ٱلَّذِينَ قَالَ لَهُمُ ٱلنَّاسُ إِنَّ ٱلنَّاسَ قَدْ جَمَعُوا۟ لَكُمْ فَٱخْشَوْهُمْ فَزَادَهُمْ إِيمَٰنًا وَقَالُوا۟ حَسْبُنَا ٱللَّهُ وَنِعْمَ ٱلْوَكِيلُ
Kannada Translation - Hamza Butur“ನಿಶ್ಚಯವಾಗಿಯೂ ಆ ಜನರು (ಶತ್ರುಗಳು) ನಿಮ್ಮ ವಿರುದ್ಧ ಸೈನ್ಯವನ್ನು ಜಮಾವಣೆಗೊಳಿಸಿದ್ದಾರೆ; ಆದ್ದರಿಂದ ಅವರನ್ನು ಭಯಪಡಿರಿ” ಎಂದು ಜನರು ಅವರೊಡನೆ ಹೇಳಿದಾಗ ಅದು ಅವರ ವಿಶ್ವಾಸವನ್ನು ಹೆಚ್ಚಿಸಿತು. ಅವರು ಹೇಳಿದರು: “ನಮಗೆ ಅಲ್ಲಾಹು ಸಾಕು. ಭರವಸೆಯಿಡಲು ಅವನು ಅತ್ಯುತ್ತಮನಾಗಿದ್ದಾನೆ.”[1]