إِذْ دَخَلُوا۟ عَلَىٰ دَاوُۥدَ فَفَزِعَ مِنْهُمْ قَالُوا۟ لَا تَخَفْ خَصْمَانِ بَغَىٰ بَعْضُنَا عَلَىٰ بَعْضٍ فَٱحْكُم بَيْنَنَا بِٱلْحَقِّ وَلَا تُشْطِطْ وَٱهْدِنَآ إِلَىٰ سَوَآءِ ٱلصِّرَٰطِ
Kannada Translation - Hamza Buturಅವರು ದಾವೂದರ ಬಳಿಗೆ ತಲುಪಿದರು. ದಾವೂದ್ ಅವರನ್ನು ಕಂಡು ಗಾಬರಿಯಾದರು. ಅವರು ಹೇಳಿದರು: “ಭಯಪಡಬೇಡಿ. ನಾವು ಎದುರಾಳಿಗಳಾಗಿದ್ದೇವೆ. ನಮ್ಮಲ್ಲಿ ಒಬ್ಬರು ಇನ್ನೊಬ್ಬರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನೀವು ನಮ್ಮ ನಡುವೆ ನ್ಯಾಯಬದ್ಧವಾದ ತೀರ್ಪನ್ನು ನೀಡಿರಿ. ಅನ್ಯಾಯವೆಸಗಬೇಡಿ. ನಮಗೆ ನೇರ ಮಾರ್ಗವನ್ನು ತೋರಿಸಿ.