هُوَ ٱلَّذِىٓ أَنزَلَ عَلَيْكَ ٱلْكِتَٰبَ مِنْهُ ءَايَٰتٌ مُّحْكَمَٰتٌ هُنَّ أُمُّ ٱلْكِتَٰبِ وَأُخَرُ مُتَشَٰبِهَٰتٌ فَأَمَّا ٱلَّذِينَ فِى قُلُوبِهِمْ زَيْغٌ فَيَتَّبِعُونَ مَا تَشَٰبَهَ مِنْهُ ٱبْتِغَآءَ ٱلْفِتْنَةِ وَٱبْتِغَآءَ تَأْوِيلِهِۦ وَمَا يَعْلَمُ تَأْوِيلَهُۥٓ إِلَّا ٱللَّهُ وَٱلرَّٰسِخُونَ فِى ٱلْعِلْمِ يَقُولُونَ ءَامَنَّا بِهِۦ كُلٌّ مِّنْ عِندِ رَبِّنَا وَمَا يَذَّكَّرُ إِلَّآ أُو۟لُوا۟ ٱلْأَلْبَٰبِ
Kannada Translation - Hamza Buturನಿಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ.[1] ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವಚನಗಳೂ ಇವೆ. ಹೃದಯದಲ್ಲಿ ವಕ್ರತೆಯಿರುವವರು, ಗೊಂದಲವನ್ನು ಸೃಷ್ಟಿಸಲು ಮತ್ತು ತಪ್ಪಾಗಿ ವ್ಯಾಖ್ಯಾನಿಸಲು ಹೋಲಿಕೆಯಿರುವ ವಚನಗಳ ಹಿಂದೆ ಬೀಳುತ್ತಾರೆ. ಆದರೆ, ಅಲ್ಲಾಹನ ಹೊರತು ಯಾರೂ ಅದರ ವ್ಯಾಖ್ಯಾನವನ್ನು ತಿಳಿದಿಲ್ಲ. ಜ್ಞಾನದಲ್ಲಿ ಸದೃಢರಾಗಿರುವವರು ಹೇಳುತ್ತಾರೆ: “ನಾವು ಅದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಎಲ್ಲವೂ ನಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದಾಗಿದೆ.” ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಪಡೆಯುವುದಿಲ್ಲ.