وَإِذْ قَالَ إِبْرَٰهِـۧمُ رَبِّ أَرِنِى كَيْفَ تُحْىِ ٱلْمَوْتَىٰ قَالَ أَوَلَمْ تُؤْمِن قَالَ بَلَىٰ وَلَٰكِن لِّيَطْمَئِنَّ قَلْبِى قَالَ فَخُذْ أَرْبَعَةً مِّنَ ٱلطَّيْرِ فَصُرْهُنَّ إِلَيْكَ ثُمَّ ٱجْعَلْ عَلَىٰ كُلِّ جَبَلٍ مِّنْهُنَّ جُزْءًا ثُمَّ ٱدْعُهُنَّ يَأْتِينَكَ سَعْيًا وَٱعْلَمْ أَنَّ ٱللَّهَ عَزِيزٌ حَكِيمٌ
Kannada Translation - Hamza Buturಇಬ್ರಾಹೀಮ್ ಹೇಳಿದ ಸಂದರ್ಭ: "ಓ ನನ್ನ ಪರಿಪಾಲಕನೇ! ನೀನು ಸತ್ತವರಿಗೆ ಹೇಗೆ ಜೀವ ನೀಡುತ್ತೀ ಎಂದು ನನಗೆ ತೋರಿಸಿಕೊಡು." ಅಲ್ಲಾಹು ಕೇಳಿದನು: "ನಿಮಗೆ ನಂಬಿಕೆಯಿಲ್ಲವೇ?" ಅವರು ಹೇಳಿದರು: "ನಂಬಿಕೆಯಿದೆ. ಆದರೆ ನನ್ನ ಹೃದಯದ ಸಮಾಧಾನಕ್ಕಾಗಿ." ಅಲ್ಲಾಹು ಹೇಳಿದನು: "ನೀವು ನಾಲ್ಕು ಹಕ್ಕಿಗಳನ್ನು ಹಿಡಿದು ಅವುಗಳನ್ನು ನಿಮ್ಮ ಬಳಿಗೆ ಸೇರಿಸಿಕೊಳ್ಳಿ. ನಂತರ ಅವುಗಳನ್ನು (ತುಂಡುಗಳಾಗಿ ಕತ್ತರಿಸಿ) ಒಂದೊಂದು ಭಾಗವನ್ನು ಒಂದೊಂದು ಬೆಟ್ಟದ ಮೇಲಿಡಿ. ನಂತರ ಅವುಗಳನ್ನು ಕೂಗಿ ಕರೆಯಿರಿ. ಅವು ತಕ್ಷಣ ನಿಮ್ಮ ಬಳಿಗೆ ಓಡಿ ಬರುವುವು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.