أَشِحَّةً عَلَيْكُمْ فَإِذَا جَآءَ ٱلْخَوْفُ رَأَيْتَهُمْ يَنظُرُونَ إِلَيْكَ تَدُورُ أَعْيُنُهُمْ كَٱلَّذِى يُغْشَىٰ عَلَيْهِ مِنَ ٱلْمَوْتِ فَإِذَا ذَهَبَ ٱلْخَوْفُ سَلَقُوكُم بِأَلْسِنَةٍ حِدَادٍ أَشِحَّةً عَلَى ٱلْخَيْرِ أُو۟لَٰٓئِكَ لَمْ يُؤْمِنُوا۟ فَأَحْبَطَ ٱللَّهُ أَعْمَٰلَهُمْ وَكَانَ ذَٰلِكَ عَلَى ٱللَّهِ يَسِيرًا
Kannada Translation - Hamza Buturಅವರು ನಿಮಗೆ ಸಹಾಯ ಮಾಡುವುದರಲ್ಲಿ ಅತ್ಯಂತ ಜಿಪುಣರಾಗಿದ್ದಾರೆ. ಭಯದ ಸನ್ನಿವೇಶವುಂಟಾದರೆ ಅವರು ನಿಮ್ಮನ್ನು ದಿಟ್ಟಿಸಿ ನೋಡುವುದ್ನು ನಿಮಗೆ ಕಾಣಬಹುದು. ಸಾವಿನ ದವಡೆಯಲ್ಲಿರುವ ವ್ಯಕ್ತಿಯ ಕಣ್ಣುಗಳಂತೆ ಅವರ ಕಣ್ಣುಗಳು ತಿರುಗುತ್ತವೆ. ಆದರೆ ಭಯವು ನಿವಾರಣೆಯಾದರೆ ಅವರು ಹರಿತವಾದ ನಾಲಗೆಗಳ ಮೂಲಕ ನಿಮ್ಮನ್ನು ಚುಚ್ಚಿ ಮಾತನಾಡುತ್ತಾರೆ. ಅವರು ಸಂಪತ್ತನ್ನು ಅತಿಯಾಗಿ ಆಸೆಪಡುತ್ತಾರೆ. ಅವರು ಸತ್ಯವಿಶ್ವಾಸಿಗಳಲ್ಲ. ಆದ್ದರಿಂದ ಅಲ್ಲಾಹು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು. ಅದು ಅಲ್ಲಾಹನ ಮಟ್ಟಿಗೆ ಬಹಳ ಸುಲಭವಾಗಿದೆ.