Kannada Translation - Hamza Buturಅವರ ಹೃದಯಗಳು ಸಂಪೂರ್ಣ ನಿರ್ಲಕ್ಷ್ಯದಲ್ಲಿವೆ. ಅಕ್ರಮಿಗಳು ಪರಸ್ಪರ ರಹಸ್ಯವಾಗಿ ಮಾತನಾಡುತ್ತಾ ಕೇಳುತ್ತಾರೆ: “ಇವನು ನಿಮ್ಮಂತಹ ಒಬ್ಬ ಮನುಷ್ಯನಲ್ಲವೇ? ನಿಮಗೆ ದೃಷ್ಟಿಯಿದ್ದೂ ಸಹ ನೀವು ಮಾಟಗಾರಿಕೆಗೆ ಬಲಿಯಾಗುತ್ತೀರಾ?”
Kannada Translation - Hamza Buturಪ್ರವಾದಿ ಹೇಳಿದರು: “ಆಕಾಶ ಮತ್ತು ಭೂಮಿಯಲ್ಲಿರುವ ಎಲ್ಲಾ ಮಾತುಗಳನ್ನು ನನ್ನ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿಯುತ್ತಾನೆ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.”
Kannada Translation - Hamza Buturಅಷ್ಟೇ ಅಲ್ಲ; ಅವರು ಹೇಳಿದರು: “ಈ ಕುರ್ಆನ್ ಅರ್ಥಶೂನ್ಯ ಕನಸುಗಳ ಮಿಶ್ರಣವಾಗಿದೆ. ಅಲ್ಲ; ಅವನೇ (ಪ್ರವಾದಿ) ಅದನ್ನು ಸ್ವಯಂ ರಚಿಸಿ ತಂದಿದ್ದಾನೆ. ಅಲ್ಲ, ಅವನೊಬ್ಬ ಕವಿಯಾಗಿದ್ದಾನೆ. ಇಲ್ಲದಿದ್ದರೆ, ಹಿಂದಿನ ಪ್ರವಾದಿಗಳು ತಂದಂತಹ ಯಾವುದಾದರೂ ದೃಷ್ಟಾಂತವನ್ನು ಇವನು ಕೂಡ ತಂದು ತೋರಿಸಲಿ.”
Kannada Translation - Hamza Buturನಿಮಗಿಂತ ಮೊದಲು ನಾವು ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ನಿಮಗೆ ಗೊತ್ತಿಲ್ಲದಿದ್ದರೆ ಗ್ರಂಥದವರೊಡನೆ ಕೇಳಿ ನೋಡಿ.
Kannada Translation - Hamza Buturನಂತರ ನಾವು ಅವರಿಗೆ ನೀಡಿದ ಎಲ್ಲಾ ವಾಗ್ದಾನಗಳನ್ನು ಸತ್ಯವಾಗಿ ನೆರವೇರಿಸಿಕೊಟ್ಟೆವು. ಅವರನ್ನು ಮತ್ತು ನಾವು ರಕ್ಷಿಸಬೇಕೆಂದು ಇಚ್ಛಿಸಿದವರನ್ನು ರಕ್ಷಿಸಿದೆವು. ಎಲ್ಲೆ ಮೀರಿದವರನ್ನು ನಾವು ನಾಶ ಮಾಡಿದೆವು.
Kannada Translation - Hamza Buturಅವರು ಹೀಗೆ ರೋದಿಸುತ್ತಲೇ ಇದ್ದರು. ಎಲ್ಲಿಯವರೆಗೆಂದರೆ, ನಾವು ಅವರನ್ನು ಬುಡದಿಂದ ಕತ್ತರಿಸಲಾದ ತೆನೆಗಳಂತೆ ಮತ್ತು ಆರಿಹೋದ ಬೆಂಕಿಯಂತೆ ಮಾಡುವ ತನಕ.
Kannada Translation - Hamza Buturಬದಲಿಗೆ, ನಾವು ಸತ್ಯವನ್ನು ಅಸತ್ಯದ ಮೇಲೆ ಎಸೆಯುತ್ತೇವೆ. ಆಗ ಅದು ಅಸತ್ಯವನ್ನು ಒಡೆದು ಹಾಕುತ್ತದೆ. ಆಗ ಅದು (ಅಸತ್ಯ) ತಕ್ಷಣ ನಾಶವಾಗುತ್ತದೆ. ನೀವು (ಅಲ್ಲಾಹನ ಬಗ್ಗೆ) ಆರೋಪಿಸುವ ಮಾತುಗಳಿಂದಾಗಿ ನಿಮಗೆ ವಿನಾಶವು ಕಾದಿದೆ.
Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಅವನಿಗೆ ಸೇರಿದವರು. ಅವನ ಬಳಿಯಿರುವವರು (ದೇವದೂತರು) ಅವನನ್ನು ಆರಾಧಿಸಲು ಅಹಂಕಾರಪಡುವುದಿಲ್ಲ. ಅವರು ದಣಿಯುವುದೂ ಇಲ್ಲ.
Kannada Translation - Hamza Buturಭೂಮ್ಯಾಕಾಶಗಳಲ್ಲಿ ಅಲ್ಲಾಹನ ಹೊರತು ಬೇರೆ ದೇವರುಗಳು ಇರುತ್ತಿದ್ದರೆ ಅವು ನಾಶವಾಗಿ ಹೋಗುತ್ತಿದ್ದವು.[1] ಅವರು ಸುಳ್ಳು ಸುಳ್ಳಾಗಿ ಆರೋಪಿಸುವ ಎಲ್ಲದ್ದರಿಂದಲೂ ಸಿಂಹಾಸನದ ಒಡೆಯನಾದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆಯೇ? ಹೇಳಿರಿ: “ಅದಕ್ಕೆ ನಿಮ್ಮ ಬಳಿಯಿರುವ ಸಾಕ್ಷ್ಯಾಧಾರಗಳನ್ನು ತನ್ನಿರಿ.” ಇದು (ಕುರ್ಆನ್) ನನ್ನ ಜೊತೆಯಲ್ಲಿರುವವರಿಗೆ ಮತ್ತು ನನಗಿಂತ ಮೊದಲಿನವರಿಗೆ ಇರುವ ಉಪದೇಶವಾಗಿದೆ. ಆದರೆ ಅವರಲ್ಲಿ ಹೆಚ್ಚಿನವರಿಗೂ ಸತ್ಯವೇನೆಂದು ತಿಳಿದಿಲ್ಲ. ಆದ್ದರಿಂದ ಅವರು ವಿಮುಖರಾಗುತ್ತಿದ್ದಾರೆ.
Kannada Translation - Hamza Buturನಿಮಗಿಂತ ಮೊದಲು ನಾವು ಯಾವೆಲ್ಲಾ ಸಂದೇಶವಾಹಕರುಗಳನ್ನು ಕಳುಹಿಸಿದ್ದೆವೋ ಅವರೆಲ್ಲರಿಗೂ, “ನನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಆದ್ದರಿಂದ ನನ್ನನ್ನು ಮಾತ್ರ ಆರಾಧಿಸಿರಿ” ಎಂಬ ದೇವವಾಣಿಯನ್ನೇ ನೀಡಿದ್ದೆವು.
Kannada Translation - Hamza Buturಅವರು ಹೇಳಿದರು: “ಪರಮ ದಯಾಮಯನಿಗೆ (ಅಲ್ಲಾಹನಿಗೆ) ಮಕ್ಕಳಿದ್ದಾರೆ.” ಅವನು ಪರಿಶುದ್ಧನು. ಅಲ್ಲ, ವಾಸ್ತವವಾಗಿ ಅವರು ಅವನ ಸನ್ಮಾನ್ಯ ದಾಸರಾಗಿದ್ದಾರೆ.
Kannada Translation - Hamza Buturಅವರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿರುವ ಎಲ್ಲವನ್ನೂ ಅವನು ತಿಳಿಯುತ್ತಾನೆ. ಅವನ ಸಂಪ್ರೀತಿಗೆ ಪಾತ್ರರಾದವರಿಗೆ ಮಾತ್ರ ಅವರು ಶಿಫಾರಸು ಮಾಡುತ್ತಾರೆ. ಅವರು ಅವನ ಭಯದಿಂದ ತರಗುಟ್ಟುತ್ತಾರೆ.
Kannada Translation - Hamza Butur“ಅಲ್ಲಾಹನ ಹೊರತು ನಾನೇ ದೇವನು” ಎಂದು ಅವರಲ್ಲಿ ಯಾರು ಹೇಳುತ್ತಾನೋ, ಅವನಿಗೆ ನಾವು ಪ್ರತಿಫಲವಾಗಿ ನರಕಾಗ್ನಿಯನ್ನು ನೀಡುವೆವು. ಅಕ್ರಮಿಗಳಿಗೆ ನಾವು ಹೀಗೆಯೇ ಪ್ರತಿಫಲ ನೀಡುತ್ತೇವೆ.
Kannada Translation - Hamza Buturಭೂಮ್ಯಾಕಾಶಗಳು ಪರಸ್ಪರ ಅಂಟಿಕೊಂಡಿದ್ದವು ಮತ್ತು ನಾವು ಅವುಗಳನ್ನು ಬೇರ್ಪಡಿಸಿದೆವು ಎಂದು ಸತ್ಯನಿಷೇಧಿಗಳು ನೋಡುವುದಿಲ್ಲವೇ? ಜೀವವಿರುವ ಎಲ್ಲ ವಸ್ತುಗಳನ್ನೂ ನಾವು ನೀರಿನಿಂದ ಉಂಟು ಮಾಡಿದೆವು. ಆದರೂ ಅವರು ವಿಶ್ವಾಸವಿಡುವುದಿಲ್ಲವೇ?
Kannada Translation - Hamza Buturಭೂಮಿಯು ಅವರೊಂದಿಗೆ ಅಲುಗಾಡದಿರಲು ನಾವು ಅದರಲ್ಲಿ ದೃಢವಾಗಿ ನಿಲ್ಲುವ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ವಿಶಾಲವಾದ ಮಾರ್ಗಗಳನ್ನು ಮಾಡಿದೆವು. ಅವರು ದಾರಿ ಕಾಣುವುದಕ್ಕಾಗಿ.
Kannada Translation - Hamza Butur(ಪ್ರವಾದಿಯವರೇ) ನಿಮಗಿಂತ ಮೊದಲು ನಾವು ಯಾವುದೇ ವ್ಯಕ್ತಿಗೂ ಶಾಶ್ವತ ಬದುಕನ್ನು ನೀಡಿಲ್ಲ. ಹೀಗಿರುವಾಗ, ನೀವು ನಿಧನರಾದರೆ ಅವರು ಶಾಶ್ವತವಾಗಿ ಉಳಿಯುವರೇ?
Kannada Translation - Hamza Buturಪ್ರತಿಯೊಂದು ಜೀವಿಯೂ ಮರಣದ ರುಚಿಯನ್ನು ನೋಡಲಿದೆ. ನಾವು ಪರೀಕ್ಷೆಯ ರೂಪದಲ್ಲಿ ನಿಮ್ಮಲ್ಲರನ್ನೂ ಒಳಿತು ಮತ್ತು ಕೆಡುಕುಗಳಲ್ಲಿ ಪರೀಕ್ಷಿಸುತ್ತೇವೆ. ನೀವೆಲ್ಲರೂ ನಮ್ಮ ಬಳಿಗೇ ಮರಳಿ ಬರುವಿರಿ.
Kannada Translation - Hamza Buturಮಾನವನನ್ನು ಆತುರ ಜೀವಿಯಾಗಿ ಸೃಷ್ಟಿಸಲಾಗಿದೆ. ನಾನು ಸದ್ಯವೇ ನನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿಕೊಡಲಿದ್ದೇನೆ. ಆದ್ದರಿಂದ ನೀವು ನನ್ನೊಂದಿಗೆ ತ್ವರೆ ಮಾಡಬೇಡಿ.
Kannada Translation - Hamza Buturತಮ್ಮ ಮುಖಗಳಿಂದ ಮತ್ತು ಬೆನ್ನುಗಳಿಂದ ಬೆಂಕಿಯನ್ನು ತಡೆಯಲು ಸಾಧ್ಯವಾಗದ ಮತ್ತು ಯಾವುದೇ ಸಹಾಯವು ದೊರಕದ ಆ ಒಂದು ಸಮಯದ ಬಗ್ಗೆ ಸತ್ಯನಿಷೇಧಿಗಳು ತಿಳಿದಿದ್ದರೆ!
Kannada Translation - Hamza Buturಅಲ್ಲ; ಅಂತ್ಯ ಸಮಯವು ಅವರ ಬಳಿಗೆ ಹಠಾತ್ತನೆ ಬರಲಿದೆ. ಅದು ಅವರನ್ನು ತಬ್ಬಿಬ್ಬುಗೊಳಿಸಲಿದೆ. ಅದನ್ನು ತಡೆಗಟ್ಟಲು ಅವರಿಗೆ ಸಾಧ್ಯವಾಗುವುದಿಲ್ಲ. ಅವರಿಗೆ ಕಾಲಾವಕಾಶವನ್ನೂ ನೀಡಲಾಗುವುದಿಲ್ಲ.
Kannada Translation - Hamza Buturನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಅವರನ್ನು ಅಪಹಾಸ್ಯ ಮಾಡಿದವರನ್ನು ನಂತರ ಅವರು ಅಪಹಾಸ್ಯ ಮಾಡುತ್ತಿದ್ದ ವಿಷಯವೇ ಆವರಿಸಿಬಿಟ್ಟಿತು.
Kannada Translation - Hamza Buturಕೇಳಿರಿ: “ನಿಮ್ಮನ್ನು ಪರಮ ದಯಾಮಯನಿಂದ (ಅಲ್ಲಾಹನಿಂದ) ಹಗಲು-ರಾತ್ರಿ ರಕ್ಷಣೆ ಮಾಡಲು ಯಾರಿದ್ದಾರೆ?” ಅಲ್ಲ; ವಾಸ್ತವವಾಗಿ ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಸ್ಮರಣೆಯಿಂದ ವಿಮುಖರಾಗಿದ್ದಾರೆ.
Kannada Translation - Hamza Buturಅವರ ರಕ್ಷಣೆ ಮಾಡಲು ಅವರಿಗೆ ನಮ್ಮ ಹೊರತು ಬೇರೆ ದೇವರುಗಳು ಇದ್ದಾರೆಯೇ? ಆ ದೇವರುಗಳಿಗೆ ಸ್ವಯಂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ. ಅವರಿಗೆ ನಮ್ಮ ಕಡೆಯಿಂದಲೂ ರಕ್ಷಣೆ ಸಿಗುವುದಿಲ್ಲ.
Kannada Translation - Hamza Buturಅಲ್ಲ; ನಾವು ಇವರಿಗೆ ಮತ್ತು ಇವರ ಪೂರ್ವಜರಿಗೆ ಸವಲತ್ತುಗಳನ್ನು ನೀಡಿದೆವು. ಹೀಗೆ ಅವರು ದೀರ್ಘಕಾಲ ಬಾಳಿ ಬದುಕಿದರು. ನಾವು ಭೂಮಿಯನ್ನು ಅದರ ಅಂಚುಗಳಿಂದ ಕುಗ್ಗಿಸುತ್ತಿರುವುದನ್ನು ಅವರು ನೋಡುವುದಿಲ್ಲವೇ?[1] ಹೀಗಿದ್ದೂ ಅವರೇ ವಿಜಯಿಗಳಾಗುವರೇ?
Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನಾನು ನಿಮಗೆ ದೇವವಾಣಿಯ ಆಧಾರದಲ್ಲಿ ಎಚ್ಚರಿಕೆ ನೀಡುತ್ತಿದ್ದೇನೆ.” ಅವರಿಗೆ ಎಚ್ಚರಿಕೆ ನೀಡಲಾಗುವಾಗ ಕಿವಿ ಕೇಳದವರು ಆ ಕರೆಯನ್ನು ಕೇಳಲಾರರು.
Kannada Translation - Hamza Buturಅವರಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯ ಒಂದು ಸುಳಿವು ತಾಗಿದರೆ ಸಾಕು, ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ನಿಜಕ್ಕೂ ನಾವು ಅಕ್ರಮಿಗಳಾಗಿದ್ದೆವು.”
Kannada Translation - Hamza Buturಪುನರುತ್ಥಾನ ದಿನದಂದು ನಾವು ನ್ಯಾಯಯುತ ತಕ್ಕಡಿಗಳನ್ನು ಸ್ಥಾಪಿಸುವೆವು. ಅಂದು ಯಾವುದೇ ವ್ಯಕ್ತಿಗೂ ಅನ್ಯಾಯವಾಗುವುದಿಲ್ಲ. ಅವರು ಮಾಡಿದ ಕರ್ಮವು ಒಂದು ಸಾಸಿವೆ ಕಾಳಿನ ತೂಕದಷ್ಟಿದ್ದರೂ ನಾವು ಅದನ್ನು ತರುವೆವು. ವಿಚಾರಣೆ ಮಾಡುವವರಾಗಿ ನಾವು ಯಥೇಷ್ಟ ಸಾಕು.
Kannada Translation - Hamza Buturಅವರು (ದೇವಭಯವುಳ್ಳವರು) ಯಾರೆಂದರೆ, ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಅದೃಶ್ಯರೂಪದಲ್ಲಿ ಭಯಪಡುವವರು ಮತ್ತು ಅಂತ್ಯಸಮಯದ ವಿಷಯದಲ್ಲಿ ಅತೀವ ಆತಂಕದಲ್ಲಿರುವವರು.
Kannada Translation - Hamza Buturಇಬ್ರಾಹೀಮ್ ಹೇಳಿದರು: “ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅವುಗಳ ಪರಿಪಾಲಕನೇ (ಅಲ್ಲಾಹನೇ) ನಿಮ್ಮ ಪರಿಪಾಲಕ. ನಾನು ಅದಕ್ಕೆ ಸಾಕ್ಷಿಯಾಗಿರುವವರಲ್ಲಿ ಒಬ್ಬನು.
Kannada Translation - Hamza Buturನಂತರ ಇಬ್ರಾಹೀಮ್ ಆ ಎಲ್ಲಾ ವಿಗ್ರಹಗಳನ್ನು ಧ್ವಂಸ ಮಾಡಿದರು. ಆದರೆ ಅವುಗಳಲ್ಲಿ ದೊಡ್ಡ ವಿಗ್ರಹವನ್ನು ಹಾಗೆಯೇ ಬಿಟ್ಟರು. ಜನರು ಅದರ ಬಳಿಗೆ ಹಿಂದಿರುಗಿ ಬರುವುದಕ್ಕಾಗಿ.
Kannada Translation - Hamza Buturಇಬ್ರಾಹೀಮ್ ಉತ್ತರಿಸಿದರು: “ಅಲ್ಲ; ಈ ದೊಡ್ಡ ವಿಗ್ರಹವೇ ಇದನ್ನು ಮಾಡಿದ್ದು. ನೀವು ಆ (ಧ್ವಂಸವಾದ) ವಿಗ್ರಹಗಳೊಡನೆ ಕೇಳಿ ನೋಡಿ. ಅವುಗಳಿಗೆ ಮಾತನಾಡಲು ಸಾಧ್ಯವಿದ್ದರೆ.”
Kannada Translation - Hamza Buturಇಬ್ರಾಹೀಮ್ ಕೇಳಿದರು: “ಹಾಗಾದರೆ ನೀವು ಅಲ್ಲಾಹನನ್ನು ಬಿಟ್ಟು ನಿಮಗೆ ಯಾವುದೇ ಉಪಕಾರ ಅಥವಾ ತೊಂದರೆ ಮಾಡದ ಈ ವಸ್ತುಗಳನ್ನು ಆರಾಧಿಸುತ್ತಿದ್ದೀರಾ?
Kannada Translation - Hamza Buturನಾವು ಅವರನ್ನು ನಮ್ಮ ಆಜ್ಞೆಯಂತೆ ಮಾರ್ಗದರ್ಶನ ಮಾಡುವ ಮುಖಂಡರನ್ನಾಗಿ ಮಾಡಿದೆವು. ನಾವು ಅವರಿಗೆ ಸತ್ಕರ್ಮಗಳನ್ನು ಮಾಡಲು, ನಮಾಝ್ ಸಂಸ್ಥಾಪಿಸಲು ಮತ್ತು ಝಕಾತ್ ನೀಡಲು ದೇವವಾಣಿಯನ್ನು (ನಿರ್ದೇಶನವನ್ನು) ನೀಡಿದೆವು. ಅವರು ನಮ್ಮನ್ನು ಮಾತ್ರ ಆರಾಧಿಸುವ ದಾಸರಾಗಿದ್ದರು.
Kannada Translation - Hamza Buturನಾವು ಲೂತರಿಗೆ ತೀರ್ಪುಗಾರಿಕೆ ಮತ್ತು ಜ್ಞಾನವನ್ನು ದಯಪಾಲಿಸಿದೆವು. ಅಶ್ಲೀಲಕೃತ್ಯವನ್ನು ಮಾಡುತ್ತಿದ್ದ ಊರಿನಿಂದ ನಾವು ಅವರನ್ನು ಪಾರು ಮಾಡಿದೆವು. ನಿಶ್ಚಯವಾಗಿಯೂ ಆ ಊರಿನವರು ದುಷ್ಟ ಅವಿಧೇಯ ಜನರಾಗಿದ್ದರು.
Kannada Translation - Hamza Buturನೂಹರನ್ನು ಕೂಡ ನೆನಪಿಸಿಕೊಳ್ಳಿ! ಇದಕ್ಕೆ ಮೊದಲು ಅವರು ನಮ್ಮನ್ನು ಕರೆದು ಪ್ರಾರ್ಥಿಸಿದ ಸಂದರ್ಭದಲ್ಲಿ ನಾವು ಅವರ ಕರೆಗೆ ಉತ್ತರಿಸಿದೆವು. ನಂತರ ನಾವು ಅವರನ್ನು ಮತ್ತು ಅವರ ಕುಟುಂಬವನ್ನು ಮಹಾ ದುರಂತದಿಂದ ಪಾರು ಮಾಡಿದೆವು.
Kannada Translation - Hamza Buturನಮ್ಮ ವಚನಗಳನ್ನು ನಿಷೇಧಿಸಿದ ಜನರ ವಿರುದ್ಧ ನಾವು ಅವರಿಗೆ (ನೂಹರಿಗೆ) ಸಹಾಯ ಮಾಡಿದೆವು. ನಿಶ್ಚಯವಾಗಿಯೂ ಅವರು ದುಷ್ಟ ಜನರಾಗಿದ್ದರು. ಆದ್ದರಿಂದ ನಾವು ಅವರೆಲ್ಲರನ್ನೂ ಮುಳುಗಿಸಿ ಕೊಂದೆವು.
Kannada Translation - Hamza Buturದಾವೂದ್ ಮತ್ತು ಸುಲೈಮಾನರನ್ನು ನೆನಪಿಸಿಕೊಳ್ಳಿ! ಅವರಿಬ್ಬರು ಒಂದು ಹೊಲದ ವಿಷಯದಲ್ಲಿ ತೀರ್ಪು ನೀಡುತ್ತಿದ್ದರು. ಆ ಹೊಲಕ್ಕೆ ಕೆಲವು ಜನರ ಕುರಿಗಳು ನುಸುಳಿದ್ದವು. ಅವರು ನೀಡುವ ತೀರ್ಪಿಗೆ ನಾವು ಸಾಕ್ಷಿಯಾಗಿದ್ದೆವು.
Kannada Translation - Hamza Buturನಾವು ಸುಲೈಮಾನರಿಗೆ ಈ ಪ್ರಕರಣವು ಸರಿಯಾಗಿ ಅರ್ಥವಾಗುವಂತೆ ಮಾಡಿದೆವು.[1] ಅವರಿಬ್ಬರಿಗೂ ನಾವು ತೀರ್ಪುಗಾರಿಕೆ ಮತ್ತು ಜ್ಞಾನವನ್ನು ನೀಡಿದ್ದೆವು. ದಾವೂದರೊಂದಿಗೆ ಸ್ತುತಿಕೀರ್ತನೆ ಮಾಡಲು ನಾವು ಪರ್ವತಗಳನ್ನು ಮತ್ತು ಪಕ್ಷಿಗಳನ್ನು ಅವರಿಗೆ ಅಧೀನಗೊಳಿಸಿದೆವು. ನಾವು (ಅದನ್ನೆಲ್ಲಾ) ಮಾಡುವವರಾಗಿದ್ದೆವು.
Kannada Translation - Hamza Buturಯುದ್ಧದಲ್ಲಿ (ವೈರಿಗಳ ಏಟುಗಳಿಂದ) ನಿಮಗೆ ರಕ್ಷಣೆ ಒದಗಿಸುವ ಅಂಗಿಗಳ ತಯಾರಿಕೆಯನ್ನು ನಾವು ದಾವೂದರಿಗೆ ಕಲಿಸಿಕೊಟ್ಟೆವು.[1] ಆದರೂ ನೀವು ಕೃತಜ್ಞರಾಗುವುದಿಲ್ಲವೇ?
Kannada Translation - Hamza Buturನಾವು ಸುಲೈಮಾನರಿಗೆ ಬಲವಾಗಿ ಬೀಸುವ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ನಾವು ಸಮೃದ್ಧಗೊಳಿಸಿದ ಭೂಪ್ರದೇಶಕ್ಕೆ ಚಲಿಸುತ್ತಿತ್ತು.[1] ನಾವು ಎಲ್ಲಾ ವಿಷಯಗಳ ಬಗ್ಗೆಯೂ ಜ್ಞಾನವುಳ್ಳವರಾಗಿದ್ದೇವೆ.
Kannada Translation - Hamza Buturಶೈತಾನರಲ್ಲಿ ಕೆಲವರನ್ನು ಅವರಿಗೆ ಅಧೀನಗೊಳಿಸಿದೆವು. ಅವರು ಸುಲೈಮಾನರಿಗಾಗಿ ಸಮುದ್ರದಲ್ಲಿ ಮುಳುಗುತ್ತಿದ್ದರು. ಇದಲ್ಲದೆ ಇನ್ನಿತರ ಅನೇಕ ಕೆಲಸಗಳನ್ನು ಅವರು ಮಾಡುತ್ತಿದ್ದರು. ನಾವು ಅವರೆಲ್ಲರ ಪಾಲಕರಾಗಿದ್ದೆವು.
Kannada Translation - Hamza Buturಅಯ್ಯೂಬರನ್ನು ಕೂಡ ನೆನಪಿಸಿಕೊಳ್ಳಿ! ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ. “ನಿಶ್ಚಯವಾಗಿಯೂ ನನಗೆ ತೊಂದರೆ ತಗುಲಿದೆ. ನೀನಾದರೋ ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನು.”
Kannada Translation - Hamza Buturಆಗ ನಾವು ಅವರ ಕರೆಗೆ ಉತ್ತರ ನೀಡಿ ಅವರು ಬಳಲುತ್ತಿದ್ದ ತೊಂದರೆಯನ್ನು ನಿವಾರಿಸಿದೆವು. ನಾವು ಅವರಿಗೆ ಅವರ ಕುಟುಂಬವನ್ನು ಮತ್ತು ಅವರೊಂದಿಗೆ ಅವರಷ್ಟೇ ಇತರರನ್ನು ನೀಡಿದೆವು. ಇದು ನಮ್ಮ ಕಡೆಯ ದಯೆಯಾಗಿದೆ ಮತ್ತು ಆರಾಧಕರಿಗೆ ಒಂದು ಉಪದೇಶವಾಗಿದೆ.
Kannada Translation - Hamza Buturದುನ್ನೂನರನ್ನು[1] (ಯೂನುಸ್) ಕೂಡ ನೆನಪಿಸಿಕೊಳ್ಳಿ! ಅವರು ಕೋಪದಿಂದ ಹೊರಟುಹೋದ ಸಂದರ್ಭ. ನಮಗೆ ಅವರನ್ನು ಹಿಡಿಯಲು ಸಾಧ್ಯವಿಲ್ಲವೆಂದು ಅವರು ಭಾವಿಸಿದ್ದರು. ನಂತರ ಅವರು ಅಂಧಕಾರಗಳ ಒಳಗಿನಿಂದ ಕೂಗಿ ಕರೆದರು: “ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವನಿಲ್ಲ. ನೀನು ಪರಿಶುದ್ಧನು! ನಿಶ್ಚಯವಾಗಿಯೂ ನಾನು ಅಕ್ರಮಿಗಳಲ್ಲಿ ಸೇರಿದ್ದೆ.”
Kannada Translation - Hamza Buturಆಗ ನಾವು ಅವರ ಕರೆಗೆ ಉತ್ತರ ನೀಡಿದೆವು ಮತ್ತು ಅವರನ್ನು ಆ ಸಂಕಟದಿಂದ ಪಾರು ಮಾಡಿದೆವು. ನಾವು ಇದೇ ರೀತಿ ಸತ್ಯವಿಶ್ವಾಸಿಗಳನ್ನು ಪಾರು ಮಾಡುತ್ತೇವೆ.
Kannada Translation - Hamza Buturಝಕರಿಯ್ಯರನ್ನು ಕೂಡ ನೆನಪಿಸಿಕೊಳ್ಳಿ! ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ: “ಓ ನನ್ನ ಪರಿಪಾಲಕನೇ! ನನ್ನನ್ನು ಒಂಟಿಯಾಗಿ ಬಿಟ್ಟುಬಿಡಬೇಡ. ನೀನು ಅತ್ಯುತ್ತಮ ವಾರಸುದಾರನಾಗಿರುವೆ.”
Kannada Translation - Hamza Buturಆಗ ನಾವು ಅವರ ಕರೆಗೆ ಉತ್ತರ ನೀಡಿದೆವು. ಅವರಿಗೆ ಯಹ್ಯಾ ಎಂಬ ಪುತ್ರನನ್ನು ದಯಪಾಲಿಸಿದೆವು. ಅವರ ಪತ್ನಿಯನ್ನು (ಗರ್ಭಧಾರಣೆಗೆ) ಯೋಗ್ಯಳನ್ನಾಗಿಸಿದೆವು. ನಿಶ್ಚಯವಾಗಿಯೂ ಈ ಎಲ್ಲಾ ಪ್ರವಾದಿಗಳು ಸತ್ಕರ್ಮಗಳನ್ನು ಮಾಡಲು ತ್ವರೆ ಮಾಡುತ್ತಿದ್ದರು ಮತ್ತು ನಿರೀಕ್ಷೆ ಹಾಗೂ ಭಯದಿಂದ ನಮ್ಮನ್ನು ಕರೆದು ಪ್ರಾರ್ಥಿಸುತ್ತಿದ್ದರು. ಅವರು ನಮಗೆ ವಿನಮ್ರರಾಗಿದ್ದರು.
Kannada Translation - Hamza Buturತನ್ನ ಕನ್ಯತ್ವವನ್ನು ಸಂರಕ್ಷಿಸಿದ ಆ ಪರಿಶುದ್ಧ ಮಹಿಳೆಯನ್ನು (ಮರ್ಯಮರನ್ನು) ಕೂಡ ನೆನಪಿಸಿಕೊಳ್ಳಿ. ನಾವು ಅವರೊಳಗೆ ಆತ್ಮವನ್ನು ಊದಿದೆವು. ಅವರನ್ನು ಮತ್ತು ಅವರ ಪುತ್ರನನ್ನು ಸರ್ವಲೋಕದವರಿಗೆ ದೃಷ್ಟಾಂತವೆಂಬಂತೆ ಮಾಡಿದೆವು.
Kannada Translation - Hamza Buturಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮಗಳನ್ನು ಮಾಡುತ್ತಾನೋ, ಅವನ ಪರಿಶ್ರಮಗಳನ್ನು ನಿರಾಕರಿಸಲಾಗುವುದಿಲ್ಲ. ನಿಶ್ಚಯವಾಗಿಯೂ ನಾವು ಅವುಗಳನ್ನು ದಾಖಲಿಸಿಡುವೆವು.
Kannada Translation - Hamza Buturಆ ಸತ್ಯ ವಾಗ್ದಾನವು ಸಮೀಪಿಸಿದಾಗ ಸತ್ಯನಿಷೇಧಿಗಳ ದೃಷ್ಟಿಗಳು ಎವೆಯಿಕ್ಕದೆ ದಿಟ್ಟಿಸುತ್ತಿರುವುದು. (ಅವರು ಹೇಳುವರು): “ಅಯ್ಯೋ! ನಮ್ಮ ದುರ್ಗತಿಯೇ! ನಾವು ಇದರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯದಲ್ಲಿದ್ದೆವು. ಅಲ್ಲ, ನಾವು ಅಕ್ರಮಿಗಳಾಗಿದ್ದೆವು.”
Kannada Translation - Hamza Buturನಿಶ್ಚಯವಾಗಿಯೂ, ನೀವು ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುವ ದೇವರುಗಳು ನರಕದ ಇಂಧನವಾಗಲಿದ್ದಾರೆ. ನೀವೆಲ್ಲರೂ ಅದಕ್ಕೇ ಹೋಗಿ ಸೇರುವಿರಿ.
Kannada Translation - Hamza Buturಆ ಮಹಾ ದಿಗಿಲಿನಿಂದಲೂ ಅವರು ಸಂಕಟಪಡಲಾರರು. ದೇವದೂತರುಗಳು ಅವರನ್ನು ಬರಮಾಡಿಕೊಳ್ಳುತ್ತಾ ಹೇಳುವರು: “ಇದು ನಿಮಗೆ ವಾಗ್ದಾನ ಮಾಡಲಾದ ನಿಮ್ಮ ದಿನವಾಗಿದೆ.”
Kannada Translation - Hamza Buturಪುಸ್ತಕದ ಹಾಳೆಗಳನ್ನು ಸುರುಳಿಯಾಗಿ ಸುತ್ತುವಂತೆ ನಾವು ಆಕಾಶವನ್ನು ಸುತ್ತುವ ದಿನ. ನಾವು ಪ್ರಥಮ ಬಾರಿ ಸೃಷ್ಟಿಸಿದಂತೆ ಮತ್ತೊಮ್ಮೆ ಸೃಷ್ಟಿಸುವೆವು. ಅದು ನಾವು ನೆರವೇರಿಸಬೇಕಾದ ವಾಗ್ದಾನವಾಗಿದೆ. ನಿಶ್ಚಯವಾಗಿಯೂ ನಾವು ಅದನ್ನು ನೆರವೇರಿಸುತ್ತೇವೆ.
Kannada Translation - Hamza Buturಅವರೇನಾದರೂ ಮುಖ ತಿರುಗಿಸಿ ನಡೆದರೆ ಹೇಳಿರಿ: “ನಾನು ನಿಮಗೆ ಸಮಾನ ರೂಪದಲ್ಲಿ ಎಚ್ಚರಿಸಿದ್ದೇನೆ.[1] ನಿಮಗೆ ವಾಗ್ದಾನ ಮಾಡಲಾಗಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ವಿದೂರದಲ್ಲಿದೆಯೋ ಎಂದು ನನಗೆ ತಿಳಿದಿಲ್ಲ.
Kannada Translation - Hamza Buturಅವರು (ಪ್ರವಾದಿ) ಹೇಳಿದರು: “ನನ್ನ ಪರಿಪಾಲಕನೇ! ಸತ್ಯವಾಗಿ ತೀರ್ಪು ನೀಡು. ನಮ್ಮ ಪರಿಪಾಲಕನು (ಅಲ್ಲಾಹು) ಪರಮ ದಯಾಳುವಾಗಿದ್ದಾನೆ. ನೀವು ಸುಳ್ಳು ಸುಳ್ಳಾಗಿ ಆರೋಪಿಸುವ ಎಲ್ಲಾ ವಿಷಯಗಳ ಬಗ್ಗೆ ಸಹಾಯ ಬೇಡಲಾಗುವವನು ಅವನೇ.”