أَلَمْ تَرَ إِلَى ٱلَّذِى حَآجَّ إِبْرَٰهِـۧمَ فِى رَبِّهِۦٓ أَنْ ءَاتَىٰهُ ٱللَّهُ ٱلْمُلْكَ إِذْ قَالَ إِبْرَٰهِـۧمُ رَبِّىَ ٱلَّذِى يُحْىِۦ وَيُمِيتُ قَالَ أَنَا۠ أُحْىِۦ وَأُمِيتُ قَالَ إِبْرَٰهِـۧمُ فَإِنَّ ٱللَّهَ يَأْتِى بِٱلشَّمْسِ مِنَ ٱلْمَشْرِقِ فَأْتِ بِهَا مِنَ ٱلْمَغْرِبِ فَبُهِتَ ٱلَّذِى كَفَرَ وَٱللَّهُ لَا يَهْدِى ٱلْقَوْمَ ٱلظَّٰلِمِينَ
Kannada Translation - Hamza Buturಇಬ್ರಾಹೀಮರೊಡನೆ ಅವರ ಪರಿಪಾಲಕನ (ಅಲ್ಲಾಹನ) ವಿಷಯದಲ್ಲಿ ತರ್ಕಿಸಿದವನನ್ನು ನೀವು ನೋಡಿಲ್ಲವೇ? ಅಲ್ಲಾಹು ಅವನಿಗೆ ಸಾಮ್ರಾಜ್ಯವನ್ನು ದಯಪಾಲಿಸಿದ್ದನು. "ನನ್ನ ಪರಿಪಾಲಕನು (ಅಲ್ಲಾಹು) ಜೀವ ಮತ್ತು ಮರಣವನ್ನು ನೀಡುತ್ತಾನೆ" ಎಂದು ಇಬ್ರಾಹೀಂ ಹೇಳಿದಾಗ, "ನಾನು ಕೂಡ ಜೀವ ಮತ್ತು ಮರಣವನ್ನು ನೀಡುತ್ತೇನೆ" ಎಂದು ಅವನು ಹೇಳಿದನು. ಇಬ್ರಾಹೀಂ ಹೇಳಿದರು: "ಅಲ್ಲಾಹು ಸೂರ್ಯನನ್ನು ಪೂರ್ವದಿಂದ ತರುತ್ತಾನೆ; ನೀವು ಅದನ್ನು ಪಶ್ಚಿಮದಿಂದ ತನ್ನಿರಿ!" ಆಗ ಆ ಸತ್ಯನಿಷೇಧಿ ಮೂಕವಿಸ್ಮಿತನಾದನು. ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.