وَإِذَا كُنتَ فِيهِمْ فَأَقَمْتَ لَهُمُ ٱلصَّلَوٰةَ فَلْتَقُمْ طَآئِفَةٌ مِّنْهُم مَّعَكَ وَلْيَأْخُذُوٓا۟ أَسْلِحَتَهُمْ فَإِذَا سَجَدُوا۟ فَلْيَكُونُوا۟ مِن وَرَآئِكُمْ وَلْتَأْتِ طَآئِفَةٌ أُخْرَىٰ لَمْ يُصَلُّوا۟ فَلْيُصَلُّوا۟ مَعَكَ وَلْيَأْخُذُوا۟ حِذْرَهُمْ وَأَسْلِحَتَهُمْ وَدَّ ٱلَّذِينَ كَفَرُوا۟ لَوْ تَغْفُلُونَ عَنْ أَسْلِحَتِكُمْ وَأَمْتِعَتِكُمْ فَيَمِيلُونَ عَلَيْكُم مَّيْلَةً وَٰحِدَةً وَلَا جُنَاحَ عَلَيْكُمْ إِن كَانَ بِكُمْ أَذًى مِّن مَّطَرٍ أَوْ كُنتُم مَّرْضَىٰٓ أَن تَضَعُوٓا۟ أَسْلِحَتَكُمْ وَخُذُوا۟ حِذْرَكُمْ إِنَّ ٱللَّهَ أَعَدَّ لِلْكَٰفِرِينَ عَذَابًا مُّهِينًا
Kannada Translation - Hamza Butur(ಓ ಪ್ರವಾದಿಯವರೇ!) ನೀವು ಅವರ ಜೊತೆಯಲ್ಲಿರುವಾಗ ಮತ್ತು ಅವರಿಗೆ ಇಮಾಂ ನಿಂತು ನಮಾಝ್ ನಿರ್ವಹಿಸುತ್ತಿರುವಾಗ, ಅವರಲ್ಲೊಂದು ಗುಂಪು ತಮ್ಮ ಜೊತೆಗೆ ನಮಾಝ್ ಮಾಡಲಿ. ಅವರು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ಅವರು ಸುಜೂದ್ ಮಾಡಿದ ನಂತರ ತಮ್ಮ ಹಿಂಭಾಗಕ್ಕೆ ಸರಿದು, ನಮಾಝ್ ನಿರ್ವಹಿಸದ ಇನ್ನೊಂದು ಗುಂಪು ಬಂದು ನಿಮ್ಮೊಂದಿಗೆ ನಮಾಝ್ ನಿರ್ವಹಿಸಲಿ. ಅವರು ಎಚ್ಚರವಾಗಿರಲಿ ಮತ್ತು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ನೀವು ನಿಮ್ಮ ಶಸ್ತ್ರಗಳನ್ನು ಮತ್ತು ನಿಮ್ಮ ಸಾಮಗ್ರಿಗಳನ್ನು ನಿರ್ಲಕ್ಷಿಸಿದರೆ, ನಿಮ್ಮ ಮೇಲೆ ಒಮ್ಮೆಲೇ ದಾಳಿ ಮಾಡಬಹುದೆಂದು ಸತ್ಯನಿಷೇಧಿಗಳು ಬಯಸುತ್ತಾರೆ. ಆದರೆ ನೀವು ಮಳೆಯಿಂದ ತೊಂದರೆ ಅನುಭವಿಸುತ್ತಿದ್ದರೆ, ಅಥವಾ ನೀವು ಅನಾರೋಗ್ಯದಲ್ಲಿದ್ದರೆ, ನಿಮ್ಮ ಶಸ್ತ್ರಗಳನ್ನು ಕೆಳಗಿಡುವುದರಲ್ಲಿ ದೋಷವಿಲ್ಲ. ಆದರೆ ಪೂರ್ಣ ಎಚ್ಚರಿಕೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.[1]