وَأَمَّا ٱلْجِدَارُ فَكَانَ لِغُلَٰمَيْنِ يَتِيمَيْنِ فِى ٱلْمَدِينَةِ وَكَانَ تَحْتَهُۥ كَنزٌ لَّهُمَا وَكَانَ أَبُوهُمَا صَٰلِحًا فَأَرَادَ رَبُّكَ أَن يَبْلُغَآ أَشُدَّهُمَا وَيَسْتَخْرِجَا كَنزَهُمَا رَحْمَةً مِّن رَّبِّكَ وَمَا فَعَلْتُهُۥ عَنْ أَمْرِى ذَٰلِكَ تَأْوِيلُ مَا لَمْ تَسْطِع عَّلَيْهِ صَبْرًا
Kannada Translation - Hamza Buturಆ ಗೋಡೆಯು ಊರಿನ ಇಬ್ಬರು ಅನಾಥ ಬಾಲಕರಿಗೆ ಸೇರಿತ್ತು. ಅದರ ಅಡಿಯಲ್ಲಿ ಅವರಿಗೆ ಸಿಗಬೇಕಾದ ಒಂದು ನಿಧಿಯಿತ್ತು. ಅವರ ತಂದೆ ನೀತಿವಂತನಾಗಿದ್ದ. ಆದ್ದರಿಂದ ಅವರಿಬ್ಬರೂ ಪ್ರೌಢಾವಸ್ಥೆಯನ್ನು ತಲುಪಿದ ನಂತರ ತಮ್ಮ ನಿಧಿಯನ್ನು ಹೊರತೆಗೆಯಬೇಕೆಂದು ನಿಮ್ಮ ಪರಿಪಾಲಕ (ಅಲ್ಲಾಹು) ಬಯಸಿದ್ದನು. ಇದು ನಮ್ಮ ಪರಿಪಾಲಕನ (ಅಲ್ಲಾಹನ) ದಯೆಯಾಗಿದೆ. ನಾನು ಇವೆಲ್ಲವನ್ನೂ ನನ್ನ ಇಷ್ಟದಂತೆ ಮಾಡಿರಲಿಲ್ಲ. ಯಾವುದರ ಬಗ್ಗೆ ನಿಮಗೆ ತಾಳ್ಮೆಯಿಂದಿರಲು ಸಾಧ್ಯವಾಗಲಿಲ್ಲವೋ ಅದರ ಮರ್ಮವು ಇದೇ.”