وَإِذَا مَسَّ ٱلْإِنسَٰنَ ضُرٌّ دَعَا رَبَّهُۥ مُنِيبًا إِلَيْهِ ثُمَّ إِذَا خَوَّلَهُۥ نِعْمَةً مِّنْهُ نَسِىَ مَا كَانَ يَدْعُوٓا۟ إِلَيْهِ مِن قَبْلُ وَجَعَلَ لِلَّهِ أَندَادًا لِّيُضِلَّ عَن سَبِيلِهِۦ قُلْ تَمَتَّعْ بِكُفْرِكَ قَلِيلًا إِنَّكَ مِنْ أَصْحَٰبِ ٱلنَّارِ
Kannada Translation - Hamza Buturಮನುಷ್ಯನಿಗೆ ಏನಾದರೂ ತೊಂದರೆಯುಂಟಾದರೆ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ತಿರುಗಿ ಅವನನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ಅಲ್ಲಾಹು ಅವನಿಗೆ ತನ್ನ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಮೊದಲು ಯಾವುದಕ್ಕಾಗಿ ಪ್ರಾರ್ಥಿಸಿದ್ದನೋ ಅದನ್ನು ಅವನು ಮರೆತುಬಿಡುತ್ತಾನೆ ಮತ್ತು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸಿ ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುತ್ತಾನೆ. ಹೇಳಿರಿ: “ನೀನು ನಿನ್ನ ಈ ಸತ್ಯನಿಷೇಧದಿಂದ ಸ್ವಲ್ಪ ಕಾಲದವರೆಗೆ ಆನಂದದಿಂದ ಜೀವಿಸು. ನಿಶ್ಚಯವಾಗಿಯೂ ನೀನು ನರಕವಾಸಿಗಳಲ್ಲಿ ಸೇರಿಕೊಳ್ಳುವೆ.”