أَلَمْ تَرَ إِلَى ٱلْمَلَإِ مِنۢ بَنِىٓ إِسْرَٰٓءِيلَ مِنۢ بَعْدِ مُوسَىٰٓ إِذْ قَالُوا۟ لِنَبِىٍّ لَّهُمُ ٱبْعَثْ لَنَا مَلِكًا نُّقَٰتِلْ فِى سَبِيلِ ٱللَّهِ قَالَ هَلْ عَسَيْتُمْ إِن كُتِبَ عَلَيْكُمُ ٱلْقِتَالُ أَلَّا تُقَٰتِلُوا۟ قَالُوا۟ وَمَا لَنَآ أَلَّا نُقَٰتِلَ فِى سَبِيلِ ٱللَّهِ وَقَدْ أُخْرِجْنَا مِن دِيَٰرِنَا وَأَبْنَآئِنَا فَلَمَّا كُتِبَ عَلَيْهِمُ ٱلْقِتَالُ تَوَلَّوْا۟ إِلَّا قَلِيلًا مِّنْهُمْ وَٱللَّهُ عَلِيمٌۢ بِٱلظَّٰلِمِينَ
Kannada Translation - Hamza Buturಮೂಸಾರ ಕಾಲಾನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಕೆಲವು ಮುಖಂಡರನ್ನು ನೀವು ನೋಡಿಲ್ಲವೇ? ಅವರು ತಮ್ಮ ಪ್ರವಾದಿಯೊಂದಿಗೆ, "ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ನಮಗೆ ಒಬ್ಬ ರಾಜನನ್ನು ನೇಮಿಸಿಕೊಡಿ" ಎಂದು ಹೇಳಿದ ಸಂದರ್ಭ. ಅವರು (ಪ್ರವಾದಿ) ಹೇಳಿದರು: "ನಿಮ್ಮ ಮೇಲೆ ಯುದ್ಧವು ಕಡ್ಡಾಯವಾದ ನಂತರ ನೀವೇನಾದರೂ ಯುದ್ಧ ಮಾಡದವರಾಗಿ ಬಿಟ್ಟರೆ?" ಅವರು ಹೇಳಿದರು: "ನಮ್ಮನ್ನು ನಮ್ಮ ಮನೆಗಳಿಂದ ಓಡಿಸಲಾಗಿರುವ ಮತ್ತು ನಮ್ಮಿಂದ ನಮ್ಮ ಮಕ್ಕಳನ್ನು ಬೇರ್ಪಡಿಸಲಾಗಿರುವ ಈ ಸ್ಥಿತಿಯಲ್ಲಿ ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ಸಾಧ್ಯವೇ?" ಆದರೆ ಅವರ ಮೇಲೆ ಯುದ್ಧವು ಕಡ್ಡಾಯವಾದಾಗ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಮುಖ ತಿರುಗಿಸಿ ನಡೆದರು. ಅಲ್ಲಾಹನಿಗೆ ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ.