قُلْ مَن كَانَ فِى ٱلضَّلَٰلَةِ فَلْيَمْدُدْ لَهُ ٱلرَّحْمَٰنُ مَدًّا حَتَّىٰٓ إِذَا رَأَوْا۟ مَا يُوعَدُونَ إِمَّا ٱلْعَذَابَ وَإِمَّا ٱلسَّاعَةَ فَسَيَعْلَمُونَ مَنْ هُوَ شَرٌّ مَّكَانًا وَأَضْعَفُ جُندًا
Kannada Translation - Hamza Buturಹೇಳಿರಿ: “ಯಾರು ದುರ್ಮಾರ್ಗದಲ್ಲಿದ್ದಾನೋ ಅವನಿಗೆ ಪರಮ ದಯಾಮಯನು (ಅಲ್ಲಾಹು) ಅವಧಿಯನ್ನು ವಿಸ್ತರಿಸಿಕೊಡಲಿ. ಎಲ್ಲಿಯವರೆಗೆಂದರೆ, ಅವರು ತಮಗೆ ಎಚ್ಚರಿಕೆ ನೀಡಲಾದ ಸಂಗತಿಯನ್ನು—ಅಂದರೆ ಒಂದೋ ಶಿಕ್ಷೆಯನ್ನು ಅಥವಾ ಅಂತ್ಯಸಮಯವನ್ನು—ಕಾಣುವಾಗ, ಅತಿನಿಕೃಷ್ಟ ಸ್ಥಾನಮಾನವಿರುವವರು ಮತ್ತು ಅತಿ ದುರ್ಬಲ ಜನಬಲವು ಯಾರದ್ದೆಂದು ಅವರು ಬಹಳ ಚೆನ್ನಾಗಿ ತಿಳಿಯುವರು.”