وَلَا تَنفَعُ ٱلشَّفَٰعَةُ عِندَهُۥٓ إِلَّا لِمَنْ أَذِنَ لَهُۥ حَتَّىٰٓ إِذَا فُزِّعَ عَن قُلُوبِهِمْ قَالُوا۟ مَاذَا قَالَ رَبُّكُمْ قَالُوا۟ ٱلْحَقَّ وَهُوَ ٱلْعَلِىُّ ٱلْكَبِيرُ
Kannada Translation - Hamza Buturಅಲ್ಲಾಹು ಯಾರಿಗೆ (ಶಿಫಾರಸು ಮಾಡಲು) ಅನುಮತಿ ನೀಡಿದ್ದಾನೋ ಅವರಿಗಲ್ಲದೆ ಬೇರೆ ಯಾರಿಗೂ ಅವನ ಬಳಿ ಶಿಫಾರಸು ಪ್ರಯೋಜನ ಪಡುವುದಿಲ್ಲ. ಎಲ್ಲಿಯವರೆಗೆಂದರೆ, ಅವರ (ದೇವದೂತರುಗಳ) ಹೃದಯಗಳಿಂದ ಭೀತಿಯು ದೂರವಾದಾಗ ಅವರು ಕೇಳುವರು: “ನಿಮ್ಮ ಪರಿಪಾಲಕ (ಅಲ್ಲಾಹು) ಏನು ಹೇಳಿದನು?” ಅವರು ಉತ್ತರಿಸುವರು: “ಸತ್ಯವನ್ನು. ಅವನು ಪರಮೋನ್ನತನು ಮತ್ತು ಮಹಾ ಮಹಿಮನಾಗಿದ್ದಾನೆ.”