قَالَ ٱلَّذِى عِندَهُۥ عِلْمٌ مِّنَ ٱلْكِتَٰبِ أَنَا۠ ءَاتِيكَ بِهِۦ قَبْلَ أَن يَرْتَدَّ إِلَيْكَ طَرْفُكَ فَلَمَّا رَءَاهُ مُسْتَقِرًّا عِندَهُۥ قَالَ هَٰذَا مِن فَضْلِ رَبِّى لِيَبْلُوَنِىٓ ءَأَشْكُرُ أَمْ أَكْفُرُ وَمَن شَكَرَ فَإِنَّمَا يَشْكُرُ لِنَفْسِهِۦ وَمَن كَفَرَ فَإِنَّ رَبِّى غَنِىٌّ كَرِيمٌ
Kannada Translation - Hamza Buturಗ್ರಂಥದ ಜ್ಞಾನವಿರುವ ಒಬ್ಬ ವ್ಯಕ್ತಿ ಎದ್ದು ನಿಂತು ಹೇಳಿದರು: “ನೀವು ಕಣ್ಣೆವೆಯಿಕ್ಕುವುದಕ್ಕೆ ಮೊದಲೇ ನಾನು ಅದನ್ನು ತರುವೆನು.” ಆ ಸಿಂಹಾಸನವು ತನ್ನ ಮುಂದೆ ನಿಂತಿರುವುದ್ನು ಕಂಡಾಗ ಸುಲೈಮಾನ್ ಹೇಳಿದರು: “ಇದು ನನ್ನ ಪರಿಪಾಲಕನ (ಅಲ್ಲಾಹನ) ಔದಾರ್ಯದಲ್ಲಿ ಸೇರಿದ್ದಾಗಿದೆ. ನಾನು ಕೃತಜ್ಞನಾಗುತ್ತೇನೋ ಅಥವಾ ಕೃತಘ್ನನಾಗುತ್ತೇನೋ ಎಂದು ಪರೀಕ್ಷಿಸುವುದಕ್ಕಾಗಿ. ಯಾರು ಕೃತಜ್ಞನಾಗುತ್ತಾನೋ—ಅವನು ಕೃತಜ್ಞನಾಗುವುದು ಸ್ವತಃ ಅವನ ಒಳಿತಿಗೇ ಆಗಿದೆ. ಯಾರಾದರೂ ಕೃತಘ್ನನಾಗುವುದಾದರೆ—ನಿಶ್ಚಯವಾಗಿಯೂ ನನ್ನ ಪರಿಪಾಲಕನು ನಿರಪೇಕ್ಷನು ಮತ್ತು ಪರಮ ಉದಾರಿಯಾಗಿದ್ದಾನೆ.”