وَأَشْرَقَتِ ٱلْأَرْضُ بِنُورِ رَبِّهَا وَوُضِعَ ٱلْكِتَٰبُ وَجِا۟ىٓءَ بِٱلنَّبِيِّـۧنَ وَٱلشُّهَدَآءِ وَقُضِىَ بَيْنَهُم بِٱلْحَقِّ وَهُمْ لَا يُظْلَمُونَ
Kannada Translation - Hamza Buturಭೂಮಿಯು ಅದರ ಪರಿಪಾಲಕನ (ಅಲ್ಲಾಹನ) ಪ್ರಭೆಯಿಂದ ಬೆಳಗುವುದು. ಕರ್ಮಪುಸ್ತಕಗಳನ್ನು ಇಡಲಾಗುವುದು, ಪ್ರವಾದಿಗಳನ್ನು ಹಾಗೂ ಸಾಕ್ಷಿಗಳನ್ನು ಕರೆ ತರಲಾಗುವುದು. ನಂತರ ಜನರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.