وَلِيَعْلَمَ ٱلَّذِينَ نَافَقُوا۟ وَقِيلَ لَهُمْ تَعَالَوْا۟ قَٰتِلُوا۟ فِى سَبِيلِ ٱللَّهِ أَوِ ٱدْفَعُوا۟ قَالُوا۟ لَوْ نَعْلَمُ قِتَالًا لَّٱتَّبَعْنَٰكُمْ هُمْ لِلْكُفْرِ يَوْمَئِذٍ أَقْرَبُ مِنْهُمْ لِلْإِيمَٰنِ يَقُولُونَ بِأَفْوَٰهِهِم مَّا لَيْسَ فِى قُلُوبِهِمْ وَٱللَّهُ أَعْلَمُ بِمَا يَكْتُمُونَ
Kannada Translation - Hamza Buturಮತ್ತು ಕಪಟವಿಶ್ವಾಸಿಗಳು ಯಾರೆಂದು ತಿಳಿಯುವುದಕ್ಕಾಗಿ. ಆ ಕಪಟವಿಶ್ವಾಸಿಗಳೊಡನೆ “ಬನ್ನಿ! ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿ ಅಥವಾ (ಕನಿಷ್ಠ) ರಕ್ಷಣೆಯನ್ನಾದರೂ ಮಾಡಿ” ಎಂದು ಹೇಳಲಾದಾಗ, ಅವರು ಹೇಳಿದರು: “ಯುದ್ಧ ಸಂಭವಿಸುತ್ತದೆಯೆಂದು ತಿಳಿದಿದ್ದರೆ ನಾವು ನಿಮ್ಮ ಹಿಂದೆ ಬರುತ್ತಿದ್ದೆವು.” ಅಂದು ಅವರು ಸತ್ಯವಿಶ್ವಾಸಕ್ಕಿಂತಲೂ ಸತ್ಯನಿಷೇಧಕ್ಕೆ ಹೆಚ್ಚು ಹತ್ತಿರವಾಗಿದ್ದರು. ಅವರ ಹೃದಯಗಳಲ್ಲಿಲ್ಲದ ವಿಷಯವನ್ನು ಅವರು ಬಾಯಿ ಮೂಲಕ ಹೇಳುತ್ತಾರೆ. ಅವರು ಮುಚ್ಚಿಡುವ ಸಂಗತಿಗಳು ಏನೆಂದು ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ.