ٱلَّذِينَ يَتَرَبَّصُونَ بِكُمْ فَإِن كَانَ لَكُمْ فَتْحٌ مِّنَ ٱللَّهِ قَالُوٓا۟ أَلَمْ نَكُن مَّعَكُمْ وَإِن كَانَ لِلْكَٰفِرِينَ نَصِيبٌ قَالُوٓا۟ أَلَمْ نَسْتَحْوِذْ عَلَيْكُمْ وَنَمْنَعْكُم مِّنَ ٱلْمُؤْمِنِينَ فَٱللَّهُ يَحْكُمُ بَيْنَكُمْ يَوْمَ ٱلْقِيَٰمَةِ وَلَن يَجْعَلَ ٱللَّهُ لِلْكَٰفِرِينَ عَلَى ٱلْمُؤْمِنِينَ سَبِيلًا
Kannada Translation - Hamza Buturಅವರು ನಿಮ್ಮನ್ನು ಕಾದು ನೋಡುತ್ತಾರೆ. ನಿಮಗೆ ಅಲ್ಲಾಹನಿಂದ ಗೆಲುವು ಪ್ರಾಪ್ತವಾದರೆ, “ನಾವು ನಿಮ್ಮೊಂದಿಗೆ ಇರಲಿಲ್ಲವೇ?” ಎಂದು ಅವರು (ನಿಮ್ಮೊಂದಿಗೆ) ಕೇಳುತ್ತಾರೆ. ಗೆಲುವು ಸತ್ಯನಿಷೇಧಿಗಳ ಪಾಲಾದರೆ (ಅವರ ಬಳಿಗೆ ಹೋಗಿ), “ನಿಮ್ಮ ಮೇಲೆ ಗೆಲುವು ಪಡೆಯುವ ಸಾಧ್ಯತೆಯಿದ್ದೂ ಸಹ ನಾವು ನಿಮ್ಮನ್ನು ಸತ್ಯವಿಶ್ವಾಸಿಗಳಿಂದ ರಕ್ಷಿಸಲಿಲ್ಲವೇ?” ಎಂದು ಕೇಳುತ್ತಾರೆ. ಪುನರುತ್ಥಾನ ದಿನದಂದು ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುವನು. ಅಲ್ಲಾಹು ಸತ್ಯವಿಶ್ವಾಸಿಗಳ ಮೇಲೆ ಸತ್ಯನಿಷೇಧಿಗಳಿಗೆ ಯಾವುದೇ ಮಾರ್ಗವನ್ನು ಮಾಡಿಕೊಡುವುದಿಲ್ಲ.