Kannada Translation - Hamza Buturಅಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದೆಯೋ ಅವನು. ಅವನಿಗೆ ಯಾವುದೇ ಮಕ್ಕಳಿಲ್ಲ. ಸಾರ್ವಭೌಮತ್ವದಲ್ಲಿ ಅವನೊಂದಿಗೆ ಯಾವುದೇ ಸಹಭಾಗಿಗಳಿಲ್ಲ. ಅವನು ಎಲ್ಲಾ ವಸ್ತುಗಳನ್ನೂ ಸೃಷ್ಟಿಸಿ ಅದಕ್ಕೆ ನಿಖರವಾದ ನಿರ್ಣಯವನ್ನು ನಿಶ್ಚಯಿಸಿದ್ದಾನೆ.
Kannada Translation - Hamza Buturಅವರು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆದರೆ, ಆ ದೇವರುಗಳು ಯಾವುದೇ ವಸ್ತುವನ್ನು ಸೃಷ್ಟಿಸುವುದಿಲ್ಲ. ವಾಸ್ತವವಾಗಿ ಅವರೇ ಸೃಷ್ಟಿಗಳು. ಸ್ವಯಂ ತಮಗೂ ಕೂಡ ಯಾವುದೇ ತೊಂದರೆ ಅಥವಾ ಉಪಕಾರವನ್ನು ಮಾಡುವ ಸಾಮರ್ಥ್ಯವನ್ನು ಅವರು ಹೊಂದಿಲ್ಲ. ಮರಣ, ಜೀವನ, ಪುನರುತ್ಥಾನ ಮುಂತಾದ ಯಾವುದೂ ಅವರ ವಶದಲ್ಲಿಲ್ಲ.
Kannada Translation - Hamza Buturಸತ್ಯನಿಷೇಧಿಗಳು ಹೇಳಿದರು: “ಈ ಕುರ್ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ.
Kannada Translation - Hamza Buturಅವರು ಹೇಳಿದರು: “ಇದು ಪ್ರಾಚೀನ ಕಾಲದ ಜನರ ಪುರಾಣಗಳು. ಅವನು (ಪ್ರವಾದಿ) ಇದನ್ನು ಸ್ವಯಂ ಬರೆಯುತ್ತಿದ್ದಾನೆ. ಮುಂಜಾನೆ ಮತ್ತು ಸಂಜೆ ಅವನಿಗೆ ಇದನ್ನು ಓದಿಕೊಡಲಾಗುತ್ತಿದೆ.”
Kannada Translation - Hamza Buturಹೇಳಿರಿ: “ಭೂಮ್ಯಾಕಾಶಗಳಲ್ಲಿರುವ ರಹಸ್ಯಗಳನ್ನು ತಿಳಿದವನೇ ಇದನ್ನು ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
Kannada Translation - Hamza Buturಅವರು ಹೇಳುತ್ತಾರೆ: “ಇವನೆಂತಹ ಪ್ರವಾದಿ? ಇವನು ಆಹಾರ ಸೇವಿಸುತ್ತಾನೆ ಮತ್ತು ಪೇಟೆಗಳಲ್ಲಿ ಸಂಚರಿಸುತ್ತಾನೆ. ಇವನ ಜೊತೆಗೆ ಒಬ್ಬ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ? ಅವನು ಕೂಡ ಇವನ ಜೊತೆಗೆ ಸೇರಿ ಮುನ್ನೆಚ್ಚರಿಕೆ ನೀಡಬಹುದಿತ್ತಲ್ಲವೇ?
Kannada Translation - Hamza Buturಅಥವಾ ಇವನ ಬಳಿ ಒಂದು ನಿಧಿಯನ್ನು ಏಕೆ ಹಾಕಿಲ್ಲ? ಅಥವಾ ಇವನಿಗೆ ಹಣ್ಣುಗಳನ್ನು ತಿನ್ನಲು ಒಂದು ತೋಟವನ್ನು ಏಕೆ ಕೊಡಲಾಗಿಲ್ಲ?” ಆ ಅಕ್ರಮಿಗಳು ಹೇಳಿದರು: “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುಸರಿಸುತ್ತಿದ್ದೀರಿ.”
Kannada Translation - Hamza Buturನೋಡಿ! ಅವರು ನಿಮ್ಮ ಬಗ್ಗೆ ಹೇಗೆಲ್ಲಾ ಮಾತನಾಡುತ್ತಿದ್ದಾರೆಂದು. Fದರಿಂದ ಸ್ವತಃ ಅವರೇ ದಾರಿತಪ್ಪುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ಸರಿದಾರಿಗೆ ಬರಲು ಸಾಧ್ಯವಾಗುವುದಿಲ್ಲ.
Kannada Translation - Hamza Buturಅಲ್ಲಾಹು ಸಮೃದ್ಧಪೂರ್ಣನು. ಅವನು ಇಚ್ಛಿಸಿದರೆ ನಿಮಗೆ ಅವರು ಹೇಳುವುದಕ್ಕಿಂತಲೂ ಶ್ರೇಷ್ಠವಾದುದನ್ನು, ಅಂದರೆ ತಳಭಾಗದಲ್ಲಿ ನದಿಗಳು ಹರಿಯುವ ತೋಟಗಳನ್ನು ದಯಪಾಲಿಸುವನು ಮತ್ತು ನಿಮಗೆ ಮಹಾ ಸೌಧಗಳನ್ನು ದಯಪಾಲಿಸುವನು.
Kannada Translation - Hamza Buturಹೇಳಿರಿ: “ಅದು ಶ್ರೇಷ್ಠವೇ? ಅಥವಾ ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಶಾಶ್ವತ ಸ್ವರ್ಗವು ಶ್ರೇಷ್ಠವೇ?” ಅದು ಅವರಿಗೆ ನೀಡಲಾಗುವ ಪ್ರತಿಫಲ ಮತ್ತು ಅವರ ಗಮ್ಯಸ್ಥಾನವಾಗಿದೆ.
Kannada Translation - Hamza Buturಅವರಿಗೆ ಅಲ್ಲಿ ಅವರು ಇಚ್ಛಿಸುವುದೆಲ್ಲವೂ ದೊರೆಯುತ್ತದೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತರದಾಯಿತ್ವವಿರುವ ವಾಗ್ದಾನವಾಗಿದೆ.
Kannada Translation - Hamza Buturಅವನು ಅವರನ್ನು ಮತ್ತು ಅಲ್ಲಾಹನನ್ನು ಬಿಟ್ಟು ಅವರು ಆರಾಧಿಸುತ್ತಿದ್ದ ದೇವರುಗಳನ್ನು ಒಟ್ಟುಗೂಡಿಸುವ ದಿನ! ಅವನು (ಆ ದೇವರುಗಳೊಡನೆ) ಕೇಳುವನು: “ನನ್ನ ಈ ದಾಸರನ್ನು ದಾರಿತಪ್ಪಿಸಿದ್ದು ನೀವೋ? ಅಥವಾ ಸ್ವತಃ ಅವರೇ ದಾರಿತಪ್ಪಿದರೋ?”
Kannada Translation - Hamza Buturಅವರು (ದೇವರುಗಳು) ಹೇಳುವರು: “ನೀನು ಪರಿಶುದ್ಧನು! ನಿನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರಾಗಿ ಸ್ವೀಕರಿಸುವುದು ನಮಗೆ ಯೋಗ್ಯವಲ್ಲ. ಆದರೆ ನೀನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ದಯಪಾಲಿಸಿದೆ. ಎಲ್ಲಿಯವರೆಗೆಂದರೆ ಅವರು ಉಪದೇಶವನ್ನು ಸಂಪೂರ್ಣ ಮರೆತು, ನಾಶವಾಗಿ ಹೋದ ಒಂದು ಜನತೆಯಾಗಿ ಮಾರ್ಪಡುವ ತನಕ.”
Kannada Translation - Hamza Butur(ಅಲ್ಲಾಹು ಬಹುದೇವಾರಾಧಕರೊಡನೆ ಹೇಳುವನು): “ನೀವು ಏನು ಹೇಳುತ್ತಿದ್ದಿರೋ ಅದನ್ನು ಅವರು (ದೇವರುಗಳು) ನಿಷೇಧಿಸಿದ್ದಾರೆ. ಇನ್ನು ಶಿಕ್ಷೆಯನ್ನು ದೂರೀಕರಿಸಲು ಅಥವಾ ಯಾವುದೇ ಸಹಾಯ ಪಡೆಯಲು ನಿಮಗೆ ಸಾಧ್ಯವಿಲ್ಲ. ನಿಮ್ಮಲ್ಲಿ ಅಕ್ರಮವೆಸಗಿದವನು[1] ಯಾರೋ ಅವನಿಗೆ ನಾವು ಮಹಾ ಶಿಕ್ಷೆಯ ರುಚಿಯನ್ನು ತೋರಿಸುವೆವು.”
Kannada Translation - Hamza Butur(ಪ್ರವಾದಿಯವರೇ) ನಾವು ನಿಮಗಿಂತ ಮೊದಲು ಕಳುಹಿಸಿದ ಸಂದೇಶವಾಹಕರೆಲ್ಲರೂ ಆಹಾರವನ್ನು ಸೇವಿಸುತ್ತಿದ್ದರು ಮತ್ತು ಪೇಟೆಗಳಲ್ಲಿ ಸಂಚರಿಸುತ್ತಿದ್ದರು. ನಾವು ನಿಮ್ಮಲ್ಲಿ ಒಬ್ಬರನ್ನು ಇನ್ನೊಬ್ಬರಿಗೆ ಪರೀಕ್ಷೆಯನ್ನಾಗಿ ಮಾಡಿದ್ದೇವೆ. ನೀವು ತಾಳ್ಮೆಯಿಂದಿರುತ್ತೀರೋ ಎಂದು ನೋಡಲು. ನಿಮ್ಮ ಪರಿಪಾಲಕನು ಎಲ್ಲವನ್ನೂ ನೋಡುವವನಾಗಿದ್ದಾನೆ.
Kannada Translation - Hamza Buturನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು ಹೇಳಿದರು: “ನಮ್ಮ ಮೇಲೆ ದೇವದೂತರುಗಳನ್ನು ಏಕೆ ಇಳಿಸಲಾಗುವುದಿಲ್ಲ? ಅಥವಾ ನಮಗೇಕೆ ನಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನೇರವಾಗಿ ನೋಡಲಾಗುವುದಿಲ್ಲ?” ಅವರು ಸ್ವಯಂ ಅವರ ಬಗ್ಗೆಯೇ ಅಹಂಕಾರಪಡುತ್ತಿದ್ದಾರೆ ಮತ್ತು ಕಡು ಧಿಕ್ಕಾರದಿಂದ ವರ್ತಿಸುತ್ತಿದ್ದಾರೆ.
Kannada Translation - Hamza Buturಅವರು ದೇವದೂತರುಗಳನ್ನು ನೋಡುವ ದಿನ![1] ಅಂದು ಅಪರಾಧಿಗಳಿಗೆ ಯಾವುದೇ ಸಿಹಿ ಸುದ್ದಿಯಿರುವುದಿಲ್ಲ. ಅವರು (ದೇವದೂತರುಗಳು) ಹೇಳುವರು: “ನಿಷಿದ್ಧವಾಗಿದೆ! ನಿಮಗೆ ಎಲ್ಲವನ್ನೂ ನಿಷೇಧಿಸಲಾಗಿದೆ!”[2]
Kannada Translation - Hamza Buturಈ ರೀತಿ ನಾವುಎಲ್ಲಾ ಸಂದೇಶವಾಹಕರಿಗೂ ಕೆಲವು ಅಪರಾಧಿಗಳನ್ನು ಶತ್ರುಗಳಾಗಿ ಮಾಡಿದ್ದೇವೆ. ಸನ್ಮಾರ್ಗ ತೋರಿಸಲು ಮತ್ತು ಸಹಾಯ ಮಾಡಲು ನಿಮ್ಮ ಪರಿಪಾಲಕನೇ (ಅಲ್ಲಾಹನೇ) ಸಾಕು!
Kannada Translation - Hamza Buturಸತ್ಯನಿಷೇಧಿಗಳು ಕೇಳಿದರು: “ಕುರ್ಆನನ್ನು ಒಮ್ಮೆಲೇ ಸಂಪೂರ್ಣವಾಗಿ ಏಕೆ ಇಳಿಸಲಾಗಿಲ್ಲ?” ನಾವು ಈ ರೀತಿಯಲ್ಲಿ (ಹಂತ ಹಂತವಾಗಿ ಇಳಿಸಿದ್ದು ಏಕೆಂದರೆ) ಅದರ ಮೂಲಕ ನಿಮ್ಮ ಹೃದಯವನ್ನು ದೃಢವಾಗಿ ನಿಲ್ಲಿಸಲು. ನಾವು ಅದನ್ನು ಸ್ವಲ್ಪ ಸ್ವಲ್ಪವಾಗಿಯೇ ಪಠಿಸಿಕೊಡುತ್ತೇವೆ.
Kannada Translation - Hamza Buturನೂಹರ ಜನರನ್ನು ಕೂಡ. ಅವರು ಸಂದೇಶವಾಹಕರನ್ನು ನಿಷೇಧಿಸಿದಾಗ ನಾವು ಅವರನ್ನು ಮುಳುಗಿಸಿ ನಾಶ ಮಾಡಿದೆವು ಮತ್ತು ಅವರನ್ನು ಜನರಿಗೆ ದೃಷ್ಟಾಂತವನ್ನಾಗಿ ಮಾಡಿದೆವು. ನಾವು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
Kannada Translation - Hamza Buturಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ.[1] ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.
Kannada Translation - Hamza Buturನಾವು ನಮ್ಮ ದೇವರುಗಳ ವಿಷಯದಲ್ಲಿ ಮನಸ್ಸು ಗಟ್ಟಿ ಮಾಡಿ ನಿಲ್ಲದಿರುತ್ತಿದ್ದರೆ ಇವನು ನಮ್ಮನ್ನು ಅವುಗಳಿಂದ ತಪ್ಪಿಸಿಬಿಡುತ್ತಿದ್ದನು.” ಅವರು ಶಿಕ್ಷೆಯನ್ನು ನೋಡುವಾಗ ಯಾರು ಹೆಚ್ಚು ದಾರಿತಪ್ಪಿದವರೆಂದು ಸ್ಪಷ್ಟವಾಗಿ ತಿಳಿದುಕೊಳ್ಳುವರು.
Kannada Translation - Hamza Buturಅವರಲ್ಲಿ ಹೆಚ್ಚಿನವರು ಕಿವಿಗೊಡುತ್ತಾರೆ ಮತ್ತು ಆಲೋಚಿಸುತ್ತಾರೆಂದು ನೀವು ಭಾವಿಸಿದ್ದೀರಾ? ಅವರು ಕೇವಲ ಜಾನುವಾರುಗಳಂತೆ. ಅಲ್ಲ, ಅವರು ಅವುಗಳಿಗಿಂತಲೂ ಹೆಚ್ಚು ದಾರಿತಪ್ಪಿದ್ದಾರೆ.
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನೆರಳನ್ನು ಹೇಗೆ ವಿಸ್ತರಿಸುತ್ತಿದ್ದಾನೆಂದು ನೀವು ನೋಡಿಲ್ಲವೇ? ಅವನು ಇಚ್ಛಿಸುತ್ತಿದ್ದರೆ ಅದನ್ನು ನಿಶ್ಚಲಗೊಳಿಸುತ್ತಿದ್ದನು. ನಂತರ ನಾವು ಸೂರ್ಯನನ್ನು ಅದಕ್ಕೆ ಮಾರ್ಗದರ್ಶಿಯಾಗಿ ಮಾಡಿದೆವು.
Kannada Translation - Hamza Buturಅವನೇ ನಿಮಗೆ ರಾತ್ರಿಯನ್ನು ಉಡುಪನ್ನಾಗಿ ಮತ್ತು ನಿದ್ದೆಯನ್ನು ವಿಶ್ರಾಂತಿಯನ್ನಾಗಿ ಮಾಡಿಕೊಟ್ಟವನು. ಅವನು ಹಗಲನ್ನು ಎಚ್ಚರವಾಗಿರುವ ಸಮಯವಾಗಿ ಮಾಡಿದನು.
Kannada Translation - Hamza Buturನಿರ್ಜೀವ ಸ್ಥಿತಿಯಲ್ಲಿರುವ ಊರಿಗೆ ಅದರ ಮೂಲಕ ಜೀವ ನೀಡಲು. ನಾವು ಅದನ್ನು ನಮ್ಮ ಸೃಷ್ಟಿಗಳಲ್ಲಿ ಸೇರಿದ ಅಸಂಖ್ಯ ಜಾನುವಾರುಗಳು ಮತ್ತು ಮನುಷ್ಯರಿಗೆ ಕುಡಿಸುತ್ತೇವೆ.
Kannada Translation - Hamza Buturಅವರು ಉಪದೇಶ ಪಡೆಯಲೆಂದು ನಾವು ಅದನ್ನು (ಮಳೆನೀರನ್ನು) ಅವರ ಮಧ್ಯೆ ವಿತರಣೆ ಮಾಡುತ್ತೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.
Kannada Translation - Hamza Buturಅವನೇ ಎರಡು ಸಮುದ್ರಗಳನ್ನು ಬೆರೆಯಲು ಬಿಟ್ಟವನು. ಒಂದರಲ್ಲಿ ತಾಜಾ ಸಿಹಿನೀರು ಮತ್ತು ಇನ್ನೊಂದರಲ್ಲಿ ಕಹಿ ಉಪ್ಪು ನೀರು. ಅವನು ಅವೆರಡರ ಮಧ್ಯೆ ಒಂದು ಪರದೆಯನ್ನು ಮತ್ತು ಬಲಿಷ್ಠ ತಡೆಯನ್ನು ನಿರ್ಮಸಿದ್ದಾನೆ.
Kannada Translation - Hamza Buturಅವನೇ ಮನುಷ್ಯನನ್ನು ನೀರಿನಿಂದ ಸೃಷ್ಟಿಸಿದವನು. ನಂತರ ಅವನಿಗೆ ವಂಶಾವಳಿಯನ್ನು ಮತ್ತು ವೈವಾಹಿಕ ಸಂಬಂಧಿಗಳನ್ನು ಮಾಡಿಕೊಟ್ಟನು. ನಿಮ್ಮ ಪರಿಪಾಲಕನು (ಅಲ್ಲಾಹು) ಸರ್ವಶಕ್ತನಾಗಿದ್ದಾನೆ.
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಿದ್ದಾರೆ. ಸತ್ಯನಿಷೇಧಿಯು ತನ್ನ ಪರಿಪಾಲಕನ ವಿರುದ್ಧ (ಶೈತಾನನಿಗೆ) ಬೆಂಬಲಿಗನಾಗಿದ್ದಾನೆ.
Kannada Translation - Hamza Buturಹೇಳಿರಿ: “ನಾನು ಇದಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಲು ಇಚ್ಛಿಸುತ್ತಾನೋ (ಅವನು ಅದನ್ನು ಸ್ವೀಕರಿಸಬೇಕು ಎಂಬುದರ) ಹೊರತು.”
Kannada Translation - Hamza Buturಎಂದಿಗೂ ಸಾಯದೆ ನಿರಂತರ ಬದುಕಿರುವವನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡಿ. ಅವನ ಸ್ತುತಿಯೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನ ದಾಸರು ಮಾಡುವ ಪಾಪಗಳನ್ನು ಸೂಕ್ಷ್ಮವಾಗಿ ತಿಳಿಯಲು ಅವನೇ ಸಾಕು.
Kannada Translation - Hamza Buturಅವನು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಪರಮ ದಯಾಳು. ನೀವು ಅವನ ಬಗ್ಗೆ ಸೂಕ್ಷ್ಮವಾಗಿ ತಿಳಿದವನೊಡನೆ (ಪ್ರವಾದಿಯೊಡನೆ) ಕೇಳಿರಿ.
Kannada Translation - Hamza Butur“ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು?[1] ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು.
Kannada Translation - Hamza Buturಆಕಾಶದಲ್ಲಿ ನಕ್ಷತ್ರಪುಂಜಗಳನ್ನು ಸ್ಥಾಪಿಸಿದವನು (ಅಲ್ಲಾಹು) ಸಮೃದ್ಧಪೂರ್ಣನು. ಅವನು ಅದರಲ್ಲಿ ಒಂದು ದೀಪವನ್ನು (ಸೂರ್ಯನನ್ನು) ಮತ್ತು ಬೆಳಗುವ ಚಂದ್ರನನ್ನು ಉಂಟುಮಾಡಿದನು.
Kannada Translation - Hamza Buturಅವನೇ ರಾತ್ರಿ-ಹಗಲುಗಳನ್ನು ಒಂದರ ಹಿಂದೆ ಇನ್ನೊಂದು ಬರುವಂತೆ ಮಾಡಿದವನು. ಉಪದೇಶ ಸ್ವೀಕರಿಸಲು ಬಯಸುವವರಿಗೆ ಅಥವಾ ಕೃತಜ್ಞರಾಗಲು ಬಯಸುವವರಿಗೆ (ಒಂದು ದೃಷ್ಟಾಂತವೆಂಬಂತೆ).
Kannada Translation - Hamza Buturಅವರು (ಅಲ್ಲಾಹನ ದಾಸರು) ಯಾರೆಂದರೆ, ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಾ ಮತ್ತು ನಿಂತು ನಮಾಝ್ ಮಾಡುತ್ತಾ ರಾತ್ರಿಯನ್ನು ಕಳೆಯುವವರು.
Kannada Translation - Hamza Buturಅವರು ಖರ್ಚು ಮಾಡುವಾಗ ಅತಿಯಾಗಿ ಖರ್ಚು ಮಾಡುವುದಿಲ್ಲ ಮತ್ತು ಜಿಪುಣತನ ತೋರುವುದೂ ಇಲ್ಲ. ಬದಲಿಗೆ, ಅವೆರಡರ ನಡುವಿನ ಮಧ್ಯಮ ಮಾರ್ಗವನ್ನು ಸ್ವೀಕರಿಸುತ್ತಾರೆ.
Kannada Translation - Hamza Buturಅವರು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ, ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲುವುದಿಲ್ಲ ಮತ್ತು ವ್ಯಭಿಚಾರ ಮಾಡುವುದಿಲ್ಲ. ಯಾರು ಇವುಗಳನ್ನು ಮಾಡುತ್ತಾನೋ ಅವನು ಶಿಕ್ಷೆಯನ್ನು ಪಡೆಯುವನು.
Kannada Translation - Hamza Buturಆದರೆ ಪಶ್ಚಾತ್ತಾಪಪಟ್ಟವರು, ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹು ಅವರ ದುಷ್ಕೃತ್ಯಗಳನ್ನು ಸತ್ಕರ್ಮಗಳಾಗಿ ಬದಲಾಯಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Kannada Translation - Hamza Buturಅವರು ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಮಕ್ಕಳಲ್ಲಿ ನಮಗೆ ಕಣ್ತಂಪನ್ನು ನೀಡು. ದೇವಭಯವುಳ್ಳವರಿಗೆ ನಮ್ಮನ್ನು ಮುಂದಾಳುಗಳನ್ನಾಗಿ ಮಾಡು.”
Kannada Translation - Hamza Buturಅವರು ತಾಳ್ಮೆ ತೋರಿದ್ದಕ್ಕೆ ಪ್ರತಿಫಲವಾಗಿ ಅವರಿಗೆ ಸ್ವರ್ಗದ ಉನ್ನತ ಮಹಲುಗಳನ್ನು ನೀಡಲಾಗುವುದು. ಅಲ್ಲಿ ಅವರು ಅಭಿವಂದನೆಗಳನ್ನು ಮತ್ತು ಶಾಂತಿಯ ಹಾರೈಕೆಗಳನ್ನು ಪಡೆಯುವರು.
Kannada Translation - Hamza Buturಹೇಳಿರಿ: “ನಿಮ್ಮ ಪ್ರಾರ್ಥನೆಗಳು ಇಲ್ಲದಿರುತ್ತಿದ್ದರೆ ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಪರಿಗಣಿಸುತ್ತಲೇ ಇರಲಿಲ್ಲ.” ಆದರೆ ನೀವು ನಿಷೇಧಿಸಿದ್ದೀರಿ. ಆದ್ದರಿಂದ ಅದಕ್ಕಿರುವ ಶಿಕ್ಷೆಯು ಸದ್ಯವೇ ನಿಮ್ಮನ್ನು ಅಂಟಿಕೊಳ್ಳಲಿದೆ.