ ಜನರ ಬಗ್ಗೆ ತರ್ಕಿಸಲು ಪ್ರಾರಂಭಿಸಿದರು.
Kannada Translation - Hamza Butur(ದೂತರು ಹೇಳಿದರು): “ಓ ಇಬ್ರಾಹೀಮರೇ! ಈ ತರ್ಕವನ್ನು ಬಿಟ್ಟುಬಿಡಿ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಿದೆ. ನಿಶ್ಚಯವಾಗಿಯೂ ಅವರಿಗೆ ರದ್ದು ಮಾಡಲಾಗದ ಶಿಕ್ಷೆಯು ಬರಲಿದೆ.”
Kannada Translation - Hamza Buturನಮ್ಮ ದೂತರು ಲೂತರ ಬಳಿಗೆ ಬಂದಾಗ, ಅವರಿಗೆ ಅವರ (ದೂತರ) ಬಗ್ಗೆ ಕಳವಳವಾಯಿತು. ಅವರ ಹೃದಯದಲ್ಲಿ ಇಕ್ಕಟ್ಟು ಅನುಭವವಾಯಿತು. ಅವರು ಹೇಳಿದರು: “ಇದೊಂದು ಕಠಿಣ ಪರೀಕ್ಷೆಯ ದಿನವಾಗಿದೆ.”[1]
Kannada Translation - Hamza Buturಅವರು ಜನರು ಅವರ ಬಳಿಗೆ ಓಡೋಡಿ ಬಂದರು. ಅವರು ಬಹಳ ಹಿಂದಿನಿಂದಲೇ ಕೆಟ್ಟ ಕೃತ್ಯಗಳನ್ನು ಮಾಡುತ್ತಾ ಬಂದಿದ್ದರು. ಲೂತ್ ಹೇಳಿದರು: “ಓ ನನ್ನ ಜನರೇ! ಇಗೋ ಇವರು ನನ್ನ ಹೆಣ್ಣುಮಕ್ಕಳು. ಇವರು ನಿಮಗೆ ಹೆಚ್ಚು ಪರಿಶುದ್ಧರು. ಅಲ್ಲಾಹನನ್ನು ಭಯಪಡಿರಿ. ನನ್ನ ಅತಿಥಿಗಳ ವಿಷಯದಲ್ಲಿ ನನ್ನನ್ನು ಅವಮಾನ ಮಾಡಬೇಡಿ. ನಿಮ್ಮಲ್ಲಿ ಕನಿಷ್ಠ ಒಬ್ಬ ನೀತಿವಂತ ವ್ಯಕ್ತಿಯೂ ಇಲ್ಲವೇ?”
Kannada Translation - Hamza Buturಅವರು ಹೇಳಿದರು: “ನಮಗೆ ನಿನ್ನ ಹೆಣ್ಣುಮಕ್ಕಳ ವಿಷಯದಲ್ಲಿ ಯಾವುದೇ ಹಕ್ಕಿಲ್ಲ (ಬಯಕೆಯಿಲ್ಲ) ಎಂದು ನಿನಗೆ ಚೆನ್ನಾಗಿ ಗೊತ್ತಿದೆ. ನಮ್ಮ ಇರಾದೆಯೇನೆಂದೂ ನಿನಗೆ ಗೊತ್ತಿದೆ.”
Kannada Translation - Hamza Buturಲೂತ್ ಹೇಳಿದರು: “ಅಯ್ಯೋ! ನಿಮ್ಮನ್ನು ಎದುರಿಸುವ ಶಕ್ತಿ ನನಗಿರುತ್ತಿದ್ದರೆ! ಅಥವಾ ಒಬ್ಬ ಬಲಿಷ್ಠ ಸಹಾಯಕನ ಆಶ್ರಯ ಪಡೆಯಲು ನನಗೆ ಸಾಧ್ಯವಾಗುತ್ತಿದ್ದರೆ!”
Kannada Translation - Hamza Buturಅವರು (ದೂತರು) ಹೇಳಿದರು: “ಓ ಲೂತ್! ನಿಶ್ಚಯವಾಗಿಯೂ ನಾವು ನಿಮ್ಮ ಪರಿಪಾಲಕನ (ಅಲ್ಲಾಹನ) ದೂತರಾಗಿದ್ದೇವೆ. ನಿಮ್ಮ ಬಳಿಗೆ ತಲುಪಲು ಅವರಿಗೆ ಸಾಧ್ಯವಿಲ್ಲ. ಆದ್ದರಿಂದ ರಾತ್ರಿಯ ಒಂದು ಭಾಗದಲ್ಲಿ ನೀವು ನಿಮ್ಮ ಕುಟುಂಬ ಸಮೇತ ಇಲ್ಲಿಂದ ಹೊರಟುಹೋಗಿ. ನಿಮ್ಮಲ್ಲಿ ಯಾರೂ ಹಿಂದಿರುಗಿ ನೋಡದಿರಲಿ. ಆದರೆ ನಿಮ್ಮ ಪತ್ನಿಯನ್ನು ಕರೆದೊಯ್ಯಬೇಡಿ. ನಿಶ್ಚಯವಾಗಿಯೂ ಅವರಿಗೇನು ಸಂಭವಿಸುತ್ತದೋ ಅದು ಅವಳಿಗೂ ಸಂಭವಿಸುತ್ತದೆ. ನಿಶ್ಚಯವಾಗಿಯೂ ಅವರಿಗೆ ನೀಡಲಾದ ನಿಗದಿತ ಸಮಯವು ಪ್ರಭಾತವಾಗಿದೆ. ಪ್ರಭಾತವು ಹತ್ತಿರದಲ್ಲೇ ಇದೆಯಲ್ಲವೇ?”
Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಗುರುತು ಹಾಕಲಾದ ಕಲ್ಲುಗಳು. ಅದು ಈ ಅಕ್ರಮಿಗಳಿಂದ (ಮಕ್ಕಾದ ಸತ್ಯನಿಷೇಧಿಗಳಿಂದ) ಸ್ವಲ್ಪವೂ ದೂರವಿಲ್ಲ.[1]
Kannada Translation - Hamza Buturನಾವು ಮದ್ಯನ್ ಗೋತ್ರದವರ ಬಳಿಗೆ ಅವರ ಸಹೋದರ ಶುಐಬರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ಅಳತೆ ಮತ್ತು ತೂಕ ಮಾಡುವಾಗ ಕಡಿಮೆ ಮಾಡಬೇಡಿ. ನಿಶ್ಚಯವಾಗಿಯೂ ನೀವು ಸಮೃದ್ಧ ಸ್ಥಿತಿಯಲ್ಲಿರುವುದನ್ನು ನಾನು ಕಾಣುತ್ತಿದ್ದೇನೆ. ಆದರೆ ಸಂಪೂರ್ಣವಾಗಿ ಆವರಿಸಿಕೊಳ್ಳುವ ಆ ದಿನದ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನಿಶ್ಚಯವಾಗಿಯೂ ನನಗೆ ಭಯವಾಗುತ್ತಿದೆ.
Kannada Translation - Hamza Buturಓ ನನ್ನ ಜನರೇ! ಅಳತೆ ಮತ್ತು ತೂಕವನ್ನು ನ್ಯಾಯವಾದ ರೀತಿಯಲ್ಲಿ ಪೂರ್ಣಗೊಳಿಸಿರಿ. ಜನರಿಗೆ ಅವರ ವಸ್ತುಗಳನ್ನು ಕಡಿಮೆ ಮಾಡಬೇಡಿ. ಕಿಡಿಗೇಡಿತನ ಮಾಡುತ್ತಾ ಭೂಮಿಯಲ್ಲಿ ಅಲೆಯಬೇಡಿ.
Kannada Translation - Hamza Buturನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹು ನಿಮಗೆ ಉಳಿಸಿಕೊಡುವ ಧರ್ಮಸಮ್ಮತವಾದ ಲಾಭವು ನಿಮಗೆ ಅತ್ಯುತ್ತಮವಾಗಿದೆ. ನಾನೇನೂ ನಿಮ್ಮ ಕಾವಲುಗಾರನಲ್ಲ.”
Kannada Translation - Hamza Buturಅವರು ಹೇಳಿದರು: “ಓ ಶುಐಬ್! ನಾವು ನಮ್ಮ ಪೂರ್ವಿಕರು ಆರಾಧಿಸುತ್ತಾ ಬಂದಿರುವುದನ್ನು ತೊರೆಯಬೇಕೆಂದು ಅಥವಾ ನಮ್ಮ ಧನದಲ್ಲಿ ನಮಗಿಷ್ಟ ಬಂದಂತೆ ವ್ಯವಹರಿಸುವುದನ್ನು ಬಿಟ್ಟುಬಿಡಬೇಕೆಂದು ಹೇಳಲು ನಿನ್ನ ನಮಾಝ್ ನಿನಗೆ ಆದೇಶಿಸುತ್ತಿದೆಯೇ? ನೀನೊಬ್ಬ ದೊಡ್ಡ ಸೈರಣೆಯುಳ್ಳವನು ಮತ್ತು ನೀತಿವಂತನೇ ಸರಿ!”
Kannada Translation - Hamza Buturಶುಐಬ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ನನಗೆ ಉತ್ತಮ ಜೀವನೋಪಾಯವನ್ನು ಒದಗಿಸಿರುವಾಗ (ಸತ್ಯವನ್ನು ಹೇಳದಿರಲು ನನ್ನಿಂದ ಹೇಗೆ ಸಾಧ್ಯ?) ನಾನು ನಿಮಗೆ ಏನನ್ನು ವಿರೋಧಿಸುತ್ತೇನೆೋ ಅದಕ್ಕೆ ವಿರುದ್ಧವಾಗಿ ಸಾಗಲು ನಾನು ಬಯಸುವುದಿಲ್ಲ. ನಾನು ನನಗೆ ಸಾಧ್ಯವಾದಷ್ಟು ಸುಧಾರಣೆ ಮಾಡಲು ಬಯಸುತ್ತೇನೆ. ಅಲ್ಲಾಹನ ಸಹಾಯದಿಂದ ಮಾತ್ರ ನಾನು ಯಶಸ್ವಿಯಾಗಬಲ್ಲೆ. ಅವನಲ್ಲಿಯೇ ನಾನು ಭರವಸೆಯಿಟ್ಟಿದ್ದೇನೆ ಮತ್ತು ಅವರ ಬಳಿಗೇ ನಾನು ಮರಳುತ್ತೇನೆ.
Kannada Translation - Hamza Buturಓ ನನ್ನ ಜನರೇ! ನನ್ನೊಂದಿಗೆ ನೀವು ತೋರುತ್ತಿರುವ ಈ ವಿರೋಧವು ನೂಹರ ಜನರಿಗೆ, ಹೂದರ ಜನರಿಗೆ ಅಥವಾ ಸ್ವಾಲಿಹರ ಜನರಿಗೆ ಸಂಭವಿಸಿದ ದುರಂತವು ನಿಮಗೂ ಸಂಭವಿಸುವಂತಾಗಲು ಪ್ರೇರಕವಾಗದಿರಲಿ. ಲೂತರ ಜನರಂತೂ ನಿಮ್ಮಿಂದ ಹೆಚ್ಚು ದೂರದಲ್ಲಿಲ್ಲ.
Kannada Translation - Hamza Buturನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ದಯೆ ತೋರುವವನು ಮತ್ತು ಅಕ್ಕರೆಯುಳ್ಳವನಾಗಿದ್ದಾನೆ.”
Kannada Translation - Hamza Buturಅವರು ಹೇಳಿದರು: “ಓ ಶುಐಬ್! ನೀನು ಹೇಳುವ ಮಾತುಗಳಲ್ಲಿ ಹೆಚ್ಚಿನದ್ದನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ. ನಿಶ್ಚಯವಾಗಿಯೂ ನೀನು ನಮ್ಮಲ್ಲಿ ಒಬ್ಬ ಬಲಹೀನ ವ್ಯಕ್ತಿಯಂತೆ ಕಾಣುತ್ತಿರುವೆ. ನಿನ್ನ ಗೋತ್ರದವರು ಇಲ್ಲದಿರುತ್ತಿದ್ದರೆ ನಾವು ನಿನ್ನನ್ನು ಕಲ್ಲೆಸೆದು ಕೊಲ್ಲುತ್ತಿದ್ದೆವು. ನಾವು ನಿನ್ನನ್ನು ಗೌರವಾರ್ಹ ವ್ಯಕ್ತಿಯೆಂದು ಪರಿಗಣಿಸುವುದಿಲ್ಲ.”
Kannada Translation - Hamza Buturಶುಐಬ್ ಹೇಳಿದರು: “ಓ ನನ್ನ ಜನರೇ! ನಿಮ್ಮ ದೃಷ್ಟಿಯಲ್ಲಿ ಅಲ್ಲಾಹನಿಗಿಂತಲೂ ನನ್ನ ಗೋತ್ರದವರೇ ಹೆಚ್ಚು ಗೌರವಾನ್ವಿತರೇ? ನೀವಂತೂ ಅವನನ್ನು ನಿಮ್ಮ ಬೆನ್ನ ಹಿಂಭಾಗಕ್ಕೆ ಎಸೆದಿದ್ದೀರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ನೀವು ಮಾಡುವ ಕರ್ಮಗಳನ್ನು ಆವರಿಸಿದ್ದಾನೆ.
Kannada Translation - Hamza Buturಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತೇನೆ. ಅವಮಾನಗೊಳಿಸುವ ಶಿಕ್ಷೆಯು ಯಾರಿಗೆ ಬರಲಿದೆ ಮತ್ತು ಯಾರು ಸುಳ್ಳು ಹೇಳುವವರು ಎಂದು ಸದ್ಯವೇ ನೀವು ತಿಳಿಯುವಿರಿ. ನೀವು ಕಾಯಿರಿ. ನಾನೂ ಕೂಡ ನಿಮ್ಮೊಂದಿಗೆ ಕಾಯುತ್ತೇನೆ.”
Kannada Translation - Hamza Buturನಮ್ಮ ಆಜ್ಞೆಯು ಬಂದಾಗ, ನಾವು ನಮ್ಮ ದಯೆಯಿಂದ ಶುಐಬರನ್ನು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ರಕ್ಷಿಸಿದೆವು. ಆ ಅಕ್ರಮಿಗಳನ್ನು ಮಹಾ ಚೀತ್ಕಾರವು ಹಿಡಿದುಬಿಟ್ಟಿತು. ಅವರು ತಮ್ಮ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು.
Kannada Translation - Hamza Buturಪುನರುತ್ಥಾನದ ದಿನದಂದು ಅವನು (ಫರೋಹ) ತನ್ನ ಜನರ ಮುಂಭಾಗದಲ್ಲಿ ನಿಂತು ಅವರನ್ನು ನರಕಕ್ಕೆ ಸಾಗಿಸುವನು. ಅವರನ್ನು ಸಾಗಿಸಲಾಗುವ ಆ ಸ್ಥಳವು ಬಹಳ ನಿಕೃಷ್ಟವಾಗಿದೆ.
Kannada Translation - Hamza Butur(ಪ್ರವಾದಿಯವರೇ) ಇವೆಲ್ಲವೂ ಆ ಊರುಗಳ ಕೆಲವು ಸಮಾಚಾರಗಳಾಗಿವೆ. ನಾವು ಇದನ್ನು ನಿಮಗೆ ತಿಳಿಸಿಕೊಡುತ್ತಿದ್ದೇವೆ. ಆ ಊರುಗಳಲ್ಲಿ ಕೆಲವು ಅಸ್ತಿತ್ವದಲ್ಲಿವೆ ಮತ್ತು ಕೆಲವನ್ನು (ಬೇರು ಸಹಿತ) ಕೀಳಲಾಗಿದೆ.
Kannada Translation - Hamza Buturನಾವು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಅವರಿಗೇ ಅನ್ಯಾಯ ಮಾಡಿದರು. ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಾಗ, ಅವರು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಅವರ ದೇವರುಗಳಲ್ಲಿ ಯಾರೂ ಕೂಡ ಅವರಿಗೆ ಸ್ವಲ್ಪವೂ ಪ್ರಯೋಜನಕ್ಕೆ ಬರಲಿಲ್ಲ. ಅವರು (ಆ ದೇವರುಗಳು) ಅವರಿಗೆ ನಷ್ಟವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸಿ ಕೊಡುತ್ತಿರಲಿಲ್ಲ.
Kannada Translation - Hamza Buturಅಕ್ರಮವೆಸಗಿದ ಊರುಗಳನ್ನು ಹಿಡಿಯುವಾಗ ನಿಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಇರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ಯಾತನೆಯಿಂದ ಕೂಡಿದ ಬಲಿಷ್ಠ ಹಿಡಿತವಾಗಿದೆ.
Kannada Translation - Hamza Buturಪರಲೋಕದ ಶಿಕ್ಷೆಯನ್ನು ಭಯಪಡುವವರಿಗೆ ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಅದು ಮನುಷ್ಯರೆಲ್ಲರನ್ನೂ ಒಟ್ಟುಗೂಡಿಸುವ ದಿನವಾಗಿದೆ. ಅದು ಎಲ್ಲರೂ ಉಪಸ್ಥಿತರಾಗಿರುವ ದಿನವಾಗಿದೆ.
Kannada Translation - Hamza Buturಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ[1] ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು.[2] ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಬಯಸುವುದನ್ನು ಕಾರ್ಯರೂಪಕ್ಕೆ ತರುತ್ತಾನೆ.
Kannada Translation - Hamza Buturಅದೃಷ್ಟವಂತರು ಯಾರೋ—ಅವರು ಸ್ವರ್ಗದಲ್ಲಿರುತ್ತಾರೆ. ಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು.[1] ಇದು ಅಂತ್ಯವಿಲ್ಲದ ಕೊಡುಗೆಯಾಗಿದೆ.
Kannada Translation - Hamza Buturಇವರು ಆರಾಧಿಸುತ್ತಿರುವ ದೇವರುಗಳ ಬಗ್ಗೆ (ಅವು ಸುಳ್ಳು ಎಂಬ ವಿಷಯದಲ್ಲಿ) ನಿಮಗೆ ಯಾವುದೇ ಸಂಶಯುಂಟಾಗದಿರಲಿ. ಇವರ ಪೂರ್ವಜರು ಹಿಂದೆ ಆರಾಧಿಸುತ್ತಿದ್ದ ರೀತಿಯಲ್ಲೇ ಇವರೂ ಆರಾಧಿಸುತ್ತಿದ್ದಾರೆ. ನಿಶ್ಚಯವಾಗಿಯೂ ನಾವು ಅವರ ಪಾಲನ್ನು ಯಾವುದೇ ಕಡಿತ ಮಾಡದೆ ಅವರಿಗೆ ಪೂರ್ಣವಾಗಿ ನೀಡುವೆವು.
Kannada Translation - Hamza Buturನಿಶ್ಚಯವಾಗಿಯೂ ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಆದರೆ ಅವರು ಅದರಲ್ಲಿ ಭಿನ್ನಮತ ತಳೆದರು. ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಮಾತು ಮೊದಲೇ ಇಲ್ಲದಿರುತ್ತಿದ್ದರೆ ಅವರ ನಡುವೆ ಈಗಾಗಲೇ ತೀರ್ಪು ನೀಡಲಾಗುತ್ತಿತ್ತು. ನಿಶ್ಚಯವಾಗಿಯೂ ಅವರಿಗೆ ಇದರ (ಕುರ್ಆನಿನ) ವಿಷಯದಲ್ಲಿ ಗೊಂದಲಪೂರ್ಣ ಸಂಶಯಗಳಿವೆ.
Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವರಲ್ಲಿ ಪ್ರತಿಯೊಬ್ಬರಿಗೂ ಅವರ ಕರ್ಮಗಳ ಪೂರ್ಣ ಪ್ರತಿಫಲವನ್ನು ನೀಡುವನು. ನಿಶ್ಚಯವಾಗಿಯೂ ಅವರು ಮಾಡುವ ಕರ್ಮಗಳ ಬಗ್ಗೆ ಅವನು ಸೂಕ್ಷ್ಮವಾಗಿ ತಿಳಿದವನಾಗಿದ್ದಾನೆ.
Kannada Translation - Hamza Buturಆದ್ದರಿಂದ ನಿಮಗೆ ಆದೇಶಿಸಲಾದಂತೆ ನೀವು ಮತ್ತು ನಿಮ್ಮ ಜೊತೆಗೆ (ಅಲ್ಲಾಹನ ಕಡೆಗೆ) ತಿರುಗಿದವರು ನೇರವಾಗಿ ನಿಲ್ಲಿರಿ. ನೀವು ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ಅವನು ನೋಡುತ್ತಿದ್ದಾನೆ.
Kannada Translation - Hamza Buturನೀವು ಅಕ್ರಮಿಗಳ ಕಡೆಗೆ ವಾಲಬೇಡಿ. ಹಾಗೇನಾದರೂ ಆದರೆ ನರಕಾಗ್ನಿಯು ನಿಮ್ಮನ್ನು ಸ್ಪರ್ಶಿಸಬಹುದು ಮತ್ತು ಅಲ್ಲಾಹನ ಹೊರತು ನಿಮಗೆ ಯಾವುದೇ ರಕ್ಷಕರೂ ಇರಲಾರರು. ನಂತರ ನಿಮಗೆ ಯಾವುದೇ ಸಹಾಯ ಕೂಡ ದೊರೆಯಲಾರದು.
Kannada Translation - Hamza Buturಹಗಲಿನ ಎರಡು ತುದಿಗಳಲ್ಲಿ ಮತ್ತು ರಾತ್ರಿಯ ಕೆಲವು ಸಮಯಗಳಲ್ಲಿ ನಮಾಝನ್ನು ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ಸತ್ಕರ್ಮಗಳು ದುಷ್ಕರ್ಮಗಳನ್ನು ಅಳಿಸುತ್ತವೆ. ಇದು ಉಪದೇಶ ಸ್ವೀಕರಿಸುವವರಿಗೆ ಒಂದು ಉಪದೇಶವಾಗಿದೆ.
Kannada Translation - Hamza Buturನಿಮಗಿಂತ ಮೊದಲಿನ ತಲೆಮಾರುಗಳಲ್ಲಿ ಭೂಮಿಯಲ್ಲಿ ಕಿಡಿಗೇಡಿತನ ಮಾಡುವುದನ್ನು ವಿರೋಧಿಸುವ ಒಳಿತಿನ ಜನರೇಕೆ ಇರಲಿಲ್ಲ? ಅವರ ಪೈಕಿ ನಾವು ಪಾರು ಮಾಡಿದ ಕೆಲವರ ಹೊರತು. ಅಕ್ರಮಿಗಳು ನಾವು ಅವರಿಗೆ ಒದಗಿಸಿದ ಸುಖಭೋಗಗಳನ್ನು ಹಿಂಬಾಲಿಸಿದರು. ಅವರು ಅಪರಾಧಿಗಳಾಗಿದ್ದರು.
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸುತ್ತಿದ್ದರೆ ಮನುಕುಲವನ್ನು ಒಂದೇ ಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವರು ಭಿನ್ನಮತ ತಳೆಯುತ್ತಲೇ ಇರುತ್ತಾರೆ.
Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಗೆ ಪಾತ್ರರಾದವರ ಹೊರತು. ಅವನು ಅವರನ್ನು ಅದಕ್ಕಾಗಿಯೇ ಸೃಷ್ಟಿಸಿದ್ದಾನೆ. “ಜಿನ್ನ್ ಮತ್ತು ಮನುಷ್ಯರಿಂದ ನಾನು ನರಕವನ್ನು ತುಂಬಿಸುವೆನು” ಎಂಬ ನಿಮ್ಮ ಪರಿಪಾಲಕನ (ಅಲ್ಲಾಹನ) ಮಾತು ನೆರವೇರಿದೆ.
Kannada Translation - Hamza Buturಸಂದೇಶವಾಹಕರುಗಳ ಎಲ್ಲಾ ಸಮಾಚಾರಗಳನ್ನು ನಾವು ನಿಮಗೆ ತಿಳಿಸಿಕೊಡುವೆವು—ಅದರ ಮೂಲಕ ತಮ್ಮ ಹೃದಯವನ್ನು ದೃಢಗೊಳಿಸುವುದಕ್ಕಾಗಿ. ಇದರಲ್ಲಿಯೂ (ಈ ಅಧ್ಯಾಯದಲ್ಲಿಯೂ) ನಿಮಗೆ ಸತ್ಯವು ತಲುಪಿದೆ. ಅದು ಸತ್ಯವಿಶ್ವಾಸಿಗಳಿಗೆ ಉಪದೇಶ ಮತ್ತು ಬೋಧನೆಯಾಗಿದೆ.
Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಅದೃಶ್ಯ ಜ್ಞಾನಗಳು ಅಲ್ಲಾಹನಿಗೆ ಸೇರಿದ್ದು. ವಿಷಯಗಳೆಲ್ಲವನ್ನು ಅವನ ಬಳಿಗೇ ಮರಳಿಸಲಾಗುತ್ತದೆ. ಆದ್ದರಿಂದ ಅವನನ್ನು ಆರಾಧಿಸಿ ಮತ್ತು ಅವನಲ್ಲಿ ಭರವಸೆಯಿಡಿ. ನೀವು ಮಾಡುವ ಕರ್ಮಗಳ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ನಿರ್ಲಕ್ಷ್ಯನಲ್ಲ.