فَلَمَّا ٱسْتَيْـَٔسُوا۟ مِنْهُ خَلَصُوا۟ نَجِيًّا قَالَ كَبِيرُهُمْ أَلَمْ تَعْلَمُوٓا۟ أَنَّ أَبَاكُمْ قَدْ أَخَذَ عَلَيْكُم مَّوْثِقًا مِّنَ ٱللَّهِ وَمِن قَبْلُ مَا فَرَّطتُمْ فِى يُوسُفَ فَلَنْ أَبْرَحَ ٱلْأَرْضَ حَتَّىٰ يَأْذَنَ لِىٓ أَبِىٓ أَوْ يَحْكُمَ ٱللَّهُ لِى وَهُوَ خَيْرُ ٱلْحَٰكِمِينَ
Kannada Translation - Hamza Buturನಂತರ ಅವರು ತಮ್ಮನ ಬಗ್ಗೆ ನಿರಾಶರಾದಾಗ, ಏಕಾಂತ ಸ್ಥಳದಲ್ಲಿ ಕುಳಿತು ಸಮಾಲೋಚನೆ ಮಾಡಿದರು. ಅವರಲ್ಲಿ ಹಿರಿಯವನು ಹೇಳಿದನು: “ನಿಮ್ಮ ತಂದೆ ನಿಮ್ಮಿಂದ ಅಲ್ಲಾಹನ ಹೆಸರಿನಲ್ಲಿ ಖಾತ್ರಿ ಪಡೆದದ್ದು ಮತ್ತು ಇದಕ್ಕೆ ಮೊದಲು ನೀವು ಯೂಸುಫರ ವಿಷಯದಲ್ಲಿ ತಪ್ಪೆಸಗಿದ್ದು ನಿಮಗೆ ತಿಳಿದಿಲ್ಲವೇ? ಆದ್ದರಿಂದ ನನ್ನ ತಂದೆ ನನಗೆ ಅಪ್ಪಣೆ ನೀಡುವ ತನಕ ಅಥವಾ ಅಲ್ಲಾಹು ನನ್ನ ವಿಷಯದಲ್ಲಿ ತೀರ್ಪು ನೀಡುವ ತನಕ ನಾನು ಈ ಸ್ಥಳದಿಂದ ಕದಲುವುದೇ ಇಲ್ಲ. ತೀರ್ಪು ನೀಡುವುದರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ.