Kannada Translation - Hamza Buturನಿಶ್ಚಯವಾಗಿಯೂ, ಪರಲೋಕದಲ್ಲಿ ವಿಶ್ವಾಸವಿಡದವರಿಗೆ ನಾವು ಅವರ ಕರ್ಮಗಳನ್ನು ಅಲಂಕರಿಸಿ ಕೊಟ್ಟಿದ್ದೇವೆ. ಆದ್ದರಿಂದ ಅವರು ಅಂಧವಾಗಿ ವಿಹರಿಸುತ್ತಿದ್ದಾರೆ.
Kannada Translation - Hamza Buturಮೂಸಾ ತಮ್ಮ ಕುಟುಂಬದೊಂದಿಗೆ ಹೇಳಿದ ಸಂದರ್ಭ: “ನನಗೆ (ದೂರದಲ್ಲಿ) ಬೆಂಕಿ ಕಾಣುತ್ತಿದೆ. ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುತ್ತೇನೆ ಅಥವಾ ಏನಾದರೂ ದೀವಟಿಗೆಯನ್ನು ಉರಿಸಿಕೊಂಡು ಬರುತ್ತೇನೆ. ಅದರಿಂದ ನಿಮಗೆ ಚಳಿ ಕಾಯಿಸಬಹುದು.”
Kannada Translation - Hamza Buturಅವರು ಅದರ ಬಳಿಗೆ ಬಂದಾಗ, ಹೀಗೊಂದು ವಾಣಿ ಕೇಳಿಸಿತು: “ಬೆಂಕಿಯ ಬಳಿಯಿರುವವರು ಮತ್ತು ಅದರ ಪರಿಸರದಲ್ಲಿರುವವರು ಸಮೃದ್ಧರಾಗಿದ್ದಾರೆ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಮಹಾ ಪರಿಶುದ್ಧನಾಗಿದ್ದಾನೆ.
Kannada Translation - Hamza Butur“ನೀವು ನಿಮ್ಮ ಕೋಲನ್ನು ಎಸೆಯಿರಿ.” ಆಗ ಅದೊಂದು ಸರ್ಪವೋ ಎಂಬಂತೆ ವಿಲಿವಿಲಿ ಒದ್ದಾಡುವುದನ್ನು ಕಂಡಾಗ, ಮೂಸಾ (ಭಯದಿಂದ) ಹಿಂದೆ ತಿರುಗಿ ಓಡತೊಡಗಿದರು. ಅವರು ತಿರುಗಿ ನೋಡಲೇ ಇಲ್ಲ. (ಅಲ್ಲಾಹು ಹೇಳಿದನು): “ಓ ಮೂಸಾ! ಭಯಪಡಬೇಡಿ. ನನ್ನ ಉಪಸ್ಥಿತಿಯಲ್ಲಿ ಸಂದೇಶವಾಹಕರುಗಳು ಭಯಪಡುವುದಿಲ್ಲ.
Kannada Translation - Hamza Buturಆದರೆ ಯಾರಾದರೂ ಅಕ್ರಮವೆಸಗಿ, ನಂತರ ಆ ಕೆಡುಕನ್ನು ಅದರ ಹಿಂದೆಯೇ ಒಳಿತು ಮಾಡುವ ಮೂಲಕ ಬದಲಾಯಿಸಿದರೆ, ನಿಶ್ಚಯವಾಗಿಯೂ ನಾನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದೇನೆ.
Kannada Translation - Hamza Buturನೀವು ನಿಮ್ಮ ಕೈಯನ್ನು ನಿಮ್ಮ ಅಂಗಿಯಲ್ಲಿ ವಕ್ಷಕ್ಕೆ ತೂರಿಸಿರಿ. ಆಗ ಅದಕ್ಕೆ ಯಾವುದೇ ದೋಷವುಂಟಾಗದೆ ಅದು ಬೆಳ್ಳಗೆ ಹೊಳೆಯುತ್ತಾ ಹೊರಬರುತ್ತದೆ. ಇವು ಫರೋಹ ಮತ್ತು ಅವನ ಜನರಿಗಿರುವ ಒಂಬತ್ತು ದೃಷ್ಟಾಂತಗಳಲ್ಲಿ ಒಳಪಡುತ್ತವೆ. ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದಾರೆ.”
Kannada Translation - Hamza Buturಅವರ ಆಂತರ್ಯವು ಆ ದೃಷ್ಟಾಂತಗಳ ಬಗ್ಗೆ ದೃಢವಿಶ್ವಾಸವನ್ನು ಹೊಂದಿದ್ದರೂ ಸಹ ಅವರು ಅನ್ಯಾಯವಾಗಿ ಮತ್ತು ಅಹಂಕಾರದಿಂದ ಅವುಗಳನ್ನು ನಿಷೇಧಿಸಿದರು. ಆದ್ದರಿಂದ ಆ ಕಿಡಿಗೇಡಿಗಳ ಅಂತಿಮ ಫಲಿತಾಂಶವು ಹೇಗಿತ್ತೆಂದು ನೋಡಿ.
Kannada Translation - Hamza Buturನಾವು ದಾವೂದ್ ಮತ್ತು ಸುಲೈಮಾನರಿಗೆ ಜ್ಞಾನವನ್ನು ಕರುಣಿಸಿದೆವು. ಅವರಿಬ್ಬರು ಹೇಳಿದರು: “ಅಲ್ಲಾಹನಿಗೆ ಸರ್ವಸ್ತುತಿ. ಅವನ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದ ಹೆಚ್ಚಿನವರಿಗಿಂತಲೂ ಅವನು ನಮಗೆ ಶ್ರೇಷ್ಠತೆಯನ್ನು ದಯಪಾಲಿಸಿದ್ದಾನೆ.”
Kannada Translation - Hamza Buturಸುಲೈಮಾನರು ದಾವೂದರ ಉತ್ತರಾಧಿಕಾರಿಯಾದರು. ಅವರು ಹೇಳಿದರು: “ಜನರೇ! ನಮಗೆ ಹಕ್ಕಿಗಳ ಭಾಷೆಯನ್ನು ಕಲಿಸಲಾಗಿದೆ. ನಮಗೆ ಎಲ್ಲಾ ಸವಲತ್ತುಗಳನ್ನೂ ನೀಡಲಾಗಿದೆ. ನಿಶ್ಚಯವಾಗಿಯೂ ಇದೇ ಅತ್ಯಂತ ಸ್ಪಷ್ಟ ಔದಾರ್ಯ.”
Kannada Translation - Hamza Buturಸುಲೈಮಾನರ ಮುಂದೆ ಜಿನ್ನ್, ಮನುಷ್ಯರು ಮತ್ತು ಹಕ್ಕಿಗಳು ಸೇರಿದ ಅವರ ಬೃಹತ್ ಸೈನ್ಯವನ್ನು ಒಟ್ಟುಗೂಡಿಸಲಾಯಿತು. ಅವರಲ್ಲಿ (ಪ್ರತಿಯೊಂದು ವರ್ಗವನ್ನು) ಬೇರೆ ಬೇರೆ ಸ್ಥಾನಗಳಲ್ಲಿ ನಿಲ್ಲಿಸಲಾಗಿದೆ.
Kannada Translation - Hamza Buturಅವರು ಇರುವೆಗಳ ಕಣಿವೆಯ ಬಳಿಗೆ ತಲುಪಿದಾಗ, ಒಂದು ಇರುವೆ ಹೇಳಿತು: “ಇರುವೆಗಳೇ! ನಿಮ್ಮ ಗೂಡುಗಳನ್ನು ಸೇರಿಕೊಳ್ಳಿ. ಸುಲೈಮಾನ್ ಮತ್ತು ಅವರ ಸೈನ್ಯಗಳು ಅವರಿಗೆ ತಿಳಿಯದಂತೆ ನಿಮ್ಮನ್ನು ತುಳಿಯುತ್ತಾ ಸಾಗದಿರಲಿ.”
Kannada Translation - Hamza Buturಆಗ ಅದರ ಮಾತು ಕೇಳಿ ಸುಲೈಮಾನ್ ಮುಗುಳ್ನಕ್ಕರು. ಅವರು ಹೇಳಿದರು: “ನನ್ನ ಪರಿಪಾಲಕನೇ! ನೀನು ನನಗೆ ಮತ್ತು ನನ್ನ ತಂದೆ-ತಾಯಿಗಳಿಗೆ ದಯಪಾಲಿಸಿದ ಅನುಗ್ರಹಗಳಿಗಾಗಿ ನಿನಗೆ ಆಭಾರಿಯಾಗಿರಲು ಮತ್ತು ನೀನು ಇಷ್ಟಪಡುವ ಸತ್ಕರ್ಮಗಳನ್ನು ಮಾಡಲು ನನಗೆ ಸೌಭಾಗ್ಯವನ್ನು ನೀಡು. ನಿನ್ನ ದಯೆಯಿಂದ ನನ್ನನ್ನು ನಿನ್ನ ನೀತಿವಂತ ದಾಸರಲ್ಲಿ ಸೇರಿಸು.”
Kannada Translation - Hamza Buturನಾನು ಅದಕ್ಕೆ ಕಠೋರ ಶಿಕ್ಷೆಯನ್ನು ನೀಡುವೆನು ಅಥವಾ ಅದನ್ನು ಕತ್ತು ಕೊಯ್ದು ಸಾಯಿಸುವೆನು. ಅನ್ಯಥಾ ಅದು ನನ್ನ ಬಳಿಗೆ (ಗೈರು ಹಾಜರಿಗೆ) ಸ್ಪಷ್ಟ ಸಾಕ್ಷ್ಯಾಧಾರವನ್ನು ತರಬೇಕು.”
Kannada Translation - Hamza Buturತುಸು ಹೊತ್ತಿನಲ್ಲೇ ಹೂಪೂ ಹಕ್ಕಿ ಬಂದು ಹೇಳಿತು: “ನಿಮಗೆ ಸೂಕ್ಷ್ಮವಾಗಿ ತಿಳಿಯಲು ಸಾಧ್ಯವಾಗದ ಒಂದು ವಿಷಯವನ್ನು ನಾನು ತಿಳಿದಿದ್ದೇನೆ. ನಾನು ಸಬಾ[1] ದೇಶದಿಂದ ಒಂದು ಖಚಿತ ಮಾಹಿತಿಯೊಂದಿಗೆ ಬಂದಿದ್ದೇನೆ.
Kannada Translation - Hamza Buturನಾನು ನೋಡಿದಂತೆ ಅವಳು ಮತ್ತು ಅವಳ ಜನರು ಅಲ್ಲಾಹನನ್ನು ಬಿಟ್ಟು ಸೂರ್ಯನಿಗೆ ಸಾಷ್ಟಾಂಗ ಮಾಡುತ್ತಾರೆ. ಶೈತಾನನು ಅವರಿಗೆ ಅವರ ಕೃತ್ಯಗಳನ್ನು ಅಲಂಕರಿಸಿಕೊಟ್ಟು ಅವರನ್ನು ಸನ್ಮಾರ್ಗದಿಂದ ದೂರವಿರಿಸಿದ್ದಾನೆ. ಆದ್ದರಿಂದ ಅವರಿಗೆ ಸನ್ಮಾರ್ಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.
Kannada Translation - Hamza Buturಭೂಮ್ಯಾಕಾಶಗಳಲ್ಲಿ ನಿಗೂಢವಾಗಿರುವುದನ್ನು ಹೊರತರುವವನು ಮತ್ತು ನೀವು ರಹಸ್ಯವಾಗಿಡುವುದನ್ನು ಹಾಗೂ ಬಹಿರಂಗಪಡಿಸುವುದನ್ನು ತಿಳಿಯುವವನಾದ ಅಲ್ಲಾಹನಿಗೆ ಸಾಷ್ಟಾಂಗ ಮಾಡದಂತೆ (ಶೈತಾನನು ಅವರನ್ನು ತಡೆದಿದ್ದಾನೆ).
Kannada Translation - Hamza Buturರಾಣಿ ಕೇಳಿದಳು: “ಸರದಾರರೇ! ನನ್ನ ಈ ವಿಷಯದಲ್ಲಿ ನನಗೆ ಸಲಹೆ ನೀಡಿರಿ. ನೀವು ನನ್ನ ಬಳಿ ಹಾಜರಾಗಿ (ನಿಮ್ಮ ಸಲಹೆಯನ್ನು ಕೇಳಿದ ನಂತರವೇ) ಹೊರತು ನಾನು ಯಾವುದೇ ವಿಷಯವನ್ನೂ ಅಂತಿಮವಾಗಿ ತೀರ್ಮಾನಿಸುವುದಿಲ್ಲ.”
Kannada Translation - Hamza Buturಸರದಾರರು ಹೇಳಿದರು: “ನಾವು ಶಕ್ತಿಶಾಲಿಗಳು ಮತ್ತು ಪ್ರಬಲ ಸೈನ್ಯವನ್ನು ಹೊಂದಿರುವವರು. ಆದರೆ ಆಜ್ಞೆ ನೀಡುವ ಅಧಿಕಾರ ನಿಮ್ಮ ಕೈಯಲ್ಲಿದೆ. ನಮಗೆ ಏನು ಆಜ್ಞೆ ನೀಡಬೇಕೆಂದು ನೀವು ಚೆನ್ನಾಗಿ ಆಲೋಚಿಸಿರಿ.”
Kannada Translation - Hamza Buturರಾಣಿ ಹೇಳಿದಳು: “ನಿಶ್ಚಯವಾಗಿಯೂ, ಸಾಮ್ರಾಜ್ಯಶಾಹಿಗಳು ಯಾವುದೇ ಒಂದು ಊರನ್ನು ಪ್ರವೇಶಿಸಿದರೆ, ಅದನ್ನು ನಾಶ ಮಾಡುತ್ತಾರೆ ಮತ್ತು ಅಲ್ಲಿನ ಪ್ರತಿಷ್ಠಿತರನ್ನು ಅಪಮಾನಿತರನ್ನಾಗಿ ಮಾಡುತ್ತಾರೆ. ಇವರು ಕೂಡ ಹೀಗೆಯೇ ಮಾಡುವರು.
Kannada Translation - Hamza Buturಆದ್ದರಿಂದ, ನಾನು ಅವರಿಗೆ ಒಂದು ಉಡುಗೊರೆಯನ್ನು ಕಳುಹಿಸಿ ಕೊಡುತ್ತೇನೆ. ನಂತರ ದೂತರು ಯಾವ ಸುದ್ದಿಯೊಂದಿಗೆ ಮರಳಿ ಬರುತ್ತಾರೆಂದು ನೋಡುತ್ತೇನೆ.”
Kannada Translation - Hamza Buturಆ ದೂತರು ಸುಲೈಮಾನರ ಬಳಿಗೆ ಬಂದಾಗ ಅವರು ಹೇಳಿದರು: “ನೀವು ನಿಮ್ಮ ಸಂಪತ್ತಿನ ಮೂಲಕ ನನಗೆ ಸಹಾಯ ಮಾಡಲು ಬಯಸುತ್ತೀರಾ? ಆದರೆ ನಿಮಗೆ ನೀಡಿರುವುದಕ್ಕಿಂತಲೂ ಶ್ರೇಷ್ಠವಾದುದನ್ನು ಅಲ್ಲಾಹು ನನಗೆ ನೀಡಿದ್ದಾನೆ. ಆದರೆ ನೀವಂತೂ ನಿಮ್ಮ ಉಡುಗೊರೆಯ ಬಗ್ಗೆ ಹೆಮ್ಮೆ ಪಡುತ್ತೀರಿ.
Kannada Translation - Hamza Buturನೀವು ಅವರ (ನಿಮ್ಮ ಆಡಳಿತಗಾರರ) ಬಳಿಗೆ ವಾಪಸು ಹೋಗಿರಿ. ನಿಶ್ಚಯವಾಗಿಯೂ ಅವರಿಗೆ ಎದುರಿಸಲು ಸಾಧ್ಯವಾಗದ ಬೃಹತ್ ಸೈನ್ಯಗಳೊಂದಿಗೆ ನಾವು ಅವರ ಬಳಿಗೆ ಬರುವೆವು. ನಂತರ ಅವರನ್ನು ಅತ್ಯಂತ ಹೀನ ಸ್ಥಿತಿಯಲ್ಲಿ ಅವಮಾನದೊಂದಿಗೆ ಅಲ್ಲಿಂದ ಓಡಿಸುವೆವು.”
Kannada Translation - Hamza Buturಸುಲೈಮಾನ್ ಹೇಳಿದರು: “ಓ ಸರದಾರರೇ! ಅವರು ನನ್ನ ಬಳಿಗೆ ಮುಸಲ್ಮಾನರಾಗಿ ಬರುವುದಕ್ಕೆ ಮೊದಲೇ ಅವಳ ಸಿಂಹಾಸನವನ್ನು ಯಾರು ನನಗೆ ತಂದು ಕೊಡುತ್ತೀರಿ?”
Kannada Translation - Hamza Buturಒಬ್ಬ ಬಲಿಷ್ಠ ರೂಪದ ಜಿನ್ನ್ ಹೇಳಿದನು: “ನೀವು ನಿಮ್ಮ ಸ್ಥಾನದಿಂದ ಎದ್ದೇಳುವುದಕ್ಕೆ ಮೊದಲೇ ನಾನು ಅದನ್ನು ತರುವೆನು. ನಿಜಕ್ಕೂ ನನಗೆ ಅದನ್ನು ಮಾಡುವ ಶಕ್ತಿಯಿದೆ ಮತ್ತು ನಾನು ವಿಶ್ವಾಸಯೋಗ್ಯನಾಗಿದ್ದೇನೆ.”
Kannada Translation - Hamza Buturಗ್ರಂಥದ ಜ್ಞಾನವಿರುವ ಒಬ್ಬ ವ್ಯಕ್ತಿ ಎದ್ದು ನಿಂತು ಹೇಳಿದರು: “ನೀವು ಕಣ್ಣೆವೆಯಿಕ್ಕುವುದಕ್ಕೆ ಮೊದಲೇ ನಾನು ಅದನ್ನು ತರುವೆನು.” ಆ ಸಿಂಹಾಸನವು ತನ್ನ ಮುಂದೆ ನಿಂತಿರುವುದ್ನು ಕಂಡಾಗ ಸುಲೈಮಾನ್ ಹೇಳಿದರು: “ಇದು ನನ್ನ ಪರಿಪಾಲಕನ (ಅಲ್ಲಾಹನ) ಔದಾರ್ಯದಲ್ಲಿ ಸೇರಿದ್ದಾಗಿದೆ. ನಾನು ಕೃತಜ್ಞನಾಗುತ್ತೇನೋ ಅಥವಾ ಕೃತಘ್ನನಾಗುತ್ತೇನೋ ಎಂದು ಪರೀಕ್ಷಿಸುವುದಕ್ಕಾಗಿ. ಯಾರು ಕೃತಜ್ಞನಾಗುತ್ತಾನೋ—ಅವನು ಕೃತಜ್ಞನಾಗುವುದು ಸ್ವತಃ ಅವನ ಒಳಿತಿಗೇ ಆಗಿದೆ. ಯಾರಾದರೂ ಕೃತಘ್ನನಾಗುವುದಾದರೆ—ನಿಶ್ಚಯವಾಗಿಯೂ ನನ್ನ ಪರಿಪಾಲಕನು ನಿರಪೇಕ್ಷನು ಮತ್ತು ಪರಮ ಉದಾರಿಯಾಗಿದ್ದಾನೆ.”
Kannada Translation - Hamza Buturನಂತರ ಅವಳು ಬಂದಾಗ ಕೇಳಲಾಯಿತು: “ನಿಮ್ಮ ಸಿಂಹಾಸನ ಇದೇ ರೀತಿಯಿದೆಯೇ?” ಅವಳು ಹೇಳಿದಳು: “ಇದು ಅದೇ ಆಗಿರುವಂತೆ ತೋರುತ್ತಿದೆ.” ನಮಗೆ ಇದಕ್ಕಿಂತ ಮೊದಲೇ ಜ್ಞಾನ ನೀಡಲಾಗಿದೆ ಮತ್ತು ನಾವು ಮುಸಲ್ಮಾನರಾಗಿದ್ದೇವೆ.
Kannada Translation - Hamza Buturಅವಳು ಅಲ್ಲಾಹನನ್ನು ಬಿಟ್ಟು ಯಾರನ್ನು ಆರಾಧಿಸುತ್ತಿದ್ದಳೋ ಆ ದೇವರುಗಳು (ಅಲ್ಲಾಹನ ಆರಾಧನೆ ಮಾಡದಂತೆ) ಅವಳನ್ನು ತಡೆದಿದ್ದರು. ನಿಶ್ಚಯವಾಗಿಯೂ ಅವಳು ಸತ್ಯನಿಷೇಧಿಗಳಾದ ಜನರಲ್ಲಿ ಸೇರಿದ್ದಳು.
Kannada Translation - Hamza Buturಅವಳೊಡನೆ ಹೇಳಲಾಯಿತು: “ಅರಮನೆಯನ್ನು ಪ್ರವೇಶಿಸಿರಿ.” ಅವಳು ಅದನ್ನು ನೋಡಿದಾಗ ಅದೊಂದು ಕೊಳವಾಗಿರಬೇಕೆಂದು ಭಾವಿಸಿ ತನ್ನ ಕಣಕಾಲುಗಳಿಂದ ಬಟ್ಟೆಯನ್ನು ಎತ್ತಿದಳು. ಸುಲೈಮಾನ್ ಹೇಳಿದರು: “ಇದು ಸ್ಫಟಿಕವನ್ನು ಹಾಸಿ ಹೊಳೆಯುವಂತೆ ಮಾಡಿದ ಅರಮನೆಯಾಗಿದೆ.” ಅವಳು ಹೇಳಿದಳು: “ಓ ನನ್ನ ಪರಿಪಾಲಕನೇ! ನಾನು ಸ್ವತಃ ನನ್ನ ಮೇಲೆಯೇ ಅನ್ಯಾಯವೆಸಗಿದ್ದೇನೆ. ನಾನು ಸುಲೈಮಾನರೊಂದಿಗೆ ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಶರಣಾಗಿದ್ದೇನೆ.”
Kannada Translation - Hamza Buturನಾವು ಸಮೂದ್ ಗೋತ್ರಕ್ಕೆ ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಜನರೊಡನೆ “ಅಲ್ಲಾಹನನ್ನು ಮಾತ್ರ ಆರಾಧಿಸಿರಿ” ಎಂದು ಹೇಳಿದರು. ಆಗ ಅವರು ಪರಸ್ಪರ ತರ್ಕಿಸುವ ಎರಡು ಗುಂಪುಗಳಾಗಿ ಮಾರ್ಪಟ್ಟರು.
Kannada Translation - Hamza Buturಸ್ವಾಲಿಹ್ ಹೇಳಿದರು: “ನನ್ನ ಜನರೇ! ನೀವು ಒಳಿತು ಮಾಡುವುದಕ್ಕೆ ಮೊದಲು ಕೆಡುಕು ಮಾಡಲು ಏಕೆ ತ್ವರೆ ಮಾಡುತ್ತೀರಿ? ನೀವೇಕೆ ಅಲ್ಲಾಹನಲ್ಲಿ ಕ್ಷಮೆಯಾಚಿಸುವುದಿಲ್ಲ? ಅವನು ನಿಮಗೆ ದಯೆ ತೋರಬಹುದಲ್ಲವೇ.”
Kannada Translation - Hamza Buturಅವರು ಹೇಳಿದರು: “ನೀನು ಮತ್ತು ನಿನ್ನ ಅನುಯಾಯಿಗಳು ನಮಗೆ ಅಪಶಕುನವಾಗಿದ್ದಾರೆ.” ಸ್ವಾಲಿಹ್ ಹೇಳಿದರು: “ನಿಮ್ಮ ಅಪಶಕುನವು ಅಲ್ಲಾಹನ ಬಳಿಯಿದೆ. ಅಲ್ಲ, ವಾಸ್ತವವಾಗಿ ನೀವು ಪರೀಕ್ಷೆಗೆ ತುತ್ತಾದ ಜನರಾಗಿದ್ದೀರಿ.”
Kannada Translation - Hamza Buturಆ ಮುಖಂಡರು ಪರಸ್ಪರ ಆಣೆ ಮಾಡುತ್ತಾ ಒಂದು ನಿರ್ಧಾರ ತೆಗೆದು ಹೇಳಿದರು: “ನಾವು ರಾತ್ರಿ ಸ್ವಾಲಿಹ್ ಮತ್ತು ಅವರ ಕುಟುಂಬದವರನ್ನು ಕೊಂದು ಬಿಡೋಣ. ನಂತರ ಅವರ ವಾರಸುದಾರರೊಡನೆ, ಇವನ ಕುಟುಂಬವ ಹತ್ಯೆಯಾಗುವಾಗ ನಾವು ಅಲ್ಲಿರಲಿಲ್ಲ. ನಾವು ಖಂಡಿತವಾಗಿಯೂ ಸತ್ಯವನ್ನೇ ಹೇಳುತ್ತಿದ್ದೇವೆ ಎಂದು ಹೇಳಿ ಬಿಡೋಣ.”
Kannada Translation - Hamza Buturನಂತರ ಅವರ ತಂತ್ರಗಾರಿಕೆಯ ಫಲಿತಾಂಶವು ಹೇಗಿತ್ತೆಂದು ನೋಡಿರಿ. ಅದೇನೆಂದರೆ, ನಾವು ಅವರನ್ನು ಮತ್ತು ಅವರ ಜನರನ್ನು ಸಂಪೂರ್ಣವಾಗಿ ನಾಶ ಮಾಡಿದೆವು.
Kannada Translation - Hamza Buturಅವರು ಅಕ್ರಮವೆಸಗಿದ ಕಾರಣ ಅವರ ಮನೆಗಳು ಜನವಾಸವಿಲ್ಲದೆ ಕುಸಿದು ಬಿದ್ದಿವೆ. ನಿಶ್ಚಯವಾಗಿಯೂ ತಿಳುವಳಿಕೆಯಿರುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.
Kannada Translation - Hamza Buturಲೂತರನ್ನು ನೆನಪಿಸಿಕೊಳ್ಳಿರಿ. ಅವರು ತಮ್ಮ ಜನರೊಡನೆ ಕೇಳಿದ ಸಂದರ್ಭ: “ಅತ್ಯಂತ ನಿಕೃಷ್ಟ ಕೆಲಸವೆಂದು ತಿಳಿದೂ ಸಹ ನೀವು ಈ ಅಶ್ಲೀಲಕ್ಕೆ ಮುಂದಾಗುತ್ತೀರಾ?
Kannada Translation - Hamza Buturಆಗ ಆ ಜನರ ಉತ್ತರವು ಕೇವಲ ಈ ರೀತಿಯಾಗಿತ್ತು: “ಲೂತರ ಕುಟುಂಬವನ್ನು ನಿಮ್ಮ ಊರಿನಿಂದ ಓಡಿಸಿರಿ. ಅವರು ಬಹಳ ಪರಿಶುದ್ಧರಂತೆ ವರ್ತಿಸುತ್ತಿದ್ದಾರೆ.”
Kannada Translation - Hamza Buturಆಗ ನಾವು ಅವರನ್ನು ಮತ್ತು ಅವರ ಕುಟುಂಬವನ್ನು ರಕ್ಷಿಸಿದೆವು; ಅವರ ಹೆಂಡತಿಯನ್ನು ಬಿಟ್ಟು. ಅವಳು ಹಿಂದೆ ಉಳಿದವರಲ್ಲಿ ಸೇರಬೇಕೆಂದು ನಾವು ನಿರ್ಣಯಿಸಿದೆವು.
Kannada Translation - Hamza Buturಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ. ಅವನು ಆರಿಸಿದ ಅವನ ದಾಸರ ಮೇಲೆ ಶಾಂತಿಯಿರಲಿ. ಯಾರು ಶ್ರೇಷ್ಠರು? ಅಲ್ಲಾಹನೋ ಅಥವಾ ಅವರು ಅವನೊಂದಿಗೆ ಸಹಭಾಗಿಯಾಗಿ ಮಾಡಿದ ದೇವರುಗಳೋ?
Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದವನು ಮತ್ತು ಆಕಾಶದಿಂದ ನಿಮಗೆ ಮಳೆಯನ್ನು ಸುರಿಸಿದವನೋ? ನಂತರ ನಾವು ಅದರಿಂದ ಕಣ್ಮನ ತಣಿಸುವ ತೋಟಗಳನ್ನು ಬೆಳೆಸಿದೆವು. ಅದರ ಮರಗಳನ್ನು ಬೆಳೆಸಲು ನಿಮಗೆ ಸಾಧ್ಯವಾಗುತ್ತಿರಲಿಲ್ಲ. ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅಲ್ಲ, ಅವರು (ಸತ್ಯಮಾರ್ಗದಿಂದ) ತಪ್ಪಿಹೋಗುವ ಜನರಾಗಿದ್ದಾರೆ.
Kannada Translation - Hamza Buturಭೂಮಿಯನ್ನು ವಾಸಯೋಗ್ಯವಾಗಿ ಮಾಡಿದವನು, ಅದರ ನಡುವೆ ನದಿಗಳನ್ನು ಹರಿಸಿದವನು, ಅದಕ್ಕೆ ಸ್ಥಿರತೆಯನ್ನು ನೀಡುವ ಪರ್ವತಗಳನ್ನು ನಿರ್ಮಿಸಿದವನು ಮತ್ತು ಎರಡು ಸಮುದ್ರಗಳ ನಡುವೆ ತಡೆಯನ್ನಿರಿಸಿದವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅಲ್ಲ, ಅವರಲ್ಲಿ ಹೆಚ್ಚಿನವರಿಗೂ ತಿಳಿದಿಲ್ಲ.
Kannada Translation - Hamza Buturಕಷ್ಟದಲ್ಲಿರುವವನು ಕರೆದು ಪ್ರಾರ್ಥಿಸಿದಾಗ ಅವನಿಗೆ ಉತ್ತರ ನೀಡುವವನು, ಕಷ್ಟವನ್ನು ನಿವಾರಿಸುವವನು ಮತ್ತು ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ನೀವು ಸ್ವಲ್ಪವೇ ಉಪದೇಶ ಪಡೆಯುತ್ತೀರಿ.
Kannada Translation - Hamza Buturನೆಲ ಮತ್ತು ಸಮುದ್ರಗಳ ಅಂಧಕಾರಗಳಲ್ಲಿ ನಿಮಗೆ ದಾರಿ ತೋರಿಸುವವನು ಮತ್ತು ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಉನ್ನತನಾಗಿದ್ದಾನೆ.
Kannada Translation - Hamza Buturಮೊದಲ ಬಾರಿಗೆ ಸೃಷ್ಟಿಸಿ ನಂತರ ಆ ಸೃಷ್ಟಿಯನ್ನು ಪುನರಾವರ್ತಿಸುವವನು ಮತ್ತು ಭೂಮ್ಯಾಕಾಶಗಳಿಂದ ನಿಮಗೆ ಆಹಾರಗಳನ್ನು ಒದಗಿಸುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಹೇಳಿರಿ: “ನೀವು ಸತ್ಯವಂತರಾಗಿದ್ದರೆ ನಿಮ್ಮಲ್ಲಿರುವ ಸಾಕ್ಷ್ಯಾಧಾರವನ್ನು ತನ್ನಿರಿ.”
Kannada Translation - Hamza Buturಹೇಳಿರಿ: “ಅಲ್ಲಾಹನ ಹೊರತು ಭೂಮ್ಯಾಕಾಶಗಳಲ್ಲಿರುವ ಯಾರಿಗೂ ಅದೃಶ್ಯ ಜ್ಞಾನವಿಲ್ಲ. ಅವರನ್ನು ಯಾವಾಗ ಜೀವ ನೀಡಿ ಎಬ್ಬಿಸಲಾಗುತ್ತದೆಯೆಂದು ಕೂಡ ಅವರಿಗೆ ತಿಳಿದಿಲ್ಲ.”
Kannada Translation - Hamza Buturಅಲ್ಲ, ಪರಲೋಕದ ಕುರಿತಾದ ಅವರ ಜ್ಞಾನವು ಬರಿದಾಗಿ ಬಿಟ್ಟಿದೆ. ಅಲ್ಲ, ಅವರು ಅದರ ಬಗ್ಗೆ ಸಂಶಯದಲ್ಲಿದ್ದಾರೆ. ಅಲ್ಲ, ಅವರು ಅದರ ಬಗ್ಗೆ ಕುರುಡರಾಗಿದ್ದಾರೆ.
Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ತನ್ನ ತೀರ್ಪಿನ ಮೂಲಕ ಅವರ ನಡುವೆ ತೀರ್ಮಾನ ಮಾಡುವನು. ಅವನು ಪ್ರಬಲನು ಮತ್ತು ಸರ್ವಜ್ಞನಾಗಿದ್ದಾನೆ.
Kannada Translation - Hamza Buturಮೃತರಿಗೆ ಕೇಳುವಂತೆ ಮಾಡಲು ನಿಮಗೆ ಖಂಡಿತ ಸಾಧ್ಯವಿಲ್ಲ. ಕಿವುಡರು ಬೆನ್ನು ತಿರುಗಿಸಿ ನಡೆದರೆ ಅವರಿಗೆ ಕರೆ ಕೇಳುವಂತೆ ಮಾಡಲು ಕೂಡ ನಿಮಗೆ ಸಾಧ್ಯವಿಲ್ಲ.
Kannada Translation - Hamza Buturಕುರುಡರನ್ನು ಅವರ ದುರ್ಮಾರ್ಗದಿಂದ ಮುಕ್ತಗೊಳಿಸಿ ಸನ್ಮಾರ್ಗಕ್ಕೆ ದಾರಿ ತೋರಿಸಲು ನಿಮಗೆ ಸಾಧ್ಯವಿಲ್ಲ. ನಮ್ಮ ವಚನಗಳಲ್ಲಿ ವಿಶ್ವಾಸವಿಟ್ಟು ನಂತರ ಶರಣಾಗುವವರು ಯಾರೋ ಅವರಿಗೆ ಮಾತ್ರ ನೀವು ಕೇಳುವಂತೆ ಮಾಡಬಲ್ಲಿರಿ.
Kannada Translation - Hamza Buturಅವರ ಮೇಲೆ ಶಿಕ್ಷೆಯ ವಚನವು ನಿಜವಾಗುವಾಗ, ನಾವು ಅವರಿಗೋಸ್ಕರ ಭೂಮಿಯಿಂದ ಒಂದು ಜೀವಿಯನ್ನು ಹೊರತರುವೆವು. ಅದು ಅವರೊಡನೆ ಮಾತನಾಡುತ್ತಾ ಹೇಳುವುದು: “ಜನರು ನಮ್ಮ ವಚನಗಳಲ್ಲಿ ದೃಢವಾದ ವಿಶ್ವಾಸವನ್ನು ಹೊಂದಿರಲಿಲ್ಲ.”
Kannada Translation - Hamza Buturನಾವು ಎಲ್ಲಾ ಸಮುದಾಯಗಳಿಂದಲೂ ನಮ್ಮ ವಚನಗಳನ್ನು ನಿಷೇಧಿಸುವ ಒಂದೊಂದು ಗುಂಪನ್ನು ಒಟ್ಟುಗೂಡಿಸುವ ದಿನ. ನಂತರ ಅವರನ್ನು ಬೇರೆ ಬೇರೆಯಾಗಿ ನಿಲ್ಲಿಸಲಾಗುವುದು.
Kannada Translation - Hamza Buturಅವರೆಲ್ಲರೂ ಬಂದು ಸೇರಿದಾಗ, ಅಲ್ಲಾಹು ಕೇಳುವನು: “ನನ್ನ ವಚನಗಳ ಬಗ್ಗೆ ನಿಮಗೆ ಪೂರ್ಣವಾದ ಜ್ಞಾನವಿಲ್ಲದಿದ್ದೂ ಸಹ ನೀವು ಅವುಗಳನ್ನು ಏಕೆ ನಿಷೇಧಿಸಿದಿರಿ? ಅಥವಾ ನೀವು ಏನು ಮಾಡುತ್ತಿದ್ದಿರಿ?”
Kannada Translation - Hamza Buturನಾವು ಅವರಿಗೆ ರಾತ್ರಿಯನ್ನು ವಿಶ್ರಾಂತಿ ಪಡೆಯುವುದಕ್ಕಾಗಿ ಮತ್ತು ಹಗಲನ್ನು ಪ್ರಕಾಶಮಾನವಾಗಿ ಮಾಡಿದ್ದನ್ನು ಅವರು ನೋಡಿಲ್ಲವೇ? ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ.
Kannada Translation - Hamza Buturಕಹಳೆಯಲ್ಲಿ ಊದಲಾಗುವ ದಿನ! ಆಗ ಭೂಮ್ಯಾಕಾಶಗಳಲ್ಲಿರುವವರೆಲ್ಲರೂ ಭಯದಿಂದ ನಡುಗುವರು—ಅಲ್ಲಾಹು ಇಚ್ಛಿಸಿದವರ ಹೊರತು. ಎಲ್ಲರೂ ಅತ್ಯಂತ ವಿನಯದಿಂದ ಅವನ ಮುಂದೆ ಬರುವರು.
Kannada Translation - Hamza Buturನೀವು ಪರ್ವತಗಳನ್ನು ನೋಡುವಾಗ ಅವುಗಳನ್ನು ನಿಶ್ಚಲವೆಂದು ಭಾವಿಸುತ್ತೀರಿ. ಆದರೆ ಅವು ಮೋಡಗಳಂತೆ ಹಾರಾಡುವುವು. ಎಲ್ಲವೂ ಅಲ್ಲಾಹನ ಕಾಯಕಗಳಾಗಿದ್ದು, ಅವನು ಎಲ್ಲವನ್ನೂ ಸಮರ್ಪಕಗೊಳಿಸಿದ್ದಾನೆ. ನಿಶ್ಚಯವಾಗಿಯೂ ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅವನು ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
Kannada Translation - Hamza Buturಯಾರು ಒಂದು ಒಳಿತಿನೊಂದಿಗೆ ಬರುತ್ತಾರೋ, ಅವರಿಗೆ ಅದಕ್ಕಿಂತಲೂ ಶ್ರೇಷ್ಠವಾದುದು ದೊರೆಯುತ್ತದೆ. ಅವರು ಅಂದಿನ ಭಯವಿಹ್ವಲತೆಯಿಂದ ದೂರವಾಗಿ ನಿರ್ಭಯರಾಗಿರುತ್ತಾರೆ.
Kannada Translation - Hamza Buturಯಾರು ಒಂದು ಕೆಡುಕಿನೊಂದಿಗೆ ಬರುತ್ತಾರೋ, ಅವರು ಅಧೋಮುಖಿಗಳಾಗಿ ನರಕದಲ್ಲಿ ಬೀಳುವರು. ನೀವು ಮಾಡಿರುವ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ?
Kannada Translation - Hamza Buturಈ ನಗರವನ್ನು ಪವಿತ್ರಗೊಳಿಸಿದ ಇದರ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಆರಾಧಿಸಬೇಕೆಂದು ನನಗೆ ಆಜ್ಞಾಪಿಸಲಾಗಿದೆ. ಎಲ್ಲ ವಸ್ತುಗಳೂ ಅವನಿಗೆ ಸೇರಿದ್ದು. ನಾನು ಮುಸಲ್ಮಾನರಲ್ಲಿ ಸೇರಬೇಕೆಂದು ನನಗೆ ಆಜ್ಞಾಪಿಸಲಾಗಿದೆ.
Kannada Translation - Hamza Buturಕುರ್ಆನನ್ನು ಓದಿಕೊಡುವಂತೆಯೂ (ನನಗೆ ಆಜ್ಞಾಪಿಸಲಾಗಿದೆ). ಯಾರಾದರೂ ಸನ್ಮಾರ್ಗವನ್ನು ಪಡೆದರೆ ಅವನು ಸ್ವತಃ ಅವನ ಒಳಿತಿಗಾಗಿಯೇ ಸನ್ಮಾರ್ಗವನ್ನು ಪಡೆಯುತ್ತಾನೆ. ಯಾರಾದರೂ ದಾರಿತಪ್ಪಿ ನಡೆದರೆ ಹೇಳಿರಿ: “ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮಾತ್ರ.”
Kannada Translation - Hamza Buturಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ. ಅವನು ನಿಮಗೆ ಅವನ ದೃಷ್ಟಾಂತಗಳನ್ನು ತೋರಿಸಿಕೊಡುವನು. ಆಗ ನೀವು ಅವುಗಳನ್ನು ಅರಿತುಕೊಳ್ಳುವಿರಿ. ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಸ್ವಲ್ಪವೂ ನಿರ್ಲಕ್ಷ್ಯನಲ್ಲ.”