caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa الإسراء

111 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 50

بِسْمِ ٱللَّهِ ٱلرَّحْمَٰنِ ٱلرَّحِيمِ سُبْحَٰنَ ٱلَّذِىٓ أَسْرَىٰ بِعَبْدِهِۦ لَيْلًا مِّنَ ٱلْمَسْجِدِ ٱلْحَرَامِ إِلَى ٱلْمَسْجِدِ ٱلْأَقْصَا ٱلَّذِى بَٰرَكْنَا حَوْلَهُۥ لِنُرِيَهُۥ مِنْ ءَايَٰتِنَآ إِنَّهُۥ هُوَ ٱلسَّمِيعُ ٱلْبَصِيرُ

Kannada Translation - Hamza Buturತನ್ನ ದಾಸನನ್ನು (ಪ್ರವಾದಿಯನ್ನು) ಒಂದೇ ರಾತ್ರಿಯಲ್ಲಿ ಮಸ್ಜಿದ್ ಹರಾಮ್‌ನಿಂದ (ಮಕ್ಕಾ) ಮಸ್ಜಿದ್ ಅಕ್ಸಾಗೆ (ಜೆರೂಸಲೇಂ) ನಿಶಾಯಾನ ಮಾಡಿಸಿದವನು ಪರಮ ಪರಿಶುದ್ಧನು. ಅದರ (ಮಸ್ಜಿದ್ ಅಕ್ಸಾದ) ಪರಿಸರವನ್ನು ನಾವು ಸಮೃದ್ಧಗೊಳಿಸಿದ್ದೇವೆ. ಇದು ಅವರಿಗೆ ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿಕೊಡುವುದಕ್ಕಾಗಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَءَاتَيْنَا مُوسَى ٱلْكِتَٰبَ وَجَعَلْنَٰهُ هُدًى لِّبَنِىٓ إِسْرَٰٓءِيلَ أَلَّا تَتَّخِذُوا۟ مِن دُونِى وَكِيلًا

Kannada Translation - Hamza Buturನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅದನ್ನು ನಾವು ಇಸ್ರಾಯೇಲ್ ಮಕ್ಕಳಿಗೆ ಸನ್ಮಾರ್ಗದರ್ಶಿಯಾಗಿ ಮಾಡಿದೆವು. “ನನ್ನನ್ನು ಬಿಟ್ಟು ಬೇರೆ ಯಾರನ್ನೂ ನೀವು ಕಾರ್ಯನಿರ್ವಾಹಕರನ್ನಾಗಿ ಸ್ವೀಕರಿಸಬೇಡಿ” ಎಂದು (ಅದರಲ್ಲಿ ಆದೇಶಿಸಲಾಗಿತ್ತು).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذُرِّيَّةَ مَنْ حَمَلْنَا مَعَ نُوحٍ إِنَّهُۥ كَانَ عَبْدًا شَكُورًا

Kannada Translation - Hamza Buturನಾವು ನೂಹರೊಡನೆ ನಾವೆಯಲ್ಲಿ ಒಯ್ದವರ ಸಂತತಿಗಳೇ! ನಿಶ್ಚಯವಾಗಿಯೂ ಅವರು (ನೂಹ್) ಅತ್ಯಂತ ಕೃತಜ್ಞ ದಾಸರಾಗಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَضَيْنَآ إِلَىٰ بَنِىٓ إِسْرَٰٓءِيلَ فِى ٱلْكِتَٰبِ لَتُفْسِدُنَّ فِى ٱلْأَرْضِ مَرَّتَيْنِ وَلَتَعْلُنَّ عُلُوًّا كَبِيرًا

Kannada Translation - Hamza Buturನಾವು ಗ್ರಂಥದಲ್ಲಿ ಇಸ್ರಾಯೇಲ್ ಮಕ್ಕಳಿಗೆ, “ನೀವು ಖಂಡಿತ ಭೂಮಿಯಲ್ಲಿ ಎರಡು ಬಾರಿ ಕಿಡಿಗೇಡಿತನ ಮಾಡುತ್ತೀರಿ ಮತ್ತು ಅತ್ಯಧಿಕ ದರ್ಪದಿಂದ ಮೆರೆಯುತ್ತೀರಿ” ಎಂದು ತೀರ್ಪು ನೀಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَإِذَا جَآءَ وَعْدُ أُولَىٰهُمَا بَعَثْنَا عَلَيْكُمْ عِبَادًا لَّنَآ أُو۟لِى بَأْسٍ شَدِيدٍ فَجَاسُوا۟ خِلَٰلَ ٱلدِّيَارِ وَكَانَ وَعْدًا مَّفْعُولًا

Kannada Translation - Hamza Buturಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ رَدَدْنَا لَكُمُ ٱلْكَرَّةَ عَلَيْهِمْ وَأَمْدَدْنَٰكُم بِأَمْوَٰلٍ وَبَنِينَ وَجَعَلْنَٰكُمْ أَكْثَرَ نَفِيرًا

Kannada Translation - Hamza Buturನಂತರ ನಾವು ನಿಮಗೆ ಅವರ ವಿರುದ್ಧ ವಿಜಯವನ್ನು ಮರಳಿಸಿದೆವು. ಸಂಪತ್ತು ಮತ್ತು ಸಂತಾನಗಳ ಮೂಲಕ ನಿಮಗೆ ಬಲವನ್ನು ನೀಡಿದೆವು. ನಿಮ್ಮನ್ನು ಅತ್ಯಧಿಕ ಜನಬಲವುಳ್ಳವರನ್ನಾಗಿ ಮಾಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنْ أَحْسَنتُمْ أَحْسَنتُمْ لِأَنفُسِكُمْ وَإِنْ أَسَأْتُمْ فَلَهَا فَإِذَا جَآءَ وَعْدُ ٱلْـَٔاخِرَةِ لِيَسُـۥٓـُٔوا۟ وُجُوهَكُمْ وَلِيَدْخُلُوا۟ ٱلْمَسْجِدَ كَمَا دَخَلُوهُ أَوَّلَ مَرَّةٍ وَلِيُتَبِّرُوا۟ مَا عَلَوْا۟ تَتْبِيرًا

Kannada Translation - Hamza Buturನೀವು ಒಳಿತು ಮಾಡಿದರೆ ಅದು ನಿಮ್ಮ ಒಳಿತಿಗೇ ಆಗಿದೆ. ನೀವು ಕೆಡುಕು ಮಾಡಿದರೆ ಅದರ ಪರಿಣಾಮವನ್ನು ನೀವೇ ಅನುಭವಿಸುತ್ತೀರಿ. ಎರಡನೇ ವಾಗ್ದಾನದ ಸಮಯವು ಬಂದಾಗ, ನಿಮ್ಮ ಮುಖಗಳನ್ನು ವಿರೂಪಗೊಳಿಸಲು ಮತ್ತು ಅವರು ಪ್ರಥಮ ಬಾರಿ ಮಸೀದಿಯನ್ನು ಪ್ರವೇಶಿಸಿದಂತೆ ಎರಡನೇ ಬಾರಿಯೂ ಪ್ರವೇಶಿಸಲು ಹಾಗೂ ನಿಮ್ಮ ಅಧಿಕಾರದಲ್ಲಿರುವ ಎಲ್ಲವನ್ನೂ ಸರ್ವನಾಶ ಮಾಡಲು (ನಾವು ನಮ್ಮ ಬೇರೆ ದಾಸರನ್ನು ಕಳುಹಿಸಿದೆವು).[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

عَسَىٰ رَبُّكُمْ أَن يَرْحَمَكُمْ وَإِنْ عُدتُّمْ عُدْنَا وَجَعَلْنَا جَهَنَّمَ لِلْكَٰفِرِينَ حَصِيرًا

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ದಯೆ ತೋರಲೂಬಹುದು. ನೀವು ಅದನ್ನೇ ಪುನರಾವರ್ತಿಸಿದರೆ ನಾವು ಕೂಡ ಪುನರಾವರ್ತಿಸುವೆವು. ನಾವು ಸತ್ಯನಿಷೇಧಿಗಳಿಗೆ ನರಕಾಗ್ನಿಯನ್ನು ಕಾರಾಗೃಹವನ್ನಾಗಿ ಮಾಡಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ هَٰذَا ٱلْقُرْءَانَ يَهْدِى لِلَّتِى هِىَ أَقْوَمُ وَيُبَشِّرُ ٱلْمُؤْمِنِينَ ٱلَّذِينَ يَعْمَلُونَ ٱلصَّٰلِحَٰتِ أَنَّ لَهُمْ أَجْرًا كَبِيرًا

Kannada Translation - Hamza Buturನಿಶ್ಚಯವಾಗಿಯೂ, ಈ ಕುರ್‌ಆನ್ ಅತ್ಯಂತ ನೇರವಾದ ಮಾರ್ಗವನ್ನು ತೋರಿಸುತ್ತದೆ ಮತ್ತು ಸತ್ಕರ್ಮಗಳನ್ನು ಮಾಡುವ ಸತ್ಯವಿಶ್ವಾಸಿಗಳಿಗೆ ಮಹಾ ಪ್ರತಿಫಲವಿದೆಯೆಂಬ ಸುವಾರ್ತೆಯನ್ನು ನೀಡುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّ ٱلَّذِينَ لَا يُؤْمِنُونَ بِٱلْـَٔاخِرَةِ أَعْتَدْنَا لَهُمْ عَذَابًا أَلِيمًا

Kannada Translation - Hamza Buturಪರಲೋಕದಲ್ಲಿ ವಿಶ್ವಾಸವಿಡದವರು ಯಾರೋ—ಅವರಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَدْعُ ٱلْإِنسَٰنُ بِٱلشَّرِّ دُعَآءَهُۥ بِٱلْخَيْرِ وَكَانَ ٱلْإِنسَٰنُ عَجُولًا

Kannada Translation - Hamza Buturಮಾನವನು ಒಳಿತಿಗಾಗಿ ಪ್ರಾರ್ಥಿಸುವಂತೆಯೇ ಕೆಡುಕಿಗಾಗಿಯೂ ಪ್ರಾರ್ಥಿಸುತ್ತಾನೆ. ಮಾನವನು ಬಹಳ ಆತುರ ಜೀವಿಯಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَجَعَلْنَا ٱلَّيْلَ وَٱلنَّهَارَ ءَايَتَيْنِ فَمَحَوْنَآ ءَايَةَ ٱلَّيْلِ وَجَعَلْنَآ ءَايَةَ ٱلنَّهَارِ مُبْصِرَةً لِّتَبْتَغُوا۟ فَضْلًا مِّن رَّبِّكُمْ وَلِتَعْلَمُوا۟ عَدَدَ ٱلسِّنِينَ وَٱلْحِسَابَ وَكُلَّ شَىْءٍ فَصَّلْنَٰهُ تَفْصِيلًا

Kannada Translation - Hamza Buturನಾವು ರಾತ್ರಿ ಮತ್ತು ಹಗಲನ್ನು ಎರಡು ದೃಷ್ಟಾಂತಗಳಾಗಿ ಮಾಡಿದೆವು. ನಾವು ರಾತ್ರಿಯ ದೃಷ್ಟಾಂತವನ್ನು ಮಬ್ಬಾಗಿ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಾನವಾಗಿ ಮಾಡಿದೆವು. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಔದಾರ್ಯವನ್ನು ಅರಸುವುದಕ್ಕಾಗಿ ಮತ್ತು ವರ್ಷಗಳ ಸಂಖ್ಯೆ ಹಾಗೂ ಲೆಕ್ಕವನ್ನು ತಿಳಿಯುವುದಕ್ಕಾಗಿ. ನಾವು ಎಲ್ಲಾ ವಿಷಯಗಳನ್ನೂ ಸ್ಪಷ್ಟವಾಗಿ ವಿವರಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكُلَّ إِنسَٰنٍ أَلْزَمْنَٰهُ طَٰٓئِرَهُۥ فِى عُنُقِهِۦ وَنُخْرِجُ لَهُۥ يَوْمَ ٱلْقِيَٰمَةِ كِتَٰبًا يَلْقَىٰهُ مَنشُورًا

Kannada Translation - Hamza Buturನಾವು ಪ್ರತಿಯೊಬ್ಬ ವ್ಯಕ್ತಿಯ ಶುಭ-ಅಶುಭವನ್ನು ಅವನ ಕೊರಳಿನಲ್ಲಿಯೇ ಬಂಧಿಸಿದ್ದೇವೆ. ಪುನರುತ್ಥಾನ ದಿನದಂದು ನಾವು ಅವನ ಮುಂದೆ ಅವನ ಕರ್ಮಪುಸ್ತಕವನ್ನು ಹಾಜರುಪಡಿಸುವೆವು. ಅವನು ಅದನ್ನು ತೆರೆದಿಟ್ಟ ಸ್ಥಿತಿಯಲ್ಲಿ ಕಾಣುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱقْرَأْ كِتَٰبَكَ كَفَىٰ بِنَفْسِكَ ٱلْيَوْمَ عَلَيْكَ حَسِيبًا

Kannada Translation - Hamza Butur“ತಗೋ! ನಿನ್ನ ಪುಸ್ತಕವನ್ನು ಓದು! ಇವತ್ತು ನಿನ್ನನ್ನು ವಿಚಾರಣೆ ಮಾಡಲು ನೀನೇ ಸಾಕು!” (ಎಂದು ಅವನೊಡನೆ ಹೇಳಲಾಗುವುದು).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَّنِ ٱهْتَدَىٰ فَإِنَّمَا يَهْتَدِى لِنَفْسِهِۦ وَمَن ضَلَّ فَإِنَّمَا يَضِلُّ عَلَيْهَا وَلَا تَزِرُ وَازِرَةٌ وِزْرَ أُخْرَىٰ وَمَا كُنَّا مُعَذِّبِينَ حَتَّىٰ نَبْعَثَ رَسُولًا

Kannada Translation - Hamza Buturಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ಒಬ್ಬ ಸಂದೇಶವಾಹಕರನ್ನು ಕಳುಹಿಸುವ ತನಕ ನಾವು ಯಾರನ್ನೂ ಶಿಕ್ಷಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَآ أَرَدْنَآ أَن نُّهْلِكَ قَرْيَةً أَمَرْنَا مُتْرَفِيهَا فَفَسَقُوا۟ فِيهَا فَحَقَّ عَلَيْهَا ٱلْقَوْلُ فَدَمَّرْنَٰهَا تَدْمِيرًا

Kannada Translation - Hamza Buturನಾವು ಒಂದು ಊರನ್ನು ನಾಶ ಮಾಡಲು ಬಯಸಿದರೆ, ಅಲ್ಲಿರುವ ಸಂಪನ್ನರಿಗೆ (ಕೆಲವು) ಆದೇಶಗಳನ್ನು ನೀಡುತ್ತೇವೆ. ಅವರು ಅಲ್ಲಿ ದುಷ್ಕೃತ್ಯಗಳನ್ನು ಮಾಡತೊಡಗುತ್ತಾರೆ. ಆಗ ಅವರ ವಿಷಯದಲ್ಲಿ ಶಿಕ್ಷೆಯ ಮಾತು ಸಾಬೀತಾಗುತ್ತದೆ. ನಂತರ ನಾವು ಅದನ್ನು ಸಂಪೂರ್ಣ ನಾಶ ಮಾಡಿ ಬಿಡುತ್ತೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَمْ أَهْلَكْنَا مِنَ ٱلْقُرُونِ مِنۢ بَعْدِ نُوحٍ وَكَفَىٰ بِرَبِّكَ بِذُنُوبِ عِبَادِهِۦ خَبِيرًۢا بَصِيرًا

Kannada Translation - Hamza Buturನೂಹರ ನಂತರ ನಾವು ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ನಿಮ್ಮ ಪರಿಪಾಲಕನು (ಅಲ್ಲಾಹು) ಅವನ ದಾಸರು ಮಾಡುವ ಪಾಪಗಳ ಬಗ್ಗೆ ಸಾಕಷ್ಟು ಜ್ಞಾನವುಳ್ಳವನಾಗಿದ್ದಾನೆ ಮತ್ತು ಸೂಕ್ಷ್ಮವಾಗಿ ಗಮನಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَّن كَانَ يُرِيدُ ٱلْعَاجِلَةَ عَجَّلْنَا لَهُۥ فِيهَا مَا نَشَآءُ لِمَن نُّرِيدُ ثُمَّ جَعَلْنَا لَهُۥ جَهَنَّمَ يَصْلَىٰهَا مَذْمُومًا مَّدْحُورًا

Kannada Translation - Hamza Buturಯಾರು ಈ ತ್ವರೆಯ ಲೋಕವನ್ನು (ಇಹಲೋಕವನ್ನು) ಮಾತ್ರ ಗುರಿಯಾಗಿಟ್ಟು ಕರ್ಮವೆಸಗುತ್ತಾರೋ, ಅವರಲ್ಲಿ ನಾವು ಬಯಸುವವರಿಗೆ ನಾವು ಇಚ್ಛಿಸುವಷ್ಟನ್ನು ಇಲ್ಲಿಯೇ ತ್ವರಿತವಾಗಿ ನೀಡುವೆವು. ನಂತರ (ಪರಲೋಕದಲ್ಲಿ) ನಾವು ಅವನಿಗೆ ನರಕಾಗ್ನಿಯನ್ನು ನೀಡುವೆವು. ಅವನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಅವಮಾನದೊಂದಿಗೆ ಅದನ್ನು ಪ್ರವೇಶ ಮಾಡುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَنْ أَرَادَ ٱلْـَٔاخِرَةَ وَسَعَىٰ لَهَا سَعْيَهَا وَهُوَ مُؤْمِنٌ فَأُو۟لَٰٓئِكَ كَانَ سَعْيُهُم مَّشْكُورًا

Kannada Translation - Hamza Buturಯಾರು ಪರಲೋಕವನ್ನು ಗುರಿಯಾಗಿಟ್ಟು, ಸತ್ಯವಿಶ್ವಾಸಿಯಾಗಿರುವ ಸ್ಥಿತಿಯಲ್ಲಿ ಅದಕ್ಕಾಗಿ ಕರ್ಮವೆಸಗುತ್ತಾರೋ ಅಂತಹವರ ಕರ್ಮಗಳು ಶ್ಲಾಘನಾರ್ಹವಾಗಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كُلًّا نُّمِدُّ هَٰٓؤُلَآءِ وَهَٰٓؤُلَآءِ مِنْ عَطَآءِ رَبِّكَ وَمَا كَانَ عَطَآءُ رَبِّكَ مَحْظُورًا

Kannada Translation - Hamza Buturನಾವು ಅವರಿಗೂ ಇವರಿಗೂ—ಪ್ರತಿಯೊಬ್ಬರಿಗೂ ನಿಮ್ಮ ಪರಿಪಾಲಕನ (ಅಲ್ಲಾಹನ) ಕೊಡುಗೆಯಿಂದ ನೀಡುತ್ತೇವೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಕೊಡುಗೆಯು ತಡೆಯಲ್ಪಡುವುದಿಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱنظُرْ كَيْفَ فَضَّلْنَا بَعْضَهُمْ عَلَىٰ بَعْضٍ وَلَلْـَٔاخِرَةُ أَكْبَرُ دَرَجَٰتٍ وَأَكْبَرُ تَفْضِيلًا

Kannada Translation - Hamza Buturನಾವು ಅವರಲ್ಲಿ ಕೆಲವರನ್ನು ಇತರ ಕೆಲವರಿಗಿಂತ ಹೇಗೆ ಶ್ರೇಷ್ಠಗೊಳಿಸಿದ್ದೇವೆಂದು ನೋಡಿರಿ. ಪರಲೋಕವು ಸ್ಥಾನಮಾನಗಳಲ್ಲಿ ಅತಿದೊಡ್ಡದಾಗಿದೆ ಮತ್ತು ಶ್ರೇಷ್ಠತೆಯಲ್ಲೂ ಅತಿದೊಡ್ಡದಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّا تَجْعَلْ مَعَ ٱللَّهِ إِلَٰهًا ءَاخَرَ فَتَقْعُدَ مَذْمُومًا مَّخْذُولًا

Kannada Translation - Hamza Buturಅಲ್ಲಾಹನೊಡನೆ ಬೇರೆ ದೇವರನ್ನು ಮಾಡಿಬೇಡಿ. ಹಾಗೇನಾದರೂ ಆದರೆ ನೀವು ಅವಮಾನ ಮತ್ತು ತಿರಸ್ಕಾರಕ್ಕೊಳಗಾಗಿ ಬಿಡುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَضَىٰ رَبُّكَ أَلَّا تَعْبُدُوٓا۟ إِلَّآ إِيَّاهُ وَبِٱلْوَٰلِدَيْنِ إِحْسَٰنًا إِمَّا يَبْلُغَنَّ عِندَكَ ٱلْكِبَرَ أَحَدُهُمَآ أَوْ كِلَاهُمَا فَلَا تَقُل لَّهُمَآ أُفٍّ وَلَا تَنْهَرْهُمَا وَقُل لَّهُمَا قَوْلًا كَرِيمًا

Kannada Translation - Hamza Buturನೀವು ಅಲ್ಲಾಹನ ಹೊರತು ಬೇರೆ ಯಾರನ್ನೂ ಆರಾಧಿಸಬಾರದು ಮತ್ತು ಮಾತಾಪಿತರಿಗೆ ಒಳಿತು ಮಾಡಬೇಕು ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ಆದೇಶಿಸಿದ್ದಾನೆ. ಅವರಲ್ಲೊಬ್ಬರು ಅಥವಾ ಇಬ್ಬರೂ ನಿಮ್ಮ ಉಪಸ್ಥಿತಿಯಲ್ಲಿ ವೃದ್ಧಾಪ್ಯವನ್ನು ತಲುಪಿದ್ದರೆ ಅವರೊಡನೆ “ಛೇ” ಎಂದು ಹೇಳಬೇಡಿ. ಅವರನ್ನು ಗದರಿಸಬೇಡಿ. ಅವರೊಡನೆ ಗೌರವದಿಂದ ಮಾತನಾಡಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱخْفِضْ لَهُمَا جَنَاحَ ٱلذُّلِّ مِنَ ٱلرَّحْمَةِ وَقُل رَّبِّ ٱرْحَمْهُمَا كَمَا رَبَّيَانِى صَغِيرًا

Kannada Translation - Hamza Buturಅವರಿಬ್ಬರ ಮುಂದೆ ದಯೆಯಿಂದ ಕೂಡಿದ ವಿನಯದ ರೆಕ್ಕೆಯನ್ನು ತಗ್ಗಿಸಿ ನಿಲ್ಲಿರಿ. “ನನ್ನ ಪರಿಪಾಲಕನೇ! ಬಾಲ್ಯದಲ್ಲಿ ಇವರು ನನ್ನನ್ನು ಸಾಕಿ ಸಲಹಿದಂತೆ ಇವರಿಗೆ ದಯೆ ತೋರು” ಎಂದು ಪ್ರಾರ್ಥಿಸಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

رَّبُّكُمْ أَعْلَمُ بِمَا فِى نُفُوسِكُمْ إِن تَكُونُوا۟ صَٰلِحِينَ فَإِنَّهُۥ كَانَ لِلْأَوَّٰبِينَ غَفُورًا

Kannada Translation - Hamza Buturನಿಮ್ಮ ಮನಸ್ಸುಗಳಲ್ಲಿ ಏನಿದೆಯೆಂದು ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನೀವು ನೀತಿವಂತರಾಗಿದ್ದರೆ—ಪಶ್ಚಾತ್ತಾಪಪಟ್ಟು ಮರಳುವವರಿಗೆ ಅವನು ಅತ್ಯಧಿಕ ಕ್ಷಮಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَءَاتِ ذَا ٱلْقُرْبَىٰ حَقَّهُۥ وَٱلْمِسْكِينَ وَٱبْنَ ٱلسَّبِيلِ وَلَا تُبَذِّرْ تَبْذِيرًا

Kannada Translation - Hamza Buturಆಪ್ತಸಂಬಂಧಿಕರ, ಬಡವರ ಮತ್ತು ಪ್ರಯಾಣಿಕರ ಹಕ್ಕನ್ನು ಸಂದಾಯ ಮಾಡಿರಿ. ಅನಗತ್ಯವಾಗಿ ಖರ್ಚು ಮಾಡಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلْمُبَذِّرِينَ كَانُوٓا۟ إِخْوَٰنَ ٱلشَّيَٰطِينِ وَكَانَ ٱلشَّيْطَٰنُ لِرَبِّهِۦ كَفُورًا

Kannada Translation - Hamza Buturಅನಗತ್ಯವಾಗಿ ಖರ್ಚು ಮಾಡುವವರು ಶೈತಾನನ ಸಹೋದರರಾಗಿದ್ದಾರೆ. ಶೈತಾನನು ತನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಕೃತಘ್ನನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِمَّا تُعْرِضَنَّ عَنْهُمُ ٱبْتِغَآءَ رَحْمَةٍ مِّن رَّبِّكَ تَرْجُوهَا فَقُل لَّهُمْ قَوْلًا مَّيْسُورًا

Kannada Translation - Hamza Buturನೀವು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿರೀಕ್ಷಿಸುವ ದಯೆಯನ್ನು ಕಾಯುತ್ತಿರುವ ಕಾರಣ, ಅವರಿಂದ ಮುಖ ತಿರುಗಿಸಬೇಕಾಗಿ ಬಂದರೆ, ಅವರೊಡನೆ ಬಹಳ ಮೃದುವಾಗಿ ಮಾತನಾಡುತ್ತಾ ಅದನ್ನು ಮನವರಿಕೆ ಮಾಡಿಕೊಡಿ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَجْعَلْ يَدَكَ مَغْلُولَةً إِلَىٰ عُنُقِكَ وَلَا تَبْسُطْهَا كُلَّ ٱلْبَسْطِ فَتَقْعُدَ مَلُومًا مَّحْسُورًا

Kannada Translation - Hamza Buturನೀವು ನಿಮ್ಮ ಕೈಯನ್ನು ಕೊರಳಿಗೆ ಕಟ್ಟಿದಂತೆ ಇಡಬೇಡಿ. ಅಥವಾ ಅದನ್ನು ಸಂಪೂರ್ಣವಾಗಿ ಬಿಚ್ಚಿಕೊಂಡಂತೆಯೂ ಇಡಬೇಡಿ.[1] ಹಾಗೇನಾದರೂ ಆದರೆ ನೀವು ಅವಮಾನಿತರು ಮತ್ತು ಅಸಹಾಯಕರಾಗಿ ಕೂರಬೇಕಾದೀತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ رَبَّكَ يَبْسُطُ ٱلرِّزْقَ لِمَن يَشَآءُ وَيَقْدِرُ إِنَّهُۥ كَانَ بِعِبَادِهِۦ خَبِيرًۢا بَصِيرًا

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಇಕ್ಕಟ್ಟುಗೊಳಿಸುತ್ತಾನೆ. ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَقْتُلُوٓا۟ أَوْلَٰدَكُمْ خَشْيَةَ إِمْلَٰقٍ نَّحْنُ نَرْزُقُهُمْ وَإِيَّاكُمْ إِنَّ قَتْلَهُمْ كَانَ خِطْـًٔا كَبِيرًا

Kannada Translation - Hamza Buturಬಡತನವನ್ನು ಹೆದರಿ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ನಾವೇ ಅವರಿಗೂ, ನಿಮಗೂ ಆಹಾರ ಒದಗಿಸುವವರು. ಅವರನ್ನು ಕೊಲ್ಲುವುದು ಖಂಡಿತವಾಗಿಯೂ ಮಹಾ ಅಪರಾಧವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَقْرَبُوا۟ ٱلزِّنَىٰٓ إِنَّهُۥ كَانَ فَٰحِشَةً وَسَآءَ سَبِيلًا

Kannada Translation - Hamza Buturನೀವು ವ್ಯಭಿಚಾರದ ಹತ್ತಿರಕ್ಕೂ ಸುಳಿಯಬೇಡಿ. ನಿಶ್ಚಯವಾಗಿಯೂ ಅದು ಅಶ್ಲೀಲ ಕೃತ್ಯ ಮತ್ತು ಕೆಟ್ಟಮಾರ್ಗವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَقْتُلُوا۟ ٱلنَّفْسَ ٱلَّتِى حَرَّمَ ٱللَّهُ إِلَّا بِٱلْحَقِّ وَمَن قُتِلَ مَظْلُومًا فَقَدْ جَعَلْنَا لِوَلِيِّهِۦ سُلْطَٰنًا فَلَا يُسْرِف فِّى ٱلْقَتْلِ إِنَّهُۥ كَانَ مَنصُورًا

Kannada Translation - Hamza Buturಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲಬೇಡಿ. ಯಾರಾದರೂ ಅನ್ಯಾಯವಾಗಿ ಕೊಲೆಯಾದರೆ ಅವನ ವಾರಸುದಾರರಿಗೆ ನಾವು (ಪ್ರತೀಕಾರ ಪಡೆಯುವ) ಅಧಿಕಾರವನ್ನು ನೀಡಿದ್ದೇವೆ. ಆದರೆ ಕೊಲೆ ಮಾಡುವಾಗ ಅವನು ಎಲ್ಲೆ ಮೀರಬಾರದು.[1] ನಿಶ್ಚಯವಾಗಿಯೂ ಅವನಿಗೆ ಸಹಾಯ ಮಾಡಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَقْرَبُوا۟ مَالَ ٱلْيَتِيمِ إِلَّا بِٱلَّتِى هِىَ أَحْسَنُ حَتَّىٰ يَبْلُغَ أَشُدَّهُۥ وَأَوْفُوا۟ بِٱلْعَهْدِ إِنَّ ٱلْعَهْدَ كَانَ مَسْـُٔولًا

Kannada Translation - Hamza Buturಅನಾಥರು ಪ್ರೌಢರಾಗುವ ತನಕ ಅವರ ಆಸ್ತಿಯನ್ನು ಒಳಿತು ಮಾಡುವ ಉದ್ದೇಶದಿಂದಲ್ಲದೆ ಮುಟ್ಟಬೇಡಿ. ಕರಾರುಗಳನ್ನು ನೆರವೇರಿಸಿರಿ. ನಿಶ್ಚಯವಾಗಿಯೂ ಕರಾರಿನ ಬಗ್ಗೆ ನಿಮ್ಮೊಡನೆ ಪ್ರಶ್ನಿಸಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَوْفُوا۟ ٱلْكَيْلَ إِذَا كِلْتُمْ وَزِنُوا۟ بِٱلْقِسْطَاسِ ٱلْمُسْتَقِيمِ ذَٰلِكَ خَيْرٌ وَأَحْسَنُ تَأْوِيلًا

Kannada Translation - Hamza Buturನೀವು ಅಳೆದುಕೊಡುವಾಗ ಪೂರ್ಣವಾಗಿ ಅಳೆದು ಕೊಡಿ ಮತ್ತು ಸರಿಯಾದ ತಕ್ಕಡಿಯಿಂದ ತೂಕ ಮಾಡಿ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَقْفُ مَا لَيْسَ لَكَ بِهِۦ عِلْمٌ إِنَّ ٱلسَّمْعَ وَٱلْبَصَرَ وَٱلْفُؤَادَ كُلُّ أُو۟لَٰٓئِكَ كَانَ عَنْهُ مَسْـُٔولًا

Kannada Translation - Hamza Buturನಿಮಗೆ ಅರಿವಿಲ್ಲದ ಯಾವುದನ್ನೂ ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಕಿವಿ, ಕಣ್ಣು ಮತ್ತು ಹೃದಯಗಳೆಲ್ಲವೂ ವಿಚಾರಣೆಗೆ ಒಳಪಡುತ್ತವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَمْشِ فِى ٱلْأَرْضِ مَرَحًا إِنَّكَ لَن تَخْرِقَ ٱلْأَرْضَ وَلَن تَبْلُغَ ٱلْجِبَالَ طُولًا

Kannada Translation - Hamza Buturಭೂಮಿಯಲ್ಲಿ ದರ್ಪದಿಂದ ನಡೆಯಬೇಡಿ. ಭೂಮಿಯನ್ನು ಸೀಳಲು ಅಥವಾ ಎತ್ತರದಲ್ಲಿ ಪರ್ವತವನ್ನು ತಲುಪಲು ನಿಮಗೆ ಖಂಡಿತ ಸಾಧ್ಯವಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كُلُّ ذَٰلِكَ كَانَ سَيِّئُهُۥ عِندَ رَبِّكَ مَكْرُوهًا

Kannada Translation - Hamza Buturಇವೆಲ್ಲಾ ಕರ್ಮಗಳ ಕೆಡುಕುಗಳು ನಿಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅನಿಷ್ಟಕರವಾಗಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ مِمَّآ أَوْحَىٰٓ إِلَيْكَ رَبُّكَ مِنَ ٱلْحِكْمَةِ وَلَا تَجْعَلْ مَعَ ٱللَّهِ إِلَٰهًا ءَاخَرَ فَتُلْقَىٰ فِى جَهَنَّمَ مَلُومًا مَّدْحُورًا

Kannada Translation - Hamza Buturಇವೆಲ್ಲವೂ ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ವಿವೇಕದೊಂದಿಗೆ ಅವತೀರ್ಣಗೊಳಿಸಿದ ದೇವವಾಣಿಯಲ್ಲಿ ಸೇರಿದ್ದಾಗಿವೆ. ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಮಾಡಬೇಡಿ. ಹಾಗೇನಾದರೂ ಆದರೆ ಆಕ್ಷೇಪಾರ್ಹ ಮತ್ತು ಬಹಿಷ್ಕೃತ ಸ್ಥಿತಿಯಲ್ಲಿ ನಿಮ್ಮನ್ನು ನರಕಕ್ಕೆ ಎಸೆಯಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَأَصْفَىٰكُمْ رَبُّكُم بِٱلْبَنِينَ وَٱتَّخَذَ مِنَ ٱلْمَلَٰٓئِكَةِ إِنَٰثًا إِنَّكُمْ لَتَقُولُونَ قَوْلًا عَظِيمًا

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಗಂಡುಮಕ್ಕಳನ್ನು ಆಯ್ಕೆ ಮಾಡಿ, ತನಗೋಸ್ಕರ ದೇವದೂತರುಗಳನ್ನು ಹೆಣ್ಣುಮಕ್ಕಳಾಗಿ ಸ್ವೀಕರಿಸಿಕೊಂಡನೇ? ನಿಜಕ್ಕೂ ನೀವು ಬಹಳ ಗಂಭೀರ ಮಾತನ್ನು ಹೇಳುತ್ತಿದ್ದೀರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ صَرَّفْنَا فِى هَٰذَا ٱلْقُرْءَانِ لِيَذَّكَّرُوا۟ وَمَا يَزِيدُهُمْ إِلَّا نُفُورًا

Kannada Translation - Hamza Buturನಾವು ಈ ಕುರ್‌ಆನ್‍ನಲ್ಲಿ (ಎಲ್ಲವನ್ನೂ) ನಾನಾ ವಿಧಗಳಲ್ಲಿ ವಿವರಿಸಿದ್ದೇವೆ. ಅವರು ಉಪದೇಶ ಸ್ವೀಕರಿಸುವುದಕ್ಕಾಗಿ. ಆದರೆ ಅದು ಅವರಿಗೆ ದ್ವೇಷವನ್ನು ಮಾತ್ರ ಹೆಚ್ಚಿಸುತ್ತಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّوْ كَانَ مَعَهُۥٓ ءَالِهَةٌ كَمَا يَقُولُونَ إِذًا لَّٱبْتَغَوْا۟ إِلَىٰ ذِى ٱلْعَرْشِ سَبِيلًا

Kannada Translation - Hamza Buturಹೇಳಿರಿ: “ಅವರು ಹೇಳುವಂತೆ ಅಲ್ಲಾಹನ ಜೊತೆಗೆ ಬೇರೆ ದೇವರುಗಳು ಇರುತ್ತಿದ್ದರೆ, ಅವರು ಖಂಡಿತವಾಗಿಯೂ ಸಿಂಹಾಸನದ ಒಡೆಯನ (ಅಲ್ಲಾಹನ) ಕಡೆಗೆ ಒಂದು ದಾರಿಯನ್ನು ಹುಡುಕುತ್ತಿದ್ದರು.”[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سُبْحَٰنَهُۥ وَتَعَٰلَىٰ عَمَّا يَقُولُونَ عُلُوًّا كَبِيرًا

Kannada Translation - Hamza Buturಅಲ್ಲಾಹು ಪರಿಶುದ್ಧನು; ಅವರು ಏನು ಹೇಳುತ್ತಾರೋ ಅದಕ್ಕಿಂತ ಅವನು ಎಷ್ಟೋ ವಿದೂರನು ಮತ್ತು ಪರಮೋನ್ನತನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تُسَبِّحُ لَهُ ٱلسَّمَٰوَٰتُ ٱلسَّبْعُ وَٱلْأَرْضُ وَمَن فِيهِنَّ وَإِن مِّن شَىْءٍ إِلَّا يُسَبِّحُ بِحَمْدِهِۦ وَلَٰكِن لَّا تَفْقَهُونَ تَسْبِيحَهُمْ إِنَّهُۥ كَانَ حَلِيمًا غَفُورًا

Kannada Translation - Hamza Buturಏಳಾಕಾಶಗಳು, ಭೂಮಿ ಮತ್ತು ಅವುಗಳಲ್ಲಿರುವ ಎಲ್ಲರೂ ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾರೆ. ಅವನ ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡದಿರುವ ಯಾವುದೇ ವಸ್ತುವಿಲ್ಲ. ಆದರೆ ನಿಮಗೆ ಅವರ ಸ್ತುತಿಕೀರ್ತನೆಗಳನ್ನು ಅರ್ಥಮಾಡಿಕೊಳ್ಳಲಾಗುವುದಿಲ್ಲ. ನಿಶ್ಚಯವಾಗಿಯೂ ಅವನು ಸಹಿಷ್ಣುತೆಯುಳ್ಳವನು ಮತ್ತು ಕ್ಷಮಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا قَرَأْتَ ٱلْقُرْءَانَ جَعَلْنَا بَيْنَكَ وَبَيْنَ ٱلَّذِينَ لَا يُؤْمِنُونَ بِٱلْـَٔاخِرَةِ حِجَابًا مَّسْتُورًا

Kannada Translation - Hamza Buturನೀವು ಕುರ್‌ಆನ್ ಪಠಿಸುವಾಗ ನಾವು ನಿಮ್ಮ ಮತ್ತು ಪರಲೋಕದಲ್ಲಿ ವಿಶ್ವಾಸವಿಡದ ಆ ಜನರ ನಡುವೆ ಒಂದು ರಹಸ್ಯ ಪರದೆಯನ್ನು ಇಡುತ್ತೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَجَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِىٓ ءَاذَانِهِمْ وَقْرًا وَإِذَا ذَكَرْتَ رَبَّكَ فِى ٱلْقُرْءَانِ وَحْدَهُۥ وَلَّوْا۟ عَلَىٰٓ أَدْبَٰرِهِمْ نُفُورًا

Kannada Translation - Hamza Buturಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳ ಮೇಲೆ ಪರದೆಗಳನ್ನು ಮತ್ತು ಅವರ ಕಿವಿಗಳಿಗೆ ಭಾರಗಳನ್ನು ಇಡುತ್ತೇವೆ. ನೀವು ಕುರ್‌ಆನ್‍ನಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಏಕತ್ವವನ್ನು ಉಲ್ಲೇಖಿಸಿದರೆ ಅವರು ದ್ವೇಷದಿಂದ ಬೆನ್ನು ತಿರುಗಿಸಿ ನಡೆಯುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

نَّحْنُ أَعْلَمُ بِمَا يَسْتَمِعُونَ بِهِۦٓ إِذْ يَسْتَمِعُونَ إِلَيْكَ وَإِذْ هُمْ نَجْوَىٰٓ إِذْ يَقُولُ ٱلظَّٰلِمُونَ إِن تَتَّبِعُونَ إِلَّا رَجُلًا مَّسْحُورًا

Kannada Translation - Hamza Buturಅವರು ಅದಕ್ಕೆ ಕಿವಿಗೊಡುವಾಗ, ಅವರು ಯಾವ ಉದ್ದೇಶದಿಂದ ಅದಕ್ಕೆ ಕಿವಿಗೊಡುತ್ತಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ಅವರು ಸಮಾಲೋಚನೆ ಮಾಡುವ ಸಂದರ್ಭದಲ್ಲಿ ಮತ್ತು “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುರಿಸುತ್ತಿದ್ದೀರಿ” ಎಂದು ಆ ಅಕ್ರಮಿಗಳು ಹೇಳುವಾಗಲೂ (ನಾವು ಅವರ ಬಗ್ಗೆ ಚೆನ್ನಾಗಿ ತಿಳಿದಿದ್ದೇವೆ).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱنظُرْ كَيْفَ ضَرَبُوا۟ لَكَ ٱلْأَمْثَالَ فَضَلُّوا۟ فَلَا يَسْتَطِيعُونَ سَبِيلًا

Kannada Translation - Hamza Butur(ಪ್ರವಾದಿಯವರೇ!) ಅವರು ನಿಮಗೆ ಹೇಗೆ ಉದಾಹರಣೆ ಕೊಡುತ್ತಾರೆಂದು ನೋಡಿರಿ. ಅವರು ದಾರಿತಪ್ಪಿದ್ದಾರೆ. ಅವರಿಗೆ ದಾರಿ ಕಾಣಲು ಸಾಧ್ಯವಾಗುತ್ತಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالُوٓا۟ أَءِذَا كُنَّا عِظَٰمًا وَرُفَٰتًا أَءِنَّا لَمَبْعُوثُونَ خَلْقًا جَدِيدًا

Kannada Translation - Hamza Buturಅವರು ಕೇಳುತ್ತಾರೆ: “ನಾವು ಮೂಳೆ ಮತ್ತು (ಮಣ್ಣಾಗಿ) ಚಿಂದಿಯಾದ ನಂತರ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ كُونُوا۟ حِجَارَةً أَوْ حَدِيدًا

Kannada Translation - Hamza Buturಹೇಳಿರಿ: “ನೀವು ಕಲ್ಲುಗಳಾಗಿ ಬಿಡಿ ಅಥವಾ ಕಬ್ಬಿಣವಾಗಿ ಬಿಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ خَلْقًا مِّمَّا يَكْبُرُ فِى صُدُورِكُمْ فَسَيَقُولُونَ مَن يُعِيدُنَا قُلِ ٱلَّذِى فَطَرَكُمْ أَوَّلَ مَرَّةٍ فَسَيُنْغِضُونَ إِلَيْكَ رُءُوسَهُمْ وَيَقُولُونَ مَتَىٰ هُوَ قُلْ عَسَىٰٓ أَن يَكُونَ قَرِيبًا

Kannada Translation - Hamza Buturಅಥವಾ ನಿಮ್ಮ ಹೃದಯಗಳಲ್ಲಿ ಹಿರಿದಾಗಿ ಕಾಣುವ ಯಾವುದಾದರೂ ಸೃಷ್ಟಿಯಾಗಿ ಬಿಡಿ. (ಏನೇ ಆದರೂ ನಿಮ್ಮನ್ನು ಜೀವ ನೀಡಿ ಎಬ್ಬಿಸಲಾಗುವುದು)”. ಅವರು ಕೇಳುತ್ತಾರೆ: “ನಮಗೆ ಪುನಃ ಜೀವ ನೀಡುವುದು ಯಾರು?” ಹೇಳಿರಿ: “ನಿಮ್ಮನ್ನು ಮೊದಲ ಬಾರಿ ಸೃಷ್ಟಿಸಿದವನು.” ಆಗ ಅವರು ನಿಮ್ಮ ಕಡೆಗೆ ತಲೆಯಾಡಿಸುತ್ತಾ ಕೇಳುತ್ತಾರೆ: “ಅದು ಯಾವಾಗ?” ಹೇಳಿರಿ: “ಅದು ಸಮೀಪದಲ್ಲೇ ಆಗಿರಬಹುದು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَوْمَ يَدْعُوكُمْ فَتَسْتَجِيبُونَ بِحَمْدِهِۦ وَتَظُنُّونَ إِن لَّبِثْتُمْ إِلَّا قَلِيلًا

Kannada Translation - Hamza Buturಅವನು ನಿಮ್ಮನ್ನು ಕರೆಯುವ ಮತ್ತು ನೀವು ಅವನನ್ನು ಸ್ತುತಿಸುತ್ತಾ ಅವನಿಗೆ ಉತ್ತರ ನೀಡುವ ದಿನ. ನೀವು (ಇಹಲೋಕದಲ್ಲಿ) ಸ್ವಲ್ಪ ಸಮಯ ಮಾತ್ರ ವಾಸವಾಗಿದ್ದಿರಿ ಎಂದು ನಿಮಗೆ ಭಾಸವಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُل لِّعِبَادِى يَقُولُوا۟ ٱلَّتِى هِىَ أَحْسَنُ إِنَّ ٱلشَّيْطَٰنَ يَنزَغُ بَيْنَهُمْ إِنَّ ٱلشَّيْطَٰنَ كَانَ لِلْإِنسَٰنِ عَدُوًّا مُّبِينًا

Kannada Translation - Hamza Buturನನ್ನ ದಾಸರೊಡನೆ, ಅವರು ಅತ್ಯುತ್ತಮ ಮಾತುಗಳನ್ನೇ ಆಡಲಿ ಎಂದು ಹೇಳಿರಿ. ನಿಶ್ಚಯವಾಗಿಯೂ ಶೈತಾನನು ಅವರ ನಡುವೆ (ಸಂಘರ್ಷವನ್ನು) ಹುಟ್ಟುಹಾಕುತ್ತಾನೆ. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

رَّبُّكُمْ أَعْلَمُ بِكُمْ إِن يَشَأْ يَرْحَمْكُمْ أَوْ إِن يَشَأْ يُعَذِّبْكُمْ وَمَآ أَرْسَلْنَٰكَ عَلَيْهِمْ وَكِيلًا

Kannada Translation - Hamza Buturನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ನಿಮ್ಮ ಬಗ್ಗೆ ಚೆನ್ನಾಗಿ ತಿಳಿದಿದೆ. ಅವನು ಇಚ್ಛಿಸಿದರೆ ನಿಮಗೆ ದಯೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. (ಪ್ರವಾದಿಯವರೇ) ನಾವು ನಿಮ್ಮನ್ನು ಅವರ ಮೇಲ್ವಿಚಾರಣೆ ಮಾಡಲು ಕಳುಹಿಸಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَرَبُّكَ أَعْلَمُ بِمَن فِى ٱلسَّمَٰوَٰتِ وَٱلْأَرْضِ وَلَقَدْ فَضَّلْنَا بَعْضَ ٱلنَّبِيِّـۧنَ عَلَىٰ بَعْضٍ وَءَاتَيْنَا دَاوُۥدَ زَبُورًا

Kannada Translation - Hamza Buturಭೂಮ್ಯಾಕಾಶಗಳಲ್ಲಿರುವವರ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನಾವು ಕೆಲವು ಪ್ರವಾದಿಗಳನ್ನು ಇತರ ಪ್ರವಾದಿಗಳಿಗಿಂತ ಶ್ರೇಷ್ಠಗೊಳಿಸಿದ್ದೇವೆ. ನಾವು ದಾವೂದರಿಗೆ ಝಬೂರ್ ನೀಡಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱدْعُوا۟ ٱلَّذِينَ زَعَمْتُم مِّن دُونِهِۦ فَلَا يَمْلِكُونَ كَشْفَ ٱلضُّرِّ عَنكُمْ وَلَا تَحْوِيلًا

Kannada Translation - Hamza Buturಹೇಳಿರಿ: “ನೀವು ಅಲ್ಲಾಹನನ್ನು ಬಿಟ್ಟು (ಅಲ್ಲಾಹನ ಸಹಭಾಗಿಗಳೆಂದು) ನೀವು ವಾದಿಸುತ್ತಿರುವ ನಿಮ್ಮ ದೇವರುಗಳನ್ನು ಕರೆದು ಪ್ರಾರ್ಥಿಸಿರಿ. ನಿಮ್ಮಿಂದ ಯಾವುದೇ ತೊಂದರೆಯನ್ನು ನಿವಾರಿಸಲು ಅಥವಾ ನಿಮ್ಮ ಸ್ಥಿತಿಯನ್ನು ಬದಲಾಯಿಸಲು ಅವರಿಗೆ ಸಾಧ್ಯವಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ ٱلَّذِينَ يَدْعُونَ يَبْتَغُونَ إِلَىٰ رَبِّهِمُ ٱلْوَسِيلَةَ أَيُّهُمْ أَقْرَبُ وَيَرْجُونَ رَحْمَتَهُۥ وَيَخَافُونَ عَذَابَهُۥٓ إِنَّ عَذَابَ رَبِّكَ كَانَ مَحْذُورًا

Kannada Translation - Hamza Buturಅವರು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದಾರೋ, ಅವರು ಅವರ ಪರಿಪಾಲಕನ (ಅಲ್ಲಾಹನ) ಬಳಿಗೆ ಹತ್ತಿರವಾಗುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ.[1] ಅವರಲ್ಲಿ ಅಲ್ಲಾಹನಿಗೆ ಹೆಚ್ಚು ಹತ್ತಿರವಾಗುವುದು ಯಾರು ಎಂದು. ಅವರು ಅವನ ದಯೆಯನ್ನು ಆಶಿಸುತ್ತಾರೆ ಮತ್ತು ಅವನ ಶಿಕ್ಷೆಯನ್ನು ಹೆದರುತ್ತಾರೆ. ಖಂಡಿತವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯು ಹೆದರಬೇಕಾದುದೇ ಆಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِن مِّن قَرْيَةٍ إِلَّا نَحْنُ مُهْلِكُوهَا قَبْلَ يَوْمِ ٱلْقِيَٰمَةِ أَوْ مُعَذِّبُوهَا عَذَابًا شَدِيدًا كَانَ ذَٰلِكَ فِى ٱلْكِتَٰبِ مَسْطُورًا

Kannada Translation - Hamza Buturಎಷ್ಟೆಲ್ಲಾ ಊರುಗಳಿವೆಯೋ ಅವೆಲ್ಲವನ್ನೂ ನಾವು ಪುನರುತ್ಥಾನ ದಿನಕ್ಕಿಂತ ಮೊದಲು ನಾಶ ಮಾಡುವೆವು; ಅಥವಾ ಕಠೋರ ಶಿಕ್ಷೆ ನೀಡುವೆವು. ಇದು ಗ್ರಂಥದಲ್ಲಿ ಲಿಖಿತವಾದ ವಿಷಯವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا مَنَعَنَآ أَن نُّرْسِلَ بِٱلْـَٔايَٰتِ إِلَّآ أَن كَذَّبَ بِهَا ٱلْأَوَّلُونَ وَءَاتَيْنَا ثَمُودَ ٱلنَّاقَةَ مُبْصِرَةً فَظَلَمُوا۟ بِهَا وَمَا نُرْسِلُ بِٱلْـَٔايَٰتِ إِلَّا تَخْوِيفًا

Kannada Translation - Hamza Buturದೃಷ್ಟಾಂತಗಳನ್ನು ಕಳುಹಿಸಲು ನಮಗೆ ತಡೆಯಾಗಿರುವುದು, ಮೊದಲಿನ ಜನರು ಅವುಗಳನ್ನು ನಿಷೇಧಿಸಿದ್ದರು ಎಂಬುದು ಮಾತ್ರ. ನಾವು ಸಮೂದ್ ಗೋತ್ರಕ್ಕೆ ಅಂತರ್ದೃಷ್ಟಿಯ ರೂಪದಲ್ಲಿ ಒಂಟೆಯನ್ನು ನೀಡಿದೆವು. ಆದರೆ ಅವರು ಅದರೊಡನೆ ಅನ್ಯಾಯವೆಸಗಿದರು. ಜನರನ್ನು ಹೆದರಿಸುವುದಕ್ಕಾಗಿಯೇ ವಿನಾ ನಾವು ದೃಷ್ಟಾಂತಗಳನ್ನು ಕಳುಹಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذْ قُلْنَا لَكَ إِنَّ رَبَّكَ أَحَاطَ بِٱلنَّاسِ وَمَا جَعَلْنَا ٱلرُّءْيَا ٱلَّتِىٓ أَرَيْنَٰكَ إِلَّا فِتْنَةً لِّلنَّاسِ وَٱلشَّجَرَةَ ٱلْمَلْعُونَةَ فِى ٱلْقُرْءَانِ وَنُخَوِّفُهُمْ فَمَا يَزِيدُهُمْ إِلَّا طُغْيَٰنًا كَبِيرًا

Kannada Translation - Hamza Butur“ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಜನರನ್ನು ಆವರಿಸಿದ್ದಾನೆ” ಎಂದು ನಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ನಾವು ನಿಮಗೆ ತೋರಿಸಿದ ಆ ದೃಶ್ಯವನ್ನು ನಾವು ಜನರಿಗೆ ಒಂದು ಪರೀಕ್ಷೆಯನ್ನಾಗಿ ಮಾಡಿದ್ದೆವು. ಅದೇ ರೀತಿ ಕುರ್‌ಆನ್‍ನಲ್ಲಿ ಶಪಿಸಲಾದ ಆ ಮರವನ್ನು ಕೂಡ. ನಾವು ಅವರನ್ನು ಹೆದರಿಸುತ್ತೇವೆ. ಆದರೆ ಅದು ಅವರಿಗೆ ಮಹಾ ಅತಿರೇಕವನ್ನು ಮಾತ್ರ ಹೆಚ್ಚಿಸುತ್ತದೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذْ قُلْنَا لِلْمَلَٰٓئِكَةِ ٱسْجُدُوا۟ لِـَٔادَمَ فَسَجَدُوٓا۟ إِلَّآ إِبْلِيسَ قَالَ ءَأَسْجُدُ لِمَنْ خَلَقْتَ طِينًا

Kannada Translation - Hamza Butur“ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ನಾವು ದೇವದೂತರುಗಳಿಗೆ ಹೇಳಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು. ಅವನು ಕೇಳಿದನು: “ನೀನು ಜೇಡಿಮಣ್ಣಿನಿಂದ ಸೃಷ್ಟಿಸಿದವನಿಗೆ ನಾನು ಸಾಷ್ಟಾಂಗ ಮಾಡಬೇಕೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ أَرَءَيْتَكَ هَٰذَا ٱلَّذِى كَرَّمْتَ عَلَىَّ لَئِنْ أَخَّرْتَنِ إِلَىٰ يَوْمِ ٱلْقِيَٰمَةِ لَأَحْتَنِكَنَّ ذُرِّيَّتَهُۥٓ إِلَّا قَلِيلًا

Kannada Translation - Hamza Buturಇಬ್ಲೀಸ್ ಹೇಳಿದನು: “ನೀನು ನನಗಿಂತಲೂ ಹೆಚ್ಚು ಶ್ರೇಷ್ಠತೆ ನೀಡಿದ ಈ ವ್ಯಕ್ತಿಯನ್ನು ನೋಡು. ನೀನು ನನಗೆ ಪುನರುತ್ಥಾನದ ದಿನದವರೆಗೆ ಕಾಲಾವಕಾಶ ನೀಡಿದರೆ, ಕೆಲವರನ್ನು ಹೊರತುಪಡಿಸಿ ಇವನ ಸಂಪೂರ್ಣ ಸಂತಾನವನ್ನು ನಾನು ನನ್ನ ವಶಕ್ಕೆ ಪಡೆಯುವೆನು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ ٱذْهَبْ فَمَن تَبِعَكَ مِنْهُمْ فَإِنَّ جَهَنَّمَ جَزَآؤُكُمْ جَزَآءً مَّوْفُورًا

Kannada Translation - Hamza Buturಅಲ್ಲಾಹು ಹೇಳಿದನು: “ಇಲ್ಲಿಂದ ತೊಲಗು! ಅವರಲ್ಲಿ ಯಾರು ನಿನ್ನನ್ನು ಅನುಸರಿಸುತ್ತಾರೋ, ನಿಮ್ಮೆಲ್ಲರಿಗೂ ನರಕಾಗ್ನಿಯೇ ಪ್ರತಿಫಲವಾಗಿದೆ. ಅದು ಪೂರ್ಣರೂಪದ ಪ್ರತಿಫಲವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱسْتَفْزِزْ مَنِ ٱسْتَطَعْتَ مِنْهُم بِصَوْتِكَ وَأَجْلِبْ عَلَيْهِم بِخَيْلِكَ وَرَجِلِكَ وَشَارِكْهُمْ فِى ٱلْأَمْوَٰلِ وَٱلْأَوْلَٰدِ وَعِدْهُمْ وَمَا يَعِدُهُمُ ٱلشَّيْطَٰنُ إِلَّا غُرُورًا

Kannada Translation - Hamza Buturಅವರಲ್ಲಿ ಯಾರನ್ನೆಲ್ಲಾ ನಿನಗೆ ನಿನ್ನ ಧ್ವನಿಯ ಮೂಲಕ ದಾರಿತಪ್ಪಿಸಲು ಸಾಧ್ಯವಾಗುತ್ತದೋ ದಾರಿತಪ್ಪಿಸು. ನಿನ್ನ ಅಶ್ವದಳ ಮತ್ತು ಪದಾತಿದಳದ ಮೂಲಕ ಅವರ ಮೇಲೆ ಮುಗಿಬೀಳು. ಅವರ ಆಸ್ತಿ ಮತ್ತು ಮಕ್ಕಳಲ್ಲಿ ಅವರೊಡನೆ ಸೇರಿಕೋ. ಅವರಿಗೆ ಆಶ್ವಾಸನೆಗಳನ್ನು ನೀಡು.” ಶೈತಾನನು ಅವರಿಗೆ ನೀಡುವ ಆಶ್ವಾಸನೆಗಳು ಕೇವಲ ವಂಚನೆಗಳಾಗಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ عِبَادِى لَيْسَ لَكَ عَلَيْهِمْ سُلْطَٰنٌ وَكَفَىٰ بِرَبِّكَ وَكِيلًا

Kannada Translation - Hamza Butur“ನಿಶ್ಚಯವಾಗಿಯೂ ನನ್ನ ದಾಸರ ಮೇಲೆ ನಿನಗೆ ಯಾವುದೇ ಅಧಿಕಾರವಿಲ್ಲ. ಕಾರ್ಯನಿರ್ವಾಹಕನಾಗಿ ನಿನ್ನ ಪರಿಪಾಲಕನೇ (ಅಲ್ಲಾಹನೇ) ಸಾಕು”.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

رَّبُّكُمُ ٱلَّذِى يُزْجِى لَكُمُ ٱلْفُلْكَ فِى ٱلْبَحْرِ لِتَبْتَغُوا۟ مِن فَضْلِهِۦٓ إِنَّهُۥ كَانَ بِكُمْ رَحِيمًا

Kannada Translation - Hamza Buturನಿಮಗೋಸ್ಕರ ಕಡಲಲ್ಲಿ ನಾವೆಗಳನ್ನು ಚಲಾಯಿಸುವವನೇ ನಿಮ್ಮ ಪರಿಪಾಲಕನು (ಅಲ್ಲಾಹು). ನೀವು ಅವನ ಔದಾರ್ಯವನ್ನು ಅರಸುವುದಕ್ಕಾಗಿ. ಖಂಡಿತವಾಗಿಯೂ ಅವನಿಗೆ ನಿಮ್ಮ ಮೇಲೆ ಅತ್ಯಧಿಕ ಕರುಣೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا مَسَّكُمُ ٱلضُّرُّ فِى ٱلْبَحْرِ ضَلَّ مَن تَدْعُونَ إِلَّآ إِيَّاهُ فَلَمَّا نَجَّىٰكُمْ إِلَى ٱلْبَرِّ أَعْرَضْتُمْ وَكَانَ ٱلْإِنسَٰنُ كَفُورًا

Kannada Translation - Hamza Buturಕಡಲಲ್ಲಿ ನಿಮಗೇನಾದರೂ ತೊಂದರೆಯಾದರೆ ನೀವು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತೀರೋ ಅವರೆಲ್ಲರೂ ನಿಮ್ಮನ್ನು ಬಿಟ್ಟು ಹೋಗುವರು. ಆದರೆ ಅಲ್ಲಾಹು ನಿಮ್ಮನ್ನು ಸುರಕ್ಷಿತವಾಗಿ ದಡ ಸೇರಿಸಿದರೆ ನೀವು ವಿಮುಖರಾಗುತ್ತೀರಿ. ಮನುಷ್ಯನು ಮಹಾ ಕೃತಘ್ನನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَأَمِنتُمْ أَن يَخْسِفَ بِكُمْ جَانِبَ ٱلْبَرِّ أَوْ يُرْسِلَ عَلَيْكُمْ حَاصِبًا ثُمَّ لَا تَجِدُوا۟ لَكُمْ وَكِيلًا

Kannada Translation - Hamza Buturಅವನು ನಿಮ್ಮನ್ನು ದಡದ ಒಂದು ಭಾಗಕ್ಕೆ (ಒಯ್ದು) ಅಲ್ಲಿ ನಿಮ್ಮನ್ನು (ಭೂಮಿಯಲ್ಲಿ) ಹುಗಿಯುವಂತೆ ಮಾಡಲಾರನು ಅಥವಾ ಅವನು ನಿಮ್ಮ ಮೇಲೆ ಕಲ್ಲಿನ ಮಳೆಯನ್ನು ಸುರಿಸಲಾರನೆಂದು ನೀವು ನಿರ್ಭಯರಾಗಿದ್ದೀರಾ? ನಂತರ ನಿಮ್ಮ ಕಾರ್ಯನಿರ್ವಹಣೆ ಮಾಡಲು ನೀವು ಯಾರನ್ನೂ ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ أَمِنتُمْ أَن يُعِيدَكُمْ فِيهِ تَارَةً أُخْرَىٰ فَيُرْسِلَ عَلَيْكُمْ قَاصِفًا مِّنَ ٱلرِّيحِ فَيُغْرِقَكُم بِمَا كَفَرْتُمْ ثُمَّ لَا تَجِدُوا۟ لَكُمْ عَلَيْنَا بِهِۦ تَبِيعًا

Kannada Translation - Hamza Buturಅಥವಾ ಅವನು ನಿಮ್ಮನ್ನು ಮತ್ತೊಮ್ಮೆ ಕಡಲಿಗೆ ಒಯ್ದು, ನಿಮ್ಮ ಮೇಲೆ ಚಂಡಮಾರುತವನ್ನು ಕಳುಹಿಸಿ, ನೀವು ನಿಷೇಧಿಸಿದ್ದರಿಂದ ನಿಮ್ಮನ್ನು ಕಡಲಲ್ಲಿ ಮುಳುಗಿಸಿ ಬಿಡಲಾರನೆಂದು ನೀವು ನಿರ್ಭಯರಾಗಿದ್ದೀರಾ? ನಂತರ ಅದಕ್ಕಾಗಿ ನಮ್ಮ ಮೇಲೆ ಸೇಡು ತೀರಿಸಿಕೊಳ್ಳಲು ನೀವು ಯಾರನ್ನೂ ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ كَرَّمْنَا بَنِىٓ ءَادَمَ وَحَمَلْنَٰهُمْ فِى ٱلْبَرِّ وَٱلْبَحْرِ وَرَزَقْنَٰهُم مِّنَ ٱلطَّيِّبَٰتِ وَفَضَّلْنَٰهُمْ عَلَىٰ كَثِيرٍ مِّمَّنْ خَلَقْنَا تَفْضِيلًا

Kannada Translation - Hamza Buturನಿಶ್ಚಯವಾಗಿಯೂ ನಾವು ಆದಮರ ಮಕ್ಕಳನ್ನು (ಮಾನವರನ್ನು) ಗೌರವಿಸಿದ್ದೇವೆ. ಅವರನ್ನು ಕಡಲಲ್ಲೂ, ನೆಲದಲ್ಲೂ ಸವಾರಿ ಮಾಡಿಸಿದ್ದೇವೆ. ಅವರಿಗೆ ಶುದ್ಧ ವಸ್ತುಗಳಿಂದ ಆಹಾರವನ್ನು ಒದಗಿಸಿದ್ದೇವೆ. ನಮ್ಮ ಅನೇಕ ಸೃಷ್ಟಿಗಳಿಗಿಂತ ಹೆಚ್ಚು ನಾವು ಅವರಿಗೆ ಶ್ರೇಷ್ಠತೆಯನ್ನು ನೀಡಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَوْمَ نَدْعُوا۟ كُلَّ أُنَاسٍۭ بِإِمَٰمِهِمْ فَمَنْ أُوتِىَ كِتَٰبَهُۥ بِيَمِينِهِۦ فَأُو۟لَٰٓئِكَ يَقْرَءُونَ كِتَٰبَهُمْ وَلَا يُظْلَمُونَ فَتِيلًا

Kannada Translation - Hamza Buturನಾವು ಎಲ್ಲಾ ಮನುಷ್ಯರನ್ನೂ ಅವರ ಮುಖಂಡರೊಂದಿಗೆ ಕರೆದು ಒಟ್ಟುಗೂಡಿಸುವ ದಿನ. ಆಗ ಯಾರಿಗೆ ಅವನ ಕರ್ಮಪುಸ್ತಕವನ್ನು ಅವನ ಬಲಗೈಯಲ್ಲಿ ನೀಡಲಾಗುತ್ತದೋ—ಅವರು ತಮ್ಮ ಕರ್ಮಪುಸ್ತಕವನ್ನು ಓದುವರು. ಅವರಿಗೆ (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಅನ್ಯಾಯವಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَن كَانَ فِى هَٰذِهِۦٓ أَعْمَىٰ فَهُوَ فِى ٱلْـَٔاخِرَةِ أَعْمَىٰ وَأَضَلُّ سَبِيلًا

Kannada Translation - Hamza Buturಯಾರು ಈ ಲೋಕದಲ್ಲಿ ಕುರುಡನಾಗಿರುತ್ತಾನೋ ಅವನು ಪರಲೋಕದಲ್ಲೂ ಕುರುಡನಾಗಿರುತ್ತಾನೆ. ಅಷ್ಟೇ ಅಲ್ಲ, ಅತ್ಯಧಿಕ ದಾರಿತಪ್ಪಿದವನೂ ಆಗಿರುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِن كَادُوا۟ لَيَفْتِنُونَكَ عَنِ ٱلَّذِىٓ أَوْحَيْنَآ إِلَيْكَ لِتَفْتَرِىَ عَلَيْنَا غَيْرَهُۥ وَإِذًا لَّٱتَّخَذُوكَ خَلِيلًا

Kannada Translation - Hamza Buturನಾವು ನಿಮಗೆ ನೀಡುತ್ತಿರುವ ಈ ದೇವವಾಣಿಯಿಂದ ನಿಮ್ಮನ್ನು ತಪ್ಪಿಸಿಬಿಡಲು ಅವರು ಬಯಸುತ್ತಾರೆ. ನೀವು ನಮ್ಮ ಮೇಲೆ ಇದಲ್ಲದ ಬೇರೇನಾದರೂ ಸುಳ್ಳುಗಳನ್ನು ಆರೋಪಿಸುವುದಕ್ಕಾಗಿ. ಹಾಗೇನಾದರೂ ಆದರೆ ಅವರು ನಿಮ್ಮನ್ನು ಆಪ್ತಮಿತ್ರನಾಗಿ ಸ್ವೀಕರಿಸುತ್ತಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْلَآ أَن ثَبَّتْنَٰكَ لَقَدْ كِدتَّ تَرْكَنُ إِلَيْهِمْ شَيْـًٔا قَلِيلًا

Kannada Translation - Hamza Buturನಾವು ನಿಮ್ಮನ್ನು ದೃಢವಾಗಿ ನಿಲ್ಲಿಸದಿರುತ್ತಿದ್ದರೆ ನೀವು ಅವರ ಕಡೆಗೆ ಸ್ವಲ್ಪವಾದರೂ ವಾಲುತ್ತಿದ್ದಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِذًا لَّأَذَقْنَٰكَ ضِعْفَ ٱلْحَيَوٰةِ وَضِعْفَ ٱلْمَمَاتِ ثُمَّ لَا تَجِدُ لَكَ عَلَيْنَا نَصِيرًا

Kannada Translation - Hamza Buturಹಾಗೇನಾದರೂ ಆದರೆ, ನಾವು ನಿಮಗೆ ಬದುಕಿರುವಾಗ ಇಮ್ಮಡಿ ಶಿಕ್ಷೆಯನ್ನು ಮತ್ತು ಮರಣದ ನಂತರ ಇಮ್ಮಡಿ ಶಿಕ್ಷೆಯನ್ನು ನೀಡುತ್ತಿದ್ದೆವು. ನಂತರ ನಮ್ಮ ವಿರುದ್ಧ ಸಹಾಯ ಮಾಡುವ ಯಾರನ್ನೂ ನೀವು ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِن كَادُوا۟ لَيَسْتَفِزُّونَكَ مِنَ ٱلْأَرْضِ لِيُخْرِجُوكَ مِنْهَا وَإِذًا لَّا يَلْبَثُونَ خِلَٰفَكَ إِلَّا قَلِيلًا

Kannada Translation - Hamza Buturಅವರು ನಿಮ್ಮನ್ನು ಈ ಊರಿನಿಂದ ಇನ್ನೇನು ತೊಲಗಿಸುವುದರಲ್ಲಿದ್ದರು. ನಿಮ್ಮನ್ನು ಇಲ್ಲಿಂದ ಓಡಿಸುವುದೇ ಅವರ ಉದ್ದೇಶವಾಗಿದೆ. ಹಾಗೇನಾದರೂ ಆದರೆ, ನಿಮ್ಮ ನಂತರ ಅವರು ಅಲ್ಪ ಸಮಯದವರೆಗೆ ಮಾತ್ರ ಅಲ್ಲಿ ವಾಸಿಸುತ್ತಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سُنَّةَ مَن قَدْ أَرْسَلْنَا قَبْلَكَ مِن رُّسُلِنَا وَلَا تَجِدُ لِسُنَّتِنَا تَحْوِيلًا

Kannada Translation - Hamza Buturಇದು ನಿಮಗಿಂತ ಮೊದಲು ನಾವು ಕಳುಹಿಸಲಾದ ನಮ್ಮ ಸಂದೇಶವಾಹಕರ ವಿಷಯದಲ್ಲಿ ಕೈಗೊಂಡ ಕ್ರಮವಾಗಿದೆ. ನಮ್ಮ ಕ್ರಮದಲ್ಲಿ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَقِمِ ٱلصَّلَوٰةَ لِدُلُوكِ ٱلشَّمْسِ إِلَىٰ غَسَقِ ٱلَّيْلِ وَقُرْءَانَ ٱلْفَجْرِ إِنَّ قُرْءَانَ ٱلْفَجْرِ كَانَ مَشْهُودًا

Kannada Translation - Hamza Buturಸೂರ್ಯನು (ಮಧ್ಯರೇಖೆಯಿಂದ) ಸರಿಯುವ ಸಮಯದಿಂದ ತೊಡಗಿ ಕತ್ತಲಾಗುವ ತನಕ ನಮಾಝ್ ಸಂಸ್ಥಾಪಿಸಿರಿ. ಪ್ರಭಾತದ ಕುರ್‌ಆನ್ ಪಠಣ ಮಾಡಿರಿ. ಪ್ರಭಾತದ ಕುರ್‌ಆನ್ ಪಠಣವು ಸಾಕ್ಷಿಯಾಗಿರುತ್ತದೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِنَ ٱلَّيْلِ فَتَهَجَّدْ بِهِۦ نَافِلَةً لَّكَ عَسَىٰٓ أَن يَبْعَثَكَ رَبُّكَ مَقَامًا مَّحْمُودًا

Kannada Translation - Hamza Buturರಾತ್ರಿಯ ಕೆಲವು ಸಮಯದಲ್ಲಿ ತಹಜ್ಜುದ್ ನಮಾಝ್ ಮಾಡುತ್ತಾ ಕುರ್‌ಆನ್ ಪಠಿಸಿರಿ. ಇದು ನಿಮಗೆ ಮಾತ್ರವಿರುವ ಹೆಚ್ಚಳವಾಗಿದೆ. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಸ್ತುತ್ಯರ್ಹ ಸ್ಥಾನಕ್ಕೆ ಕಳುಹಿಸಲೂಬಹುದು.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُل رَّبِّ أَدْخِلْنِى مُدْخَلَ صِدْقٍ وَأَخْرِجْنِى مُخْرَجَ صِدْقٍ وَٱجْعَل لِّى مِن لَّدُنكَ سُلْطَٰنًا نَّصِيرًا

Kannada Translation - Hamza Buturಹೇಳಿರಿ: “ನನ್ನ ಪರಿಪಾಲಕನೇ! ನನ್ನನ್ನು ಎಲ್ಲಿಗೆ ಪ್ರವೇಶ ಮಾಡಿಸಿದರೂ ಉತ್ತಮವಾಗಿ ಪ್ರವೇಶ ಮಾಡಿಸು ಮತ್ತು ಎಲ್ಲಿಂದ ನಿರ್ಗಮಿಸುವಂತೆ ಮಾಡಿದರೂ ಉತ್ತಮವಾಗಿ ನಿರ್ಗಮಿಸುವಂತೆ ಮಾಡು. ನನಗೆ ನಿನ್ನ ಕಡೆಯಿಂದ ಅಧಿಕಾರ ಮತ್ತು ಸಹಾಯವನ್ನು ನೀಡು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُلْ جَآءَ ٱلْحَقُّ وَزَهَقَ ٱلْبَٰطِلُ إِنَّ ٱلْبَٰطِلَ كَانَ زَهُوقًا

Kannada Translation - Hamza Buturಹೇಳಿರಿ: “ಸತ್ಯವು ಬಂದಿದೆ ಮತ್ತು ಅಸತ್ಯವು ನಾಶವಾಗಿದೆ. ಅಸತ್ಯವು ನಾಶವಾಗಿಯೇ ತೀರುತ್ತದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَنُنَزِّلُ مِنَ ٱلْقُرْءَانِ مَا هُوَ شِفَآءٌ وَرَحْمَةٌ لِّلْمُؤْمِنِينَ وَلَا يَزِيدُ ٱلظَّٰلِمِينَ إِلَّا خَسَارًا

Kannada Translation - Hamza Buturನಾವು ಅವತೀರ್ಣಗೊಳಿಸುವ ಈ ಕುರ್‌ಆನ್ ಸತ್ಯವಿಶ್ವಾಸಿಗಳಿಗೆ ಉಪಶಮನ ಮತ್ತು ದಯೆಯಾಗಿದೆ. ಇದು ಅಕ್ರಮಿಗಳಿಗೆ ನಷ್ಟವಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَآ أَنْعَمْنَا عَلَى ٱلْإِنسَٰنِ أَعْرَضَ وَنَـَٔا بِجَانِبِهِۦ وَإِذَا مَسَّهُ ٱلشَّرُّ كَانَ يَـُٔوسًا

Kannada Translation - Hamza Buturನಾವು ಮಾನವನಿಗೆ ಅನುಗ್ರಹವನ್ನು ದಯಪಾಲಿಸಿದರೆ, ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿಯುತ್ತಾನೆ. ಆದರೆ ಅವನಿಗೆ ತೊಂದರೆ ಉಂಟಾದರೆ ಅವನು ಹತಾಶನಾಗಿ ಬಿಡುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ كُلٌّ يَعْمَلُ عَلَىٰ شَاكِلَتِهِۦ فَرَبُّكُمْ أَعْلَمُ بِمَنْ هُوَ أَهْدَىٰ سَبِيلًا

Kannada Translation - Hamza Buturಹೇಳಿರಿ: “ಎಲ್ಲರೂ ತಮ್ಮ ತಮ್ಮ ವಿಧಾನದಂತೆ ಕರ್ಮವೆಸಗುತ್ತಾರೆ. ಸರಿಯಾದ ಮಾರ್ಗದಲ್ಲಿರುವವರು ಯಾರೆಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَسْـَٔلُونَكَ عَنِ ٱلرُّوحِ قُلِ ٱلرُّوحُ مِنْ أَمْرِ رَبِّى وَمَآ أُوتِيتُم مِّنَ ٱلْعِلْمِ إِلَّا قَلِيلًا

Kannada Translation - Hamza Buturಅವರು ನಿಮ್ಮೊಡನೆ ಆತ್ಮದ ಬಗ್ಗೆ ಪ್ರಶ್ನಿಸುತ್ತಾರೆ. ಹೇಳಿರಿ: “ಆತ್ಮವು ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಯಲ್ಲಿ ಸೇರಿದೆ. ನಿಮಗೆ ಬಹಳ ಕಡಿಮೆ ಜ್ಞಾನವನ್ನು ಮಾತ್ರ ನೀಡಲಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَئِن شِئْنَا لَنَذْهَبَنَّ بِٱلَّذِىٓ أَوْحَيْنَآ إِلَيْكَ ثُمَّ لَا تَجِدُ لَكَ بِهِۦ عَلَيْنَا وَكِيلًا

Kannada Translation - Hamza Buturನಾವು ಇಚ್ಛಿಸಿದರೆ ನಿಮಗೆ ನೀಡಿದ ದೇವವಾಣಿಯನ್ನು ನಾವು ಖಂಡಿತ ಹಿಂದೆಗೆಯುವೆವು. ನಂತರ ಅದಕ್ಕೆ ಸಂಬಂಧಿಸಿ ನಮ್ಮ ವಿರುದ್ಧ ನೀವು ಯಾವುದೇ ಬೆಂಬಲಿಗರನ್ನು ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّا رَحْمَةً مِّن رَّبِّكَ إِنَّ فَضْلَهُۥ كَانَ عَلَيْكَ كَبِيرًا

Kannada Translation - Hamza Buturಇದು ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯಿಂದಲೇ ಆಗಿದೆ. ನಿಜಕ್ಕೂ ನಿಮ್ಮ ಮೇಲೆ ಅವನು ಮಹಾ ಔದಾರ್ಯವನ್ನು ಹೊಂದಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّئِنِ ٱجْتَمَعَتِ ٱلْإِنسُ وَٱلْجِنُّ عَلَىٰٓ أَن يَأْتُوا۟ بِمِثْلِ هَٰذَا ٱلْقُرْءَانِ لَا يَأْتُونَ بِمِثْلِهِۦ وَلَوْ كَانَ بَعْضُهُمْ لِبَعْضٍ ظَهِيرًا

Kannada Translation - Hamza Buturಹೇಳಿರಿ: “ಈ ಕುರ್‌ಆನಿನಂತಿರುವ ಒಂದು ಗ್ರಂಥವನ್ನು ರಚಿಸಿ ತರಲು ಮನುಷ್ಯರು ಮತ್ತು ಜಿನ್ನ್‌ಗಳು ಒಟ್ಟು ಸೇರಿದರೂ ಇಂತಹ ಒಂದು ಗ್ರಂಥವನ್ನು ತರಲು ಅವರಿಗೆ ಸಾಧ್ಯವಿಲ್ಲ. ಅವರು ಪರಸ್ಪರ ಸಹಾಯ ಮಾಡಿದರೂ ಸಹ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ صَرَّفْنَا لِلنَّاسِ فِى هَٰذَا ٱلْقُرْءَانِ مِن كُلِّ مَثَلٍ فَأَبَىٰٓ أَكْثَرُ ٱلنَّاسِ إِلَّا كُفُورًا

Kannada Translation - Hamza Buturನಿಶ್ಚಯವಾಗಿಯೂ ಈ ಕುರ್‌ಆನ್‍ನಲ್ಲಿ ನಾವು ಜನರಿಗೆ ಎಲ್ಲಾ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالُوا۟ لَن نُّؤْمِنَ لَكَ حَتَّىٰ تَفْجُرَ لَنَا مِنَ ٱلْأَرْضِ يَنۢبُوعًا

Kannada Translation - Hamza Buturಅವರು ಹೇಳಿದರು: “ನೀನು ನಮಗೋಸ್ಕರ ಭೂಮಿಯಿಂದ ನೀರಿನ ಒರತೆಯನ್ನು ಚಿಮ್ಮಿ ಹರಿಸುವ ತನಕ ನಾವು ನಿನ್ನಲ್ಲಿ ವಿಶ್ವಾಸವಿಡುವುದೇ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ تَكُونَ لَكَ جَنَّةٌ مِّن نَّخِيلٍ وَعِنَبٍ فَتُفَجِّرَ ٱلْأَنْهَٰرَ خِلَٰلَهَا تَفْجِيرًا

Kannada Translation - Hamza Buturಅಥವಾ ನಿನಗೆ ಖರ್ಜೂರ ಮತ್ತು ದ್ರಾಕ್ಷಿಯ ತೋಟವಿದ್ದು, ನೀನು ಅವುಗಳ ನಡುವೆ ಚಿಮ್ಮಿ ಹರಿಯುವ ನದಿಗಳನ್ನು ಹರಿಸುವ ತನಕ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ تُسْقِطَ ٱلسَّمَآءَ كَمَا زَعَمْتَ عَلَيْنَا كِسَفًا أَوْ تَأْتِىَ بِٱللَّهِ وَٱلْمَلَٰٓئِكَةِ قَبِيلًا

Kannada Translation - Hamza Buturಅಥವಾ ನೀನು ಬೆದರಿಸುವಂತೆ ಆಕಾಶವನ್ನು ನಮ್ಮ ಮೇಲೆ ತುಂಡು ತುಂಡಾಗಿ ಬೀಳಿಸುವ ತನಕ. ಅಥವಾ ನೀನು ಅಲ್ಲಾಹು ಮತ್ತು ದೇವದೂತರುಗಳನ್ನು ನಮ್ಮ ಮುಂಭಾಗಕ್ಕೆ ತರುವ ತನಕ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِى ٱلسَّمَآءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَٰبًا نَّقْرَؤُهُۥ قُلْ سُبْحَانَ رَبِّى هَلْ كُنتُ إِلَّا بَشَرًا رَّسُولًا

Kannada Translation - Hamza Buturಅಥವಾ ನಿನಗೆ ಬಂಗಾರದ ಮನೆಯುಂಟಾಗುವ ತನಕ, ಅಥವಾ ನೀನು ಆಕಾಶಕ್ಕೆ ಏರಿ ಹೋಗುವ ತನಕ. ನಮಗೆ ಓದಲಾಗುವ ಒಂದು ಪುಸ್ತಕವನ್ನು ನೀನು ನಮಗೆ ಇಳಿಸಿಕೊಡುವ ತನಕ ನೀನು ಏರಿ ಹೋಗಿದ್ದೀ ಎಂದು ನಾವು ಖಂಡಿತ ನಂಬುವುದಿಲ್ಲ.” (ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನು (ಅಲ್ಲಾಹು) ಪರಿಶುದ್ಧನು! ನಾನು ಒಬ್ಬ ಮನುಷ್ಯನಾದ ಸಂದೇಶವಾಹಕ ಮಾತ್ರವಾಗಿದ್ದೇನೆ.”[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا مَنَعَ ٱلنَّاسَ أَن يُؤْمِنُوٓا۟ إِذْ جَآءَهُمُ ٱلْهُدَىٰٓ إِلَّآ أَن قَالُوٓا۟ أَبَعَثَ ٱللَّهُ بَشَرًا رَّسُولًا

Kannada Translation - Hamza Buturಜನರಿಗೆ ಸನ್ಮಾರ್ಗವು ಬಂದ ಬಳಿಕವೂ ಅವರು ಅದರಲ್ಲಿ ವಿಶ್ವಾಸವಿಡದಂತೆ ತಡೆಯಾಗಿರುವುದು, “ಅಲ್ಲಾಹು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದನೇ?” ಎಂಬ ಅವರ ಮಾತು ಮಾತ್ರವಾಗಿತ್ತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّوْ كَانَ فِى ٱلْأَرْضِ مَلَٰٓئِكَةٌ يَمْشُونَ مُطْمَئِنِّينَ لَنَزَّلْنَا عَلَيْهِم مِّنَ ٱلسَّمَآءِ مَلَكًا رَّسُولًا

Kannada Translation - Hamza Buturಹೇಳಿರಿ: “ಭೂಮಿಯಲ್ಲಿ ದೇವದೂತರುಗಳು ಸಮಾಧಾನದಿಂದ ನಡೆಯುತ್ತಲೂ ವಾಸ ಮಾಡುತ್ತಲೂ ಇದ್ದಿದ್ದರೆ ನಾವು ಅವರಿಗೆ ಆಕಾಶದಿಂದ ಒಬ್ಬ ದೇವದೂತನನ್ನೇ ಸಂದೇಶವಾಹಕನಾಗಿ ಇಳಿಸುತ್ತಿದ್ದೆವು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ كَفَىٰ بِٱللَّهِ شَهِيدًۢا بَيْنِى وَبَيْنَكُمْ إِنَّهُۥ كَانَ بِعِبَادِهِۦ خَبِيرًۢا بَصِيرًا

Kannada Translation - Hamza Buturಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ನಿಶ್ಚಯವಾಗಿಯೂ ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَن يَهْدِ ٱللَّهُ فَهُوَ ٱلْمُهْتَدِ وَمَن يُضْلِلْ فَلَن تَجِدَ لَهُمْ أَوْلِيَآءَ مِن دُونِهِۦ وَنَحْشُرُهُمْ يَوْمَ ٱلْقِيَٰمَةِ عَلَىٰ وُجُوهِهِمْ عُمْيًا وَبُكْمًا وَصُمًّا مَّأْوَىٰهُمْ جَهَنَّمُ كُلَّمَا خَبَتْ زِدْنَٰهُمْ سَعِيرًا

Kannada Translation - Hamza Buturಅಲ್ಲಾಹು ಯಾರಿಗೆ ಸನ್ಮಾರ್ಗವನ್ನು ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದುರ್ಮಾರ್ಗಿಯಾಗಿ ಮಾಡುತ್ತಾನೋ—ಅವರಿಗೆ ಅವನಲ್ಲದೆ ಬೇರೆ ರಕ್ಷಕರನ್ನು ನೀವು ಕಾಣಲಾರಿರಿ. ಪುನರುತ್ಥಾನ ದಿನದಂದು ನಾವು ಅವರನ್ನು ಅವರ ಮುಖದ ಮೇಲೆ ನಡೆಯುವವರಾಗಿ ಒಟ್ಟುಗೂಡಿಸುವೆವು. ಆಗ ಅವರು ಕುರುಡರು, ಮೂಕರು ಮತ್ತು ಕಿವುಡರಾಗಿರುವರು. ನರಕಾಗ್ನಿಯೇ ಅವರ ವಾಸಸ್ಥಳ. ಅದು ತಣ್ಣಗಾಗುವಾಗಲೆಲ್ಲಾ ನಾವು ಅದನ್ನು ಭುಗಿಲೇಳುವಂತೆ ಉರಿಸುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ جَزَآؤُهُم بِأَنَّهُمْ كَفَرُوا۟ بِـَٔايَٰتِنَا وَقَالُوٓا۟ أَءِذَا كُنَّا عِظَٰمًا وَرُفَٰتًا أَءِنَّا لَمَبْعُوثُونَ خَلْقًا جَدِيدًا

Kannada Translation - Hamza Buturಅದು ಅವರಿಗೆ ನೀಡಲಾಗುವ ಪ್ರತಿಫಲವಾಗಿದೆ. ಏಕೆಂದರೆ ಅವರು ನಮ್ಮ ವಚನಗಳನ್ನು ನಿಷೇಧಿಸಿದರು ಮತ್ತು ಅವರು ಕೇಳಿದರು: “ನಾವು ಮೂಳೆಗಳು ಮತ್ತು ಚಿಂದಿ ಅವಶೇಷಗಳಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوَلَمْ يَرَوْا۟ أَنَّ ٱللَّهَ ٱلَّذِى خَلَقَ ٱلسَّمَٰوَٰتِ وَٱلْأَرْضَ قَادِرٌ عَلَىٰٓ أَن يَخْلُقَ مِثْلَهُمْ وَجَعَلَ لَهُمْ أَجَلًا لَّا رَيْبَ فِيهِ فَأَبَى ٱلظَّٰلِمُونَ إِلَّا كُفُورًا

Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಅವರಂತಹ ಇನ್ನೊಂದು ಸೃಷ್ಟಿಯನ್ನು ಸೃಷ್ಟಿಸುವ ಶಕ್ತಿಯಿದೆಯೆಂದು ಅವರು ನೋಡುವುದಿಲ್ಲವೇ? ಅವನು ಅವರಿಗೆ ಒಂದು ಅವಧಿಯನ್ನು ನಿಶ್ಚಯಿಸಿದನು. ಅದರಲ್ಲಿ ಸಂಶಯವೇ ಇಲ್ಲ. ಆದರೆ ಅಕ್ರಮಿಗಳು ನಿಷೇಧಿಸುವುದನ್ನಲ್ಲದೆ ಬೇರೇನೂ ಮಾಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّوْ أَنتُمْ تَمْلِكُونَ خَزَآئِنَ رَحْمَةِ رَبِّىٓ إِذًا لَّأَمْسَكْتُمْ خَشْيَةَ ٱلْإِنفَاقِ وَكَانَ ٱلْإِنسَٰنُ قَتُورًا

Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ದಯೆಯ ಖಜಾನೆಗಳು ನಿಮ್ಮ ಅಧೀನದಲ್ಲಿರುತ್ತಿದ್ದರೆ ಖರ್ಚಾಗಿ ಬಿಡಬಹುದೆಂಬ ಭಯದಿಂದ ನೀವು ಅದನ್ನು ತಡೆಹಿಡಿಯುತ್ತಿದ್ದಿರಿ. ಮನುಷ್ಯನು ಕಡು ಜಿಪುಣನಾಗಿದ್ದಾನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ ءَاتَيْنَا مُوسَىٰ تِسْعَ ءَايَٰتٍۭ بَيِّنَٰتٍ فَسْـَٔلْ بَنِىٓ إِسْرَٰٓءِيلَ إِذْ جَآءَهُمْ فَقَالَ لَهُۥ فِرْعَوْنُ إِنِّى لَأَظُنُّكَ يَٰمُوسَىٰ مَسْحُورًا

Kannada Translation - Hamza Buturನಾವು ಮೂಸಾರಿಗೆ ಒಂಬತ್ತು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೆವು.[1] ನೀವು ಇಸ್ರಾಯೇಲ್ ಮಕ್ಕಳೊಡನೆ ಮೂಸಾ ಅವರ ಬಳಿಗೆ ಬಂದಾಗ ಸಂದರ್ಭದ ಬಗ್ಗೆ ಕೇಳಿ ನೋಡಿ. ಆಗ ಫರೋಹ ಹೇಳಿದನು: “ಓ ಮೂಸಾ! ನೀನು ಖಂಡಿತ ಮಾಟಕ್ಕೊಳಗಾಗಿದ್ದೀ ಎಂದು ನನಗೆ ತೋರುತ್ತಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ لَقَدْ عَلِمْتَ مَآ أَنزَلَ هَٰٓؤُلَآءِ إِلَّا رَبُّ ٱلسَّمَٰوَٰتِ وَٱلْأَرْضِ بَصَآئِرَ وَإِنِّى لَأَظُنُّكَ يَٰفِرْعَوْنُ مَثْبُورًا

Kannada Translation - Hamza Buturಮೂಸಾ ಹೇಳಿದರು: “ಭೂಮ್ಯಾಕಾಶಗಳ ಪರಿಪಾಲಕನೇ (ಅಲ್ಲಾಹನೇ) ಇವುಗಳನ್ನು ಸ್ಪಷ್ಟ ದೃಷ್ಟಾಂತಗಳಾಗಿ ಅವತೀರ್ಣಗೊಳಿಸಿದ್ದಾನೆಂದು ಖಂಡಿತವಾಗಿಯೂ ನಿನಗೆ ತಿಳಿದಿದೆ. ಓ ಫರೋಹ! ಖಂಡಿತವಾಗಿಯೂ ನೀನು ಸರ್ವನಾಶವಾಗುವೆ ಎಂದು ನನಗೆ ತೋರುತ್ತಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَرَادَ أَن يَسْتَفِزَّهُم مِّنَ ٱلْأَرْضِ فَأَغْرَقْنَٰهُ وَمَن مَّعَهُۥ جَمِيعًا

Kannada Translation - Hamza Buturಅವನು ಅವರನ್ನು (ಇಸ್ರಾಯೇಲ್ ಮಕ್ಕಳನ್ನು) ಭೂಮಿಯಿಂದ ಓಡಿಸಲು ನಿರ್ಧರಿಸಿದನು. ಆದರೆ ನಾವು ಅವನನ್ನು ಮತ್ತು ಅವನ ಸಂಗಡಿಗರನ್ನು (ಕಡಲಲ್ಲಿ) ಮುಳುಗಿಸಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُلْنَا مِنۢ بَعْدِهِۦ لِبَنِىٓ إِسْرَٰٓءِيلَ ٱسْكُنُوا۟ ٱلْأَرْضَ فَإِذَا جَآءَ وَعْدُ ٱلْـَٔاخِرَةِ جِئْنَا بِكُمْ لَفِيفًا

Kannada Translation - Hamza Buturಅವನ ಸಾವಿನ ನಂತರ ನಾವು ಇಸ್ರಾಯೇಲ್ ಮಕ್ಕಳೊಡನೆ ಹೇಳಿದೆವು: “ನೀವು ಈ ಭೂಮಿಯಲ್ಲಿ ವಾಸಿಸಿರಿ. ಪರಲೋಕದ ವಾಗ್ದಾನವು ಬಂದು ಬಿಟ್ಟರೆ ನಾವು ನಿಮ್ಮೆಲ್ಲರನ್ನೂ ಒಟ್ಟಾಗಿ ಕರೆತರುವೆವು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَبِٱلْحَقِّ أَنزَلْنَٰهُ وَبِٱلْحَقِّ نَزَلَ وَمَآ أَرْسَلْنَٰكَ إِلَّا مُبَشِّرًا وَنَذِيرًا

Kannada Translation - Hamza Buturನಾವು ಇದನ್ನು (ಕುರ್‌ಆನನ್ನು) ಸತ್ಯದೊಂದಿಗೇ ಅವತೀರ್ಣಗೊಳಿಸಿದ್ದೇವೆ ಮತ್ತು ಅದು ಸತ್ಯದೊಂದಿಗೇ ಅವತೀರ್ಣವಾಗಿದೆ. ನಾವು ನಿಮ್ಮನ್ನು ಸುವಾರ್ತೆ ತಿಳಿಸುವುದಕ್ಕಾಗಿ ಮತ್ತು ಮುನ್ನೆಚ್ಚರಿಕೆ ನೀಡುವುದಕ್ಕಾಗಿಯೇ ಹೊರತು ಕಳುಹಿಸಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُرْءَانًا فَرَقْنَٰهُ لِتَقْرَأَهُۥ عَلَى ٱلنَّاسِ عَلَىٰ مُكْثٍ وَنَزَّلْنَٰهُ تَنزِيلًا

Kannada Translation - Hamza Buturನೀವು ಈ ಕುರ್‌ಆನನ್ನು ಜನರಿಗೆ ಸಾವಕಾಶವಾಗಿ ಓದಿಕೊಡುವುದಕ್ಕಾಗಿ ನಾವು ಇದನ್ನು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿದ್ದೇವೆ. ನಾವು ಅದನ್ನು ನಿಮಗೆ ಹಂತ ಹಂತವಾಗಿ ಅವತೀರ್ಣಗೊಳಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ ءَامِنُوا۟ بِهِۦٓ أَوْ لَا تُؤْمِنُوٓا۟ إِنَّ ٱلَّذِينَ أُوتُوا۟ ٱلْعِلْمَ مِن قَبْلِهِۦٓ إِذَا يُتْلَىٰ عَلَيْهِمْ يَخِرُّونَ لِلْأَذْقَانِ سُجَّدًا

Kannada Translation - Hamza Buturಹೇಳಿರಿ “ನೀವು ಇದರಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ ಅಥವಾ ವಿಶ್ವಾಸವಿಡಬೇಡಿ. ನಿಶ್ಚಯವಾಗಿಯೂ ಇದಕ್ಕೆ ಮೊದಲು ಜ್ಞಾನ ನೀಡಲಾದವರು ಯಾರೋ—ಅವರಿಗೆ ಇದನ್ನು ಓದಿಕೊಟ್ಚರೆ ಅವರು ಸಾಷ್ಟಾಂಗ ಮಾಡುತ್ತಾ ಗಲ್ಲಗಳ ಮೇಲೆ ಬೀಳುತ್ತಾರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَقُولُونَ سُبْحَٰنَ رَبِّنَآ إِن كَانَ وَعْدُ رَبِّنَا لَمَفْعُولًا

Kannada Translation - Hamza Buturಅವರು ಹೇಳುತ್ತಾರೆ: “ನಮ್ಮ ಪರಿಪಾಲಕನು (ಅಲ್ಲಾಹು) ಪರಿಶುದ್ಧನು! ನಮ್ಮ ಪರಿಪಾಲಕನ (ಅಲ್ಲಾಹನ) ವಾಗ್ದಾನವು ಖಂಡಿತ ಜಾರಿಯಾಗುತ್ತದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَخِرُّونَ لِلْأَذْقَانِ يَبْكُونَ وَيَزِيدُهُمْ خُشُوعًا

Kannada Translation - Hamza Buturಅವರು ಅಳುತ್ತಾ ಗಲ್ಲಗಳ ಮೇಲೆ ಬೀಳುತ್ತಾರೆ. ಅದು ಅವರಿಗೆ ವಿನಮ್ರತೆಯನ್ನು ಹೆಚ್ಚಿಸುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱدْعُوا۟ ٱللَّهَ أَوِ ٱدْعُوا۟ ٱلرَّحْمَٰنَ أَيًّا مَّا تَدْعُوا۟ فَلَهُ ٱلْأَسْمَآءُ ٱلْحُسْنَىٰ وَلَا تَجْهَرْ بِصَلَاتِكَ وَلَا تُخَافِتْ بِهَا وَٱبْتَغِ بَيْنَ ذَٰلِكَ سَبِيلًا

Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನೀವು ಅಲ್ಲಾಹು ಎಂದು ಕರೆಯಿರಿ ಅಥವಾ ರಹ್ಮಾನ್ ಎಂದು ಕರೆಯಿರಿ. ನೀವು ಯಾವ ಹೆಸರಲ್ಲಿ ಕರೆದರೂ ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ.” ನೀವು ನಮಾಝನ್ನು ಏರಿದ ಧ್ವನಿಯಲ್ಲಿ ನಿರ್ವಹಿಸಬೇಡಿ. ಸಂಪೂರ್ಣ ತಗ್ಗಿದ ಧ್ವನಿಯಲ್ಲೂ ನಿರ್ವಹಿಸಬೇಡಿ. ಬದಲಿಗೆ, ಅವುಗಳ ನಡುವಿನ ಮಾರ್ಗವನ್ನು ಹುಡುಕಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُلِ ٱلْحَمْدُ لِلَّهِ ٱلَّذِى لَمْ يَتَّخِذْ وَلَدًا وَلَمْ يَكُن لَّهُۥ شَرِيكٌ فِى ٱلْمُلْكِ وَلَمْ يَكُن لَّهُۥ وَلِىٌّ مِّنَ ٱلذُّلِّ وَكَبِّرْهُ تَكْبِيرًۢا

Kannada Translation - Hamza Buturಹೇಳಿರಿ: “ಸರ್ವಸ್ತುತಿಗಳು ಅಲ್ಲಾಹನಿಗೆ ಮೀಸಲು. ಅವನಿಗೆ ಯಾವುದೇ ಸಂತಾನವಿಲ್ಲ. ವಿಶ್ವದ ಆಧಿಪತ್ಯದಲ್ಲಿ ಅವನಿಗೆ ಯಾವುದೇ ಪಾಲುದಾರರಿಲ್ಲ. ಯಾವುದೇ ಸಂರಕ್ಷಕನನ್ನು ಇಟ್ಟುಕೊಳ್ಳುವಷ್ಟು ಅವನು ದುರ್ಬಲನೂ ಅಲ್ಲ. ಅವನ ಮಹತ್ವವನ್ನು ಪೂರ್ಣರೀತಿಯಲ್ಲಿ ಕೊಂಡಾಡಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70