وَقَالَ ٱلَّذِينَ كَفَرُوا۟ لَن نُّؤْمِنَ بِهَٰذَا ٱلْقُرْءَانِ وَلَا بِٱلَّذِى بَيْنَ يَدَيْهِ وَلَوْ تَرَىٰٓ إِذِ ٱلظَّٰلِمُونَ مَوْقُوفُونَ عِندَ رَبِّهِمْ يَرْجِعُ بَعْضُهُمْ إِلَىٰ بَعْضٍ ٱلْقَوْلَ يَقُولُ ٱلَّذِينَ ٱسْتُضْعِفُوا۟ لِلَّذِينَ ٱسْتَكْبَرُوا۟ لَوْلَآ أَنتُمْ لَكُنَّا مُؤْمِنِينَ
Kannada Translation - Hamza Buturಸತ್ಯನಿಷೇಧಿಗಳು ಹೇಳಿದರು: “ನಾವು ಈ ಕುರ್ಆನ್ನಲ್ಲಿ ಅಥವಾ ಇದಕ್ಕಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಎಂದಿಗೂ ವಿಶ್ವಾಸವಿಡುವುದಿಲ್ಲ.” (ಪ್ರವಾದಿಯವರೇ) ಈ ಅಕ್ರಮಿಗಳನ್ನು (ಪುನರುತ್ಥಾನ ದಿನ) ಅವರ ಪರಿಪಾಲಕನ (ಅಲ್ಲಾಹನ) ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡುತ್ತಿದ್ದರೆ! ಅವರು ಪರಸ್ಪರ ಒಬ್ಬರು ಇನ್ನೊಬ್ಬರ ಮೇಲೆ ಆರೋಪ ಹೊರಿಸುವರು. ದುರ್ಬಲರು ಪ್ರಬಲರೊಡನೆ ಹೇಳುವರು: “ನೀವಿಲ್ಲದಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು.”