caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Kahf الكهف

110 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 69

بِسْمِ ٱللَّهِ ٱلرَّحْمَٰنِ ٱلرَّحِيمِ ٱلْحَمْدُ لِلَّهِ ٱلَّذِىٓ أَنزَلَ عَلَىٰ عَبْدِهِ ٱلْكِتَٰبَ وَلَمْ يَجْعَل لَّهُۥ عِوَجَا

Kannada Translation - Hamza Buturತನ್ನ ದಾಸನ ಮೇಲೆ ಕುರ್‌ಆನ್ ಅವತೀರ್ಣಗೊಳಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅವನು ಅದರಲ್ಲಿ ಯಾವುದೇ ಕುಂದುಕೊರತೆಗಳನ್ನು ಮಾಡಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَيِّمًا لِّيُنذِرَ بَأْسًا شَدِيدًا مِّن لَّدُنْهُ وَيُبَشِّرَ ٱلْمُؤْمِنِينَ ٱلَّذِينَ يَعْمَلُونَ ٱلصَّٰلِحَٰتِ أَنَّ لَهُمْ أَجْرًا حَسَنًا

Kannada Translation - Hamza Buturಅವನು ಅದನ್ನು ಸರಿಯಾದ ರೀತಿಯಲ್ಲಿಟ್ಟಿದ್ದಾನೆ. ಅವನ ಕಡೆಯ ಕಠೋರ ಶಿಕ್ಷೆಯ ಬಗ್ಗೆ ಎಚ್ಚರಿಕೆ ನೀಡಲು ಮತ್ತು ಸತ್ಕರ್ಮವೆಸಗುವ ಸತ್ಯವಿಶ್ವಾಸಿಗಳಿಗೆ ಅತ್ಯುತ್ತಮ ಪ್ರತಿಫಲವಿದೆಯೆಂಬ ಸುವಾರ್ತೆಯನ್ನು ತಿಳಿಸಲು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَّٰكِثِينَ فِيهِ أَبَدًا

Kannada Translation - Hamza Buturಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيُنذِرَ ٱلَّذِينَ قَالُوا۟ ٱتَّخَذَ ٱللَّهُ وَلَدًا

Kannada Translation - Hamza Buturಮತ್ತು “ಅಲ್ಲಾಹನಿಗೆ ಮಕ್ಕಳಿದ್ದಾರೆ” ಎಂದು ಹೇಳುವವರಿಗೆ ಮುನ್ನೆಚ್ಚರಿಕೆ ನೀಡಲು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَّا لَهُم بِهِۦ مِنْ عِلْمٍ وَلَا لِـَٔابَآئِهِمْ كَبُرَتْ كَلِمَةً تَخْرُجُ مِنْ أَفْوَٰهِهِمْ إِن يَقُولُونَ إِلَّا كَذِبًا

Kannada Translation - Hamza Buturಅವರಿಗೆ ಅದರ ಬಗ್ಗೆ ಯಾವುದೇ ಜ್ಞಾನವಿಲ್ಲ; ಅವರ ಪೂರ್ವಜರಿಗೂ ಇಲ್ಲ. ಅವರ ಬಾಯಿಯಿಂದ ಹೊರಬರುವ ಆ ಮಾತು ಬಹಳ ಗಂಭೀರವಾಗಿದೆ. ಅವರು ಸುಳ್ಳನ್ನು ಮಾತ್ರ ಹೇಳುತ್ತಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَعَلَّكَ بَٰخِعٌ نَّفْسَكَ عَلَىٰٓ ءَاثَٰرِهِمْ إِن لَّمْ يُؤْمِنُوا۟ بِهَٰذَا ٱلْحَدِيثِ أَسَفًا

Kannada Translation - Hamza Buturಅವರು ಈ ಸಂದೇಶದಲ್ಲಿ ವಿಶ್ವಾಸವಿಡದಿದ್ದರೆ, ಆ ನೋವಿನಿಂದ ನೀವು ನಿಮ್ಮ ಜೀವಕ್ಕೆ ಕುತ್ತು ತರಲೂಬಹುದು.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّا جَعَلْنَا مَا عَلَى ٱلْأَرْضِ زِينَةً لَّهَا لِنَبْلُوَهُمْ أَيُّهُمْ أَحْسَنُ عَمَلًا

Kannada Translation - Hamza Buturನಿಶ್ಚಯವಾಗಿಯೂ ನಾವು ಭೂಮಿಯ ಮೇಲಿರುವುದನ್ನು ಅದಕ್ಕೊಂದು ಅಲಂಕಾರವಾಗಿ ಮಾಡಿದ್ದೇವೆ. ಮನುಷ್ಯರಲ್ಲಿ ಅತ್ಯುತ್ತಮ ಕರ್ಮಗಳನ್ನು ಮಾಡುವವರು ಯಾರೆಂದು ಪರೀಕ್ಷಿಸುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِنَّا لَجَٰعِلُونَ مَا عَلَيْهَا صَعِيدًا جُرُزًا

Kannada Translation - Hamza Buturನಿಶ್ಚಯವಾಗಿಯೂ ನಾವು ಅದರ (ಭೂಮಿಯ) ಮೇಲಿರುವುದನ್ನು ಸಮತಟ್ಟಾದ ಬಯಲು ಪ್ರದೇಶವಾಗಿ ಪರಿವರ್ತಿಸುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ حَسِبْتَ أَنَّ أَصْحَٰبَ ٱلْكَهْفِ وَٱلرَّقِيمِ كَانُوا۟ مِنْ ءَايَٰتِنَا عَجَبًا

Kannada Translation - Hamza Buturಗುಹೆ ಮತ್ತು ಶಿಲಾಶಾಸನದ ಜನರು ನಮ್ಮ ದೃಷ್ಟಾಂತಗಳಲ್ಲಿ ಅತಿದೊಡ್ಡ ಅದ್ಭುತವಾಗಿದ್ದಾರೆಂದು ನೀವು ಭಾವಿಸಿದ್ದೀರಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِذْ أَوَى ٱلْفِتْيَةُ إِلَى ٱلْكَهْفِ فَقَالُوا۟ رَبَّنَآ ءَاتِنَا مِن لَّدُنكَ رَحْمَةً وَهَيِّئْ لَنَا مِنْ أَمْرِنَا رَشَدًا

Kannada Translation - Hamza Buturಆ ಯುವಕರು ಗುಹೆಯಲ್ಲಿ ಆಶ್ರಯ ಪಡೆದ ಸಂದರ್ಭ.[1] ಅವರು ಹೇಳಿದರು: “ನಮ್ಮ ಪರಿಪಾಲಕನೇ! ನಮಗೆ ನಿನ್ನ ಕಡೆಯ ದಯೆಯನ್ನು ನೀಡಿ ಆಶೀರ್ವದಿಸು ಮತ್ತು ನಮ್ಮ ಕಾರ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ನಮಗೆ ಅನುಕೂಲ ಮಾಡಿಕೊಡು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَضَرَبْنَا عَلَىٰٓ ءَاذَانِهِمْ فِى ٱلْكَهْفِ سِنِينَ عَدَدًا

Kannada Translation - Hamza Buturಹೀಗೆ ನಾವು ಅನೇಕ ವರ್ಷಗಳ ಕಾಲ ಆ ಗುಹೆಯಲ್ಲಿ ಅವರ ಕಿವಿಗಳನ್ನು ಮುಚ್ಚಿದೆವು (ಅವರನ್ನು ನಿದ್ದೆಗೆ ಶರಣಾಗಿಸಿದೆವು).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ بَعَثْنَٰهُمْ لِنَعْلَمَ أَىُّ ٱلْحِزْبَيْنِ أَحْصَىٰ لِمَا لَبِثُوٓا۟ أَمَدًا

Kannada Translation - Hamza Buturನಂತರ ನಾವು ಅವರನ್ನು ಎಬ್ಬಿಸಿದೆವು. ಅವರು ಗುಹೆಯಲ್ಲಿ ಎಷ್ಟು ವರ್ಷ ಕಳೆದಿದ್ದರೆಂದು ಆ ಎರಡು ಗುಂಪುಗಳಲ್ಲಿ ಖಚಿತವಾಗಿ ಲೆಕ್ಕ ಮಾಡಿದವರು ಯಾರೆಂದು ತಿಳಿಯುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

نَّحْنُ نَقُصُّ عَلَيْكَ نَبَأَهُم بِٱلْحَقِّ إِنَّهُمْ فِتْيَةٌ ءَامَنُوا۟ بِرَبِّهِمْ وَزِدْنَٰهُمْ هُدًى

Kannada Translation - Hamza Buturನಾವು ನಿಮಗೆ ಅವರ ನೈಜ ಸಮಾಚಾರವನ್ನು ವಿವರಿಸುವೆವು. ಅವರು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟ ಕೆಲವು ಯುವಕರಾಗಿದ್ದರು. ನಾವು ಅವರಿಗೆ ಸನ್ಮಾರ್ಗವನ್ನು ಹೆಚ್ಚಿಸಿಕೊಟ್ಟೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَرَبَطْنَا عَلَىٰ قُلُوبِهِمْ إِذْ قَامُوا۟ فَقَالُوا۟ رَبُّنَا رَبُّ ٱلسَّمَٰوَٰتِ وَٱلْأَرْضِ لَن نَّدْعُوَا۟ مِن دُونِهِۦٓ إِلَٰهًا لَّقَدْ قُلْنَآ إِذًا شَطَطًا

Kannada Translation - Hamza Buturಅವರು ಎದ್ದುನಿಂತು, “ಭೂಮ್ಯಾಕಾಶಗಳ ಪರಿಪಾಲಕನೇ ನಮ್ಮ ಪರಿಪಾಲಕ. ನಾವು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ. ಹಾಗೇನಾದರೂ ಆದರೆ ನಾವು ಕಡು ಅನ್ಯಾಯದ ಮಾತನ್ನು ಹೇಳಿದವರಾಗುವೆವು” ಎಂದು ಘೋಷಿಸಿದ ಸಂದರ್ಭದಲ್ಲಿ ನಾವು ಅವರ ಹೃದಯಗಳಿಗೆ ದೃಢತೆಯನ್ನು ನೀಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هَٰٓؤُلَآءِ قَوْمُنَا ٱتَّخَذُوا۟ مِن دُونِهِۦٓ ءَالِهَةً لَّوْلَا يَأْتُونَ عَلَيْهِم بِسُلْطَٰنٍۭ بَيِّنٍ فَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا

Kannada Translation - Hamza Butur“ನಮ್ಮ ಈ ಜನರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಅವರು ದೇವರುಗಳು ಎಂಬುದಕ್ಕೆ ಇವರೇಕೆ ಸ್ಪಷ್ಟ ಸಾಕ್ಷ್ಯಾಧಾರವನ್ನು ತರುವುದಿಲ್ಲ? ಅಲ್ಲಾಹನ ಹೆಸರಲ್ಲಿ ಸುಳ್ಳು ಆರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذِ ٱعْتَزَلْتُمُوهُمْ وَمَا يَعْبُدُونَ إِلَّا ٱللَّهَ فَأْوُۥٓا۟ إِلَى ٱلْكَهْفِ يَنشُرْ لَكُمْ رَبُّكُم مِّن رَّحْمَتِهِۦ وَيُهَيِّئْ لَكُم مِّنْ أَمْرِكُم مِّرْفَقًا

Kannada Translation - Hamza Butur(ಅವರು ಪರಸ್ಪರ ಹೇಳಿದರು): “ನೀವು ಅವರನ್ನು ಮತ್ತು ಅಲ್ಲಾಹನನ್ನು ಬಿಟ್ಟು ಅವರು ಆರಾಧಿಸುತ್ತಿರುವ ದೇವರುಗಳನ್ನು ತೊರೆದಿದ್ದೀರಿ. ಆದ್ದರಿಂದ ನೀವು ಆ ಗುಹೆಯಲ್ಲಿ ಆಶ್ರಯ ಪಡೆಯಿರಿ. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಅವನ ದಯೆಯನ್ನು ಹೇರಳವಾಗಿ ದಯಪಾಲಿಸುವನು ಮತ್ತು ನಿಮ್ಮ ವಿಷಯದಲ್ಲಿ ನಿಮಗೆ ಅನುಕೂಲತೆ ಮಾಡಿಕೊಡುವನು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَرَى ٱلشَّمْسَ إِذَا طَلَعَت تَّزَٰوَرُ عَن كَهْفِهِمْ ذَاتَ ٱلْيَمِينِ وَإِذَا غَرَبَت تَّقْرِضُهُمْ ذَاتَ ٱلشِّمَالِ وَهُمْ فِى فَجْوَةٍ مِّنْهُ ذَٰلِكَ مِنْ ءَايَٰتِ ٱللَّهِ مَن يَهْدِ ٱللَّهُ فَهُوَ ٱلْمُهْتَدِ وَمَن يُضْلِلْ فَلَن تَجِدَ لَهُۥ وَلِيًّا مُّرْشِدًا

Kannada Translation - Hamza Buturಸೂರ್ಯ ಉದಯಿಸುವಾಗ ಅದು ಅವರ ಗುಹೆಯ ಬಲಭಾಗಕ್ಕೆ ಚಲಿಸುವುದನ್ನು ಮತ್ತು ಸೂರ್ಯ ಅಸ್ತಮಿಸುವಾಗ ಅದು ಅವರನ್ನು ದಾಟಿ ಎಡಭಾಗಕ್ಕೆ ಚಲಿಸುವುದನ್ನು ನೀವು ಕಾಣುವಿರಿ.[1] ಅವರು ಆ ಗುಹೆಯ ವಿಸ್ತಾರವಾದ ಭಾಗದಲ್ಲಿದ್ದಾರೆ. ಅದು ಅಲ್ಲಾಹನ ದೃಷ್ಟಾಂತಗಳಲ್ಲಿ ಒಂದಾಗಿದೆ. ಅಲ್ಲಾಹು ಯಾರಿಗೆ ಸನ್ಮಾರ್ಗವನ್ನು ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸರಿಯಾದ ಮಾರ್ಗವನ್ನು ತೋರಿಸಿಕೊಡುವ ಯಾವುದೇ ರಕ್ಷಕನನ್ನು ನೀವು ಎಂದಿಗೂ ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَحْسَبُهُمْ أَيْقَاظًا وَهُمْ رُقُودٌ وَنُقَلِّبُهُمْ ذَاتَ ٱلْيَمِينِ وَذَاتَ ٱلشِّمَالِ وَكَلْبُهُم بَٰسِطٌ ذِرَاعَيْهِ بِٱلْوَصِيدِ لَوِ ٱطَّلَعْتَ عَلَيْهِمْ لَوَلَّيْتَ مِنْهُمْ فِرَارًا وَلَمُلِئْتَ مِنْهُمْ رُعْبًا

Kannada Translation - Hamza Buturಅವರು ಎಚ್ಚರದಲ್ಲಿದ್ದಾರೆಂದು ನೀವು ಭಾವಿಸಬಹುದು. ಆದರೆ ಅವರು ನಿದ್ರೆಯಲ್ಲಿದ್ದಾರೆ. ನಾವು ಅವರನ್ನು ಬಲಭಾಗಕ್ಕೂ ಎಡಭಾಗಕ್ಕೂ ಹೊರಳುವಂತೆ ಮಾಡುತ್ತೇವೆ. ಅವರ ನಾಯಿ ಗುಹೆಯ ಬಾಗಿಲಲ್ಲಿ ತನ್ನ ಎರಡು ಕೈಗಳನ್ನು ಚಾಚಿಕೊಂಡಿದೆ. ನೀವೇನಾದರೂ ಅವರ ಕಡೆಗೆ ಇಣುಕಿದರೆ, ಖಂಡಿತ ಬೆನ್ನು ತಿರುಗಿಸಿ ಓಡುವಿರಿ ಮತ್ತು ಆ ದೃಶ್ಯವನ್ನು ಕಂಡು ನೀವು ಭಯವಿಹ್ವಲರಾಗಿ ಬಿಡುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَذَٰلِكَ بَعَثْنَٰهُمْ لِيَتَسَآءَلُوا۟ بَيْنَهُمْ قَالَ قَآئِلٌ مِّنْهُمْ كَمْ لَبِثْتُمْ قَالُوا۟ لَبِثْنَا يَوْمًا أَوْ بَعْضَ يَوْمٍ قَالُوا۟ رَبُّكُمْ أَعْلَمُ بِمَا لَبِثْتُمْ فَٱبْعَثُوٓا۟ أَحَدَكُم بِوَرِقِكُمْ هَٰذِهِۦٓ إِلَى ٱلْمَدِينَةِ فَلْيَنظُرْ أَيُّهَآ أَزْكَىٰ طَعَامًا فَلْيَأْتِكُم بِرِزْقٍ مِّنْهُ وَلْيَتَلَطَّفْ وَلَا يُشْعِرَنَّ بِكُمْ أَحَدًا

Kannada Translation - Hamza Buturಈ ರೀತಿ ಅವರು ಪರಸ್ಪರ ಕೇಳುವುದಕ್ಕಾಗಿ ನಾವು ಅವರನ್ನು ಎಬ್ಬಿಸಿದೆವು. ಅವರಲ್ಲೊಬ್ಬರು ಕೇಳಿದರು: “ನೀವು ಎಷ್ಟು ಕಾಲ ಗುಹೆಯಲ್ಲಿದ್ದಿರಿ?” ಇತರರು ಹೇಳಿದರು: “ನಾವು ಒಂದು ದಿನ ಅಥವಾ ದಿನದ ಕೆಲವು ತಾಸುಗಳಷ್ಟು ಕಾಲ ಗುಹೆಯಲ್ಲಿದ್ದೆವು.” ಅವರು ಹೇಳಿದರು: “ನೀವು ಎಷ್ಟು ಕಾಲ ಗುಹೆಯಲ್ಲಿದ್ದಿರಿ ಎಂಬುದನ್ನು ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನೀವು ನಿಮ್ಮಲ್ಲೊಬ್ಬರನ್ನು ಈ ಬೆಳ್ಳಿ ನಾಣ್ಯದೊಂದಿಗೆ ನಗರಕ್ಕೆ ಕಳುಹಿಸಿ. ಅಲ್ಲಿ ಯಾರ ಬಳಿ ಶುದ್ಧ ಆಹಾರವಿದೆಯೆಂದು ನೋಡಿ ಅವನು ನಿಮಗೆ ಆಹಾರವನ್ನು ತರಲಿ. ಅವನು ಅತ್ಯಂತ ಜಾಗರೂಕನಾಗಿರಲಿ ಮತ್ತು ನಿಮ್ಮ ಬಗ್ಗೆ ಯಾರಿಗೂ ಸುಳಿವು ನೀಡದಿರಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُمْ إِن يَظْهَرُوا۟ عَلَيْكُمْ يَرْجُمُوكُمْ أَوْ يُعِيدُوكُمْ فِى مِلَّتِهِمْ وَلَن تُفْلِحُوٓا۟ إِذًا أَبَدًا

Kannada Translation - Hamza Buturಅವರಿಗೆ ನಿಮ್ಮ ಬಗ್ಗೆ ಮಾಹಿತಿ ಸಿಕ್ಕಿದರೆ, ಅವರು ನಿಮ್ಮನ್ನು ಕಲ್ಲೆಸೆದು ಕೊಲ್ಲುವರು; ಅಥವಾ ನಿಮ್ಮನ್ನು ಬಲವಂತವಾಗಿ ಅವರ ಧರ್ಮಕ್ಕೆ ಸೇರಿಸುವರು. ಹಾಗೇನಾದರೂ ಆದರೆ ನೀವೆಂದಿಗೂ ಯಶಸ್ವಿಯಾಗಲಾರಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَذَٰلِكَ أَعْثَرْنَا عَلَيْهِمْ لِيَعْلَمُوٓا۟ أَنَّ وَعْدَ ٱللَّهِ حَقٌّ وَأَنَّ ٱلسَّاعَةَ لَا رَيْبَ فِيهَآ إِذْ يَتَنَٰزَعُونَ بَيْنَهُمْ أَمْرَهُمْ فَقَالُوا۟ ٱبْنُوا۟ عَلَيْهِم بُنْيَٰنًا رَّبُّهُمْ أَعْلَمُ بِهِمْ قَالَ ٱلَّذِينَ غَلَبُوا۟ عَلَىٰٓ أَمْرِهِمْ لَنَتَّخِذَنَّ عَلَيْهِم مَّسْجِدًا

Kannada Translation - Hamza Buturಈ ರೀತಿ ನಾವು ಅವರ ಬಗ್ಗೆ ಜನರಿಗೆ ಸುಳಿವು ನೀಡಿದೆವು. ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯದಿನವು ಸಂಭವಿಸುತ್ತದೆಯೆಂಬ ವಿಷಯದಲ್ಲಿ ಸಂಶಯವೇ ಇಲ್ಲ ಎಂದು ಜನರು ತಿಳಿಯುವುದಕ್ಕಾಗಿ. ಅವರು ಗುಹಾವಾಸಿಗಳ ಬಗ್ಗೆ ಪರಸ್ಪರ ತರ್ಕಿಸುತ್ತಿದ್ದ ಸಂದರ್ಭ. ಅವರು ಹೇಳಿದರು: “ಇವರ ಗುಹೆಯ ಮೇಲೆ ಒಂದು ಕಟ್ಟಡವನ್ನು ನಿರ್ಮಿಸಿರಿ. ಅವರ ಬಗ್ಗೆ ಅವರ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.” ಅವರ ವಿಷಯದಲ್ಲಿ ಪ್ರಾಬಲ್ಯ ಪಡೆದವರು ಹೇಳಿದರು: “ನಿಶ್ಚಯವಾಗಿಯೂ ನಾವು ಅವರ ಗುಹೆಯ ಬಳಿ ಒಂದು ಮಸೀದಿಯನ್ನು ನಿರ್ಮಿಸುತ್ತೇವೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سَيَقُولُونَ ثَلَٰثَةٌ رَّابِعُهُمْ كَلْبُهُمْ وَيَقُولُونَ خَمْسَةٌ سَادِسُهُمْ كَلْبُهُمْ رَجْمًۢا بِٱلْغَيْبِ وَيَقُولُونَ سَبْعَةٌ وَثَامِنُهُمْ كَلْبُهُمْ قُل رَّبِّىٓ أَعْلَمُ بِعِدَّتِهِم مَّا يَعْلَمُهُمْ إِلَّا قَلِيلٌ فَلَا تُمَارِ فِيهِمْ إِلَّا مِرَآءً ظَٰهِرًا وَلَا تَسْتَفْتِ فِيهِم مِّنْهُمْ أَحَدًا

Kannada Translation - Hamza Buturಅವರಲ್ಲಿ ಕೆಲವರು ಹೇಳುತ್ತಾರೆ: “ಗುಹಾವಾಸಿಗಳ ಸಂಖ್ಯೆ ಮೂರು; ನಾಲ್ಕನೆಯದು ಅವರ ನಾಯಿ.” ಇತರ ಕೆಲವರು ಹೇಳುತ್ತಾರೆ: “ಗುಹಾವಾಸಿಗಳ ಸಂಖ್ಯೆ ಐದು; ಆರನೆಯದು ಅವರ ನಾಯಿ.” ಅವರು ಅದೃಶ್ಯ ವಿಷಯಗಳ ಬಗ್ಗೆ ಊಹಿಸಿ ಹೇಳುತ್ತಿದ್ದಾರೆ. ಇತರ ಕೆಲವರು ಹೇಳುತ್ತಾರೆ: “ಗುಹಾವಾಸಿಗಳ ಸಂಖ್ಯೆ ಏಳು; ಎಂಟನೆಯದು ಅವರ ನಾಯಿ.” (ಪ್ರವಾದಿಯವರೇ) ಹೇಳಿರಿ: “ಅವರ ಸಂಖ್ಯೆ ಎಷ್ಟೆಂದು ನನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಕೆಲವರಿಗೆ ಮಾತ್ರ ಅವರ ಬಗ್ಗೆ ಮಾಹಿತಿಯಿದೆ. ಆದ್ದರಿಂದ ನೀವು ಅವರ ವಿಷಯದಲ್ಲಿ ಸ್ಪಷ್ಟ ಸಾಕ್ಷ್ಯವಿಲ್ಲದೆ ತರ್ಕಿಸಬೇಡಿ. ಅವರ ಬಗ್ಗೆ ಜನರಲ್ಲಿ ಯಾರೊಡನೆಯೂ ಅಭಿಪ್ರಾಯ ಕೇಳಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا تَقُولَنَّ لِشَا۟ىْءٍ إِنِّى فَاعِلٌ ذَٰلِكَ غَدًا

Kannada Translation - Hamza Buturಯಾವುದೇ ವಿಷಯದ ಬಗ್ಗೆ “ನಾನು ನಾಳೆ ಅದನ್ನು ಖಂಡಿತ ಮಾಡುತ್ತೇನೆ” ಎಂದು ಹೇಳಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّآ أَن يَشَآءَ ٱللَّهُ وَٱذْكُر رَّبَّكَ إِذَا نَسِيتَ وَقُلْ عَسَىٰٓ أَن يَهْدِيَنِ رَبِّى لِأَقْرَبَ مِنْ هَٰذَا رَشَدًا

Kannada Translation - Hamza Butur“ಇನ್ ಶಾ ಅಲ್ಲಾಹ್” (ಅಲ್ಲಾಹು ಇಚ್ಛಿಸಿದರೆ ಮಾಡುತ್ತೇನೆ) ಎಂದು ಅದಕ್ಕೆ ಸೇರಿಸದೆ.[1] ನಿಮಗೆ ಅದನ್ನು ಸೇರಿಸಲು ಮರೆತುಹೋದರೆ ನೆನಪಾದಾಗ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ಮರಿಸಿರಿ. “ಸನ್ಮಾರ್ಗಕ್ಕೆ ಇದಕ್ಕಿಂತಲೂ ಹೆಚ್ಚು ಹತ್ತಿರವಾಗಿರುವ ಮಾತಿಗೆ ನನ್ನ ಪರಿಪಾಲಕನು (ಅಲ್ಲಾಹು) ನನ್ನನ್ನು ಮುನ್ನಡೆಸುವನೆಂದು ನನಗೆ ಸಂಪೂರ್ಣ ಭರವಸೆಯಿದೆ” ಎಂದು ಹೇಳಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَبِثُوا۟ فِى كَهْفِهِمْ ثَلَٰثَ مِا۟ئَةٍ سِنِينَ وَٱزْدَادُوا۟ تِسْعًا

Kannada Translation - Hamza Buturಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳ ಕಾಲ ವಾಸಿಸಿದ್ದರು ಮತ್ತು ಅವರು ಒಂಬತ್ತು ವರ್ಷಗಳನ್ನು ಹೆಚ್ಚಿಸಿದರು.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱللَّهُ أَعْلَمُ بِمَا لَبِثُوا۟ لَهُۥ غَيْبُ ٱلسَّمَٰوَٰتِ وَٱلْأَرْضِ أَبْصِرْ بِهِۦ وَأَسْمِعْ مَا لَهُم مِّن دُونِهِۦ مِن وَلِىٍّ وَلَا يُشْرِكُ فِى حُكْمِهِۦٓ أَحَدًا

Kannada Translation - Hamza Buturಹೇಳಿರಿ: “ಅವರು ಎಷ್ಟು ಕಾಲ ವಾಸಿಸಿದ್ದರು ಎಂಬ ಬಗ್ಗೆ ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ. ಭೂಮ್ಯಾಕಾಶಗಳ ಅದೃಶ್ಯ ಜ್ಞಾನವಿರುವುದು ಅವನಿಗೆ ಮಾತ್ರ. ಅವನ ದೃಷ್ಟಿ ಮತ್ತು ಕೇಳುವ ಶಕ್ತಿ ಎಷ್ಟು ಸೂಕ್ಷ್ಮವಾಗಿದೆ! ಅವರಿಗೆ ಅವನ ಹೊರತು ಬೇರೆ ರಕ್ಷಕರಿಲ್ಲ. ಅವನು ತನ್ನ ಶಾಸನಾಧಿಕಾರದಲ್ಲಿ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱتْلُ مَآ أُوحِىَ إِلَيْكَ مِن كِتَابِ رَبِّكَ لَا مُبَدِّلَ لِكَلِمَٰتِهِۦ وَلَن تَجِدَ مِن دُونِهِۦ مُلْتَحَدًا

Kannada Translation - Hamza Buturನಿಮಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಗ್ರಂಥದಿಂದ ನೀಡಲಾದ ದೇವವಾಣಿಗಳನ್ನು ಪಠಿಸಿರಿ. ಅವನ ವಚನಗಳಿಗೆ ಬದಲಾವಣೆ ತರಲು ಯಾರಿಗೂ ಸಾಧ್ಯವಿಲ್ಲ. ಅವನ ಹೊರತು ಯಾವುದೇ ಆಶ್ರಯವನ್ನು ನೀವೆಂದಿಗೂ ಕಾಣಲಾರಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱصْبِرْ نَفْسَكَ مَعَ ٱلَّذِينَ يَدْعُونَ رَبَّهُم بِٱلْغَدَوٰةِ وَٱلْعَشِىِّ يُرِيدُونَ وَجْهَهُۥ وَلَا تَعْدُ عَيْنَاكَ عَنْهُمْ تُرِيدُ زِينَةَ ٱلْحَيَوٰةِ ٱلدُّنْيَا وَلَا تُطِعْ مَنْ أَغْفَلْنَا قَلْبَهُۥ عَن ذِكْرِنَا وَٱتَّبَعَ هَوَىٰهُ وَكَانَ أَمْرُهُۥ فُرُطًا

Kannada Translation - Hamza Buturತಮ್ಮ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಯನ್ನು ಬಯಸುತ್ತಾ, ಮುಂಜಾನೆ ಮತ್ತು ಸಂಜೆ ಅವನನ್ನು ಕರೆದು ಪ್ರಾರ್ಥಿಸುವವರ ಜೊತೆಗೆ ನೀವು ನಿಮ್ಮನ್ನು ಸ್ಥೈರ್ಯದಿಂದ ನಿಲ್ಲಿಸಿರಿ. ಇಹಲೋಕ ಜೀವನದ ಅಲಂಕಾರಗಳಿಗೆ ಮರುಳಾಗಿ ನಿಮ್ಮ ದೃಷ್ಟಿಯು ಅವರಿಂದ ದೂರವಾಗದಿರಲಿ. ನಾವು ಯಾರ ಹೃದಯಕ್ಕೆ ನಮ್ಮ ನೆನಪು ಬರದಂತೆ ಮಾಡಿದ್ದೇವೆಯೋ, ಯಾರು ಸ್ವೇಚ್ಛೆಗಳನ್ನು ಹಿಂಬಾಲಿಸುತ್ತಾನೋ ಮತ್ತು ಯಾರ ಕರ್ಮಗಳು ಹದ್ದು ಮೀರಿವೆಯೋ ಅವರನ್ನು ಅನುಸರಿಸಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقُلِ ٱلْحَقُّ مِن رَّبِّكُمْ فَمَن شَآءَ فَلْيُؤْمِن وَمَن شَآءَ فَلْيَكْفُرْ إِنَّآ أَعْتَدْنَا لِلظَّٰلِمِينَ نَارًا أَحَاطَ بِهِمْ سُرَادِقُهَا وَإِن يَسْتَغِيثُوا۟ يُغَاثُوا۟ بِمَآءٍ كَٱلْمُهْلِ يَشْوِى ٱلْوُجُوهَ بِئْسَ ٱلشَّرَابُ وَسَآءَتْ مُرْتَفَقًا

Kannada Translation - Hamza Buturಹೇಳಿರಿ: “ನನ್ನ ಈ ಸತ್ಯಸಂದೇಶವು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದಾಗಿದೆ. ಇಚ್ಛೆಯಿರುವವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಇಚ್ಛೆಯಿಲ್ಲದವರು ನಿಷೇಧಿಸಲಿ. ನಿಶ್ಚಯವಾಗಿಯೂ, ನಾವು ಅಕ್ರಮಿಗಳಿಗೆ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ. ಅದರ ಗೋಡೆಗಳು ಅವರನ್ನು ಆವರಿಸಿಕೊಂಡಿವೆ. ಅವರು ಕುಡಿಯಲು ನೀರು ಕೇಳುವಾಗ ನಾವು ಅವರಿಗೆ ಕಾಯಿಸಿದ ಎಣ್ಣೆಯ ಮಡ್ಡಿಯಂತಹ ನೀರನ್ನು ಕೊಡುವೆವು. ಅದು ಅವರ ಮುಖಗಳನ್ನು ಸುಟ್ಟು ಬಿಡುತ್ತದೆ. ಆ ಪಾನೀಯವು ಬಹಳ ನಿಕೃಷ್ಟವಾಗಿದೆ. ಆ ವಾಸಸ್ಥಳವು ಕೂಡ ಬಹಳ ನಿಕೃಷ್ಟವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ إِنَّا لَا نُضِيعُ أَجْرَ مَنْ أَحْسَنَ عَمَلًا

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅತ್ಯುತ್ತಮ ಕರ್ಮಗಳನ್ನು ಮಾಡುವ ಯಾರ ಪ್ರತಿಫಲವನ್ನೂ ನಾವು ವ್ಯರ್ಥಗೊಳಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ لَهُمْ جَنَّٰتُ عَدْنٍ تَجْرِى مِن تَحْتِهِمُ ٱلْأَنْهَٰرُ يُحَلَّوْنَ فِيهَا مِنْ أَسَاوِرَ مِن ذَهَبٍ وَيَلْبَسُونَ ثِيَابًا خُضْرًا مِّن سُندُسٍ وَإِسْتَبْرَقٍ مُّتَّكِـِٔينَ فِيهَا عَلَى ٱلْأَرَآئِكِ نِعْمَ ٱلثَّوَابُ وَحَسُنَتْ مُرْتَفَقًا

Kannada Translation - Hamza Buturಅವರಿಗೆ ಶಾಶ್ವತವಾಸದ ಸ್ವರ್ಗೋದ್ಯಾನಗಳಿವೆ. ಅವರ ತಳಭಾಗದಿಂದ ನದಿಗಳು ಹರಿಯುತ್ತವೆ. ಅಲ್ಲಿ ಅವರಿಗೆ ಚಿನ್ನದ ಕಡಗಗಳನ್ನು ತೊಡಿಸಲಾಗುವುದು. ಅವರು ನಯವಾದ ಮತ್ತು ದಪ್ಪ ಹಸಿರು ರೇಷ್ಮೆ ಬಟ್ಟೆಗಳನ್ನು ಧರಿಸುವರು. ಅಲ್ಲಿ ಅವರು ಮಂಚಗಳಲ್ಲಿ ಒರಗಿ ಕುಳಿತು ವಿಶ್ರಾಂತಿ ಪಡೆಯುವರು. ಆ ಪ್ರತಿಫಲವು ಬಹಳ ಉತ್ಕೃಷ್ಟವಾಗಿದೆ. ಆ ವಾಸಸ್ಥಳವು ಬಹಳ ಶ್ರೇಷ್ಠವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱضْرِبْ لَهُم مَّثَلًا رَّجُلَيْنِ جَعَلْنَا لِأَحَدِهِمَا جَنَّتَيْنِ مِنْ أَعْنَٰبٍ وَحَفَفْنَٰهُمَا بِنَخْلٍ وَجَعَلْنَا بَيْنَهُمَا زَرْعًا

Kannada Translation - Hamza Buturಅವರಿಗೆ ಒಂದು ಉದಾಹರಣೆಯನ್ನು ತಿಳಿಸಿಕೊಡಿ. ಇಬ್ಬರು ವ್ಯಕ್ತಿಗಳಿದ್ದರು. ಅವರಲ್ಲೊಬ್ಬನಿಗೆ ನಾವು ಎರಡು ದ್ರಾಕ್ಷಿ ತೋಟಗಳನ್ನು ನೀಡಿದ್ದೆವು. ಆ ಎರಡು ತೋಟಗಳನ್ನು ಖರ್ಜೂರ ಮರಗಳು ಸುತ್ತುವರಿಯುವಂತೆ ಮಾಡಿದ್ದೆವು. ಆ ತೋಟಗಳ ಮಧ್ಯೆ ಹೊಲವನ್ನು ಕೂಡ ಮಾಡಿಕೊಟ್ಟಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كِلْتَا ٱلْجَنَّتَيْنِ ءَاتَتْ أُكُلَهَا وَلَمْ تَظْلِم مِّنْهُ شَيْـًٔا وَفَجَّرْنَا خِلَٰلَهُمَا نَهَرًا

Kannada Translation - Hamza Buturಆ ಎರಡು ತೋಟಗಳೂ ಅವುಗಳ ಫಲಗಳನ್ನು ನೀಡುತ್ತಿದ್ದವು. ಅದರಲ್ಲಿ ಅವು ಏನನ್ನೂ ಕಡಿಮೆ ಮಾಡಿರಲಿಲ್ಲ. ಅವುಗಳ ಮಧ್ಯೆ ತುಂಬಿ ಹರಿಯುವ ಒಂದು ಹೊಳೆಯನ್ನೂ ಮಾಡಿಕೊಟ್ಟಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَانَ لَهُۥ ثَمَرٌ فَقَالَ لِصَٰحِبِهِۦ وَهُوَ يُحَاوِرُهُۥٓ أَنَا۠ أَكْثَرُ مِنكَ مَالًا وَأَعَزُّ نَفَرًا

Kannada Translation - Hamza Buturಈ ಮಧ್ಯೆ, ಅವನ ಬಳಿ ಹಣ್ಣುಗಳಿದ್ದಾಗ, ಅವನು ತನ್ನ ಗೆಳೆಯನೊಡನೆ ಮಾತನಾಡುತ್ತಾ ಹೇಳಿದನು: “ನನಗೆ ನಿನಗಿಂತಲೂ ಹೆಚ್ಚು ಆಸ್ತಿಯಿದೆ. ಸಂತಾನದ ವಿಷಯದಲ್ಲೂ ನಾನು ನಿನಗಿಂತ ಪ್ರಬಲನಾಗಿದ್ದೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَدَخَلَ جَنَّتَهُۥ وَهُوَ ظَالِمٌ لِّنَفْسِهِۦ قَالَ مَآ أَظُنُّ أَن تَبِيدَ هَٰذِهِۦٓ أَبَدًا

Kannada Translation - Hamza Buturಅವನು ತನ್ನ ತೋಟವನ್ನು ಪ್ರವೇಶಿಸಿದನು. ಅವನು ಸ್ವಯಂ ಅಕ್ರಮವೆಸಗಿದವನಾಗಿದ್ದನು. ಅವನು ಹೇಳಿದನು: “ಇದು ಯಾವತ್ತಾದರೂ ನಾಶವಾಗಬಹುದೆಂದು ನಾನು ಭಾವಿಸುವುದೇ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَظُنُّ ٱلسَّاعَةَ قَآئِمَةً وَلَئِن رُّدِدتُّ إِلَىٰ رَبِّى لَأَجِدَنَّ خَيْرًا مِّنْهَا مُنقَلَبًا

Kannada Translation - Hamza Buturಅಂತ್ಯಸಮಯವು ಸಂಭವಿಸುವುದೆಂದು ಕೂಡ ನಾನು ಭಾವಿಸುವುದಿಲ್ಲ. ಇನ್ನು ನನ್ನನ್ನು ನನ್ನ ಪರಿಪಾಲಕನ (ಅಲ್ಲಾಹನ) ಬಳಿಗೆ ಹಿಂದಿರುಗಿಸಲ್ಪಟ್ಟರೂ ಸಹ, ನಾನು ಅಲ್ಲಿಯೂ ಕೂಡ ಇದಕ್ಕಿಂತಲೂ ಶ್ರೇಷ್ಠವಾದುದನ್ನು ಬದಲಿಯಾಗಿ ಪಡೆಯುವೆನು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ لَهُۥ صَاحِبُهُۥ وَهُوَ يُحَاوِرُهُۥٓ أَكَفَرْتَ بِٱلَّذِى خَلَقَكَ مِن تُرَابٍ ثُمَّ مِن نُّطْفَةٍ ثُمَّ سَوَّىٰكَ رَجُلًا

Kannada Translation - Hamza Buturಅವನೊಡನೆ ಮಾತನಾಡುತ್ತಾ ಅವನ ಗೆಳೆಯ ಹೇಳಿದನು: “ನಿನ್ನನ್ನು ಮಣ್ಣಿನಿಂದ, ನಂತರ ವೀರ್ಯದಿಂದ ಸೃಷ್ಟಿಸಿ, ನಿನ್ನನ್ನು ಒಬ್ಬ ಪೂರ್ಣ ಮಾನವನನ್ನಾಗಿ ಮಾಡಿದ ಅಲ್ಲಾಹನನ್ನು ನೀನು ನಿಷೇಧಿಸುವೆಯಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّٰكِنَّا۠ هُوَ ٱللَّهُ رَبِّى وَلَآ أُشْرِكُ بِرَبِّىٓ أَحَدًا

Kannada Translation - Hamza Buturಆದರೆ ಆ ಅಲ್ಲಾಹನೇ ನನ್ನ ಪರಿಪಾಲಕನೆಂದು ನಾನು ದೃಢವಾಗಿ ನಂಬುತ್ತೇನೆ. ನಾನು ನನ್ನ ಪರಿಪಾಲಕನೊಡನೆ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْلَآ إِذْ دَخَلْتَ جَنَّتَكَ قُلْتَ مَا شَآءَ ٱللَّهُ لَا قُوَّةَ إِلَّا بِٱللَّهِ إِن تَرَنِ أَنَا۠ أَقَلَّ مِنكَ مَالًا وَوَلَدًا

Kannada Translation - Hamza Buturನೀನು ನಿನ್ನ ತೋಟವನ್ನು ಪ್ರವೇಶಿಸುವಾಗ, “ಇವೆಲ್ಲವೂ ಅಲ್ಲಾಹು ಇಚ್ಛಿಸಿದ್ದು. ಅಲ್ಲಾಹನಿಂದಲ್ಲದೆ ಯಾವುದೇ ಶಕ್ತಿಯಿಲ್ಲ” ಎಂದು ಏಕೆ ಹೇಳಲಿಲ್ಲ? ಆಸ್ತಿ ಮತ್ತು ಸಂತಾನದಲ್ಲಿ ನೀನು ನನ್ನನ್ನು ನಿನಗಿಂತಲೂ ಕೀಳಾಗಿ ಕಾಣುತ್ತಿದ್ದರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَعَسَىٰ رَبِّىٓ أَن يُؤْتِيَنِ خَيْرًا مِّن جَنَّتِكَ وَيُرْسِلَ عَلَيْهَا حُسْبَانًا مِّنَ ٱلسَّمَآءِ فَتُصْبِحَ صَعِيدًا زَلَقًا

Kannada Translation - Hamza Buturನನ್ನ ಪರಿಪಾಲಕನು (ಅಲ್ಲಾಹು) ನಿನ್ನ ತೋಟಕ್ಕಿಂತಲೂ ಶ್ರೇಷ್ಠವಾದುದನ್ನು ನನಗೆ ನೀಡಬಹುದು ಮತ್ತು ನಿನ್ನ ತೋಟಕ್ಕೆ ಆಕಾಶದಿಂದ ಶಿಕ್ಷೆಯನ್ನು ಇಳಿಸಿ ಅದನ್ನು ಜಾರುಭೂಮಿಯಾಗಿ ಪರಿವರ್ತಿಸಬಹುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ يُصْبِحَ مَآؤُهَا غَوْرًا فَلَن تَسْتَطِيعَ لَهُۥ طَلَبًا

Kannada Translation - Hamza Buturಅಥವಾ ಅದರ ನೀರನ್ನು ಆಳಕ್ಕೆ ಇಂಗಿಸಬಹುದು. ಆಗ ಅದನ್ನು ಹುಡುಕಿ ತರಲು ನಿನಗೆ ಸಾಧ್ಯವಾಗದು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأُحِيطَ بِثَمَرِهِۦ فَأَصْبَحَ يُقَلِّبُ كَفَّيْهِ عَلَىٰ مَآ أَنفَقَ فِيهَا وَهِىَ خَاوِيَةٌ عَلَىٰ عُرُوشِهَا وَيَقُولُ يَٰلَيْتَنِى لَمْ أُشْرِكْ بِرَبِّىٓ أَحَدًا

Kannada Translation - Hamza Buturಅವನ ಎಲ್ಲಾ ಫಲಗಳು ಆವರಿಸಲ್ಪಟ್ಟಿತು (ಸಂಪೂರ್ಣ ನಾಶವಾಯಿತು). ಆಗ ಅವನು ಅದಕ್ಕೆ ಮಾಡಿದ ಖರ್ಚುಗಳಿಗಾಗಿ (ಹತಾಶೆಯಿಂದ) ಕೈಗಳನ್ನು ತಿರುಗಿಸತೊಡಗಿದನು. ಆ ತೋಟಗಳು ಸಂಪೂರ್ಣವಾಗಿ ಮಗುಚಿ ಬಿದ್ದಿದ್ದವು. ಅವನು ಹೇಳಿದನು: “ನಾನು ನನ್ನ ಪರಿಪಾಲಕನೊಡನೆ (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡದಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَمْ تَكُن لَّهُۥ فِئَةٌ يَنصُرُونَهُۥ مِن دُونِ ٱللَّهِ وَمَا كَانَ مُنتَصِرًا

Kannada Translation - Hamza Buturಅಲ್ಲಾಹನಿಗೆ ವಿರುದ್ಧವಾಗಿ ಅವನ ರಕ್ಷಣೆ ಮಾಡಲು ಯಾವುದೇ ತಂಡವೂ ಬರಲಿಲ್ಲ. ಅವನಿಗೆ ಸ್ವಯಂ ರಕ್ಷಣೆ ಪಡೆಯಲೂ ಸಾಧ್ಯವಾಗಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُنَالِكَ ٱلْوَلَٰيَةُ لِلَّهِ ٱلْحَقِّ هُوَ خَيْرٌ ثَوَابًا وَخَيْرٌ عُقْبًا

Kannada Translation - Hamza Buturಅಲ್ಲಿ ಅಧಿಕಾರವು ಸಂಪೂರ್ಣವಾಗಿ ಅಲ್ಲಾಹನದ್ದೆಂದು (ಸಾಬೀತಾಗಿದೆ). ಅವನು ಪ್ರತಿಫಲ ನೀಡುವುದಲ್ಲಿ ಅತ್ಯುತ್ತಮನಾಗಿದ್ದಾನೆ ಮತ್ತು ಅಂತಿಮ ಫಲಿತಾಂಶ ನೀಡುವುದರಲ್ಲೂ ಅತ್ಯುತ್ತಮನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱضْرِبْ لَهُم مَّثَلَ ٱلْحَيَوٰةِ ٱلدُّنْيَا كَمَآءٍ أَنزَلْنَٰهُ مِنَ ٱلسَّمَآءِ فَٱخْتَلَطَ بِهِۦ نَبَاتُ ٱلْأَرْضِ فَأَصْبَحَ هَشِيمًا تَذْرُوهُ ٱلرِّيَٰحُ وَكَانَ ٱللَّهُ عَلَىٰ كُلِّ شَىْءٍ مُّقْتَدِرًا

Kannada Translation - Hamza Butur(ಪ್ರವಾದಿಯವರೇ) ಅವರಿಗೆ ಇಹಲೋಕದ ಬಗ್ಗೆ ಒಂದು ಉದಾಹರಣೆಯನ್ನು ತಿಳಿಸಿಕೊಡಿ. ಅದು (ಇಹಲೋಕವು) ನಾವು ಆಕಾಶದಿಂದ ಸುರಿಸಿದ ಮಳೆಯಂತೆ. ಭೂಮಿಯ ಸಸ್ಯಗಳು ಅದರೊಂದಿಗೆ ಬೆರೆತು ಬೆಳೆದವು. ನಂತರ ಅವು ಗಾಳಿ ಬೀಸಿದರೆ ಹಾರಿ ಹೋಗುವ ಧೂಳಿಯಂತಾದವು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸರ್ವಶಕ್ತನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلْمَالُ وَٱلْبَنُونَ زِينَةُ ٱلْحَيَوٰةِ ٱلدُّنْيَا وَٱلْبَٰقِيَٰتُ ٱلصَّٰلِحَٰتُ خَيْرٌ عِندَ رَبِّكَ ثَوَابًا وَخَيْرٌ أَمَلًا

Kannada Translation - Hamza Buturಆಸ್ತಿ ಮತ್ತು ಸಂತಾನಗಳು ಇಹಲೋಕ ಜೀವನದ ಅಲಂಕಾರಗಳಾಗಿವೆ. ಆದರೆ ಬಾಕಿಯಾಗುವ ಸತ್ಕರ್ಮಗಳು ತಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅತ್ಯುತ್ತಮ ಪ್ರತಿಫಲವನ್ನು ಮತ್ತು ಅತ್ಯುತ್ತಮ ಭರವಸೆಯನ್ನು ಹೊಂದಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ نُسَيِّرُ ٱلْجِبَالَ وَتَرَى ٱلْأَرْضَ بَارِزَةً وَحَشَرْنَٰهُمْ فَلَمْ نُغَادِرْ مِنْهُمْ أَحَدًا

Kannada Translation - Hamza Buturನಾವು ಪರ್ವತಗಳನ್ನು ಚಲಿಸುವಂತೆ ಮಾಡುವ ಮತ್ತು ಭೂಮಿಯನ್ನು ನೀವು ಸಮತಟ್ಟಾದ ಬಯಲಿನಂತೆ ಕಾಣುವ ಹಾಗೂ ನಾವು ಅವರಲ್ಲಿ (ಮನುಷ್ಯರಲ್ಲಿ) ಒಬ್ಬರನ್ನೂ ಬಿಡದೆ ಒಟ್ಟುಗೂಡಿಸುವ ದಿನ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَعُرِضُوا۟ عَلَىٰ رَبِّكَ صَفًّا لَّقَدْ جِئْتُمُونَا كَمَا خَلَقْنَٰكُمْ أَوَّلَ مَرَّةٍۭ بَلْ زَعَمْتُمْ أَلَّن نَّجْعَلَ لَكُم مَّوْعِدًا

Kannada Translation - Hamza Buturಅವರನ್ನು ತಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ಸಾಲು ಸಾಲಾಗಿ ಪ್ರದರ್ಶಿಸಲಾಗುವುದು. (ಅಲ್ಲಾಹು ಹೇಳುವನು): “ನಾವು ನಿಮ್ಮನ್ನು ಪ್ರಥಮ ಬಾರಿ ಸೃಷ್ಟಿಸಿದಂತೆಯೇ ನೀವು ನಮ್ಮ ಬಳಿಗೆ ಬಂದಿದ್ದೀರಿ. ನಾವು ನಿಮಗೆ ಒಂದು ಸಮಯವನ್ನು ಮೀಸಲಿಡುವುದಿಲ್ಲ ಎಂದು ನೀವು ವಾದಿಸುತ್ತಿದ್ದಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَوُضِعَ ٱلْكِتَٰبُ فَتَرَى ٱلْمُجْرِمِينَ مُشْفِقِينَ مِمَّا فِيهِ وَيَقُولُونَ يَٰوَيْلَتَنَا مَالِ هَٰذَا ٱلْكِتَٰبِ لَا يُغَادِرُ صَغِيرَةً وَلَا كَبِيرَةً إِلَّآ أَحْصَىٰهَا وَوَجَدُوا۟ مَا عَمِلُوا۟ حَاضِرًا وَلَا يَظْلِمُ رَبُّكَ أَحَدًا

Kannada Translation - Hamza Buturಕರ್ಮ ಪುಸ್ತಕವನ್ನು ಇಡಲಾಗುವುದು. ಆಗ ಅಪರಾಧಿಗಳು ಅದರಲ್ಲಿರುವ ಉಲ್ಲೇಖಗಳನ್ನು ನೋಡಿ ಭಯದಿಂದ ನಡುಗುವುದನ್ನು ನೀವು ನೋಡುವಿರಿ. ಅವರು ಹೇಳುವರು: “ಅಯ್ಯೋ ನಮ್ಮ ದುರದೃಷ್ಟವೇ! ಇದೆಂತಹ ಪುಸ್ತಕ? ಇದರಲ್ಲಿ ಚಿಕ್ಕ ಮತ್ತು ದೊಡ್ಡದಾದ ಯಾವುದನ್ನೂ ದಾಖಲಿಸದೆ ಬಿಟ್ಟಿಲ್ಲವಲ್ಲ!” ಅವರು ಮಾಡಿದ ಎಲ್ಲಾ ಕರ್ಮಗಳನ್ನೂ ಅವರು ಅದರಲ್ಲಿ ದಾಖಲಾಗಿರುವುದನ್ನು ಕಾಣುವರು. ನಿಮ್ಮ ಪರಿಪಾಲಕನು (ಅಲ್ಲಾಹು) ಯಾರಿಗೂ ಅನ್ಯಾಯ ಮಾಡುವವನಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذْ قُلْنَا لِلْمَلَٰٓئِكَةِ ٱسْجُدُوا۟ لِـَٔادَمَ فَسَجَدُوٓا۟ إِلَّآ إِبْلِيسَ كَانَ مِنَ ٱلْجِنِّ فَفَسَقَ عَنْ أَمْرِ رَبِّهِۦٓ أَفَتَتَّخِذُونَهُۥ وَذُرِّيَّتَهُۥٓ أَوْلِيَآءَ مِن دُونِى وَهُمْ لَكُمْ عَدُوٌّۢ بِئْسَ لِلظَّٰلِمِينَ بَدَلًا

Kannada Translation - Hamza Buturನಾವು ದೇವದೂತರುಗಳೊಡನೆ, “ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ಹೇಳಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು. ಇಬ್ಲೀಸನ ಹೊರತು. ಅವನು ಜಿನ್ನ್‌ಗಳಲ್ಲಿ ಸೇರಿದ್ದನು. ಅವನು ತನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಯನ್ನು ಉಲ್ಲಂಘಿಸಿದನು. ಹೀಗಿರುವಾಗ, ನೀವು ನನ್ನನ್ನು ಬಿಟ್ಟು ಅವನನ್ನು ಮತ್ತು ಅವನ ಸಂತಾನವನ್ನು ಮಿತ್ರರಾಗಿ ಸ್ವೀಕರಿಸುವಿರಾ? ವಾಸ್ತವವಾಗಿ ಅವರು ನಿಮ್ಮ ವೈರಿಗಳಾಗಿದ್ದೂ ಸಹ. ಅಕ್ರಮಿಗಳಿಗೆ ಬದಲಿಯಾಗಿ ಸಿಕ್ಕಿದ್ದು ಬಹಳ ನಿಕೃಷ್ಟವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَّآ أَشْهَدتُّهُمْ خَلْقَ ٱلسَّمَٰوَٰتِ وَٱلْأَرْضِ وَلَا خَلْقَ أَنفُسِهِمْ وَمَا كُنتُ مُتَّخِذَ ٱلْمُضِلِّينَ عَضُدًا

Kannada Translation - Hamza Buturನಾನು ಭೂಮ್ಯಾಕಾಶಗಳ ಸೃಷ್ಟಿಸುವಾಗ ಅಥವಾ ಸ್ವತಃ ಅವರನ್ನೇ ಸೃಷ್ಟಿಸುವಾಗ ಅವರನ್ನು (ಶೈತಾನರನ್ನು) ಅದಕ್ಕೆ ಸಾಕ್ಷಿಗಳನ್ನಾಗಿ ಮಾಡಲಿಲ್ಲ. ದಾರಿತಪ್ಪಿಸುವವರನ್ನು ನಾನು ಸಹಾಯಕರನ್ನಾಗಿ ಮಾಡುವುದೂ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ يَقُولُ نَادُوا۟ شُرَكَآءِىَ ٱلَّذِينَ زَعَمْتُمْ فَدَعَوْهُمْ فَلَمْ يَسْتَجِيبُوا۟ لَهُمْ وَجَعَلْنَا بَيْنَهُم مَّوْبِقًا

Kannada Translation - Hamza Butur“ನೀವು ನನ್ನ ಸಹಭಾಗಿಗಳೆಂದು ವಾದಿಸುತ್ತಿದ್ದ ನಿಮ್ಮ ದೇವರುಗಳನ್ನು ಕರೆಯಿರಿ” ಎಂದು ಅಲ್ಲಾಹು ಆದೇಶಿಸುವ ದಿನ. ಅವರು ಆ ದೇವರುಗಳನ್ನು ಕರೆಯುವರು. ಆದರೆ ಅವರು ಇವರಿಗೆ ಉತ್ತರ ನೀಡುವುದಿಲ್ಲ. ನಾವು ಅವರ ನಡುವೆ ವಿನಾಶದ ಕಂದಕವನ್ನು ನಿರ್ಮಿಸುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَرَءَا ٱلْمُجْرِمُونَ ٱلنَّارَ فَظَنُّوٓا۟ أَنَّهُم مُّوَاقِعُوهَا وَلَمْ يَجِدُوا۟ عَنْهَا مَصْرِفًا

Kannada Translation - Hamza Buturಅಪರಾಧಿಗಳು ನರಕವನ್ನು ಕಣ್ಣಾರೆ ನೋಡುವರು. ಅವರು ಅದರಲ್ಲಿ ಬೀಳುವರೆಂದು ಅವರಿಗೆ ಖಾತ್ರಿಯಾಗುವುದು. ಅದರಿಂದ ತಪ್ಪಿಸಿಕೊಳ್ಳುವ ಯಾವುದೇ ಮಾರ್ಗವನ್ನು ಅವರು ಕಾಣಲಾರರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ صَرَّفْنَا فِى هَٰذَا ٱلْقُرْءَانِ لِلنَّاسِ مِن كُلِّ مَثَلٍ وَكَانَ ٱلْإِنسَٰنُ أَكْثَرَ شَىْءٍ جَدَلًا

Kannada Translation - Hamza Buturನಿಶ್ಚಯವಾಗಿಯೂ ನಾವು ಈ ಕುರ್‌ಆನಿನಲ್ಲಿ ಮನುಷ್ಯರಿಗೆ ಎಲ್ಲಾ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ವಾಸ್ತವವಾಗಿ, ಮನುಷ್ಯನು ಅತಿ ಹೆಚ್ಚು ತರ್ಕಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا مَنَعَ ٱلنَّاسَ أَن يُؤْمِنُوٓا۟ إِذْ جَآءَهُمُ ٱلْهُدَىٰ وَيَسْتَغْفِرُوا۟ رَبَّهُمْ إِلَّآ أَن تَأْتِيَهُمْ سُنَّةُ ٱلْأَوَّلِينَ أَوْ يَأْتِيَهُمُ ٱلْعَذَابُ قُبُلًا

Kannada Translation - Hamza Buturಜನರ ಬಳಿಗೆ ಸನ್ಮಾರ್ಗವು ಬಂದಾಗ ಅವರು ಅದರಲ್ಲಿ ವಿಶ್ವಾಸವಿಡದಿರಲು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸದಿರಲು ಅವರಿಗೆ ತಡೆಯಾಗಿರುವುದು, ಪೂರ್ವಿಕರ ವಿಷಯದಲ್ಲಿ ಕೈಗೊಳ್ಳಲಾದ ಅದೇ ಕ್ರಮವು ನಮಗೂ ಬರಬೇಕು ಅಥವಾ ಶಿಕ್ಷೆಯನ್ನು ನಮ್ಮ ಕಣ್ಣ ಮುಂದೆ ತರಬೇಕು ಎಂಬುದು ಮಾತ್ರವಾಗಿತ್ತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا نُرْسِلُ ٱلْمُرْسَلِينَ إِلَّا مُبَشِّرِينَ وَمُنذِرِينَ وَيُجَٰدِلُ ٱلَّذِينَ كَفَرُوا۟ بِٱلْبَٰطِلِ لِيُدْحِضُوا۟ بِهِ ٱلْحَقَّ وَٱتَّخَذُوٓا۟ ءَايَٰتِى وَمَآ أُنذِرُوا۟ هُزُوًا

Kannada Translation - Hamza Buturನಾವು ಸಂದೇಶವಾಹಕರುಗಳನ್ನು ಕಳುಹಿಸುವುದು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಮಾತ್ರ. ಸತ್ಯನಿಷೇಧಿಗಳು ಅಸತ್ಯದ ಆಧಾರದಲ್ಲಿ ತರ್ಕಿಸುತ್ತಾರೆ ಮತ್ತು ಅದರ ಮೂಲಕ ಸತ್ಯವನ್ನು ನಾಶ ಮಾಡಬಹುದೆಂದು ಭಾವಿಸುತ್ತಾರೆ. ಅವರು ನನ್ನ ವಚನಗಳನ್ನು ಮತ್ತು ಅವರಿಗೆ ನೀಡಲಾದ ಎಚ್ಚರಿಕೆಗಳನ್ನು ತಮಾಷೆಯಾಗಿ ಸ್ವೀಕರಿಸುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَنْ أَظْلَمُ مِمَّن ذُكِّرَ بِـَٔايَٰتِ رَبِّهِۦ فَأَعْرَضَ عَنْهَا وَنَسِىَ مَا قَدَّمَتْ يَدَاهُ إِنَّا جَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِىٓ ءَاذَانِهِمْ وَقْرًا وَإِن تَدْعُهُمْ إِلَى ٱلْهُدَىٰ فَلَن يَهْتَدُوٓا۟ إِذًا أَبَدًا

Kannada Translation - Hamza Buturತನ್ನ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅದನ್ನು ಲೆಕ್ಕಿಸದವನು ಮತ್ತು ತನ್ನ ಕೈಗಳು ಮುಂದಕ್ಕೆ ಕಳುಹಿಸಿದ ದುಷ್ಕರ್ಮಗಳನ್ನು ಮರೆತವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳಿಗೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಿಗೆ ಕಿವುಡುತನವಿದೆ. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೂ ಅವರು ಎಂದಿಗೂ ಸನ್ಮಾರ್ಗವನ್ನು ಸ್ವೀಕರಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَرَبُّكَ ٱلْغَفُورُ ذُو ٱلرَّحْمَةِ لَوْ يُؤَاخِذُهُم بِمَا كَسَبُوا۟ لَعَجَّلَ لَهُمُ ٱلْعَذَابَ بَل لَّهُم مَّوْعِدٌ لَّن يَجِدُوا۟ مِن دُونِهِۦ مَوْئِلًا

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಕ್ಷಮಾಶೀಲನು ಮತ್ತು ಪರಮ ದಯಾಳುವಾಗಿದ್ದಾನೆ. ಅವರು ಮಾಡಿದ ದುಷ್ಕರ್ಮಗಳಿಗಾಗಿ ಅವನು ಅವರನ್ನು ಹಿಡಿಯುತ್ತಿದ್ದರೆ, ಅವನು ಅವರಿಗೆ ಶಿಕ್ಷೆಯನ್ನು ತ್ವರಿತಗೊಳಿಸುತ್ತಿದ್ದನು. ಆದರೆ ಅವರಿಗೆ ಒಂದು ನಿಶ್ಚಿತ ಅವಧಿಯಿದೆ. ಅದರಿಂದ ತಪ್ಪಿಸಿಕೊಳ್ಳುವ ಯಾವುದೇ ಸ್ಥಳವನ್ನೂ ಅವರು ಕಾಣಲಾರರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتِلْكَ ٱلْقُرَىٰٓ أَهْلَكْنَٰهُمْ لَمَّا ظَلَمُوا۟ وَجَعَلْنَا لِمَهْلِكِهِم مَّوْعِدًا

Kannada Translation - Hamza Buturಆ ಊರುಗಳ ಜನರು ಅಕ್ರಮವೆಸಗಿದಾಗ ನಾವು ಅವರನ್ನು ನಾಶ ಮಾಡಿದೆವು. ನಾವು ಅವರ ನಾಶಕ್ಕೆ ಒಂದು ನಿಶ್ಚಿತ ಅವಧಿಯನ್ನೂ ಇಟ್ಟಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذْ قَالَ مُوسَىٰ لِفَتَىٰهُ لَآ أَبْرَحُ حَتَّىٰٓ أَبْلُغَ مَجْمَعَ ٱلْبَحْرَيْنِ أَوْ أَمْضِىَ حُقُبًا

Kannada Translation - Hamza Buturಮೂಸಾ ತನ್ನ ಸೇವಕನೊಡನೆ ಹೇಳಿದ ಸಂದರ್ಭ: “ಎರಡು ಕಡಲುಗಳ ಸಂಗಮ ಸ್ಥಳವನ್ನು ತಲುಪುವ ತನಕ ನಾನು ನಡೆಯುತ್ತಲೇ ಇರುವೆನು. ಅದಕ್ಕಾಗಿ ದೀರ್ಘ ಸಮಯ ಪ್ರಯಾಣ ಮಾಡಬೇಕಾಗಿ ಬಂದರೂ ಸಹ.”[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَمَّا بَلَغَا مَجْمَعَ بَيْنِهِمَا نَسِيَا حُوتَهُمَا فَٱتَّخَذَ سَبِيلَهُۥ فِى ٱلْبَحْرِ سَرَبًا

Kannada Translation - Hamza Buturನಂತರ ಅವರು ಎರಡು ಕಡಲುಗಳ ಸಂಗಮ ಸ್ಥಳವನ್ನು ತಲುಪಿದಾಗ ತಮ್ಮಲ್ಲಿದ್ದ ಮೀನನ್ನು ಮರೆತುಬಿಟ್ಟರು. ಅದು ಸಮುದ್ರಕ್ಕೆ ನೆಗೆದು ತಾನು ಸಾಗಿದ ಹಾದಿಯನ್ನು ಒಂದು ಸುರಂಗದಂತೆ ಮಾಡಿತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَمَّا جَاوَزَا قَالَ لِفَتَىٰهُ ءَاتِنَا غَدَآءَنَا لَقَدْ لَقِينَا مِن سَفَرِنَا هَٰذَا نَصَبًا

Kannada Translation - Hamza Buturಅವರು ಆ ಸ್ಥಳದಿಂದ ಮುಂದೆ ಸಾಗಿದಾಗ ಮೂಸಾ ತನ್ನ ಸೇವಕನೊಡನೆ ಹೇಳಿದರು: “ನಮ್ಮ ಉಪಹಾರವನ್ನು ತೆಗೆದುಕೊಂಡು ಬಾ. ನಮ್ಮ ಈ ಪ್ರಯಾಣದಿಂದ ನಮಗೆ ಬಹಳ ಸುಸ್ತಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ أَرَءَيْتَ إِذْ أَوَيْنَآ إِلَى ٱلصَّخْرَةِ فَإِنِّى نَسِيتُ ٱلْحُوتَ وَمَآ أَنسَىٰنِيهُ إِلَّا ٱلشَّيْطَٰنُ أَنْ أَذْكُرَهُۥ وَٱتَّخَذَ سَبِيلَهُۥ فِى ٱلْبَحْرِ عَجَبًا

Kannada Translation - Hamza Buturಸೇವಕ ಹೇಳಿದನು: “ನಿಮಗೆ ಗೊತ್ತೇ? ನಾವು ಆ ಬಂಡೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ನಾನು ಆ ಮೀನನ್ನು ಮರೆತೇ ಬಿಟ್ಟಿದ್ದೆ. ನಾನು ಅದರ ಬಗ್ಗೆ ಮಾತನಾಡಬಾರದೆಂದು ಶೈತಾನನೇ ನನಗೆ ಅದನ್ನು ಮರೆಯುವಂತೆ ಮಾಡಿದ್ದನು. ಅದು ಸಮುದ್ರದಲ್ಲಿ ತಾನು ಸಾಗಿದ ಹಾದಿಯನ್ನು ಒಂದು ವಿಚಿತ್ರವನ್ನಾಗಿ ಮಾಡಿತ್ತು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ ذَٰلِكَ مَا كُنَّا نَبْغِ فَٱرْتَدَّا عَلَىٰٓ ءَاثَارِهِمَا قَصَصًا

Kannada Translation - Hamza Buturಮೂಸಾ ಹೇಳಿದರು: “ನಾವು ಹುಡುಕುತ್ತಿದ್ದದ್ದು ಅದನ್ನೇ!” ತಕ್ಷಣ ಅವರಿಬ್ಬರೂ ತಮ್ಮ ಹೆಜ್ಜೆಗಳನ್ನು ಹಿಂಬಾಲಿಸುತ್ತಾ ಮರಳಿದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَوَجَدَا عَبْدًا مِّنْ عِبَادِنَآ ءَاتَيْنَٰهُ رَحْمَةً مِّنْ عِندِنَا وَعَلَّمْنَٰهُ مِن لَّدُنَّا عِلْمًا

Kannada Translation - Hamza Buturಅಲ್ಲಿ ಅವರು ನಮ್ಮ ದಾಸರಲ್ಲಿ ಒಬ್ಬರನ್ನು ಕಂಡರು. ಅವರಿಗೆ ನಾವು ನಮ್ಮ ಕಡೆಯ ದಯೆಯನ್ನು ನೀಡಿದ್ದೆವು. ಅವರಿಗೆ ನಮ್ಮ ಕಡೆಯ ಜ್ಞಾನವನ್ನೂ ಕಲಿಸಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ لَهُۥ مُوسَىٰ هَلْ أَتَّبِعُكَ عَلَىٰٓ أَن تُعَلِّمَنِ مِمَّا عُلِّمْتَ رُشْدًا

Kannada Translation - Hamza Buturಮೂಸಾ ಅವರೊಡನೆ ಕೇಳಿದರು: “ನಾನು ತಮ್ಮನ್ನು ಹಿಂಬಾಲಿಸಿದರೆ ತಮಗೆ ಕಲಿಸಿಕೊಡಲಾದ ಸುಜ್ಞಾನದಿಂದ ತಾವು ನನಗೆ ಸ್ವಲ್ಪ ಕಲಿಸಿಕೊಡುವಿರಾ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ إِنَّكَ لَن تَسْتَطِيعَ مَعِىَ صَبْرًا

Kannada Translation - Hamza Buturಆ ವ್ಯಕ್ತಿ ಹೇಳಿದರು: “ನನ್ನ ಜೊತೆ ತಾಳ್ಮೆಯಿಂದಿರಲು ನಿಮಗೆ ಖಂಡಿತ ಸಾಧ್ಯವಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَيْفَ تَصْبِرُ عَلَىٰ مَا لَمْ تُحِطْ بِهِۦ خُبْرًا

Kannada Translation - Hamza Buturನಿಮಗೆ ಸೂಕ್ಷ್ಮವಾಗಿ ತಿಳಿಯಲು ಸಾಧ್ಯವಿಲ್ಲದ ವಿಷಯದಲ್ಲಿ ನೀವು ತಾಳ್ಮೆಯಿಂದಿರುವುದಾದರೂ ಹೇಗೆ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ سَتَجِدُنِىٓ إِن شَآءَ ٱللَّهُ صَابِرًا وَلَآ أَعْصِى لَكَ أَمْرًا

Kannada Translation - Hamza Buturಮೂಸಾ ಹೇಳಿದರು: “ಅಲ್ಲಾಹು ಬಯಸಿದರೆ ತಾವು ನನ್ನನ್ನು ತಾಳ್ಮೆಯುಳ್ಳವನಾಗಿ ಕಾಣುವಿರಿ. ತಮ್ಮ ಯಾವುದೇ ಆಜ್ಞೆಯನ್ನು ನಾನು ಉಲ್ಲಂಘಿಸುವುದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ فَإِنِ ٱتَّبَعْتَنِى فَلَا تَسْـَٔلْنِى عَن شَىْءٍ حَتَّىٰٓ أُحْدِثَ لَكَ مِنْهُ ذِكْرًا

Kannada Translation - Hamza Buturಆ ವ್ಯಕ್ತಿ ಹೇಳಿದರು: “ನೀವು ನನ್ನನ್ನು ಹಿಂಬಾಲಿಸುವುದಾದರೆ ಯಾವುದೇ ವಿಷಯದ ಬಗ್ಗೆಯೂ ನನ್ನೊಡನೆ ಪ್ರಶ್ನಿಸಬಾರದು. ನಾನು ಅದರ ಬಗ್ಗೆ ನಿಮಗೆ ಮಾಹಿತಿ ನೀಡುವ ತನಕ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱنطَلَقَا حَتَّىٰٓ إِذَا رَكِبَا فِى ٱلسَّفِينَةِ خَرَقَهَا قَالَ أَخَرَقْتَهَا لِتُغْرِقَ أَهْلَهَا لَقَدْ جِئْتَ شَيْـًٔا إِمْرًا

Kannada Translation - Hamza Buturಅವರಿಬ್ಬರೂ ಹೊರಟರು. ಎಲ್ಲಿಯವರೆಗೆಂದರೆ, ಅವರಿಬ್ಬರು ಒಂದು ನಾವೆಯನ್ನೇರಿದಾಗ ಆ ವ್ಯಕ್ತಿ ನಾವೆಯ ಹಲಗೆಯನ್ನು ಒಡೆದು ತೂತು ಮಾಡಿದರು. ಮೂಸಾ ಹೇಳಿದರು: “ಏನಿದು? ಅದರಲ್ಲಿರುವ ಜನರನ್ನು ಮುಳುಗಿಸಿ ಬಿಡಲು ತೂತು ಮಾಡುತ್ತಿದ್ದೀರಾ? ನಿಜಕ್ಕೂ ನೀವು ಒಂದು ಘೋರ ಕೆಲಸವನ್ನು ಮಾಡಿದ್ದೀರಿ!”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ أَلَمْ أَقُلْ إِنَّكَ لَن تَسْتَطِيعَ مَعِىَ صَبْرًا

Kannada Translation - Hamza Buturಆ ವ್ಯಕ್ತಿ ಹೇಳಿದರು: “ನಾನು ಹೇಳಿರಲಿಲ್ಲವೇ? ನನ್ನ ಜೊತೆ ತಾಳ್ಮೆಯಿಂದಿರಲು ನಿಮಗೆ ಸಾಧ್ಯವಿಲ್ಲವೆಂದು!”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ لَا تُؤَاخِذْنِى بِمَا نَسِيتُ وَلَا تُرْهِقْنِى مِنْ أَمْرِى عُسْرًا

Kannada Translation - Hamza Buturಮೂಸಾ ಹೇಳಿದರು: “ನಾನು ಅದನ್ನು ಮರೆತುಬಿಟ್ಟದ್ದಕ್ಕಾಗಿ ನನ್ನನ್ನು ಶಿಕ್ಷಿಸಬೇಡಿ. ನನಗೆ ಕಷ್ಟವಾಗಿರುವ ವಿಷಯವನ್ನು ನನ್ನ ಮೇಲೆ ಹೇರಬೇಡಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱنطَلَقَا حَتَّىٰٓ إِذَا لَقِيَا غُلَٰمًا فَقَتَلَهُۥ قَالَ أَقَتَلْتَ نَفْسًا زَكِيَّةًۢ بِغَيْرِ نَفْسٍ لَّقَدْ جِئْتَ شَيْـًٔا نُّكْرًا

Kannada Translation - Hamza Buturಅವರಿಬ್ಬರೂ ಹೊರಟರು. ಎಲ್ಲಿಯವರೆಗೆಂದರೆ, ಅವರೊಬ್ಬ ಹುಡುಗನನ್ನು ಭೇಟಿಯಾದಾಗ, ಆ ವ್ಯಕ್ತಿ ಆ ಹುಡುಗನನ್ನು ಕೊಂದರು. ಮೂಸಾ ಹೇಳಿದರು: “ಯಾರನ್ನೂ ಕೊಲೆ ಮಾಡದ ಒಂದು ಪರಿಶುದ್ಧ ಜೀವವನ್ನು ನೀವು ಕೊಂದುಬಿಟ್ಟಿರಿ. ನಿಜಕ್ಕೂ ನೀವು ಬಹಳ ಶೋಚನೀಯ ಕೆಲಸವನ್ನು ಮಾಡಿದ್ದೀರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ أَلَمْ أَقُل لَّكَ إِنَّكَ لَن تَسْتَطِيعَ مَعِىَ صَبْرًا

Kannada Translation - Hamza Buturಆ ವ್ಯಕ್ತಿ ಹೇಳಿದರು: “ನಾನು ಹೇಳಿರಲಿಲ್ಲವೇ? ನನ್ನ ಜೊತೆ ತಾಳ್ಮೆಯಿಂದಿರಲು ನಿಮಗೆ ಸಾಧ್ಯವಿಲ್ಲವೆಂದು!”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ إِن سَأَلْتُكَ عَن شَىْءٍۭ بَعْدَهَا فَلَا تُصَٰحِبْنِى قَدْ بَلَغْتَ مِن لَّدُنِّى عُذْرًا

Kannada Translation - Hamza Buturಮೂಸಾ ಹೇಳಿದರು: “ಇನ್ನು ಮುಂದಕ್ಕೆ ನಾನು ನಿಮ್ಮಲ್ಲಿ ಯಾವುದಾದರೂ ವಿಷಯದ ಬಗ್ಗೆ ಪ್ರಶ್ನಿಸಿದರೆ, ನೀವು ನನ್ನನ್ನು ಬಿಟ್ಟು ಹೋಗಬಹುದು. ನನ್ನ ಕಡೆಯಿಂದ ನಿಮಗಂತೂ ಒಂದು ನೆವನ ಸಿಕ್ಕಿಬಿಟ್ಟಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱنطَلَقَا حَتَّىٰٓ إِذَآ أَتَيَآ أَهْلَ قَرْيَةٍ ٱسْتَطْعَمَآ أَهْلَهَا فَأَبَوْا۟ أَن يُضَيِّفُوهُمَا فَوَجَدَا فِيهَا جِدَارًا يُرِيدُ أَن يَنقَضَّ فَأَقَامَهُۥ قَالَ لَوْ شِئْتَ لَتَّخَذْتَ عَلَيْهِ أَجْرًا

Kannada Translation - Hamza Buturಅವರಿಬ್ಬರೂ ಹೊರಟರು. ಎಲ್ಲಿಯವರೆಗೆಂದರೆ, ಅವರು ಒಂದು ಊರನ್ನು ತಲುಪಿದಾಗ, ಅದರ ನಿವಾಸಿಗಳೊಡನೆ ಆಹಾರ ಕೇಳಿದರು. ಆದರೆ ಅವರು ಆತಿಥ್ಯ ನೀಡಲು ನಿರಾಕರಿಸಿದರು. ಆಗ ಅವರು ಅಲ್ಲಿ ಕುಸಿದು ಬೀಳುವಂತಾಗಿರುವ ಒಂದು ಗೋಡೆಯನ್ನು ಕಂಡರು. ತಕ್ಷಣ ಆ ವ್ಯಕ್ತಿ ಅದನ್ನು ದುರಸ್ತಿಗೊಳಿಸಿ ನಿಲ್ಲಿಸಿದರು. ಮೂಸಾ ಹೇಳಿದರು: “ನೀವು ಬಯಸಿದರೆ ಈ ಕೆಲಸ ಮಾಡಿದ್ದಕ್ಕಾಗಿ ಅವರಿಂದ ವೇತನ ಪಡೆಯಬಹುದಿತ್ತು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ هَٰذَا فِرَاقُ بَيْنِى وَبَيْنِكَ سَأُنَبِّئُكَ بِتَأْوِيلِ مَا لَمْ تَسْتَطِع عَّلَيْهِ صَبْرًا

Kannada Translation - Hamza Buturಆ ವ್ಯಕ್ತಿ ಹೇಳಿದರು: “ಇದು ನಮ್ಮ ನಡುವಿನ ಅಗಲಿಕೆಯಾಗಿದೆ. ಯಾವುದರ ಬಗ್ಗೆ ತಾಳ್ಮೆಯಿಂದಿರಲು ನಿಮಗೆ ಸಾಧ್ಯವಾಗಲಿಲ್ಲವೋ ಅದರ ಮರ್ಮವನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمَّا ٱلسَّفِينَةُ فَكَانَتْ لِمَسَٰكِينَ يَعْمَلُونَ فِى ٱلْبَحْرِ فَأَرَدتُّ أَنْ أَعِيبَهَا وَكَانَ وَرَآءَهُم مَّلِكٌ يَأْخُذُ كُلَّ سَفِينَةٍ غَصْبًا

Kannada Translation - Hamza Buturಆ ನಾವೆಯು ಕಡಲಲ್ಲಿ ಕೆಲಸ ಮಾಡುವ ಕೆಲವು ಬಡವರದ್ದಾಗಿತ್ತು. ಆದ್ದರಿಂದ ನಾನು ಅದನ್ನು ಹಾಳುಮಾಡಲು ಬಯಸಿದೆನು. ಏಕೆಂದರೆ, ಅವರ ಹಿಂಭಾಗದಲ್ಲಿ ಒಬ್ಬ ಅರಸನಿದ್ದನು ಮತ್ತು ಅವನು ಎಲ್ಲಾ (ಉತ್ತಮ) ನಾವೆಗಳನ್ನು ಬಲವಂತದಿಂದ ವಶಪಡಿಸಿಕೊಳ್ಳುತ್ತಿದ್ದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَمَّا ٱلْغُلَٰمُ فَكَانَ أَبَوَاهُ مُؤْمِنَيْنِ فَخَشِينَآ أَن يُرْهِقَهُمَا طُغْيَٰنًا وَكُفْرًا

Kannada Translation - Hamza Buturಆ ಹುಡುಗನ ಮಾತಾಪಿತರು ಸತ್ಯವಿಶ್ವಾಸಿಗಳಾಗಿದ್ದರು. ಅವನು (ದೊಡ್ಡವನಾಗಿ) ಅವರನ್ನು ಅತಿರೇಕ ಮತ್ತು ಸತ್ಯ ನಿಷೇಧಕ್ಕೆ ನಿರ್ಬಂಧಿಸಬಹುದೆಂದು ನಮಗೆ ಭಯವಾಯಿತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَرَدْنَآ أَن يُبْدِلَهُمَا رَبُّهُمَا خَيْرًا مِّنْهُ زَكَوٰةً وَأَقْرَبَ رُحْمًا

Kannada Translation - Hamza Buturಆದ್ದರಿಂದ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಅವನಿಗಿಂತಲೂ ಹೆಚ್ಚು ಪರಿಶುದ್ಧನಾದ ಮತ್ತು ಅವನಿಗಿಂತಲೂ ಹೆಚ್ಚು ಪ್ರೀತಿ-ವಾತ್ಸಲ್ಯವಿರುವ ಒಬ್ಬ ಮಗನನ್ನು ಬದಲಿಯಾಗಿ ನೀಡಲಿ ಎಂದು ನಾವು ಬಯಸಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَمَّا ٱلْجِدَارُ فَكَانَ لِغُلَٰمَيْنِ يَتِيمَيْنِ فِى ٱلْمَدِينَةِ وَكَانَ تَحْتَهُۥ كَنزٌ لَّهُمَا وَكَانَ أَبُوهُمَا صَٰلِحًا فَأَرَادَ رَبُّكَ أَن يَبْلُغَآ أَشُدَّهُمَا وَيَسْتَخْرِجَا كَنزَهُمَا رَحْمَةً مِّن رَّبِّكَ وَمَا فَعَلْتُهُۥ عَنْ أَمْرِى ذَٰلِكَ تَأْوِيلُ مَا لَمْ تَسْطِع عَّلَيْهِ صَبْرًا

Kannada Translation - Hamza Buturಆ ಗೋಡೆಯು ಊರಿನ ಇಬ್ಬರು ಅನಾಥ ಬಾಲಕರಿಗೆ ಸೇರಿತ್ತು. ಅದರ ಅಡಿಯಲ್ಲಿ ಅವರಿಗೆ ಸಿಗಬೇಕಾದ ಒಂದು ನಿಧಿಯಿತ್ತು. ಅವರ ತಂದೆ ನೀತಿವಂತನಾಗಿದ್ದ. ಆದ್ದರಿಂದ ಅವರಿಬ್ಬರೂ ಪ್ರೌಢಾವಸ್ಥೆಯನ್ನು ತಲುಪಿದ ನಂತರ ತಮ್ಮ ನಿಧಿಯನ್ನು ಹೊರತೆಗೆಯಬೇಕೆಂದು ನಿಮ್ಮ ಪರಿಪಾಲಕ (ಅಲ್ಲಾಹು) ಬಯಸಿದ್ದನು. ಇದು ನಮ್ಮ ಪರಿಪಾಲಕನ (ಅಲ್ಲಾಹನ) ದಯೆಯಾಗಿದೆ. ನಾನು ಇವೆಲ್ಲವನ್ನೂ ನನ್ನ ಇಷ್ಟದಂತೆ ಮಾಡಿರಲಿಲ್ಲ. ಯಾವುದರ ಬಗ್ಗೆ ನಿಮಗೆ ತಾಳ್ಮೆಯಿಂದಿರಲು ಸಾಧ್ಯವಾಗಲಿಲ್ಲವೋ ಅದರ ಮರ್ಮವು ಇದೇ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَسْـَٔلُونَكَ عَن ذِى ٱلْقَرْنَيْنِ قُلْ سَأَتْلُوا۟ عَلَيْكُم مِّنْهُ ذِكْرًا

Kannada Translation - Hamza Butur(ಪ್ರವಾದಿಯವರೇ) ಅವರು ನಿಮ್ಮಲ್ಲಿ ದುಲ್-ಕರ್ನೈನರ ಬಗ್ಗೆ ಕೇಳುತ್ತಾರೆ. ಹೇಳಿರಿ: “ಅವರ ಬಗ್ಗೆ ನಾನು ನಿಮಗೆ ಸ್ವಲ್ಪ ಓದಿ ಕೊಡುತ್ತೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّا مَكَّنَّا لَهُۥ فِى ٱلْأَرْضِ وَءَاتَيْنَٰهُ مِن كُلِّ شَىْءٍ سَبَبًا

Kannada Translation - Hamza Buturನಾವು ಅವರಿಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದ್ದೆವು ಮತ್ತು ಅವರಿಗೆ ಬೇಕಾದ ಎಲ್ಲಾ ಸಾಧನಾನುಕೂಲತೆಗಳನ್ನು ನೀಡಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَتْبَعَ سَبَبًا

Kannada Translation - Hamza Buturಅವರು ಒಂದು ಮಾರ್ಗವನ್ನು ಹಿಂಬಾಲಿಸಿ ಹೋದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

حَتَّىٰٓ إِذَا بَلَغَ مَغْرِبَ ٱلشَّمْسِ وَجَدَهَا تَغْرُبُ فِى عَيْنٍ حَمِئَةٍ وَوَجَدَ عِندَهَا قَوْمًا قُلْنَا يَٰذَا ٱلْقَرْنَيْنِ إِمَّآ أَن تُعَذِّبَ وَإِمَّآ أَن تَتَّخِذَ فِيهِمْ حُسْنًا

Kannada Translation - Hamza Buturಎಲ್ಲಿಯವರೆಗೆಂದರೆ, ಅವರು ಸೂರ್ಯಾಸ್ತದ ಸ್ಥಳಕ್ಕೆ ತಲುಪಿದಾಗ, ಅದು (ಸೂರ್ಯ) ಕೆಸರು ನೀರಿನ ತೊರೆಯಲ್ಲಿ ಅಸ್ತಮಿಸುವುದನ್ನು ಕಂಡರು. ಆ ತೊರೆಯ ಬಳಿ ಜನರನ್ನೂ ಕಂಡರು. ನಾವು ಹೇಳಿದೆವು: “ಓ ದುಲ್-ಕರ್ನೈನ್! ಒಂದೋ ಇವರನ್ನು ಶಿಕ್ಷಿಸಿ ಅಥವಾ ಅವರ ಬಗ್ಗೆ ಉತ್ತಮ ಸಮೀಪನವನ್ನು ಸ್ವೀಕರಿಸಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ أَمَّا مَن ظَلَمَ فَسَوْفَ نُعَذِّبُهُۥ ثُمَّ يُرَدُّ إِلَىٰ رَبِّهِۦ فَيُعَذِّبُهُۥ عَذَابًا نُّكْرًا

Kannada Translation - Hamza Buturಅವರು ಹೇಳಿದರು: “ಯಾರು ಅಕ್ರಮವೆಸಗುತ್ತಾನೋ ಅವನನ್ನು ನಾವು ಶಿಕ್ಷಿಸುತ್ತೇವೆ. ನಂತರ ಅವನನ್ನು ಅವನ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುತ್ತದೆ. ಆಗ ಅವನು ಅವನಿಗೆ ಕಠೋರ ಶಿಕ್ಷೆಯನ್ನು ನೀಡುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَمَّا مَنْ ءَامَنَ وَعَمِلَ صَٰلِحًا فَلَهُۥ جَزَآءً ٱلْحُسْنَىٰ وَسَنَقُولُ لَهُۥ مِنْ أَمْرِنَا يُسْرًا

Kannada Translation - Hamza Buturಆದರೆ ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುತ್ತಾನೋ ಅವನಿಗೆ ಅತ್ಯುತ್ತಮ ಪ್ರತಿಫಲವು ದೊರೆಯುತ್ತದೆ. ನಾವು ಅವನಿಗೆ ನಮ್ಮ ಕೆಲಸಗಳಲ್ಲಿ ಸುಲಭವಾಗಿರುವುದನ್ನೇ ಆದೇಶಿಸುತ್ತೇವೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ أَتْبَعَ سَبَبًا

Kannada Translation - Hamza Buturನಂತರ ಅವರು ಇನ್ನೊಂದು ಮಾರ್ಗವನ್ನು ಹಿಂಬಾಲಿಸಿ ಹೋದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

حَتَّىٰٓ إِذَا بَلَغَ مَطْلِعَ ٱلشَّمْسِ وَجَدَهَا تَطْلُعُ عَلَىٰ قَوْمٍ لَّمْ نَجْعَل لَّهُم مِّن دُونِهَا سِتْرًا

Kannada Translation - Hamza Buturಎಲ್ಲಿಯವರೆಗೆಂದರೆ, ಅವರು ಸೂರ್ಯೋದಯದ ಸ್ಥಳಕ್ಕೆ ತಲುಪಿದಾಗ, ಅದು (ಸೂರ್ಯ) ಜನರ ಮೇಲೆ ಉದಯವಾಗುತ್ತಿರುವಂತೆ ಕಂಡರು. ಅದರಿಂದ ಮರೆಯಾಗಲು ನಾವು ಅವರಿಗೆ ಯಾವುದೇ ಪರದೆಯನ್ನು ಮಾಡಿಕೊಟ್ಟಿರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَٰلِكَ وَقَدْ أَحَطْنَا بِمَا لَدَيْهِ خُبْرًا

Kannada Translation - Hamza Buturವಿಷಯವು ಈ ರೀತಿಯಾಗಿದೆ. ನಾವು ಅವರ ಬಗೆಗಿನ ಎಲ್ಲಾ ಸಮಾಚಾರಗಳನ್ನು ಆವರಿಸಿಕೊಂಡಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ أَتْبَعَ سَبَبًا

Kannada Translation - Hamza Buturನಂತರ ಅವರು ಇನ್ನೊಂದು ಮಾರ್ಗವನ್ನು ಹಿಂಬಾಲಿಸಿ ಹೋದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

حَتَّىٰٓ إِذَا بَلَغَ بَيْنَ ٱلسَّدَّيْنِ وَجَدَ مِن دُونِهِمَا قَوْمًا لَّا يَكَادُونَ يَفْقَهُونَ قَوْلًا

Kannada Translation - Hamza Buturಎಲ್ಲಿಯವರೆಗೆಂದರೆ, ಅವರು ಎರಡು ಬೆಟ್ಟಗಳ ನಡುವೆ ತಲುಪಿದಾಗ, ಅವುಗಳ ಈಚೆ ಬದಿಯಲ್ಲಿ ಒಂದು ಜನತೆಯನ್ನು ಕಂಡರು. ಅವರಿಗೆ ಮಾತನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالُوا۟ يَٰذَا ٱلْقَرْنَيْنِ إِنَّ يَأْجُوجَ وَمَأْجُوجَ مُفْسِدُونَ فِى ٱلْأَرْضِ فَهَلْ نَجْعَلُ لَكَ خَرْجًا عَلَىٰٓ أَن تَجْعَلَ بَيْنَنَا وَبَيْنَهُمْ سَدًّا

Kannada Translation - Hamza Buturಅವರು ಹೇಳಿದರು: “ಓ ದುಲ್-ಕರ್ನೈನ್! ನಿಶ್ಚಯವಾಗಿಯೂ ಯಾ‌ಜೂಜ್-ಮಾ‌ಜೂಜರು ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಿದ್ದಾರೆ. ನಾವು ನಿಮಗೆ ಒಂದು ಖರ್ಚನ್ನು ನಿಗದಿಪಡಿಸಿದರೆ, ನೀವು ನಮ್ಮ ಮತ್ತು ಅವರ ನಡುವೆ ಒಂದು ತಡೆಗೋಡೆಯನ್ನು ನಿರ್ಮಿಸಿಕೊಡುವಿರಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ مَا مَكَّنِّى فِيهِ رَبِّى خَيْرٌ فَأَعِينُونِى بِقُوَّةٍ أَجْعَلْ بَيْنَكُمْ وَبَيْنَهُمْ رَدْمًا

Kannada Translation - Hamza Buturದುಲ್-ಕರ್ನೈನ್ ಹೇಳಿದರು: “ನನ್ನ ಪರಿಪಾಲಕನು (ಅಲ್ಲಾಹು) ಏನೆಲ್ಲಾ ನನ್ನ ಅಧಿಕಾರಕ್ಕೆ ನೀಡಿದ್ದಾನೋ ಅದು ಅತ್ಯುತ್ತಮವಾಗಿದೆ. ನೀವು ನಿಮ್ಮ ದೇಹಬಲದಿಂದ ನನಗೆ ಸಹಾಯ ಮಾಡಿರಿ. ನಿಮ್ಮ ಮತ್ತು ಅವರ ನಡುವೆ ನಾನು ಒಂದು ಬಲಿಷ್ಠ ಗೋಡೆಯನ್ನು ನಿರ್ಮಿಸಿಕೊಡುತ್ತೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ءَاتُونِى زُبَرَ ٱلْحَدِيدِ حَتَّىٰٓ إِذَا سَاوَىٰ بَيْنَ ٱلصَّدَفَيْنِ قَالَ ٱنفُخُوا۟ حَتَّىٰٓ إِذَا جَعَلَهُۥ نَارًا قَالَ ءَاتُونِىٓ أُفْرِغْ عَلَيْهِ قِطْرًا

Kannada Translation - Hamza Butur(ನಂತರ ಅವರು ಹೇಳಿದರು): “ನನಗೆ ಕಬ್ಬಿಣದ ತುಂಡುಗಳನ್ನು ತಂದುಕೊಡಿ.” ಎಲ್ಲಿಯವರೆಗೆಂದರೆ, ಆ ಎರಡು ಬೆಟ್ಟಗಳ ನಡುವೆ ಗೋಡೆಯನ್ನು ಸಮಗೊಳಿಸಿದಾಗ, ಅವರು ಹೇಳಿದರು: “ಬೆಂಕಿಯನ್ನು ಜೋರಾಗಿ ಉರಿಯುವಂತೆ ಮಾಡಿರಿ.” ಎಲ್ಲಿಯವರೆಗೆಂದರೆ, ಆ ಕಬ್ಬಿಣದ ತುಂಡುಗಳು ಸಂಪೂರ್ಣ ಕೆಂಡದಂತಾದಾಗ, ಅವರು ಹೇಳಿದರು: “ನನಗೆ ಕರಗಿಸಿದ ತಾಮ್ರವನ್ನು ತಂದು ಕೊಡಿ. ನಾನು ಅದನ್ನು ಅದಕ್ಕೆ ಸುರಿಯುತ್ತೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَا ٱسْطَٰعُوٓا۟ أَن يَظْهَرُوهُ وَمَا ٱسْتَطَٰعُوا۟ لَهُۥ نَقْبًا

Kannada Translation - Hamza Buturನಂತರ ಆ ಗೋಡೆಯನ್ನು ಏರಿ ಬರಲು ಅವರಿಗೆ (ಯಾ‌ಜೂಜ್-ಮಾ‌ಜೂಜರಿಗೆ) ಸಾಧ್ಯವಾಗಲಿಲ್ಲ. ಅದಕ್ಕೆ ಕನ್ನ ಕೊರೆಯಲೂ ಅವರಿಗೆ ಸಾಧ್ಯವಾಗಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالَ هَٰذَا رَحْمَةٌ مِّن رَّبِّى فَإِذَا جَآءَ وَعْدُ رَبِّى جَعَلَهُۥ دَكَّآءَ وَكَانَ وَعْدُ رَبِّى حَقًّا

Kannada Translation - Hamza Buturದುಲ್-ಕರ್ನೈನ್ ಹೇಳಿದರು: “ಇದು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ದಯೆಯಾಗಿದೆ. ನನ್ನ ಪರಿಪಾಲಕನ (ಅಲ್ಲಾಹನ) ವಾಗ್ದಾನವು ಬಂದರೆ ಅವನು ಅದನ್ನು ನುಚ್ಚುನೂರು ಮಾಡುವನು. ನನ್ನ ಪರಿಪಾಲಕನ (ಅಲ್ಲಾಹನ) ವಾಗ್ದಾನವು ಸತ್ಯವಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَرَكْنَا بَعْضَهُمْ يَوْمَئِذٍ يَمُوجُ فِى بَعْضٍ وَنُفِخَ فِى ٱلصُّورِ فَجَمَعْنَٰهُمْ جَمْعًا

Kannada Translation - Hamza Butur(ಅಂದು) ಅವರು ಪರಸ್ಪರ ಉಕ್ಕೇರುವಂತೆ ಅವರನ್ನು ಬಿಟ್ಟುಬಿಡುವೆವು. ಕಹಳೆಯಲ್ಲಿ ಊದಲಾಗುವುದು. ಆಗ ನಾವು ಅವರೆಲ್ಲರನ್ನೂ ಒಟ್ಟಾಗಿ ಸೇರಿಸುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَعَرَضْنَا جَهَنَّمَ يَوْمَئِذٍ لِّلْكَٰفِرِينَ عَرْضًا

Kannada Translation - Hamza Buturಅಂದು ನಾವು ಸತ್ಯನಿಷೇಧಿಗಳಿಗೆ ನರಕವನ್ನು ನೇರವಾಗಿ ತೋರಿಸುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِينَ كَانَتْ أَعْيُنُهُمْ فِى غِطَآءٍ عَن ذِكْرِى وَكَانُوا۟ لَا يَسْتَطِيعُونَ سَمْعًا

Kannada Translation - Hamza Buturಅವರು ಯಾರೆಂದರೆ, ಅವರ ಕಣ್ಣುಗಳಿಗೆ ನನ್ನ ನೆನಪು ಬರದಂತೆ ಪರದೆ ಹಾಕಲಾದವರು. ಸತ್ಯಕ್ಕೆ ಕಿವಿಗೊಡಲು ಕೂಡ ಅವರಿಗೆ ಸಾಧ್ಯವಾಗುತ್ತಿರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَحَسِبَ ٱلَّذِينَ كَفَرُوٓا۟ أَن يَتَّخِذُوا۟ عِبَادِى مِن دُونِىٓ أَوْلِيَآءَ إِنَّآ أَعْتَدْنَا جَهَنَّمَ لِلْكَٰفِرِينَ نُزُلًا

Kannada Translation - Hamza Buturನನ್ನನ್ನು ಬಿಟ್ಟು ನನ್ನ ದಾಸರನ್ನು ರಕ್ಷಕರನ್ನಾಗಿ ಸ್ವೀಕರಿಸಬಹುದೆಂದು ಸತ್ಯನಿಷೇಧಿಗಳು ಭಾವಿಸಿದ್ದಾರೆಯೇ? ನಿಶ್ಚಯವಾಗಿಯೂ ನಾವು ಸತ್ಯನಿಷೇಧಿಗಳಿಗೆ ಆತಿಥ್ಯವಾಗಿ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ هَلْ نُنَبِّئُكُم بِٱلْأَخْسَرِينَ أَعْمَٰلًا

Kannada Translation - Hamza Butur(ಪ್ರವಾದಿಯವರೇ) ಕೇಳಿರಿ: “ಕರ್ಮಗಳ ವಿಷಯದಲ್ಲಿ ಅತಿ ಹೆಚ್ಚು ನಷ್ಟದಲ್ಲಿರುವವರು ಯಾರೆಂದು ನಾವು ನಿಮಗೆ ತಿಳಿಸಿಕೊಡಲೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِينَ ضَلَّ سَعْيُهُمْ فِى ٱلْحَيَوٰةِ ٱلدُّنْيَا وَهُمْ يَحْسَبُونَ أَنَّهُمْ يُحْسِنُونَ صُنْعًا

Kannada Translation - Hamza Buturಅವರು ಯಾರೆಂದರೆ, ಇಹಲೋಕ ಜೀವನದಲ್ಲಿ ತಮ್ಮ ಪರಿಶ್ರಮಗಳನ್ನು ವ್ಯರ್ಥಗೊಳಿಸಿದವರು. ಅವರು ತಾವು ಅತ್ಯುತ್ತಮ ಕರ್ಮಗಳನ್ನು ಮಾಡುತ್ತಿದ್ದೇವೆಂಬ ಭಾವನೆಯಲ್ಲಿದ್ದಾರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ ٱلَّذِينَ كَفَرُوا۟ بِـَٔايَٰتِ رَبِّهِمْ وَلِقَآئِهِۦ فَحَبِطَتْ أَعْمَٰلُهُمْ فَلَا نُقِيمُ لَهُمْ يَوْمَ ٱلْقِيَٰمَةِ وَزْنًا

Kannada Translation - Hamza Buturಅವರೇ ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಮತ್ತು ಅವನನ್ನು ಭೇಟಿಯಾಗುವುದನ್ನು ನಿಷೇಧಿಸಿದವರು. ಆದ್ದರಿಂದ ಅವರ ಕರ್ಮಗಳು ವ್ಯರ್ಥವಾದವು. ಪುನರುತ್ಥಾನ ದಿನದಂದು ನಾವು ಅವರಿಗೆ ಯಾವುದೇ ತೂಕವನ್ನು (ಪ್ರಾಮುಖ್ಯತೆಯನ್ನು) ನೀಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ جَزَآؤُهُمْ جَهَنَّمُ بِمَا كَفَرُوا۟ وَٱتَّخَذُوٓا۟ ءَايَٰتِى وَرُسُلِى هُزُوًا

Kannada Translation - Hamza Buturಅದೇ ಅವರ ಸ್ಥಿತಿ! ಅವರು ನಿಷೇಧಿಸಿದ ಕಾರಣ ಮತ್ತು ನನ್ನ ವಚನಗಳನ್ನು ಹಾಗೂ ನನ್ನ ಸಂದೇಶವಾಹಕರುಗಳನ್ನು ತಮಾಷೆಯಾಗಿ ಸ್ವೀಕರಿಸಿದ ಕಾರಣ ಅವರಿಗಿರುವ ಪ್ರತಿಫಲವು ನರಕವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ كَانَتْ لَهُمْ جَنَّٰتُ ٱلْفِرْدَوْسِ نُزُلًا

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಆತಿಥ್ಯವಾಗಿ ಫಿರ್ದೌಸ್ (ಅತ್ಯುನ್ನತ) ಸ್ವರ್ಗೋದ್ಯಾನಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

خَٰلِدِينَ فِيهَا لَا يَبْغُونَ عَنْهَا حِوَلًا

Kannada Translation - Hamza Buturಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದರಿಂದ ಸ್ಥಳಾಂತರಗೊಳ್ಳಲು ಅವರು ಯಾವತ್ತೂ ಬಯಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لَّوْ كَانَ ٱلْبَحْرُ مِدَادًا لِّكَلِمَٰتِ رَبِّى لَنَفِدَ ٱلْبَحْرُ قَبْلَ أَن تَنفَدَ كَلِمَٰتُ رَبِّى وَلَوْ جِئْنَا بِمِثْلِهِۦ مَدَدًا

Kannada Translation - Hamza Buturಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಬರೆಯಲು ಸಮುದ್ರ ಜಲವನ್ನು ಶಾಯಿಯಾಗಿ ಬಳಸಿದರೆ, ನನ್ನ ಪರಿಪಾಲಕನ (ಅಲ್ಲಾಹನ) ವಚನಗಳು ಮುಗಿಯುವ ಮೊದಲೇ ಸಮುದ್ರದ ನೀರು ಮುಗಿಯುವುದು ನಿಶ್ಚಿತ. ನಾವು ಅದರಂತಿರುವ ಇನ್ನೊಂದನ್ನು ಸಹಾಯಕ್ಕಾಗಿ ತಂದರೂ ಸಹ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنَّمَآ أَنَا۠ بَشَرٌ مِّثْلُكُمْ يُوحَىٰٓ إِلَىَّ أَنَّمَآ إِلَٰهُكُمْ إِلَٰهٌ وَٰحِدٌ فَمَن كَانَ يَرْجُوا۟ لِقَآءَ رَبِّهِۦ فَلْيَعْمَلْ عَمَلًا صَٰلِحًا وَلَا يُشْرِكْ بِعِبَادَةِ رَبِّهِۦٓ أَحَدًۢا

Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನಾನು ನಿಮ್ಮಂತಹ ಒಬ್ಬ ಮನುಷ್ಯ ಮಾತ್ರವಾಗಿದ್ದೇನೆ. ನಿಮ್ಮ ದೇವನು ಏಕೈಕ ದೇವನೆಂದು ನನಗೆ ದೇವವಾಣಿ ನೀಡಲಾಗುತ್ತಿದೆ. ಆದ್ದರಿಂದ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಭೇಟಿಯನ್ನು ನಿರೀಕ್ಷಿಸುತ್ತಾನೋ ಅವನು ಸತ್ಕರ್ಮಗಳನ್ನು ಮಾಡಲಿ ಮತ್ತು ತನ್ನ ಪರಿಪಾಲಕನ (ಅಲ್ಲಾಹನ) ಆರಾಧನೆಯಲ್ಲಿ ಯಾರನ್ನೂ ಸಹಭಾಗಿಯಾಗಿ ಮಾಡದಿರಲಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70