وَمَنْ أَظْلَمُ مِمَّن ذُكِّرَ بِـَٔايَٰتِ رَبِّهِۦ فَأَعْرَضَ عَنْهَا وَنَسِىَ مَا قَدَّمَتْ يَدَاهُ إِنَّا جَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِىٓ ءَاذَانِهِمْ وَقْرًا وَإِن تَدْعُهُمْ إِلَى ٱلْهُدَىٰ فَلَن يَهْتَدُوٓا۟ إِذًا أَبَدًا
Kannada Translation - Hamza Buturತನ್ನ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅದನ್ನು ಲೆಕ್ಕಿಸದವನು ಮತ್ತು ತನ್ನ ಕೈಗಳು ಮುಂದಕ್ಕೆ ಕಳುಹಿಸಿದ ದುಷ್ಕರ್ಮಗಳನ್ನು ಮರೆತವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳಿಗೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಿಗೆ ಕಿವುಡುತನವಿದೆ. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೂ ಅವರು ಎಂದಿಗೂ ಸನ್ಮಾರ್ಗವನ್ನು ಸ್ವೀಕರಿಸುವುದಿಲ್ಲ.