أَيَوَدُّ أَحَدُكُمْ أَن تَكُونَ لَهُۥ جَنَّةٌ مِّن نَّخِيلٍ وَأَعْنَابٍ تَجْرِى مِن تَحْتِهَا ٱلْأَنْهَٰرُ لَهُۥ فِيهَا مِن كُلِّ ٱلثَّمَرَٰتِ وَأَصَابَهُ ٱلْكِبَرُ وَلَهُۥ ذُرِّيَّةٌ ضُعَفَآءُ فَأَصَابَهَآ إِعْصَارٌ فِيهِ نَارٌ فَٱحْتَرَقَتْ كَذَٰلِكَ يُبَيِّنُ ٱللَّهُ لَكُمُ ٱلْـَٔايَٰتِ لَعَلَّكُمْ تَتَفَكَّرُونَ
Kannada Translation - Hamza Buturನಿಮ್ಮಲ್ಲೊಬ್ಬನಿಗೆ ತಳಭಾಗದಿಂದ ನದಿಗಳು ಹರಿಯುವ, ಖರ್ಜೂರ ಮತ್ತು ದ್ರಾಕ್ಷಿಯ ಹಾಗೂ ಎಲ್ಲಾ ರೀತಿಯ ಹಣ್ಣು-ಹಂಪಲುಗಳಿರುವ ಒಂದು ತೋಟವಿದ್ದು, ಅವನು ವೃದ್ಧನಾಗಿದ್ದು ಬಲಹೀನರಾದ ಮಕ್ಕಳೂ ಇರುವ ಸ್ಥಿತಿಯಲ್ಲಿ ಆ ತೋಟಕ್ಕೆ ಬೆಂಕಿಯ ಬಿರುಗಾಳಿ ಬೀಸಿ ಅದರಿಂದ ಆ ತೋಟವು ಸುಟ್ಟು ಕರಕಲಾಗುವುದನ್ನು ನೀವು ಬಯಸುತ್ತೀರಾ? ಈ ರೀತಿ ಅಲ್ಲಾಹು ತನ್ನ ವಚನಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ.