وَلَقَدْ صَدَقَكُمُ ٱللَّهُ وَعْدَهُۥٓ إِذْ تَحُسُّونَهُم بِإِذْنِهِۦ حَتَّىٰٓ إِذَا فَشِلْتُمْ وَتَنَٰزَعْتُمْ فِى ٱلْأَمْرِ وَعَصَيْتُم مِّنۢ بَعْدِ مَآ أَرَىٰكُم مَّا تُحِبُّونَ مِنكُم مَّن يُرِيدُ ٱلدُّنْيَا وَمِنكُم مَّن يُرِيدُ ٱلْـَٔاخِرَةَ ثُمَّ صَرَفَكُمْ عَنْهُمْ لِيَبْتَلِيَكُمْ وَلَقَدْ عَفَا عَنكُمْ وَٱللَّهُ ذُو فَضْلٍ عَلَى ٱلْمُؤْمِنِينَ
Kannada Translation - Hamza Buturಅಲ್ಲಾಹನ ಅಪ್ಪಣೆಯಿಂದ ನೀವು ಅವರನ್ನು ಕೊಲ್ಲುತ್ತಿರುವಾಗ ಅಲ್ಲಾಹು ನಿಮಗೆ ನೀಡಿದ ವಾಗ್ದಾನವನ್ನು ಖಂಡಿತ ನೆರವೇರಿಸಿದ್ದನು. ಎಲ್ಲಿಯವರೆಗೆಂದರೆ, ನೀವು ನಿಮ್ಮ ಕೆಲಸದಲ್ಲಿ ವಿಫಲರಾಗಿ ಪರಸ್ಪರ ತರ್ಕಿಸುವ ಮತ್ತು ನೀವು ಇಷ್ಟಪಡುವುದನ್ನು ಅಲ್ಲಾಹು ನಿಮಗೆ ತೋರಿಸಿದ ಬಳಿಕವೂ ನೀವು ಆಜ್ಞೋಲ್ಲಂಘನೆ ಮಾಡುವ ತನಕ. ನಿಮ್ಮಲ್ಲಿ ಕೆಲವರು ಇಹಲೋಕವನ್ನು ಬಯಸುತ್ತಿದ್ದರು ಮತ್ತು ಇತರ ಕೆಲವರು ಪರಲೋಕವನ್ನು ಬಯಸುತ್ತಿದ್ದರು. ನಂತರ ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಅಲ್ಲಾಹು ನಿಮ್ಮನ್ನು ಅವರಿಂದ (ವೈರಿಗಳಿಂದ) ತಿರುಗಿಸಿದನು. ಅಲ್ಲಾಹು ನಿಮ್ಮನ್ನು ಕ್ಷಮಿಸಿದ್ದಾನೆ. ಅಲ್ಲಾಹು ಸತ್ಯವಿಶ್ವಾಸಿಗಳ ಮೇಲೆ ಮಹಾ ಔದಾರ್ಯವುಳ್ಳವನಾಗಿದ್ದಾನೆ.