فَبِمَا نَقْضِهِم مِّيثَٰقَهُمْ وَكُفْرِهِم بِـَٔايَٰتِ ٱللَّهِ وَقَتْلِهِمُ ٱلْأَنۢبِيَآءَ بِغَيْرِ حَقٍّ وَقَوْلِهِمْ قُلُوبُنَا غُلْفٌۢ بَلْ طَبَعَ ٱللَّهُ عَلَيْهَا بِكُفْرِهِمْ فَلَا يُؤْمِنُونَ إِلَّا قَلِيلًا
Kannada Translation - Hamza Buturಅವರು ಕರಾರನ್ನು ಉಲ್ಲಂಘಿಸಿದ, ಅಲ್ಲಾಹನ ವಚನಗಳನ್ನು ನಿಷೇಧಿಸಿದ, ಅನ್ಯಾಯವಾಗಿ ಪ್ರವಾದಿಗಳನ್ನು ಕೊಲೆ ಮಾಡಿದ ಮತ್ತು ತಮ್ಮ ಹೃದಯಗಳು ಮುಚ್ಚಿವೆಯೆಂದು ಹೇಳಿದ ಕಾರಣದಿಂದ (ಶಾಪಕ್ಕೆ ಗುರಿಯಾದರು). ಅಲ್ಲ, ವಾಸ್ತವವಾಗಿ ಅವರ ಸತ್ಯನಿಷೇಧದಿಂದಾಗಿ ಅಲ್ಲಾಹು ಅವರ ಹೃದಯಗಳಿಗೆ ಮೊಹರು ಹಾಕಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.