وَمِنَ ٱلنَّاسِ مَن يَقُولُ ءَامَنَّا بِٱللَّهِ فَإِذَآ أُوذِىَ فِى ٱللَّهِ جَعَلَ فِتْنَةَ ٱلنَّاسِ كَعَذَابِ ٱللَّهِ وَلَئِن جَآءَ نَصْرٌ مِّن رَّبِّكَ لَيَقُولُنَّ إِنَّا كُنَّا مَعَكُمْ أَوَلَيْسَ ٱللَّهُ بِأَعْلَمَ بِمَا فِى صُدُورِ ٱلْعَٰلَمِينَ
Kannada Translation - Hamza Buturಜನರಲ್ಲಿ ಕೆಲವರಿದ್ದಾರೆ. ಅವರು ಹೇಳುತ್ತಾರೆ: “ನಾವು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇವೆ.” ಆದರೆ ಅಲ್ಲಾಹನ ಮಾರ್ಗದಲ್ಲಿ ಅವರಿಗೆ ತೊಂದರೆಗಳು ಎದುರಾದರೆ, ಜನರು ನೀಡುವ ತೊಂದರೆಯನ್ನು ಅವರು ಅಲ್ಲಾಹನ ಶಿಕ್ಷೆಯಂತೆಯೇ ಪರಿಗಣಿಸುತ್ತಾರೆ. ಒಂದು ವೇಳೆ, ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಏನಾದರೂ ಸಹಾಯವು ಬಂದರೆ ಅವರು ಹೇಳುತ್ತಾರೆ: “ನಿಜವಾಗಿಯೂ ನಾವು ನಿಮ್ಮ ಜೊತೆಗಿದ್ದೆವು.” ಸರ್ವಲೋಕದವರ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿಲ್ಲವೇ?