أَلَمْ تَرَ إِلَى ٱلَّذِينَ قِيلَ لَهُمْ كُفُّوٓا۟ أَيْدِيَكُمْ وَأَقِيمُوا۟ ٱلصَّلَوٰةَ وَءَاتُوا۟ ٱلزَّكَوٰةَ فَلَمَّا كُتِبَ عَلَيْهِمُ ٱلْقِتَالُ إِذَا فَرِيقٌ مِّنْهُمْ يَخْشَوْنَ ٱلنَّاسَ كَخَشْيَةِ ٱللَّهِ أَوْ أَشَدَّ خَشْيَةً وَقَالُوا۟ رَبَّنَا لِمَ كَتَبْتَ عَلَيْنَا ٱلْقِتَالَ لَوْلَآ أَخَّرْتَنَآ إِلَىٰٓ أَجَلٍ قَرِيبٍ قُلْ مَتَٰعُ ٱلدُّنْيَا قَلِيلٌ وَٱلْـَٔاخِرَةُ خَيْرٌ لِّمَنِ ٱتَّقَىٰ وَلَا تُظْلَمُونَ فَتِيلًا
Kannada Translation - Hamza Butur“ನಿಮ್ಮ ಕೈಗಳನ್ನು ತಡೆಹಿಡಿಯಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ” ಎಂದು ಆದೇಶಿಸಲಾದ ಜನರನ್ನು ನೀವು ನೋಡಿಲ್ಲವೇ? ಅವರಿಗೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರಲ್ಲೊಂದು ಗುಂಪು ಅಲ್ಲಾಹನನ್ನು ಭಯಪಡುವಂತೆ ಅಥವಾ ಅದಕ್ಕಿಂತಲೂ ತೀವ್ರವಾಗಿ ಜನರನ್ನು ಭಯಪಡುತ್ತಾರೆ! ಅವರು ಕೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಯುದ್ಧವನ್ನು (ಈಗಲೇ) ಏಕೆ ಕಡ್ಡಾಯಗೊಳಿಸಿದೆ? ಹತ್ತಿರದ ಒಂದು ಅವಧಿಯ ತನಕ ನಮಗೆ ಕಾಲಾವಕಾಶ ನೀಡಬಹುದಿತ್ತಲ್ಲವೇ?” ಹೇಳಿರಿ: “ಇಹಲೋಕದ ಆನಂದವು ಅತ್ಯಲ್ಪವಾಗಿದೆ. ದೇವಭಯವುಳ್ಳವರಿಗೆ ಪರಲೋಕವು ಅತ್ಯುತ್ತಮವಾಗಿದೆ. ನಿಮಗೆ (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಅನ್ಯಾಯವಾಗುವುದಿಲ್ಲ.”