وَلَمَّا جَآءَهُمْ كِتَٰبٌ مِّنْ عِندِ ٱللَّهِ مُصَدِّقٌ لِّمَا مَعَهُمْ وَكَانُوا۟ مِن قَبْلُ يَسْتَفْتِحُونَ عَلَى ٱلَّذِينَ كَفَرُوا۟ فَلَمَّا جَآءَهُم مَّا عَرَفُوا۟ كَفَرُوا۟ بِهِۦ فَلَعْنَةُ ٱللَّهِ عَلَى ٱلْكَٰفِرِينَ
Kannada Translation - Hamza Buturಅವರಲ್ಲಿರುವ (ಗ್ರಂಥವನ್ನು) ದೃಢೀಕರಿಸುವ ಒಂದು ಗ್ರಂಥವು (ಕುರ್ಆನ್) ಅಲ್ಲಾಹನ ಬಳಿಯಿಂದ ಅವರಿಗೆ ಬಂದಾಗ—ವಾಸ್ತವವಾಗಿ, ಇದಕ್ಕೆ ಮೊದಲು ಅವರು (ಅಂತಹ ಒಂದು ಗ್ರಂಥದ ಮೂಲಕ) ಸತ್ಯನಿಷೇಧಿಗಳ ವಿರುದ್ಧ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದರೂ ಸಹ—ಅವರಿಗೆ ಪರಿಚಿತವಾದ ಆ ಸಂದೇಶವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು.[1] ಆದ್ದರಿಂದ ಸತ್ಯನಿಷೇಧಿಗಳ ಮೇಲೆ ಅಲ್ಲಾಹನ ಶಾಪವಿರಲಿ.