وَقُلِ ٱلْحَقُّ مِن رَّبِّكُمْ فَمَن شَآءَ فَلْيُؤْمِن وَمَن شَآءَ فَلْيَكْفُرْ إِنَّآ أَعْتَدْنَا لِلظَّٰلِمِينَ نَارًا أَحَاطَ بِهِمْ سُرَادِقُهَا وَإِن يَسْتَغِيثُوا۟ يُغَاثُوا۟ بِمَآءٍ كَٱلْمُهْلِ يَشْوِى ٱلْوُجُوهَ بِئْسَ ٱلشَّرَابُ وَسَآءَتْ مُرْتَفَقًا
Kannada Translation - Hamza Buturಹೇಳಿರಿ: “ನನ್ನ ಈ ಸತ್ಯಸಂದೇಶವು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದಾಗಿದೆ. ಇಚ್ಛೆಯಿರುವವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಇಚ್ಛೆಯಿಲ್ಲದವರು ನಿಷೇಧಿಸಲಿ. ನಿಶ್ಚಯವಾಗಿಯೂ, ನಾವು ಅಕ್ರಮಿಗಳಿಗೆ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ. ಅದರ ಗೋಡೆಗಳು ಅವರನ್ನು ಆವರಿಸಿಕೊಂಡಿವೆ. ಅವರು ಕುಡಿಯಲು ನೀರು ಕೇಳುವಾಗ ನಾವು ಅವರಿಗೆ ಕಾಯಿಸಿದ ಎಣ್ಣೆಯ ಮಡ್ಡಿಯಂತಹ ನೀರನ್ನು ಕೊಡುವೆವು. ಅದು ಅವರ ಮುಖಗಳನ್ನು ಸುಟ್ಟು ಬಿಡುತ್ತದೆ. ಆ ಪಾನೀಯವು ಬಹಳ ನಿಕೃಷ್ಟವಾಗಿದೆ. ಆ ವಾಸಸ್ಥಳವು ಕೂಡ ಬಹಳ ನಿಕೃಷ್ಟವಾಗಿದೆ.