يَٰٓأَيُّهَا ٱلَّذِينَ ءَامَنُوا۟ كُونُوا۟ قَوَّٰمِينَ بِٱلْقِسْطِ شُهَدَآءَ لِلَّهِ وَلَوْ عَلَىٰٓ أَنفُسِكُمْ أَوِ ٱلْوَٰلِدَيْنِ وَٱلْأَقْرَبِينَ إِن يَكُنْ غَنِيًّا أَوْ فَقِيرًا فَٱللَّهُ أَوْلَىٰ بِهِمَا فَلَا تَتَّبِعُوا۟ ٱلْهَوَىٰٓ أَن تَعْدِلُوا۟ وَإِن تَلْوُۥٓا۟ أَوْ تُعْرِضُوا۟ فَإِنَّ ٱللَّهَ كَانَ بِمَا تَعْمَلُونَ خَبِيرًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಿಗೆ ಸಾಕ್ಷಿಯಾಗಿದ್ದು, ನ್ಯಾಯ ನಿಷ್ಠೆಯಲ್ಲಿ ಸದಾ ದೃಢವಾಗಿ ನಿಲ್ಲಿರಿ. ಅದು ನಿಮಗೆ, ನಿಮ್ಮ ತಂದೆ-ತಾಯಿಗಳಿಗೆ, ಅಥವಾ ಹತ್ತಿರದ ಸಂಬಂಧಿಕರಿಗೆ ವಿರುದ್ಧವಾಗಿದ್ದರೂ ಸಹ. ಶ್ರೀಮಂತನಾಗಿರಲಿ ಅಥವಾ ಬಡವನಾಗಿರಲಿ—ಇಬ್ಬರಿಗೂ ಅಲ್ಲಾಹು ಬಹಳ ಹತ್ತಿರದಲ್ಲಿದ್ದಾನೆ. ಆದ್ದರಿಂದ ನೀವು ಸ್ವೇಚ್ಛೆಗಳನ್ನು ಹಿಂಬಾಲಿಸಿ ನ್ಯಾಯ ತಪ್ಪಿ ನಡೆಯಬೇಡಿ. ನೀವು (ಸಾಕ್ಷ್ಯವನ್ನು) ತಿರುಚಿದರೆ, ಅಥವಾ (ಸಾಕ್ಷಿ ನುಡಿಯದೆ) ಹಿಂದೆ ಸರಿದರೆ, ನಿಶ್ಚಯವಾಗಿಯೂ ನೀವು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ.