وَلَا يَحْسَبَنَّ ٱلَّذِينَ يَبْخَلُونَ بِمَآ ءَاتَىٰهُمُ ٱللَّهُ مِن فَضْلِهِۦ هُوَ خَيْرًا لَّهُم بَلْ هُوَ شَرٌّ لَّهُمْ سَيُطَوَّقُونَ مَا بَخِلُوا۟ بِهِۦ يَوْمَ ٱلْقِيَٰمَةِ وَلِلَّهِ مِيرَٰثُ ٱلسَّمَٰوَٰتِ وَٱلْأَرْضِ وَٱللَّهُ بِمَا تَعْمَلُونَ خَبِيرٌ
Kannada Translation - Hamza Buturಅಲ್ಲಾಹು ತನ್ನ ಔದಾರ್ಯದಿಂದ ದಯಪಾಲಿಸಿದ ಧನದಲ್ಲಿ ಜಿಪುಣತೆ ತೋರುವವರು ಯಾರೋ—ಅದು ಅವರಿಗೆ ಒಳಿತೆಂದು ಅವರು ಭಾವಿಸದಿರಲಿ. ಅಲ್ಲ, ವಾಸ್ತವವಾಗಿ ಅದು ಅವರಿಗೆ ಕೆಡುಕಾಗಿದೆ. ಪುನರುತ್ಥಾನ ದಿನದಂದು ಅವರು ಜಿಪುಣತೆ ತೋರಿದ ವಸ್ತುವನ್ನು ಅವರ ಕೊರಳಿಗೆ ಹಾರವಾಗಿ ತೊಡಿಸಲಾಗುವುದು. ಭೂಮ್ಯಾಕಾಶಗಳ ವಾರಸುಹಕ್ಕು ಅಲ್ಲಾಹನಿಗೆ ಸೇರಿದ್ದು. ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿಯುವವನಾಗಿದ್ದಾನೆ.