فَهَزَمُوهُم بِإِذْنِ ٱللَّهِ وَقَتَلَ دَاوُۥدُ جَالُوتَ وَءَاتَىٰهُ ٱللَّهُ ٱلْمُلْكَ وَٱلْحِكْمَةَ وَعَلَّمَهُۥ مِمَّا يَشَآءُ وَلَوْلَا دَفْعُ ٱللَّهِ ٱلنَّاسَ بَعْضَهُم بِبَعْضٍ لَّفَسَدَتِ ٱلْأَرْضُ وَلَٰكِنَّ ٱللَّهَ ذُو فَضْلٍ عَلَى ٱلْعَٰلَمِينَ
Kannada Translation - Hamza Buturನಂತರ ಅಲ್ಲಾಹನ ಅಪ್ಪಣೆಯಿಂದ ಅವರು ಅವರನ್ನು (ವೈರಿಗಳನ್ನು) ಸೋಲಿಸಿದರು. ದಾವೂದ್ ಜಾಲೂತನನ್ನು ಕೊಂದರು. ಅಲ್ಲಾಹು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ವಿವೇಕವನ್ನು ದಯಪಾಲಿಸಿದನು ಹಾಗೂ ಅವನು ಇಚ್ಛಿಸಿದಷ್ಟು ವಿಷಯಗಳನ್ನು ಅವರಿಗೆ ಕಲಿಸಿಕೊಟ್ಟನು. ಅಲ್ಲಾಹು ಕೆಲವು ಜನರಿಗೆ ಇತರ ಕೆಲವರ ಮೂಲಕ ತಡೆಯೊಡ್ಡದಿರುತ್ತಿದ್ದರೆ ಭೂಲೋಕದಲ್ಲಿ ಅರಾಜಕತೆ ತಾಂಡವವಾಡುತ್ತಿತ್ತು. ಅದರೆ ಅಲ್ಲಾಹು ಸರ್ವಲೋಕದವರ ಮೇಲೆ ಬಹಳ ಔದಾರ್ಯವುಳ್ಳವನಾಗಿದ್ದಾನೆ.