وَكَذَٰلِكَ أَعْثَرْنَا عَلَيْهِمْ لِيَعْلَمُوٓا۟ أَنَّ وَعْدَ ٱللَّهِ حَقٌّ وَأَنَّ ٱلسَّاعَةَ لَا رَيْبَ فِيهَآ إِذْ يَتَنَٰزَعُونَ بَيْنَهُمْ أَمْرَهُمْ فَقَالُوا۟ ٱبْنُوا۟ عَلَيْهِم بُنْيَٰنًا رَّبُّهُمْ أَعْلَمُ بِهِمْ قَالَ ٱلَّذِينَ غَلَبُوا۟ عَلَىٰٓ أَمْرِهِمْ لَنَتَّخِذَنَّ عَلَيْهِم مَّسْجِدًا
Kannada Translation - Hamza Buturಈ ರೀತಿ ನಾವು ಅವರ ಬಗ್ಗೆ ಜನರಿಗೆ ಸುಳಿವು ನೀಡಿದೆವು. ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯದಿನವು ಸಂಭವಿಸುತ್ತದೆಯೆಂಬ ವಿಷಯದಲ್ಲಿ ಸಂಶಯವೇ ಇಲ್ಲ ಎಂದು ಜನರು ತಿಳಿಯುವುದಕ್ಕಾಗಿ. ಅವರು ಗುಹಾವಾಸಿಗಳ ಬಗ್ಗೆ ಪರಸ್ಪರ ತರ್ಕಿಸುತ್ತಿದ್ದ ಸಂದರ್ಭ. ಅವರು ಹೇಳಿದರು: “ಇವರ ಗುಹೆಯ ಮೇಲೆ ಒಂದು ಕಟ್ಟಡವನ್ನು ನಿರ್ಮಿಸಿರಿ. ಅವರ ಬಗ್ಗೆ ಅವರ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.” ಅವರ ವಿಷಯದಲ್ಲಿ ಪ್ರಾಬಲ್ಯ ಪಡೆದವರು ಹೇಳಿದರು: “ನಿಶ್ಚಯವಾಗಿಯೂ ನಾವು ಅವರ ಗುಹೆಯ ಬಳಿ ಒಂದು ಮಸೀದಿಯನ್ನು ನಿರ್ಮಿಸುತ್ತೇವೆ.”