لِلْفُقَرَآءِ ٱلَّذِينَ أُحْصِرُوا۟ فِى سَبِيلِ ٱللَّهِ لَا يَسْتَطِيعُونَ ضَرْبًا فِى ٱلْأَرْضِ يَحْسَبُهُمُ ٱلْجَاهِلُ أَغْنِيَآءَ مِنَ ٱلتَّعَفُّفِ تَعْرِفُهُم بِسِيمَٰهُمْ لَا يَسْـَٔلُونَ ٱلنَّاسَ إِلْحَافًا وَمَا تُنفِقُوا۟ مِنْ خَيْرٍ فَإِنَّ ٱللَّهَ بِهِۦ عَلِيمٌ
Kannada Translation - Hamza Buturಭೂಮಿಯಲ್ಲಿ ಓಡಾಡಲು ಸಾಧ್ಯವಾಗದಂತೆ ಅಲ್ಲಾಹನ ಮಾರ್ಗದಲ್ಲಿ ಬಂಧನದಲ್ಲಿರುವ ಬಡವರಿಗೆ (ಖರ್ಚು ಮಾಡಿರಿ).[1] ಅವರಿಗೆ ಆತ್ಮಸಂಯಮವಿರುವ ಕಾರಣ (ಇತರರ ಮುಂದೆ ಕೈ ಚಾಚಿ ಬೇಡದ ಕಾರಣ) ಅವಿವೇಕಿಗಳು ಅವರನ್ನು ಶ್ರೀಮಂತರೆಂದು ಭಾವಿಸುತ್ತಾರೆ. ನಿಮಗೆ ಅವರನ್ನು ಅವರ ಹಾವಭಾವಗಳಿಂದ ಗುರುತಿಸಬಹುದು. ಅವರು ಜನರೊಡನೆ ಕಾಡಿ ಬೇಡುವುದಿಲ್ಲ. ನೀವು (ಅಲ್ಲಾಹನ ಮಾರ್ಗದಲ್ಲಿ) ಯಾವುದೇ ಸಂಪತ್ತನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.