إِلَّا ٱلَّذِينَ يَصِلُونَ إِلَىٰ قَوْمٍۭ بَيْنَكُمْ وَبَيْنَهُم مِّيثَٰقٌ أَوْ جَآءُوكُمْ حَصِرَتْ صُدُورُهُمْ أَن يُقَٰتِلُوكُمْ أَوْ يُقَٰتِلُوا۟ قَوْمَهُمْ وَلَوْ شَآءَ ٱللَّهُ لَسَلَّطَهُمْ عَلَيْكُمْ فَلَقَٰتَلُوكُمْ فَإِنِ ٱعْتَزَلُوكُمْ فَلَمْ يُقَٰتِلُوكُمْ وَأَلْقَوْا۟ إِلَيْكُمُ ٱلسَّلَمَ فَمَا جَعَلَ ٱللَّهُ لَكُمْ عَلَيْهِمْ سَبِيلًا
Kannada Translation - Hamza Buturಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿರುವ ಜನರ ಬಳಿಗೆ ಹೋಗಿ ಆಶ್ರಯ ಪಡೆದವರ ಹೊರತು; ಅಥವಾ, ನಿಮ್ಮ ವಿರುದ್ಧ ಯುದ್ಧ ಮಾಡಲು ಅಥವಾ ತಮ್ಮದೇ ಜನರ ವಿರುದ್ಧ ಯುದ್ಧ ಮಾಡಲು ಹೃದಯದಲ್ಲಿ ಇಕ್ಕಟ್ಟು ಅನುಭವಿಸುತ್ತಾ ನಿಮ್ಮ ಬಳಿಗೆ ಬಂದವರ ಹೊರತು. ಅಲ್ಲಾಹು ಇಚ್ಛಿಸುತ್ತಿದ್ದರೆ ಅವನು ಅವರಿಗೆ ನಿಮ್ಮ ಮೇಲೆ ಅಧಿಕಾರ ನೀಡುತ್ತಿದ್ದನು. ಆಗ ಅವರು ನಿಮ್ಮ ವಿರುದ್ಧ ಯುದ್ಧ ಮಾಡುತ್ತಿದ್ದರು. ಆದರೆ ಅವರು ಯುದ್ಧದಿಂದ ದೂರ ಸರಿದು, ನಿಮ್ಮ ವಿರುದ್ಧ ಯುದ್ಧ ಮಾಡದಿದ್ದರೆ ಮತ್ತು ಶಾಂತಿ ಪ್ರಸ್ತಾಪವನ್ನು ಮುಂದಿಟ್ಟರೆ, ಅವರಿಗೆ ವಿರುದ್ಧವಾಗಿ ಯಾವುದೇ ಮಾರ್ಗವನ್ನು ಸ್ವೀಕರಿಸಲು ಅಲ್ಲಾಹು ನಿಮಗೆ ಅನುಮತಿ ನೀಡಿಲ್ಲ.