وَسِيقَ ٱلَّذِينَ كَفَرُوٓا۟ إِلَىٰ جَهَنَّمَ زُمَرًا حَتَّىٰٓ إِذَا جَآءُوهَا فُتِحَتْ أَبْوَٰبُهَا وَقَالَ لَهُمْ خَزَنَتُهَآ أَلَمْ يَأْتِكُمْ رُسُلٌ مِّنكُمْ يَتْلُونَ عَلَيْكُمْ ءَايَٰتِ رَبِّكُمْ وَيُنذِرُونَكُمْ لِقَآءَ يَوْمِكُمْ هَٰذَا قَالُوا۟ بَلَىٰ وَلَٰكِنْ حَقَّتْ كَلِمَةُ ٱلْعَذَابِ عَلَى ٱلْكَٰفِرِينَ
Kannada Translation - Hamza Buturಸತ್ಯನಿಷೇಧಿಗಳನ್ನು ಗುಂಪು ಗುಂಪಾಗಿ ನರಕಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಕೇಳುವರು: “ನಿಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಓದಿಕೊಡುವ, ನಿಮ್ಮ ಈ ದಿನವನ್ನು ನೀವು ಸಂಧಿಸಲಿರುವಿರಿ ಎಂದು ನಿಮಗೆ ಎಚ್ಚರಿಕೆ ನೀಡುವ, ನಿಮ್ಮವರೇ ಆಗಿರುವ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ?” ಅವರು ಹೇಳುವರು: “ಹೌದು! ಆದರೆ ಸತ್ಯನಿಷೇಧಿಗಳ ಮೇಲೆ ಶಿಕ್ಷೆಯ ವಚನವು ಖಾತ್ರಿಯಾಗಿ ಬಿಟ್ಟಿದೆ.”