يَٰٓأَيُّهَا ٱلَّذِينَ ءَامَنُوا۟ لَا تَكُونُوا۟ كَٱلَّذِينَ كَفَرُوا۟ وَقَالُوا۟ لِإِخْوَٰنِهِمْ إِذَا ضَرَبُوا۟ فِى ٱلْأَرْضِ أَوْ كَانُوا۟ غُزًّى لَّوْ كَانُوا۟ عِندَنَا مَا مَاتُوا۟ وَمَا قُتِلُوا۟ لِيَجْعَلَ ٱللَّهُ ذَٰلِكَ حَسْرَةً فِى قُلُوبِهِمْ وَٱللَّهُ يُحْىِۦ وَيُمِيتُ وَٱللَّهُ بِمَا تَعْمَلُونَ بَصِيرٌ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಸತ್ಯವನ್ನು ನಿಷೇಧಿಸಿದವರು ಮತ್ತು ತಮ್ಮ ಸಹೋದರರು ಪ್ರಯಾಣ ಹೊರಟಾಗ ಅಥವಾ ಯುದ್ಧಕ್ಕೆ ಹೊರಟಾಗ, “ಇವರು ನಮ್ಮ ಬಳಿಯಿರುತ್ತಿದ್ದರೆ ಸಾಯುತ್ತಿರಲಿಲ್ಲ ಮತ್ತು ಕೊಲೆಯಾಗುತ್ತಿರಲಿಲ್ಲ” ಎಂದು ಹೇಳುವವರಂತೆ ನೀವಾಗಬೇಡಿ. ಈ ಕಲ್ಪನೆಯನ್ನು ಅಲ್ಲಾಹು ಅವರ ಹೃದಯಗಳಲ್ಲಿನ ವ್ಯಥೆಗೆ ಕಾರಣವಾಗಿ ಮಾಡುತ್ತಾನೆ. ಅಲ್ಲಾಹನೇ ಜೀವ ಮತ್ತು ಮರಣವನ್ನು ನೀಡುವವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.