وَإِذْ قَالَ رَبُّكَ لِلْمَلَٰٓئِكَةِ إِنِّى جَاعِلٌ فِى ٱلْأَرْضِ خَلِيفَةً قَالُوٓا۟ أَتَجْعَلُ فِيهَا مَن يُفْسِدُ فِيهَا وَيَسْفِكُ ٱلدِّمَآءَ وَنَحْنُ نُسَبِّحُ بِحَمْدِكَ وَنُقَدِّسُ لَكَ قَالَ إِنِّىٓ أَعْلَمُ مَا لَا تَعْلَمُونَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರೊಡನೆ, “ನಾನು ಭೂಮಿಯಲ್ಲಿ ಒಬ್ಬ ಉತ್ತರಾಧಿಕಾರಿಯನ್ನು[1] (ಮನುಷ್ಯನನ್ನು) ಮಾಡುತ್ತೇನೆ” ಎಂದು ಹೇಳಿದ ಸಂದರ್ಭ. ಅವರು ಕೇಳಿದರು: “ಅಲ್ಲಿ ಕಿಡಿಗೇಡಿತನ ಮಾಡುವವನನ್ನು ಮತ್ತು ರಕ್ತ ಹರಿಸುವವನನ್ನು ಮಾಡುವೆಯಾ? ನಾವಂತೂ ನಿನ್ನನ್ನು ಸ್ತುತಿಸುತ್ತಾ ನಿನ್ನ ಪರಿಶುದ್ಧಿಯನ್ನು ಕೊಂಡಾಡುತ್ತೇವೆ ಮತ್ತು ನಿನ್ನ ಪವಿತ್ರತೆಯನ್ನು ಹೊಗಳುತ್ತೇವೆ.” ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ, ನಿಮಗೆ ತಿಳಿಯದೇ ಇರುವುದು ನನಗೆ ತಿಳಿದಿದೆ.”