ثُمَّ أَنزَلَ عَلَيْكُم مِّنۢ بَعْدِ ٱلْغَمِّ أَمَنَةً نُّعَاسًا يَغْشَىٰ طَآئِفَةً مِّنكُمْ وَطَآئِفَةٌ قَدْ أَهَمَّتْهُمْ أَنفُسُهُمْ يَظُنُّونَ بِٱللَّهِ غَيْرَ ٱلْحَقِّ ظَنَّ ٱلْجَٰهِلِيَّةِ يَقُولُونَ هَل لَّنَا مِنَ ٱلْأَمْرِ مِن شَىْءٍ قُلْ إِنَّ ٱلْأَمْرَ كُلَّهُۥ لِلَّهِ يُخْفُونَ فِىٓ أَنفُسِهِم مَّا لَا يُبْدُونَ لَكَ يَقُولُونَ لَوْ كَانَ لَنَا مِنَ ٱلْأَمْرِ شَىْءٌ مَّا قُتِلْنَا هَٰهُنَا قُل لَّوْ كُنتُمْ فِى بُيُوتِكُمْ لَبَرَزَ ٱلَّذِينَ كُتِبَ عَلَيْهِمُ ٱلْقَتْلُ إِلَىٰ مَضَاجِعِهِمْ وَلِيَبْتَلِىَ ٱللَّهُ مَا فِى صُدُورِكُمْ وَلِيُمَحِّصَ مَا فِى قُلُوبِكُمْ وَٱللَّهُ عَلِيمٌۢ بِذَاتِ ٱلصُّدُورِ
Kannada Translation - Hamza Buturಅನಂತರ, ಆ ಬಳಲಿಕೆಯ ನಂತರ ಅಲ್ಲಾಹು ನಿಮಗೆ ನಿರ್ಭಯತೆಯ ತೂಕಡಿಕೆಯನ್ನು ನೀಡಿದನು. ಅದು ನಿಮ್ಮಲ್ಲಿ ಒಂದು ಗುಂಪನ್ನು ಆವರಿಸುತ್ತಿತ್ತು. ಇನ್ನೊಂದು ಗುಂಪು ಸ್ವಯಂ ಅವರ ಬಗ್ಗೆಯೇ ಚಿಂತಿತರಾಗಿದ್ದರು. ಅವರು ಅಲ್ಲಾಹನ ಬಗ್ಗೆ ಸತ್ಯಕ್ಕೆ ದೂರವಾದ ಅಜ್ಞಾನಕಾಲದ ಭಾವನೆಗಳನ್ನು ಇಟ್ಟುಕೊಂಡಿದ್ದರು.[1] ಅವರು ಕೇಳುತ್ತಿದ್ದರು: “ಆಜ್ಞೆಯಲ್ಲಿ ನಮಗೆ ಯಾವುದೇ ಪಾಲಿಲ್ಲವೇ?” ಹೇಳಿರಿ: “ನಿಶ್ಚಯವಾಗಿಯೂ ಆಜ್ಞೆಯು ಸಂಪೂರ್ಣವಾಗಿ ಅಲ್ಲಾಹನಿಗೆ ಸೇರಿದೆ.” ನಿಮ್ಮ ಮುಂದೆ ಬಹಿರಂಗಪಡಿಸದ ಬೇರೇನೋ ವಿಚಾರಗಳನ್ನು ಅವರು ತಮ್ಮ ಮನದಲ್ಲಿ ಬಚ್ಚಿಡುತ್ತಿದ್ದರು. ಅವರು ಹೇಳುತ್ತಿದ್ದರು: “ಆಜ್ಞೆಯಲ್ಲಿ ನಮಗೇನಾದರೂ ಪಾಲಿರುತ್ತಿದ್ದರೆ ನಾವಿಲ್ಲಿ ಹತ್ಯೆಯಾಗಿ ಬೀಳುತ್ತಿರಲಿಲ್ಲ.” ಹೇಳಿರಿ: “ನೀವು ನಿಮ್ಮ ಮನೆಗಳಲ್ಲಿದ್ದರೂ ಸಹ ಕೊಲೆಯಾಗಬೇಕೆಂಬ ವಿಧಿಯಿರುವವರು ಅವರು ಕೊಲೆಯಾಗಿ ಬೀಳುವ ಸ್ಥಳಗಳಿಗೆ ಸ್ವಯಂ ಹೊರಟು ಬರುತ್ತಿದ್ದರು.” ಇದು ನಿಮ್ಮ ಎದೆಗಳಲ್ಲಿರುವುದನ್ನು ಅಲ್ಲಾಹು ಪರೀಕ್ಷಿಸುವುದಕ್ಕಾಗಿದೆ ಮತ್ತು ನಿಮ್ಮ ಹೃದಯಗಳಲ್ಲಿರುವುದನ್ನು ಶುದ್ಧೀಕರಿಸುವುದಕ್ಕಾಗಿದೆ. ಅಲ್ಲಾಹು ಎದೆಗಳೊಳಗಿರುವುದನ್ನು ತಿಳಿಯುತ್ತಾನೆ.