أَفَمَن كَانَ عَلَىٰ بَيِّنَةٍ مِّن رَّبِّهِۦ وَيَتْلُوهُ شَاهِدٌ مِّنْهُ وَمِن قَبْلِهِۦ كِتَٰبُ مُوسَىٰٓ إِمَامًا وَرَحْمَةً أُو۟لَٰٓئِكَ يُؤْمِنُونَ بِهِۦ وَمَن يَكْفُرْ بِهِۦ مِنَ ٱلْأَحْزَابِ فَٱلنَّارُ مَوْعِدُهُۥ فَلَا تَكُ فِى مِرْيَةٍ مِّنْهُ إِنَّهُ ٱلْحَقُّ مِن رَّبِّكَ وَلَٰكِنَّ أَكْثَرَ ٱلنَّاسِ لَا يُؤْمِنُونَ
Kannada Translation - Hamza Buturಒಬ್ಬ ವ್ಯಕ್ತಿ ತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಪುರಾವೆಯ ಆಧಾರದಲ್ಲಿದ್ದಾನೆ.[1] ಅದರ ಹಿಂದೆ ಇನ್ನೊಂದು ಸಾಕ್ಷಿಯಿದೆ.[2] ಇದಕ್ಕೆ ಮೊದಲು ಮಾರ್ಗದರ್ಶಿ ಮತ್ತು ದಯೆಯಾಗಿದ್ದ ಮೂಸಾರ ಗ್ರಂಥವು ಕೂಡ ಆ ಸಾಕ್ಷಿಯನ್ನು ಬೆಂಬಲಿಸುತ್ತದೆ.[3] ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ. ವಿವಿಧ ಪಂಗಡಗಳಲ್ಲಿ ಯಾರು ಅದನ್ನು ನಿಷೇಧಿಸುತ್ತಾರೋ ಅವರಿಗೆ ವಾಗ್ದಾನ ಮಾಡಲಾದ ಸ್ಥಳವು ನರಕಾಗ್ನಿಯಾಗಿದೆ. ಆದ್ದರಿಂದ ನೀವು ಅದರ (ಕುರ್ಆನ್ನ) ಬಗ್ಗೆ ಯಾವುದೇ ಸಂಶಯವನ್ನಿಟ್ಟುಕೊಳ್ಳಬೇಡಿ. ನಿಶ್ಚಯವಾಗಿಯೂ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.