لِلَّذِينَ ٱسْتَجَابُوا۟ لِرَبِّهِمُ ٱلْحُسْنَىٰ وَٱلَّذِينَ لَمْ يَسْتَجِيبُوا۟ لَهُۥ لَوْ أَنَّ لَهُم مَّا فِى ٱلْأَرْضِ جَمِيعًا وَمِثْلَهُۥ مَعَهُۥ لَٱفْتَدَوْا۟ بِهِۦٓ أُو۟لَٰٓئِكَ لَهُمْ سُوٓءُ ٱلْحِسَابِ وَمَأْوَىٰهُمْ جَهَنَّمُ وَبِئْسَ ٱلْمِهَادُ
Kannada Translation - Hamza Buturತಮ್ಮ ಪರಿಪಾಲಕನ (ಅಲ್ಲಾಹನ) ಕರೆಗೆ ಉತ್ತರ ನೀಡಿದವರಿಗೆ ಅತಿಶ್ರೇಷ್ಠ ಪ್ರತಿಫಲವಿದೆ. ಅವನ ಕರೆಗೆ ಉತ್ತರ ಕೊಡದವರು ಯಾರೋ—ಅವರ ವಶದಲ್ಲಿ ಭೂಮಿಯಲ್ಲಿರುವ ಎಲ್ಲವೂ ಮತ್ತು ಅದರೊಂದಿಗೆ ಅಷ್ಟೇ ಬೇರೆಯೂ ಇದ್ದರೂ ಅವರು (ತಮ್ಮ ರಕ್ಷಣೆಗಾಗಿ) ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು! ಅವರಿಗೇ ಅತಿಕೆಟ್ಟ ವಿಚಾರಣೆಯಿರುವುದು. ಅವರ ವಾಸಸ್ಥಳವು ನರಕವಾಗಿದೆ. ಅದು ಬಹಳ ನಿಕೃಷ್ಟ ವಾಸ್ತವ್ಯವಾಗಿದೆ.