شَهْرُ رَمَضَانَ ٱلَّذِىٓ أُنزِلَ فِيهِ ٱلْقُرْءَانُ هُدًى لِّلنَّاسِ وَبَيِّنَٰتٍ مِّنَ ٱلْهُدَىٰ وَٱلْفُرْقَانِ فَمَن شَهِدَ مِنكُمُ ٱلشَّهْرَ فَلْيَصُمْهُ وَمَن كَانَ مَرِيضًا أَوْ عَلَىٰ سَفَرٍ فَعِدَّةٌ مِّنْ أَيَّامٍ أُخَرَ يُرِيدُ ٱللَّهُ بِكُمُ ٱلْيُسْرَ وَلَا يُرِيدُ بِكُمُ ٱلْعُسْرَ وَلِتُكْمِلُوا۟ ٱلْعِدَّةَ وَلِتُكَبِّرُوا۟ ٱللَّهَ عَلَىٰ مَا هَدَىٰكُمْ وَلَعَلَّكُمْ تَشْكُرُونَ
Kannada Translation - Hamza Buturರಮದಾನ್ ಎಂದರೆ ಜನರಿಗೆ ಸನ್ಮಾರ್ಗವನ್ನು ತೋರಿಸಿಕೊಡುವ ಮತ್ತು ಸನ್ಮಾರ್ಗ ಹಾಗೂ ಸತ್ಯಾಸತ್ಯತೆಗಳನ್ನು ಬೇರ್ಪಡಿಸುವ ಪುರಾವೆಗಳನ್ನು ಹೊಂದಿರುವ ಪವಿತ್ರ ಕುರ್ಆನ್ ಅವತೀರ್ಣವಾದ ತಿಂಗಳು. ಆದ್ದರಿಂದ ನಿಮ್ಮಲ್ಲಿ ಯಾರಾದರೂ ಆ ತಿಂಗಳಿಗೆ ಸಾಕ್ಷಿಯಾದರೆ ಅವನು ಉಪವಾಸವನ್ನು ಆಚರಿಸಲಿ. ಯಾರಾದರೂ ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಎಣಿಕೆಯನ್ನು ಪೂರ್ತಿ ಮಾಡಲಿ. ಅಲ್ಲಾಹು ನಿಮಗೆ ಸುಲಭ ಮಾಡಲು ಬಯಸುತ್ತಾನೆ; ಅವನು ನಿಮಗೆ ಕಷ್ಟ ಕೊಡಲು ಬಯಸುವುದಿಲ್ಲ. ನೀವು ಆ ಎಣಿಕೆಯನ್ನು ಪೂರ್ತಿ ಮಾಡಲು, ಅಲ್ಲಾಹು ನಿಮಗೆ ಸನ್ಮಾರ್ಗವನ್ನು ತೋರಿಸಿದ್ದಕ್ಕಾಗಿ ಅವನ ಮಹಾತ್ಮೆಯನ್ನು ಕೊಂಡಾಡಲು ಮತ್ತು ಅವನಿಗೆ ಕೃತಜ್ಞರಾಗಿ ಬದುಕಲು (ಅವನು ಬಯಸುತ್ತಾನೆ).