قَالُوا۟ يَٰلُوطُ إِنَّا رُسُلُ رَبِّكَ لَن يَصِلُوٓا۟ إِلَيْكَ فَأَسْرِ بِأَهْلِكَ بِقِطْعٍ مِّنَ ٱلَّيْلِ وَلَا يَلْتَفِتْ مِنكُمْ أَحَدٌ إِلَّا ٱمْرَأَتَكَ إِنَّهُۥ مُصِيبُهَا مَآ أَصَابَهُمْ إِنَّ مَوْعِدَهُمُ ٱلصُّبْحُ أَلَيْسَ ٱلصُّبْحُ بِقَرِيبٍ
Kannada Translation - Hamza Buturಅವರು (ದೂತರು) ಹೇಳಿದರು: “ಓ ಲೂತ್! ನಿಶ್ಚಯವಾಗಿಯೂ ನಾವು ನಿಮ್ಮ ಪರಿಪಾಲಕನ (ಅಲ್ಲಾಹನ) ದೂತರಾಗಿದ್ದೇವೆ. ನಿಮ್ಮ ಬಳಿಗೆ ತಲುಪಲು ಅವರಿಗೆ ಸಾಧ್ಯವಿಲ್ಲ. ಆದ್ದರಿಂದ ರಾತ್ರಿಯ ಒಂದು ಭಾಗದಲ್ಲಿ ನೀವು ನಿಮ್ಮ ಕುಟುಂಬ ಸಮೇತ ಇಲ್ಲಿಂದ ಹೊರಟುಹೋಗಿ. ನಿಮ್ಮಲ್ಲಿ ಯಾರೂ ಹಿಂದಿರುಗಿ ನೋಡದಿರಲಿ. ಆದರೆ ನಿಮ್ಮ ಪತ್ನಿಯನ್ನು ಕರೆದೊಯ್ಯಬೇಡಿ. ನಿಶ್ಚಯವಾಗಿಯೂ ಅವರಿಗೇನು ಸಂಭವಿಸುತ್ತದೋ ಅದು ಅವಳಿಗೂ ಸಂಭವಿಸುತ್ತದೆ. ನಿಶ್ಚಯವಾಗಿಯೂ ಅವರಿಗೆ ನೀಡಲಾದ ನಿಗದಿತ ಸಮಯವು ಪ್ರಭಾತವಾಗಿದೆ. ಪ್ರಭಾತವು ಹತ್ತಿರದಲ್ಲೇ ಇದೆಯಲ್ಲವೇ?”