أَيْنَمَا تَكُونُوا۟ يُدْرِككُّمُ ٱلْمَوْتُ وَلَوْ كُنتُمْ فِى بُرُوجٍ مُّشَيَّدَةٍ وَإِن تُصِبْهُمْ حَسَنَةٌ يَقُولُوا۟ هَٰذِهِۦ مِنْ عِندِ ٱللَّهِ وَإِن تُصِبْهُمْ سَيِّئَةٌ يَقُولُوا۟ هَٰذِهِۦ مِنْ عِندِكَ قُلْ كُلٌّ مِّنْ عِندِ ٱللَّهِ فَمَالِ هَٰٓؤُلَآءِ ٱلْقَوْمِ لَا يَكَادُونَ يَفْقَهُونَ حَدِيثًا
Kannada Translation - Hamza Buturನೀವೆಲ್ಲೇ ಇದ್ದರೂ ಸಾವು ನಿಮ್ಮನ್ನು ಬೆನ್ನಟ್ಟುತ್ತದೆ. ನೀವು ಸುಭದ್ರ ಕೋಟೆಯೊಳಗಿದ್ದರೂ ಸಹ. ಅವರಿಗೆ ಒಳಿತುಂಟಾದರೆ, “ಇದು ಅಲ್ಲಾಹನಿಂದ” ಎಂದು ಅವರು ಹೇಳುತ್ತಾರೆ. ಆದರೆ ಅವರಿಗೆ ಕೆಡುಕುಂಟಾದರೆ, “ಇದು ನಿಮ್ಮಿಂದ” ಎನ್ನುತ್ತಾರೆ. ಹೇಳಿರಿ: “ಎಲ್ಲವೂ ಅಲ್ಲಾಹನಿಂದಲೇ ಆಗಿದೆ.” ಈ ಜನರಿಗೇನಾಗಿದೆ? ಇವರೇಕೆ ಮಾತನ್ನು ಅರ್ಥಮಾಡಿಕೊಳ್ಳುವುದಿಲ್ಲ?