وَلَمَّا وَرَدَ مَآءَ مَدْيَنَ وَجَدَ عَلَيْهِ أُمَّةً مِّنَ ٱلنَّاسِ يَسْقُونَ وَوَجَدَ مِن دُونِهِمُ ٱمْرَأَتَيْنِ تَذُودَانِ قَالَ مَا خَطْبُكُمَا قَالَتَا لَا نَسْقِى حَتَّىٰ يُصْدِرَ ٱلرِّعَآءُ وَأَبُونَا شَيْخٌ كَبِيرٌ
Kannada Translation - Hamza Buturಅವರು ಮದ್ಯನ್ ದೇಶದ ಜಲಾಶಯದ ಬಳಿಗೆ ತಲುಪಿದಾಗ, ಅಲ್ಲಿ ತಮ್ಮ ಕುರಿಮಂದೆಗೆ ನೀರುಣಿಸುತ್ತಿರುವ ಜನರ ಗುಂಪನ್ನು ಕಂಡರು. ಅಲ್ಲಿ ಇಬ್ಬರು ಯುವತಿಯರು (ತಮ್ಮ ಕುರಿಮಂದೆಯನ್ನು) ತಡೆದು ನಿಂತಿರುವುದನ್ನೂ ಕಂಡರು. ಅವರು ಕೇಳಿದರು: “ನೀವೇನು ಮಾಡುತ್ತಿದ್ದೀರಿ?” ಆ ಯುವತಿಯರು ಉತ್ತರಿಸಿದರು: “ಈ ಕುರಿಗಾಹಿಗಳು ಇಲ್ಲಿಂದ ಹೊರಟು ಹೋಗುವ ತನಕ ನಮಗೆ ನೀರುಣಿಸಲು ಆಗುವುದಿಲ್ಲ. ನಮ್ಮ ತಂದೆ ವಯೋವೃದ್ಧರಾಗಿದ್ದಾರೆ.”[1]