إِنَّمَا ٱلْمُؤْمِنُونَ ٱلَّذِينَ ءَامَنُوا۟ بِٱللَّهِ وَرَسُولِهِۦ وَإِذَا كَانُوا۟ مَعَهُۥ عَلَىٰٓ أَمْرٍ جَامِعٍ لَّمْ يَذْهَبُوا۟ حَتَّىٰ يَسْتَـْٔذِنُوهُ إِنَّ ٱلَّذِينَ يَسْتَـْٔذِنُونَكَ أُو۟لَٰٓئِكَ ٱلَّذِينَ يُؤْمِنُونَ بِٱللَّهِ وَرَسُولِهِۦ فَإِذَا ٱسْتَـْٔذَنُوكَ لِبَعْضِ شَأْنِهِمْ فَأْذَن لِّمَن شِئْتَ مِنْهُمْ وَٱسْتَغْفِرْ لَهُمُ ٱللَّهَ إِنَّ ٱللَّهَ غَفُورٌ رَّحِيمٌ
Kannada Translation - Hamza Buturಸತ್ಯವಿಶ್ವಾಸಿಗಳೆಂದರೆ ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟವರು ಮಾತ್ರ. ಅವರು (ಮುಸಲ್ಮಾನರ ಹಿತಕ್ಕಾಗಿ) ಸಂದೇಶವಾಹಕರು ಸೇರಿಸಿದ ಸಭೆಯಲ್ಲಿ ಅವರ ಜೊತೆಗಿರುವಾಗ, ಅವರ ಅನುಮತಿಯಿಲ್ಲದೆ ಸಭೆಯಿಂದ ಹೊರಹೋಗುವುದಿಲ್ಲ. (ಪ್ರವಾದಿಯವರೇ) ಯಾರು ನಿಮ್ಮೊಡನೆ ಅನುಮತಿ ಬೇಡುತ್ತಾರೋ ಅವರು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟವರೇ ಆಗಿದ್ದಾರೆ. ಅವರು ಅವರ ಯಾವುದಾದರೂ ಕೆಲಸಗಳಿಗೆ ಹೋಗಲು ನಿಮ್ಮೊಂದಿಗೆ ಅನುಮತಿ ಕೇಳಿದರೆ, ಅವರಲ್ಲಿ ನೀವು ಇಚ್ಛಿಸುವವರಿಗೆ ಅನುಮತಿ ನೀಡಿರಿ ಮತ್ತು ಅವರಿಗೋಸ್ಕರ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.